Homeಮುಖಪುಟಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೈನಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿದಿನ 3 ಲಕ್ಷ ದಾಟುತ್ತಿದೆ. ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ ಬಡವರು ಮತ್ತು ಮಧ್ಯಮವರ್ಗ ಅಸಹಾಯಕತೆಯಲ್ಲಿ ಆಸ್ಪತ್ರೆಗಳ ಮುಂದೆ, ಚಿತಾಗಾರಗಳಲ್ಲಿ ಕಾಯುತ್ತಿವೆ. ಆದರೆ ಕಳೆದ ವಾರದಿಂದ ಈ ದೇಶದ ನೂರಾರು ಅತಿ ಶ್ರೀಮಂತರು ಖಾಸಗಿ ವಿಮಾನಗಳನ್ನು ಬುಕ್ ಮಾಡಿ ವಿದೇಶಗಳಿಗೆ ಸದ್ದಿಲ್ಲದೇ ಪಲಾಯನ ಮಾಡುತ್ತಿದ್ದಾರೆ ಎಂದು ಬ್ಯುಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

ವಿವಿಧ ದೇಶಗಳು ಪ್ರಯಾಣ ನಿರ್ಬಂಧ ಹೇರುತ್ತಿರುವುದರಿಂದ ಅವಸರವಸರದಲ್ಲಿ ಈ ಸೂಪರ್ ಸಿರಿವಂತರು ಯಥೇಚ್ಛ ಹಣ ನೀಡಿ ಖಾಸಗಿ ಜೆಟ್‌ಗಳ ಮೂಲಕ ಸುರಕ್ಷಿತ ತಾಣಗಳನ್ನು ಸೇರುತ್ತಿದ್ದಾರೆ.

ಯುನೈಟೆಡ್ ಅರಬ್ ಸಂಸ್ಥಾನವು (ಯುಎಇ) ಹೋಲಿಕೆಯಲ್ಲಿ ಭಾರತಕ್ಕೆ ಸಮೀಪ ಇರುವುದರಿಂದ ಮತ್ತು ಅಲ್ಲಿ ಸುರಕ್ಷತೆಯೂ ಇರುವುದರಿಂದ ಬಹುತೇಕರ ಫೇವರಿಟ್ ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿ ಅವರು ದುಬಾರಿ ಹಣ ಕೊಟ್ಟು ವ್ಯಾಕ್ಸಿನ್ ಪ್ಲಸ್ ವೆಕೇಷನ್ (ಲಸಿಕೆ ಮತ್ತು ರಜಾದಿನಗಳು) ಎರಡನ್ನು ಪಡೆಯುತ್ತಿದ್ದಾರೆ.

ಏಪ್ರಿಲ್ 25ರಿಂದ 10 ದಿನಗಳ ಕಾಲ ಭಾರತದಿಂದ ಪ್ರಯಾಣ ನಿರ್ಬಂಧ ವಿಧಿಸುವುದಾಗಿ ಯುಎಇ ಕಳೆದ ವಾರ ಘೋಷಿಸಿದ ನಂತರ ಈ ಸುಪರ್ ಸಿರಿವಂತರು ಎದ್ದು ಬಿದ್ದು ಖಾಸಗಿ ವಿಮಾನ, ಜೆಟ್‌ಗಳನ್ನು ಬುಕ್ ಮಾಡಿ ಹಾರಿ ಹೋಗಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿರುವ ಖಾಸಗಿ ಚಾರ್ಟರ್ ಕಂಪನಿ ‘ಏರ್ ಚಾರ್ಟರ್’ ಅಧಿಕಾರಿ, ನಾಳೆ (ಶನಿವಾರ ಏಪ್ರಿಲ್ 24) ನಮ್ಮ ಕಂಪನಿಯಿಂದ 12 ವಿಮಾನಗಳು ದುಬೈಗೆ ಹೊರಡಲಿದ್ದು ಎಲ್ಲವೂ ಭರ್ತಿಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನೊಂದು ಖಾಸಗಿ ಕಂಪನಿ ಎಂಥ್ರಾಲ್ ಏವಿಯೇಷನ್, ನೂರಾರು ಬುಕಿಂಗ್ ಬೇಡಿಕೆಗಳು ಕಳೆದ ಹಲವು ದಿನಗಳಿಂದ ಬಂದಿವೆ ಎಂದಿದೆ.

