Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರ ಆಕ್ಸಿಜನ್ ಪ್ಲಾಂಟ್ ಹಾಕದೆ ಹಣ ಪೋಲು ಮಾಡಿದ್ದಾರೆ ಎಂಬ ಕಂಗನಾ ರಣಾವತ್, ಬಿ.ಎಲ್ ಸಂತೋಷ್‌ರವರ ಆರೋಪ ಸುಳ್ಳಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಹಣ ನೀಡಿದರೂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ 8 ಆಕ್ಸಿಜನ್ ಪ್ಲಾಂಟ್‌ಗಳನ್ನು, ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ 10 ಪ್ಲಾಂಟ್‌ಗಳನ್ನು ನಿರ್ಮಿಸಿಲ್ಲ. ಹಣವೆಲ್ಲಾ ನುಂಗಿ ನೀರು ಕುಡಿದಿದೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಸೇರಿದಂತೆ ಬಿಜೆಪಿಯ ಹಲವು ಸಚಿವರು, ನಾಯಕರು ಮತ್ತು ಅನುಯಾಯಿಗಳು ಆರೋಪಿಸಿದ್ದಾರೆ.

ಅವರು ಆಮ್ಲಜನಕ ಘಟಕಗಳ ಸ್ಥಾಪನೆ ಕುರಿತಂತೆ ದಾರಿ ತಪ್ಪಿಸುವ ಗ್ರಾಫಿಕ್ ಹಂಚಿಕೊಂಡಿದ್ದಾರೆ. ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಪಿಎಂ-ಕೇರ್ಸ್‌ ನಿಧಿ ಅಡಿ ಹಂಚಿಕೆ ಮಾಡಿದ ಹಣ ಎಲ್ಲಿದೆ? ದೆಹಲಿಗೆ ಎಂಟು ಸ್ಥಾವರಗಳಿಗೆ ಹಣ ನೀಡಿದ್ದು ಒಂದನ್ನು ಮಾತ್ರ ಸ್ಥಾಪಿಸಿದೆ. ಮಹಾರಾಷ್ಟ್ರದಲ್ಲಿ ಕೂಡ ಒಂದು ಆಮ್ಲಜನಕ ಸ್ಥಾವರವನ್ನು ಮಾತ್ರ ಸ್ಥಾಪಿಸಲಾಗಿದೆ. ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸುಮ್ಮನೇ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯನ್ನು ದೂರುತ್ತಿವೆ……. ಎಂಬುದು ಅವರ ಪ್ರಶ್ನೆಯ ಸಾರಾಂಶ.

ಫ್ಯಾಕ್ಟ್: ರಾಜ್ಯಗಳಿಗೆ ನಯಾಪೈಸೆ ನೀಡಿಲ್ಲ!

ಈ ಮೇಲಿನ ಆರೋಪಗಳು ಸಂಪೂರ್ಣ ಸುಳ್ಳಾಗಿವೆ. ಏಕೆಂದರೆ ಆಮ್ಲಜನಕ ಘಟಕಗಳ ಸ್ಥಾಪನೆಗೆ ಪಿಎಂ ಕೇರ್ಸ್‌ನಿಂದ ಕೇಂದ್ರ ಸರ್ಕಾರ ಹಣ ನೀಡಿಲ್ಲ. ಬದಲಿಗೆ ದೇಶಾದ್ಯಂತ 162 ಆಮ್ಲಜನಕ ಘಟಕಗಳ ಸ್ಥಾಪನೆಯ ಹೊಣೆ ಹೊತ್ತಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಆರೋಗ್ಯ ಸೇವೆಗಳ ಸೊಸೈಟಿ. ಹೀಗಾಗಿ ಇದು ಕೇಂದ್ರ ಸರ್ಕಾರ ಮತ್ತು ಮೋದಿಯವರ ವೈಫಲ್ಯವೇ ಹೊರತು, ದೆಹಲಿ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ವೈಫಲ್ಯ ಅಲ್ಲವೇ ಅಲ್ಲ.

ಜನವರಿ 5 ರ ಕೇಂದ್ರ ಸರ್ಕಾರದ ಪತ್ರಿಕಾ ಪ್ರಕಟಣೆಯಲ್ಲಿ, ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ 162 ಪಿಎಸ್‌ಎ (ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್) ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪಿಎಂ ಕೇರ್ಸ್ ಫಂಡ್ ಟ್ರಸ್ಟ್ 201.58 ಕೋಟಿ ರೂ. ಮೀಸಲಿರಿಸಿದೆ ಎಂದು ಹೇಳಲಾಗಿದೆ. ಈ ಸ್ಥಾವರಗಳನ್ನು ಸ್ಥಾಪಿಸಬೇಕಾದ ಸರ್ಕಾರಿ ಆಸ್ಪತ್ರೆಗಳನ್ನು ಸಂಬಂಧಪಟ್ಟ ರಾಜ್ಯಗಳೊಂದಿಗೆ ಸಮಾಲೋಚಿಸಿ ಗುರುತಿಸಲಾಗಿದೆ ಎಂದು ಕೇಂದ್ರ ಹೇಳಿತ್ತು.

