Homeಮುಖಪುಟಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

- Advertisement -
- Advertisement -

ಸಾಂಕ್ರಾಮಿಕ ತಂದೊಡ್ಡಿದ ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನಲ್ಲಿ ಜನ ನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್, ಔಷಧಿ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಗಳು ಸೋಂಕಿನ, ಸಾವಿನ ಪ್ರಕರಣಗಳನ್ನು ಮುಚ್ಚಿಡುತ್ತಿವೆ ಎಂಬ ಆರೋಪಗಳ ನಡುವೆಯೂ ಎಲ್ಲೆಲ್ಲೂ ಸಾವಿನ ಸುದ್ದಿಗಳು ಕಂಗೆಡಿಸುತ್ತಿವೆ. ಆದರೆ ಅದೇ ಸಮಯದಲ್ಲಿ ಇದ್ಯಾವುದರ ಪರಿವೆ ಇಲ್ಲದೆ ಫೋರ್, ಸಿಕ್ಸ್, ವಿಕೆಟ್‌ಗಳ ಸಂಭ್ರಮದಲ್ಲಿ ಮತ್ತೊಂದು ಜಗತ್ತು ಅಸ್ತಿತ್ವದಲ್ಲಿದೆ! ‘ಬಯೋ ಬಬಲ್‘ ಎಂಬ ರಕ್ಷಣೆ ಅವರಿಗಿದ್ದು ಯಾವುದೇ ಭಯವಿಲ್ಲದೆ ಅವರು ಆಟದಲ್ಲಿ ನಿರತರಾಗಿದ್ದಾರೆ.

ಮನರಂಜನೆ ಬೇಕು, ಖಿನ್ನತೆಯಲ್ಲಿರುವವರಿಗೆ ಅದು ಅಗತ್ಯವಿದೆ, ಇದು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂಬ ಮಾತುಗಳು ಸಹ ಐಪಿಎಲ್ ಪರ ಕೇಳಿಬರುತ್ತವೆ. ಐಪಿಎಲ್ ಅಥವಾ ಯಾವುದಾದರೊಂದು ಜನಕ್ಕೆ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳೋಣ. ಕಳೆದ ವರ್ಷದ ಅಮೆರಿಕ ಸೇರಿದಂತೆ ಇತರೆಡೆ ಸಾಂಕ್ರಾಮಿಕದ ನಡುವೆ ಹಲವು ಸ್ಪರ್ಧೆಗಳು ನಡೆದಾಗ ಬಹಳಷ್ಟು ಕ್ರೀಡಾಪಡುಗಳು ಮೊಣಕಾಲೂರಿ ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯನ್ನು ಖಂಡಿಸಿ ವಿಷಾಧ ವ್ಯಕ್ತಪಡಿಸಿದ್ದರು. ಮಾಸ್ಕ್ ನಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಎಂಬ ಬರಹದ ಮೂಲಕ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದರು. ಈ ಐಪಿಎಲ್‌ನಲ್ಲಿ ಪ್ರಸ್ತುತ ಸಾಂಕ್ರಾಮಿಕದ ಬಗ್ಗೆ ಅಂತಹ ಕಾಳಜಿಗಳೇನಾದರೂ ಕಾಣುತ್ತಿವೆಯೇ?

ಭಾರತದ ಕ್ರೀಡಾಪಟುಗಳ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್‌ಗಳಿಗೆ ಲಕ್ಷ-ಕೋಟಿ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ. ಅದನ್ನು ಬಳಸಿ ‘ಕೈತೊಳೆಯಿರಿ, ಮಾಸ್ಕ್ ಧರಿಸಿ, ಮನೆಯಲ್ಲಿಯೇ ಇರಿ’ ಎಂಬ ಉಪದೇಶಗಳನ್ನು ಹೊರತುಪಡಿಸಿ ಮತ್ತೇನಾದರೂ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆಯೇ? ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ, ಒಟ್ಟಾಗಿ ಇದನ್ನು ಎದುರಿಸೋಣ ಎಂದು ಧೈರ್ಯ ತುಂಬಿದ್ದಾರೆಯೇ? ಜನರ ಸಂಕಷ್ಟ ಅರಿತು ಆಕ್ಸಿಜನ್, ಔಷಧಿ, ಬಡಜನರಿಗೆ ಆಹಾರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆಯೇ? ಇಲ್ಲ, ಬದಲಿಗೆ ಅವರ ಸೆಲ್ಫಿಗಳು, ತಿನಿಸುಗಳ ಫೋಟೊಗಳು ಮಾತ್ರ ಅವರ ಟೈಮ್‌ಲೈನ್‌ನಲ್ಲಿ ಕಾಣುತ್ತಿವೆಯೆಂದರೆ ಏನರ್ಥ?

