Homeಮುಖಪುಟಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೈನಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿದಿನ 3 ಲಕ್ಷ ದಾಟುತ್ತಿದೆ. ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ ಬಡವರು ಮತ್ತು ಮಧ್ಯಮವರ್ಗ ಅಸಹಾಯಕತೆಯಲ್ಲಿ ಆಸ್ಪತ್ರೆಗಳ ಮುಂದೆ, ಚಿತಾಗಾರಗಳಲ್ಲಿ ಕಾಯುತ್ತಿವೆ. ಆದರೆ ಕಳೆದ ವಾರದಿಂದ ಈ ದೇಶದ ನೂರಾರು ಅತಿ ಶ್ರೀಮಂತರು ಖಾಸಗಿ ವಿಮಾನಗಳನ್ನು ಬುಕ್ ಮಾಡಿ ವಿದೇಶಗಳಿಗೆ ಸದ್ದಿಲ್ಲದೇ ಪಲಾಯನ ಮಾಡುತ್ತಿದ್ದಾರೆ ಎಂದು ಬ್ಯುಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

ವಿವಿಧ ದೇಶಗಳು ಪ್ರಯಾಣ ನಿರ್ಬಂಧ ಹೇರುತ್ತಿರುವುದರಿಂದ ಅವಸರವಸರದಲ್ಲಿ ಈ ಸೂಪರ್ ಸಿರಿವಂತರು ಯಥೇಚ್ಛ ಹಣ ನೀಡಿ ಖಾಸಗಿ ಜೆಟ್‌ಗಳ ಮೂಲಕ ಸುರಕ್ಷಿತ ತಾಣಗಳನ್ನು ಸೇರುತ್ತಿದ್ದಾರೆ.

ಯುನೈಟೆಡ್ ಅರಬ್ ಸಂಸ್ಥಾನವು (ಯುಎಇ) ಹೋಲಿಕೆಯಲ್ಲಿ ಭಾರತಕ್ಕೆ ಸಮೀಪ ಇರುವುದರಿಂದ ಮತ್ತು ಅಲ್ಲಿ ಸುರಕ್ಷತೆಯೂ ಇರುವುದರಿಂದ ಬಹುತೇಕರ ಫೇವರಿಟ್ ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿ ಅವರು ದುಬಾರಿ ಹಣ ಕೊಟ್ಟು ವ್ಯಾಕ್ಸಿನ್ ಪ್ಲಸ್ ವೆಕೇಷನ್ (ಲಸಿಕೆ ಮತ್ತು ರಜಾದಿನಗಳು) ಎರಡನ್ನು ಪಡೆಯುತ್ತಿದ್ದಾರೆ.

ಏಪ್ರಿಲ್ 25ರಿಂದ 10 ದಿನಗಳ ಕಾಲ ಭಾರತದಿಂದ ಪ್ರಯಾಣ ನಿರ್ಬಂಧ ವಿಧಿಸುವುದಾಗಿ ಯುಎಇ ಕಳೆದ ವಾರ ಘೋಷಿಸಿದ ನಂತರ ಈ ಸುಪರ್ ಸಿರಿವಂತರು ಎದ್ದು ಬಿದ್ದು ಖಾಸಗಿ ವಿಮಾನ, ಜೆಟ್‌ಗಳನ್ನು ಬುಕ್ ಮಾಡಿ ಹಾರಿ ಹೋಗಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿರುವ ಖಾಸಗಿ ಚಾರ್ಟರ್ ಕಂಪನಿ ‘ಏರ್ ಚಾರ್ಟರ್’ ಅಧಿಕಾರಿ, ನಾಳೆ (ಶನಿವಾರ ಏಪ್ರಿಲ್ 24) ನಮ್ಮ ಕಂಪನಿಯಿಂದ 12 ವಿಮಾನಗಳು ದುಬೈಗೆ ಹೊರಡಲಿದ್ದು ಎಲ್ಲವೂ ಭರ್ತಿಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನೊಂದು ಖಾಸಗಿ ಕಂಪನಿ ಎಂಥ್ರಾಲ್ ಏವಿಯೇಷನ್, ನೂರಾರು ಬುಕಿಂಗ್ ಬೇಡಿಕೆಗಳು ಕಳೆದ ಹಲವು ದಿನಗಳಿಂದ ಬಂದಿವೆ ಎಂದಿದೆ.