ಸ್ಥಾವರಗಳ ಸ್ಥಾಪನೆಯನ್ನು ಕೇಂದ್ರದ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಸಿಎಂಎಸ್‌ಎಸ್ ಮಾಡಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಬಿಡ್ ಕರೆದು ಕಂಪನಿಗಳನ್ನು ಗುರುತಿಸಿ ಹಣ ಪೂರೈಕೆ ಮಾಡುವುದು ಅದರ ಜವಾಬ್ದಾರಿ. ದೆಹಲಿ ಸೇರಿದಂತೆ ಇತರ ರಾಜ್ಯಗಳ ಜವಾಬ್ದಾರಿ ಕೇವಲ ಆಸ್ಪತ್ರೆಗಳಲ್ಲಿ ವಿದ್ಯುತ್ ಮತ್ತು ಸಿವಿಲ್ ಸೌಲಭ್ಯಗಳನ್ನು ಒದಗಿಸುವುದಾಗಿದೆ. ಹಾಗಾಗಿ ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಪಿಎಂ ಕೇರ್ಸ್ ಹಣ ಹೋಗುವ ಸಾಧ್ಯತೆಯೇ ಇಲ್ಲ. ಇನ್ನು ಇದೇ ಯೋಜನೆಯಡಿಯಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೂ 14 ಪ್ಲಾಂಟ್‌ಗಳನ್ನು ನೀಡಲಾಗಿದ್ದು ಅದರಲ್ಲಿ ಕೇವಲ 1 ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಕ್ರೋಲ್ ವರದಿ ಮಾಡಿದೆ.

162 ಆಕ್ಸಿಜನ್ ಪ್ಲಾಂಟ್‌ಗಳ ಟೆಂಡರ್ 20 ಅಕ್ಟೋಬರ್ 2020 ರಂದು ಜೀವ ಪಡೆಯಿತು. ಅಂದರೆ ಕೊರನಾ ಕಾಣಿಸಿಕೊಂಡ ನಂತರ 8 ತಿಂಗಳು ತಡವಾಗಿತ್ತು. ಅದಾಗಿ ಆರು ತಿಂಗಳ ನಂತರ ದಿ ಸ್ಕ್ರೋಲ್ ವರದಿಗಾರರು ಈ ಬಗ್ಗೆ ಅಧ್ಯಯನ ನಡೆಸಿ, ದೇಶದ 60 ಆಸ್ಪತ್ರೆಗಳಿಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸಿ ಕೇವಲ 13 ಆಕ್ಸಿಜನ್ ಪ್ಲಾಂಟ್‌ಗಳನ್ನು ಹಾಕಲಾಗಿದೆ, ಅದರಲ್ಲಿ ಕೇವಲ ಒಂದು ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಪ್ರಕಟಿಸಿತು. ಆಗ ಎಚ್ಚೆತ್ತುಕೊಂಡು ಆರೋಗ್ಯ ಸಚಿವಾಲಯ ಸರಣಿ ಟ್ವೀಟ್‌ಗಳನ್ನು ಮಾಡಿ “162 ಪಿಎಸ್ಎ ಆಕ್ಸಿಜನ್ ಸ್ಥಾವರಗಳಲ್ಲಿ 33 ಅನ್ನು ಸ್ಥಾಪಿಸಲಾಗಿದೆ. 2021 ರ ಏಪ್ರಿಲ್ ಅಂತ್ಯದ ವೇಳೆಗೆ 59 ಸ್ಥಾಪಿಸಲಾಗುವುದು ಮತ್ತು 2021 ರ ಮೇ ಅಂತ್ಯದ ವೇಳೆಗೆ 80 ಸ್ಥಾಪಿಸಲಾಗುವುದು” ಎಂದು ತಿಳಿಸಿದೆ. ಅಂದರೆ ವರ್ಷವಾದರೂ ಘೋಷಿಸಿರುವುದರಲ್ಲಿ ಅರ್ಧದಷ್ಟನ್ನು ಸ್ಥಾಪಿಸಿಲ್ಲ ಎಂದು ಅದು ಒಪ್ಪಿಕೊಂಡಿದೆ. ಇನ್ನು ಸ್ಥಾಪಿಸಿರುವುದರಲ್ಲಿ ಎಷ್ಟು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಅದು ಖಚಿತಪಡಿಸಿಲ್ಲ.