ಕಳೆದ ಮೂರು ತಿಂಗಳ ಹಿಂದೆ ಗಣರಾಜ್ಯೋತ್ಸವದಂದು ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಿಸಾನ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಆಗ ಅಹಿತಕರ ವಾತವಾರಣ ನಿರ್ಮಾಣವಾಗಿತ್ತು. ರೈತರನ್ನು ಬೆಂಬಲಿಸಿ ಅಂತರಾಷ್ಟ್ರೀಯ ತಾರೆಯರು ಟ್ವೀಟ್ ಮಾಡಿ ಆ ವಿಷಯ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದರು. ಅದರ ಮಾರನೇ ದಿನ ‘ಇದು ಭಾರತದ ಆಂತರೀಕ ವಿಷಯ, ಇದರಲ್ಲಿ ಹೊರಗಿನವರು ಮೂಗು ತೂರಿಸುವ ಅಗತ್ಯವಿಲ್ಲ. ನಾವು ಭಾರತದೊಂದಿಗೆ ನಿಲ್ಲುತ್ತೇವೆ’ ಎಂಬ ಒಂದೇ ಸಂದೇಶವನ್ನು ಈ ಬಹುಪಾಲು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಟ್ವೀಟ್ ಮಾಡುವ ಮೂಲಕ ತಮ್ಮ ಹಿಪಾಕ್ರಸಿ ಮೆರೆದಿದ್ದರು! ಭಾರತದ ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಈ ಆಟಗಾರರು ತಮಗೆ ಬಂದ ಸಂದೇಶವನ್ನು ಟ್ವೀಟ್ ಮಾಡಿ ಆಳುವವರ ಹಿತ ಕಾಪಾಡಿದ್ದರು… ಆದರೆ ಇಂದು ಜನ ಬೀದಿಯಲ್ಲಿ ಹುಳಗಳ ರೀತಿ ಸಾಯುತ್ತಿರುವಾಗ ಅದಕ್ಕೂ ತಮಗೂ ಸಂಬಂಧವೇ ಇಲ್ಲದ ರೀತಿ ಮತ್ತೊಂದು ಗ್ರಹವಾಸಿಗಳಾಗಿಬಿಟ್ಟಿದ್ದಾರೆ!

ಈ ಕ್ರಿಕೆಟ್ ತಾರೆಯರನ್ನು ಭಾರತದ ಕೋಟ್ಯಂತರ ಜನ ಆರಾಧಿಸುತ್ತಾರೆ.. ಅಂತಹ ಕೋಟ್ಯಾಂತರದ ಜನರ ಜೀವವೇ ಅಪಾಯದಲ್ಲಿದೆ. ಆದರೆ ಅದರ ಬಗ್ಗೆ ಈ ಕ್ರಿಕೆಟಿಗರು ಕಿಂಚಿತ್ ಕಾಳಜಿ ವಹಿಸುತ್ತಿದ್ದಾರೆಯೇ? ಐಪಿಎಲ್ ಪಂದ್ಯ ನಡೆಯುವಾಗ ವೀಕ್ಷಕ ವಿವರಣೆ ನೀಡುವವರು 10 ಓವರ್‌ಗಳಿಗೆ ಒಮ್ಮೆ ಮಾಸ್ಕ್ ಹಾಕಿ, ಸುರಕ್ಷಿತ ಅಂತರ ಕಾಪಾಡಿ ಎಂದು ಹೇಳುತ್ತಾರೆ ಹೊರತು ಇಂದಿನ ಬಿಕ್ಕಟ್ಟಿಗೂ, ಐಪಿಎಲ್‌ಗೂ ಯಾವುದೇ ಸಂಬಂಧವಿಲ್ಲದಂತೆ ನಡೆಯುತ್ತಿದೆ. ಈ ಕಾರಣದಿಂದಲೇ “ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ತೆಗೆದುಕೊಂಡ ನಿಲುವು ಪ್ರಶಂಸೆಗೆ ಒಳಗಾಗಿದೆ.

ಅಪವಾದಗಳು

ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ 50 ಸಾವಿರ ಡಾಲರ್ ಹಣವನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ. ಹರ್ಭಜನ್ ಸಿಂಗ್ ಪುಣೆಯಲ್ಲಿ ದಿನಕ್ಕೆ 1500 ಜನರನ್ನು ಟೆಸ್ಟ್ ಮಾಡುವ ಸಾಮರ್ಥ್ಯದ ಕೊರೊನಾ ಪರೀಕ್ಷೆ ಕೇಂದ್ರವನ್ನು ತೆರೆದಿದ್ದಾರೆ. ವಾಸಿಂ ಜಾಫರ್, ಇರ್ಫಾನ್ ಪಠಾಣ್ ಮತ್ತು ರವಿಚಂದ್ರನ್ ಅಶ್ವಿನ್ ಜನರಿಗೆ ಈ ಸಂದರ್ಭದಲ್ಲಿ ಇತರರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಇವರನ್ನು ಇವರ ಈ ಕಾರ್ಯಕ್ಕಾಗಿ ಶ್ಲಾಘಿಸಬೇಕಿದೆ. ಅಶ್ವಿನ್ ನಮ್ಮ ಕುಟುಂಬ ಕೋವಿಡ್‌ನಿಂದ ಬಳಲುತ್ತಿದ್ದು ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲಬೇಕು ಎಂದು ಹೇಳಿ ಐಪಿಎಲ್ ತೊರೆದು ಹೊರಟಿದ್ದಾರೆ.


ಇದನ್ನೂ ಓದಿ; ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...