Homeಅಂಕಣಗಳುನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

ನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

- Advertisement -
- Advertisement -

ಅಕ್ರಮವಾಗಿ ಸರ್ಕಾರಿ ಭೂಮಿ ಸಾಗುವಳಿಯನ್ನು ಮಾಡುತ್ತಿದ್ದ ಒಬ್ಬ ರೈತ ಅಕ್ರಮ ಸಕ್ರಮ ಅರ್ಜಿ ಸಲ್ಲಿಸಿ, ತಹಶೀಲ್ದಾರರ ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಹತಾಶನಾಗಿ ತಹಶೀಲ್ದಾರರನ್ನೇ ಗುಂಡಿಕ್ಕಿ ಕೊಂದ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದರಲ್ಲಿ ತಹಶೀಲ್ದಾರನ ತಪ್ಪೇನೂ ಇಲ್ಲ. ಅಕ್ರಮ ಸಕ್ರಮ ಜಮೀನನ್ನು ರೈತನ ಹೆಸರಿಗೆ ಪಟ್ಟ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಪತ್ರ ಬರೆಯದ ಹೊರತು ಜಿಲ್ಲಾಧಿಕಾರಿಯಾಗಲಿ, ತಹಶೀಲ್ದಾರರಾಗಲಿ ಆ ಕೆಲಸ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ಅಕ್ರಮ ಸಕ್ರಮದ ಅರ್ಜಿಗಳನ್ನು ಕರೆಯಲು ತೀರ್ಮಾನ ತೆಗೆದುಕೊಂಡು 3-4 ವರ್ಷ ಆಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಅರ್ಜಿ ಸ್ವೀಕರಿಸಲು ಕೊನೆಯ ದಿನವನ್ನು 1-2 ವರ್ಷ ಕಾಲ ವಿಸ್ತರಿಸುತ್ತಾ ಹೋಗುತ್ತದೆ.

ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅಕ್ರಮವಾಗಿರುವುದನ್ನು ತಿರಸ್ಕರಿಸಲು, ಸಕ್ರಮವಾಗಿರುವುದನ್ನು ಅಂಗೀಕರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ. ಇದಕ್ಕಾಗಿ ಪ್ರತಿ ತಾಲ್ಲೂಕಿನಲ್ಲೂ ಒಂದು ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿಯ ಸಂಚಾಲಕರ ಸದಸ್ಯರು ಆಯಾ ತಾಲ್ಲೂಕಿನ ತಹಶೀಲ್ದಾರರು. ಮೂರು ಸದಸ್ಯರ ಈ ಸಮಿತಿಗೆ ಅಲ್ಲಿಯ ಶಾಸಕರು ಮತ್ತು ಒಬ್ಬ ಖಾಸಗಿ ವ್ಯಕ್ತಿ ಸದಸ್ಯರು. ಈ ಸಮಿತಿ ಪ್ರತಿ ಶನಿವಾರ ಸಭೆ ನಡೆಸಿ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರುವ ಅಧಿಕಾರ ಹೊಂದಿದೆ. ಆದರೆ ಅನೇಕ ತಾಲ್ಲೂಕುಗಳಲ್ಲಿ ಅಲ್ಲಿಯ ಶಾಸಕರ ಆಲಕ್ಷ್ಯದಿಂದ ಸಮಿತಿಯ ಸಭೆಗಳೇ ನಡೆದಿಲ್ಲ. ಇದನ್ನು ಗಮನಿಸಿದ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪನವರು ರೋಸಿ ಹೋಗಿ ಶನಿವಾರದ ಸಭೆಗಳಿಗೆ ಇಬ್ಬರು ಸದಸ್ಯರು ಹಾಜರಾದರೂ ಸಾಕು, ಸಭೆ ನಡೆಸಿ ಎಂದು ತಹಶೀಲ್ದಾರರಿಗೆ ಪತ್ರಗಳನ್ನು ಬರೆದರು. ಅದೂ ಕಾರ್ಯಗತವಾಗಲಿಲ್ಲ. ಈ ಜಮೀನನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ರೈತರ ಕೆಲಸವನ್ನು ಆದ್ಯತೆಯಿಂದ ಮಾಡಿಕೊಡಬೇಕು ಎಂದು ಈ ಶಾಸಕರಿಗೆ ಅನ್ನಿಸಲೇ ಇಲ್ಲ, ಇಂದಿಗೂ ಈ ಪರಿಸ್ಥಿತಿ ಮುಂದುವರೆಯುತ್ತಿದೆ. ಬಡ ರೈತರು ತಾವು ಹಿಡಿದಿರುವ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಪಟ್ಟ ಮಾಡಿಕೊಡುತ್ತಾರೆಂದು ತಾಲ್ಲೂಕು ಆಫೀಸಿಗೆ ಅಲೆದಾಡಿ ಹತಾಶರಾಗಿದ್ದಾರೆ. ಹೊಟ್ಟೆ ತುಂಬಿದ ಶಾಸಕರಿಗೆ ಈ ಬಡ ಜನರ ಬವಣೆ ಗೊತ್ತಿದ್ದರೂ ಅವರನ್ನು ಆಲಕ್ಷ್ಯ ಮಾಡಿದ್ದಾರೆ. ಇದು ಬಡವರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವು ತಾಲ್ಲೂಕುಗಳಲ್ಲಿ ಶಾಸಕರು ಮುತುವರ್ಜಿವಹಿಸಿ ಸಭೆಗಳನ್ನು ನಡೆಸಿ ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅನರ್ಹವಾದದ್ದು ಯಾವುದು, ಅರ್ಹವಾದದ್ದು ಯಾವುದು ಎಂದು ಪರಿಶೀಲಿಸಿ ಪಟ್ಟ ಮಾಡಿದ್ದಾರೆ. ನನಗೆ ತಿಳಿದಂತೆ ಗೌರಿಬಿದನೂರಿನ ಶಾಸಕರು ಅರ್ಹರಾದವರಿಗೆ ಪಟ್ಟ ಕೊಡಿಸಿದ್ದಾರೆ ಅಲೆಮಾರಿ ಹಕ್ಕಿಪಿಕ್ಕರಿಗೆ ಪಟ್ಟ ಹಂಚುವ ಸಮಾರಂಭಕ್ಕೆ ಶಾಸಕರು ನನ್ನನ್ನು ಆಹ್ವಾನಿಸಿದ್ದರು. ನಾನು ಹೋಗಿದ್ದೆ.