ಇನ್ನು ದೆಹಲಿ ಸರ್ಕಾರ ಸೈಟ್ ಸಿದ್ಧತೆ ಮಾಡಿಕೊಂಡಿರಲಿಲ್ಲ ಎನ್ನುವುದು ದಾರಿ ತಪ್ಪಿಸುವ ವಿಷಯವೇ ಆಗಿದೆ. ‘ದೆಹಲಿ ಸರ್ಕಾರಿ ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಇತ್ತೀಚಿನ ದಾಖಲೆಗಳ ಪ್ರಕಾರ, ಐದು ಆಸ್ಪತ್ರೆಗಳಿಂದ ಸೈಟ್ ಸಿದ್ಧತೆ ಪ್ರಮಾಣಪತ್ರಗಳನ್ನು ನೀಡಲಾಗಿದೆ’” ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ತಿಳಿಸಿದೆ.

ಕೇವಲ 45 ದಿನಗಳಲ್ಲಿ ಸ್ಥಾಪಿಸಬಹುದಾದ ಈ ಆಕ್ಸಿಜನ್ ಪ್ಲಾಂಟ್‌ಗಳನ್ನು ವರ್ಷ ಕಳೆದರೂ ಏಕೆ ಸ್ಥಾಪಿಸಿಲ್ಲ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಿಲ್ಲ. 2020 ರ ಡಿಸೆಂಬರ್ ವೇಳೆಗೆ ಸ್ಥಾವರಗಳನ್ನು ಸ್ಥಾಪಿಸಬೇಕಿತ್ತು ಮತ್ತು “ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಬೇಕು” ಎಂದು ಸರ್ಕಾರ ಟೆಂಡರ್‌ನಲ್ಲಿ ಹೇಳಿತ್ತು.

ಒಬ್ಬ ಗುತ್ತಿಗೆದಾರನಿಗೆ 140 ಪ್ಲಾಂಟ್‌ಗಳಿಗೆ ಗುತ್ತಿಗೆ ನೀಡಲಾಗಿದೆ ಎಂದು ದೆಹಲಿ ಸರ್ಕಾರ ಕೋರ್ಟಿನಲ್ಲಿ ಹೇಳಿದೆ. ಆತ ಆ ಕೆಲಸವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಲಾಗಿದೆ.

‘ಆಮ್ಲಜನಕ ಘಟಕವನ್ನು ಕೇಂದ್ರದ ಅಧೀನದಲ್ಲಿರುವ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸಹ ಕಾರ್ಯಗತಗೊಳಿಸಲಾಗಿಲ್ಲ ಎಂಬ ಅಂಶವು ಕೇಂದ್ರವು ತನ್ನದೇ ಆದ ಸುಳ್ಳಿನ ಜಾಲದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ತೋರಿಸುತ್ತದೆ” ಎಂದು ದೆಹಲಿ ಸರ್ಕಾರ ಹೇಳಿದೆ.

ಸಾರಾಂಶ

ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಲ್ಲಿ 162 ಆಮ್ಲಜನಕ ಸ್ಥಾವರ ಸ್ಥಾಪನೆ ಕುರಿತು ಮಾರ್ಚ್‌ನಲ್ಲಿ ಘೋಷಿಸಿತ್ತು. ನಂತರ ಅಕ್ಟೋಬರ್ 2020ರಲ್ಲಿ ಟೆಂಡರ್ ಕರೆದಿತ್ತು. ಇದಕ್ಕಾಗಿ ಮೀಸಲಿಟ್ಟ ಹಣವನ್ನು ಅದು ಯಾವುದೇ ರಾಜ್ಯ ಸರ್ಕಾರಕ್ಕೂ ಹಂಚಿಲ್ಲ. ಇದನ್ನು ಕೇಂದ್ರ ಆರೋಗ್ಯ ಸಚಿವಾಲಯ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಡವಿಯೆಟ್‌ನಲ್ಲಿ ಒಪ್ಪಿಕೊಂಡಿದೆ.

ಇದರಿಂದ ಕಂಗನಾ, ಬಿ.ಎಲ್ ಸಂತೋಷ್ ಮತ್ತು ಸಾವಿರಾರು ಮೋದಿ ಅನುಯಾಯಿಗಳು ಈ ಬಿಕ್ಕಟ್ಟಿನ ಸಂದರ್ಭದಲ್ಲೂ ದಾರಿ ತಪ್ಪಿಸುವ ಮಾಹಿತಿ ನೀಡಿ ರಾಜಕೀಯ ಮಾಡುತ್ತಿರುವುದು ಸ್ಪಷ್ಟವಾಗಿದೆ.

(ಆಧಾರ: ದಿ ಸ್ಕ್ರೋಲ್, ದಿ ಕ್ವಿಂಟ್ ಮತ್ತು ಇತರ ಫ್ಯಾಕ್ಟ್‌ಚೆಕ್ ಪೋರ್ಟಲ್‌ಗಳು)


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...