ಏಪ್ರಿಲ್ 25ರ ನಿರ್ಬಂಧಕ್ಕೂ ಮುಂಚೆ ನೂರಾರು ಸುಪರ್ ಸಿರಿವಂತರು ದುಬೈ ಸೇರಿದ್ದಾರೆ. ಈಗ ಮತ್ತೆಲ್ಲಿ ನಿರ್ಬಂಧವಿಲ್ಲವೋ ಅಂತಹ ಕಡೆ ಖಾಸಗಿ ಜೆಟ್‌ಗಳ ಮೂಲಕ ಹಾರಲು ತಯಾರಿ ನಡೆಸಿದ್ದಾರೆ.

ಮುಂಬೈನಿಂದ ದುಬೈಗೆ 13 ಸೀಟುಗಳ ಜೆಟ್ ಬಾಡಿಗೆ 38 ಸಾವಿರ ಡಾಲರ್! 6 ಸೀಟಿನದ್ದಾರೆ 33 ಸಾವಿರ ಡಾಲರ್ ತೆರಬೇಕಾಗಿದೆ ಎನ್ನಲಾಗಿದೆ.

ಥೈಲ್ಯಾಂಡ್‌ಗೂ ಅನೇಕರು ಪಲಾಯನ ಮಾಡಿದ್ದರೆ. ಸಂಡೇ ಟೈಮ್ಸ್ ಪ್ರಕಾರ, ಹಲವು ದಿನಗಳ ಮೊದಲೇ ಕೆಲವರು ದುಬಾರಿ ದರ ತೆತ್ತು (9 ತಾಸಿನ ಪ್ರಯಾಣಕ್ಕೆ 100 ಸಾವಿರ ಪೌಂಡ್ ಬಾಡಿಗೆ) ಬ್ರಿಟನ್‌ಗೆ ಓಡಿದ್ದಾರೆ. ಇವರೆಲ್ಲ ತಮ್ಮದೇ ಗುಂಪು ರಚಿಸಿಕೊಂಡ ವಿಮಾನ ಅಥವಾ ಜೆಟ್ ಬಾಡಿಗೆ ಪಡೆದು ಹಾರಿದ್ದಾರೆ.

ಈಗ ಪ್ರಯಾಣ ನಿರ್ಬಂಧ ಹೇರದ ಯಾವುದಾದರೂ ಸುರಕ್ಷಿತ ತಾಣವನ್ನು ಸುಪರ್ ಸಿರಿವಂತರು ಹುಡುಕುತಿದ್ದಾರೆ ಎನ್ನಲಾಗಿದೆ. ಕೋವಿಡ್ ಅಂತಲ್ಲ, ದೇಶದ ಕಷ್ಟಗಳಿಗೆ ಇವರೆಲ್ಲ ಸದಾ ಪಲಾಯನ ಹೇಳುತ್ತಲೇ ಬಂದವರು ಅಲ್ವೇ ಎಂಬ ಟೀಕೆ ಕೇಳಿಬಂದಿದೆ.

“ಹಣವಂತರ ಒಳಿತಿಗೇಂತ ಹಗಲಿರುಳು ದುಡಿದ್ರಪ್ಪ ಮೋದಿ. ಆದರೆ ಕೋವಿಡ್‌19 ಅನ್ನು ಹ್ಯಾಂಡಲ್‌ ಮಾಡಿದ ರೀತಿ ನೋಡಿ ಬೆಚ್ಚಿ ಬಿದ್ದಿರೋ ಹಣವಂತ್ರು, ಮೋದಿ ನಂಬಿಕೊಂಡ್ರೊ ಬದುಕ್ಕಲ್ಲ, ಈ ದೇಶದ ಸಾವಾಸ ಸಾಕು ಅಂತ ವಿದೇಶಕ್ಕೆ ಹಾರ್ತಾ ಇದ್ದಾರಂತೆ. ಹಿಂಗಿದೆ ಮೋದಿ ಆಡಳಿತ.. ನಮೋ ನಮಃ!” ಎಂದು ಪತ್ರಕರ್ತ ಕುಮಾರ್ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...