PC : Patrika

ಈಗ ನನಗೆ ತಿಳಿದುಬಂದಿರುವಂತೆ ಕೆಲವು ತಾಲ್ಲೂಕುಗಳಲ್ಲಿ ಒಟ್ಟು 4 ಲಕ್ಷ ಅರ್ಜಿಗಳು ಬಂದಿದ್ದರೂ ಅವುಗಳ ಪೈಕಿ ಸಮಿತಿ ಎರಡೂವರೆ ಲಕ್ಷ ಅರ್ಜಿಗಳನ್ನು ತಿರಸ್ಕರಿಸಿ ಒಂದೂವರೆ ಲಕ್ಷ ಅರ್ಜಿದಾರರಿಗೆ ಪಟ್ಟ ಮಾಡಿ ಕೊಡಬಹುದೆಂದು ಶಿಫಾರಸು ಮಾಡಿದೆ.

ಜಾತಕ ಪಕ್ಷಿಗಳಂತೆ ಪಟ್ಟಕ್ಕಾಗಿ ಕಾಯುತ್ತಿರುವ ಈ ಬಡ ರೈತರಿಗೆ, ತೀರ್ಮಾನಗೊಂಡ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟವನ್ನು ಕೂಡಲೇ ಹಂಚಲು ಸರ್ಕಾರ ಸುತ್ತೋಲೆ ಹೊರಡಿಸಬೇಕು. ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಈ ಅರ್ಹ ಅರ್ಜಿದಾರರಿಗೆ ಪಟ್ಟ ಮಾಡಿಕೊಡಲು ಅನುಮತಿ ನೀಡಬೇಕು. ಈ ಪ್ರಕ್ರಿಯೆ ಕೂಡಲೇ ಕಾರ್ಯಗತಗೊಳ್ಳಲು ಸೂಚಿಸಿ, 6 ತಿಂಗಳೊಳಗೆ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟ ದೊರೆಯುವಂತೆ ಸುಗ್ರೀವಾಜ್ಞೆ ಹೊರಡಿಸಬೇಕು.