ಏಪ್ರಿಲ್ 25ರ ನಿರ್ಬಂಧಕ್ಕೂ ಮುಂಚೆ ನೂರಾರು ಸುಪರ್ ಸಿರಿವಂತರು ದುಬೈ ಸೇರಿದ್ದಾರೆ. ಈಗ ಮತ್ತೆಲ್ಲಿ ನಿರ್ಬಂಧವಿಲ್ಲವೋ ಅಂತಹ ಕಡೆ ಖಾಸಗಿ ಜೆಟ್‌ಗಳ ಮೂಲಕ ಹಾರಲು ತಯಾರಿ ನಡೆಸಿದ್ದಾರೆ.

ಮುಂಬೈನಿಂದ ದುಬೈಗೆ 13 ಸೀಟುಗಳ ಜೆಟ್ ಬಾಡಿಗೆ 38 ಸಾವಿರ ಡಾಲರ್! 6 ಸೀಟಿನದ್ದಾರೆ 33 ಸಾವಿರ ಡಾಲರ್ ತೆರಬೇಕಾಗಿದೆ ಎನ್ನಲಾಗಿದೆ.

ಥೈಲ್ಯಾಂಡ್‌ಗೂ ಅನೇಕರು ಪಲಾಯನ ಮಾಡಿದ್ದರೆ. ಸಂಡೇ ಟೈಮ್ಸ್ ಪ್ರಕಾರ, ಹಲವು ದಿನಗಳ ಮೊದಲೇ ಕೆಲವರು ದುಬಾರಿ ದರ ತೆತ್ತು (9 ತಾಸಿನ ಪ್ರಯಾಣಕ್ಕೆ 100 ಸಾವಿರ ಪೌಂಡ್ ಬಾಡಿಗೆ) ಬ್ರಿಟನ್‌ಗೆ ಓಡಿದ್ದಾರೆ. ಇವರೆಲ್ಲ ತಮ್ಮದೇ ಗುಂಪು ರಚಿಸಿಕೊಂಡ ವಿಮಾನ ಅಥವಾ ಜೆಟ್ ಬಾಡಿಗೆ ಪಡೆದು ಹಾರಿದ್ದಾರೆ.

ಈಗ ಪ್ರಯಾಣ ನಿರ್ಬಂಧ ಹೇರದ ಯಾವುದಾದರೂ ಸುರಕ್ಷಿತ ತಾಣವನ್ನು ಸುಪರ್ ಸಿರಿವಂತರು ಹುಡುಕುತಿದ್ದಾರೆ ಎನ್ನಲಾಗಿದೆ. ಕೋವಿಡ್ ಅಂತಲ್ಲ, ದೇಶದ ಕಷ್ಟಗಳಿಗೆ ಇವರೆಲ್ಲ ಸದಾ ಪಲಾಯನ ಹೇಳುತ್ತಲೇ ಬಂದವರು ಅಲ್ವೇ ಎಂಬ ಟೀಕೆ ಕೇಳಿಬಂದಿದೆ.

“ಹಣವಂತರ ಒಳಿತಿಗೇಂತ ಹಗಲಿರುಳು ದುಡಿದ್ರಪ್ಪ ಮೋದಿ. ಆದರೆ ಕೋವಿಡ್‌19 ಅನ್ನು ಹ್ಯಾಂಡಲ್‌ ಮಾಡಿದ ರೀತಿ ನೋಡಿ ಬೆಚ್ಚಿ ಬಿದ್ದಿರೋ ಹಣವಂತ್ರು, ಮೋದಿ ನಂಬಿಕೊಂಡ್ರೊ ಬದುಕ್ಕಲ್ಲ, ಈ ದೇಶದ ಸಾವಾಸ ಸಾಕು ಅಂತ ವಿದೇಶಕ್ಕೆ ಹಾರ್ತಾ ಇದ್ದಾರಂತೆ. ಹಿಂಗಿದೆ ಮೋದಿ ಆಡಳಿತ.. ನಮೋ ನಮಃ!” ಎಂದು ಪತ್ರಕರ್ತ ಕುಮಾರ್ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...