Homeಕರೋನಾ ತಲ್ಲಣಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

ಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

- Advertisement -
- Advertisement -

ಕೇರಳದ ಕಣ್ಣೂರು ಜಿಲ್ಲೆಯ ಬೀಡಿ ಕೆಲಸಗಾರರೊಬ್ಬರು ತಮ್ಮ ಇಡೀ ಜೀವಮಾನದ ಉಳಿತಾಯವನ್ನು ಮುಖ್ಯಮಂತ್ರಿಯ ವಿಪತ್ತು ಪರಿಹಾರ ನಿಧಿಗೆ (ಸಿಎಂಡಿಆರ್‌ಎಫ್) ದಾನ ಮಾಡಿ ಅಪರೂಪದ ಮಾನವೀಯತೆ ಮೆರೆದಿದ್ದಾರೆ. ಆ ಹಣವನ್ನು ಕೋವಿಡ್ ರೋಗಿಗಳ ಆರೈಕೆಗೆ ಬಳಸಲು ಅವರು ವಿನಂತಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜೀವನಕ್ಕಾಗಿ ಬೀಡಿ ಕಟ್ಟುವ ಅವರಿಗೆ ಎರಡೂ ಕಿವಿ ಕೇಳಿಸವು. ಇವರು ಕಳೆದ ವಾರ ತನ್ನ ಉಳಿತಾಯ ಖಾತೆಯಿಂದ 2 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುವ ಉದ್ದೇಶದಿಂದ ತನ್ನ ಬ್ಯಾಂಕಿನ ಸ್ಥಳೀಯ ಶಾಖೆ ತಲುಪಿದಾಗ, ಬ್ಯಾಂಕ್ ಅಧಿಕಾರಿ, ನಿಮಗೆ ಉಳಿಯುವುದು 850 ರೂ. ಮಾತ್ರ. ಜೀವನಕ್ಕೆ ಕಷ್ಟ ಆಗುವುದಿಲ್ಲವೆ? ಎಂದಿದ್ದಾರೆ.

‘ನನಗೆ ಕೆಲಸವಿದೆ. ರಾಜ್ಯ ಸರ್ಕಾರದಿಂದ ಮಾಸಿಕ ಪಿಂಚಣಿ ಬರುತ್ತದೆ ಅಷ್ಟು ಸಾಕು. ರಾಜ್ಯದ ತನ್ನ ಸಹೋದರ ಸಹೋದರಿಯರ ಪ್ರಾಣ ಉಳಿಸುವುದಕ್ಕಿಂತ ಅವರ ಜೀವನದ ಉಳಿತಾಯ ದೊಡ್ಡದಲ್ಲ ಎಂದು ಅವರು ಹೇಳಿದ್ದಾರೆ. ಆ ಬ್ಯಾಂಕ್ ಅಧಿಕಾರಿ ಈ ಘಟನೆಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ದಾನಿಯ ಕೋರಿಕೆಯಂತೆ ಅವರ ವಿವರ ನೀಡಿರಲಿಲ್ಲ. ಇದು ಅನೇಕರು ಆ ಅನಾಮಧೇಯ ದಾನಿಯನ್ನು ಹುಡುಕುವಂತೆ ಮಾಡಿತು.

ಈ ವಾರ ಸ್ಥಳೀಯ ಟೆಲಿವಿಷನ್ ನೆಟ್ವರ್ಕ್ ಮೀಡಿಯಾ ಒನ್ ಈ ವ್ಯಕ್ತಿಯನ್ನು ಕಣ್ಣೂರು ಜಿಲ್ಲೆಯ ಕುರುವಾ ಮೂಲದ ಜನಾರ್ಧನನ್ ಎಂದು ಗುರುತಿಸಿದೆ.

‘ಲಸಿಕೆಯನ್ನು ರಾಜ್ಯಕ್ಕೆ 400 ರೂ.ಗೆ ಮಾರಾಟ ಮಾಡಲಾಗುವುದು ಎಂದು ಗೊತ್ತಾದಾಗ ಅದು ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗಿದೆ ಅನಿಸಿತು. ಆ ರಾತ್ರಿ, ನನಗೆ ನಿದ್ರೆ ಬರಲಿಲ್ಲ. ಮರುದಿನ ನಾನು ಬ್ಯಾಂಕಿಗೆ ಹೋದೆ. ಹಣವನ್ನು ದಾನ ಮಾಡಿದ ನಂತರವೇ ನನಗೆ ನಿರಾಳವಾಯಿತು” ಎಂದು ಜನಾರ್ಧನನ್ ಮೀಡಿಯಾ ಒನ್‌ಗೆ ತಿಳಿಸಿದ್ದಾರೆ.

‘ಇಷ್ಟು ಹಣವನ್ನು ಸಂಗ್ರಹಿಸಿ ಇಡುವುದರಿಂದ ಏನು ಪ್ರಯೋಜನ? ಜನರ ಜೀವನವು ದೊಡ್ಡದಾಗಿದೆ. ಜೀವನವಿದ್ದಾಗ ಮಾತ್ರ ಆಡಳಿತ ಮತ್ತು ವ್ಯವಸ್ಥೆ ಇರಲು ಸಾಧ್ಯ’ ಎಂದೂ ಅವರು ಹೇಳಿದ್ದಾರೆ.

13 ನೇ ವಯಸ್ಸಿನಿಂದ ಬೀಡಿ ಕಟ್ಟುವ ಕೆಲಸ ಮಾಡುವ ಜನಾರ್ಧನನ್ ಅವರಿಗೆ ಇಬ್ಬರು ಮದುವೆಯಾದ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಕಳೆದ ವರ್ಷ ನಿಧನರಾಗಿದ್ದಾರೆ. ಪ್ರಚಾರ ಒಲ್ಲದ ಅವರು ‘ಗೌಪ್ಯತೆಯೊಂದಿಗೆ ಏಕಾಂತ ಜೀವನ’ ನಡೆಸಲು ಇಚ್ಛಿಸಿದ್ದಾರೆ. ಆದ್ದರಿಂದ ಅವರ ದಾನ ಕಾರ್ಯದ ಬಗ್ಗೆ ಯಾರಿಗೂ ತಿಳಿಯಬಾರದು ಎಂದು ಹೇಳಿದರು.

ಸಿಎಂ ಪಿಣರಾಯಿ ವಿಜಯನ್, ಪತ್ರಿಕಾಗೋಷ್ಠಿಯಲ್ಲಿ, ಜನಾರ್ಥನನ್ ಅವರ ಹೆಸರನ್ನು ಹೇಳದೆ ಅವರ ಕಾರ್ಯವನ್ನು ಶ್ಲಾಘಿಸಿದರು, ಇದು ರಾಜ್ಯದ ಜನರ ಭಾವನೆಗಳನ್ನು ಒತ್ತಿ ಹೇಳುತ್ತದೆ ಎಂದು ಹೇಳಿದರು.

ಕಳೆದ ವಾರದಿಂದ ಕೇರಳದಲ್ಲಿ ಬಹಳಷ್ಟು ಜನರು ಕೋವಿಡ್ ಬಿಕ್ಕಟ್ಟು ಶಮನಕ್ಕೆ ಸ್ವ ಇಚ್ಛೆಯಿಂದ ಸಿಎಂ ಫಂಡ್‌ಗೆ ಹಣ ನೀಡುತ್ತಿರುವ ವರದಿಗಳು ಬಂದಿವೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...