ಸರ್ಕಾರ ಬಡ ರೈತರ ಕಾತರವನ್ನು ಅರ್ಥಮಾಡಿಕೊಳ್ಳಬೇಕು. ಈ ರೈತರು ತಹಶೀಲ್ದಾರರ ಕಚೇರಿಗೆ ನೂರಾರು ಸಲ ಹೋಗಿ ಹತಾಶರಾಗಿ ಹಿಂದಿರುಗಿರುವುದನ್ನು ಗಮನಿಸಬೇಕು. ಬಡ ರೈತರ ತಾಳ್ಮೆಯನ್ನು ಪರೀಕ್ಷಿಸುವುದಕ್ಕಲ್ಲ ಸರ್ಕಾರ ಇರುವುದು. ಅವರ ಕಣ್ಣೀರನ್ನು ಒರೆಸುವುದಕ್ಕೆ. ಸಾಂತ್ವನ ಹೇಳುವುದಕ್ಕೆ. ಹತಾಶನಾದ ರೈತ ತಾಲ್ಲೂಕು ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಅಸಹಾಯಕರಾದ ತಹಶೀಲ್ದಾರರನ್ನೂ ಗುಂಡಿಟ್ಟು ಕೊಂದಿರುವುದನ್ನು ಸರ್ಕಾರ ಒಂದು ಎಚ್ಚರಿಕೆಯ ಗಂಟೆ ಎಂದು ಪರಿಭಾವಿಸಬೇಕು. ತ್ವರಿತಗತಿಯಿಂದ ಅವರ ಬವಣೆಯನ್ನು ನೀಗುವುದು ಸರ್ಕಾರದ ಆದ್ಯತೆಯಾಗಬೇಕು.

ಹಿಂದೆ ಎರಡನೇ ಮಹಾಯುದ್ಧದ ಸಮಯದಲ್ಲಿ ಮತ್ತು ಸ್ವಾತಂತ್ರ ಪ್ರಾಪ್ತವಾದ ಹೊಸದರಲ್ಲಿ ಆಹಾರ ಧಾನ್ಯಗಳ ಕೊರೆತೆಯಿಂದ ಬಡಜನರು ತೊಳಲಾಡುವುದನ್ನು ಗಮನಿಸಿದ ಅಂದಿನ ಸರ್ಕಾರ ಭೂಹೀನ ಬಡರೈತರಿಗೆ ಸರ್ಕಾರಿ ಜಮೀನಿನಲ್ಲಿ ಬೆಳೆ ಬೆಳೆದುಕೊಳ್ಳಲು ಅನುಮತಿ ನೀಡಿತು. ಇದಕ್ಕಾಗಿ ಸರ್ಕಾರ Grow more food campaign ಆರಂಭ ಮಾಡಿತು. ಸಹಸ್ರಾರು ಬಡರೈತರು ಒಂದು ಎಕರೆ, ಎರಡು ಎಕರೆ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಲು ಆರಂಭಿಸಿದರು. ಈ ಮೂಲಕ ಈ ಬಡರೈತರು ತಮ್ಮ ಮನೆಗೆ ಬೇಕಾದಷ್ಟನ್ನು ಬೆಳೆದುಕೊಂಡು ಸ್ವಾವಲಂಬಿಗಳಾದರು. ಆಹಾರ ಧಾನ್ಯವನ್ನು ಜನರಿಗೆ ಒದಗಿಸುವ ಹೊಣೆಗಾರಿಕೆಯಿಂದ ಸ್ವಲ್ಪಮಟ್ಟಿಗೆ ಪಾರಾಗಲು ಈ Grow more food campaign ಯೋಜನೆ ಸಹಕಾರಿಯಾಯಿತು.

ಈ ರೈತರು ಕೂಡ ತಮ್ಮ ಜಮೀನಿಗೆ ಸರ್ಕಾರ ಪಟ್ಟ ಕೊಡುವುದೆಂದು ಅಂದಿನಿಂದ ಕಾಯುತ್ತಿದ್ದಾರೆ. ಸರ್ಕಾರವೇ ಸರ್ಕಾರಿ ಜಮೀನನ್ನು ಆಹಾರಧಾನ್ಯ ಬೆಳೆದುಕೊಳ್ಳುವುದಕ್ಕಾಗಿ ರೈತರಿಗೆ ಕೊಟ್ಟಿರುವುದರಿಂದ ಈ ಜಮೀನು ಅಕ್ರಮ ಸಕ್ರಮದಡಿಯಲ್ಲಿ ಪರಿಶೀಲಿಸಲು ಬರುವುದಿಲ್ಲ.

ಆದ್ದರಿಂದ ಈ ರೈತರು ಬೇರೆ ಜಮೀನನ್ನು ಹೊಂದಿರದಿದ್ದರೆ ಅಂಥವರಿಗೆ ನೇರವಾಗಿ ಪಟ್ಟ ನೀಡಲು ತಹಶೀಲ್ದಾರುಗಳಿಗೆ ಅಧಿಕಾರ ನೀಡಬೇಕು. ಇಂತಹವರು ಸಕ್ರಮ ಅಕ್ರಮದಡಿ ಅರ್ಜಿ ಸಲ್ಲಿಸಿದ್ದರೆ ಅದನ್ನು ಬೇರ್ಪಡಿಸಿ ಈ ರೈತರಿಗೆ ಕೂಡಲೇ ಪಟ್ಟ ಮಾಡಿಕೊಡಬೇಕು.


ಇದನ್ನೂ ಓದಿ: ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...