Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮರಣ ಪ್ರಮಾಣಪತ್ರದಲ್ಲೂ ಮೋದಿ ಚಿತ್ರ?

ಫ್ಯಾಕ್ಟ್‌ಚೆಕ್‌: ಮರಣ ಪ್ರಮಾಣಪತ್ರದಲ್ಲೂ ಮೋದಿ ಚಿತ್ರ?

- Advertisement -
- Advertisement -

ಕೊರೊನಾದಿಂದ ಮೃತಪಟ್ಟವರಿಗೆ ಪ್ರಧಾನಿ ಮೋದಿಯ ಚಿತ್ರವಿರುವ ಮರಣ ಪ್ರಮಾಣಪತ್ರ ನೀಡಲಾಗುತ್ತಿದೆ ಎಂದು ಪ್ರತಿಪಾದಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು ಡಾಕ್ಯುಮೆಂಟ್ ಅನ್ನು ಹಿಡಿದಿದ್ದು, ಅದರಲ್ಲಿ ಪ್ರಧಾನಿ ಮೋದಿಯ ಚಿತ್ರವನ್ನು ಕಾಣಬಹುದಾಗಿದೆ. ಪ್ರಧಾನಿ ಮೋದಿ ಸಾವಿನ ವಿಚಾರವನ್ನೂ ತನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಚಿತ್ರದಲ್ಲಿ ವ್ಯಕ್ತಿಯು ಮರಣ ಪ್ರಮಾಣಪತ್ರ ಹಿಡಿದಿದ್ದಾರೆ ಎಂದು ಹಲವಾರು ಜನರು ಪ್ರತಿಪಾದಿಸಿದ್ದಾರೆ. ಅದನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು. ಟ್ವಿಟರ್‌ನಲ್ಲಿ ಮಾತ್ರವಲ್ಲದೆ ಫೇಸ್‌ಬುಕ್‌ನಲ್ಲಿ ಕೂಡಾ ಹಲವಾರು ಜನರು ಇದೇ ಪ್ರತಿಪಾದನೆ ಮಾಡಿದ್ದು, ಚಿತ್ರವು ವೈರಲ್ ಆಗಿದೆ.

ಇದನ್ನೂ ಓದಿ: ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಫ್ಯಾಕ್ಟ್‌ಚೆಕ್‌

ಈ ಚಿತ್ರವನ್ನು ಗೂಗಲ್ ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಏಪ್ರಿಲ್ 17, 2021 ರಂದು ಪ್ರಕಟವಾದ ಇಂಡಿಯಾ ಟೈಮ್ಸ್‌ನ ಲೇಖನವೊಂದರಲ್ಲಿ ಈ ಚಿತ್ರವು ಕಂಡು ಬಂದಿದೆ. ಲೇಖನದ ಪ್ರಕಾರ, ಮಹಾರಾಷ್ಟ್ರದ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಪಿಎಂ ಮೋದಿಯ ವಿರುದ್ದ ವಾಗ್ದಾಳಿ ನಡೆಸಿದ್ದು, “ವ್ಯಾಕ್ಸಿನೇಷನ್ ನೀಡಿರುವ ಪ್ರಮಾಣಪತ್ರದಲ್ಲಿ ಮೋದಿಯ ಫೋಟೋ ಇರುವುದಾದರೆ, ಕೊರೊನಾದಿಂದಾದ ಮರಣ ಪ್ರಮಾಣಪತ್ರಗಳಲ್ಲಿ ಕೂಡಾ ಅವರ ಚಿತ್ರವ ಇರಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ: ಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

ಇಂಡಿಯಾ ಟೈಮ್ಸ್ ಪ್ರಕಟಿಸಿದ ಚಿತ್ರದಲ್ಲಿ ಮುದ್ರಿಸಲಾದ ಅಕ್ಷರವು ಸ್ಪಷ್ಟವಾಗಿದೆ ಓದಬಹುದಾಗಿದೆ. ಅದರಲ್ಲಿ, “ಕೊರೊನಾ ವ್ಯಾಕ್ಸಿನೇಷನ್‌ಗಾಗಿ ತಾತ್ಕಾಲಿಕ ಪ್ರಮಾಣಪತ್ರ” ಎಂದು ಬರೆಯಲಾಗಿದೆ.

ಅಮರ್ ಉಜಲಾ” ಸುದ್ದಿಯಲ್ಲಿ ಕೂಡ ಲಸಿಕೆ ಪಡೆದ ನಂತರ ನೀಡಿದ ವ್ಯಾಕ್ಸಿನೇಷನ್ ಪ್ರಮಾಣಪತ್ರದ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆ ನಡೆಯುತ್ತಿರುವುದರಿಂದ ಪ್ರಧಾನಿ ಮೋದಿ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ತಮ್ಮ ಚಿತ್ರವನ್ನು ಪ್ರಕಟಿಸಿ ಪ್ರಚಾರ ಪಡೆಯುತ್ತಿದ್ದು, ಇದು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಒಟ್ಟಿನಲ್ಲಿ ವೈರಲ್ ಚಿತ್ರವು ವ್ಯಾಕ್ಸಿನೇಷನ್ ಪಡೆದ ಸರ್ಟಿಫಿಕೇಟ್ ಆಗಿದೆಯೆ ವಿನಃ, ಮರಣ ಪ್ರಮಾಣಪತ್ರ ಅಲ್ಲ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅವ ಪ್ರಧಾನಮಂತ್ರಿಯೋ ಪ್ರಚಾರ ಮಂತ್ರಿಯೋ ಅವನಿಗೂ ಗೊತ್ತಿಲ್ಲ, ಅಂದ ಬಕ್ತರಿಗೂ
    ಅದರ ಅರಿವಿಲ್ಲ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...