Homeಮುಖಪುಟಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

- Advertisement -
- Advertisement -

ಸಾಂಕ್ರಾಮಿಕ ತಂದೊಡ್ಡಿದ ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನಲ್ಲಿ ಜನ ನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್, ಔಷಧಿ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಗಳು ಸೋಂಕಿನ, ಸಾವಿನ ಪ್ರಕರಣಗಳನ್ನು ಮುಚ್ಚಿಡುತ್ತಿವೆ ಎಂಬ ಆರೋಪಗಳ ನಡುವೆಯೂ ಎಲ್ಲೆಲ್ಲೂ ಸಾವಿನ ಸುದ್ದಿಗಳು ಕಂಗೆಡಿಸುತ್ತಿವೆ. ಆದರೆ ಅದೇ ಸಮಯದಲ್ಲಿ ಇದ್ಯಾವುದರ ಪರಿವೆ ಇಲ್ಲದೆ ಫೋರ್, ಸಿಕ್ಸ್, ವಿಕೆಟ್‌ಗಳ ಸಂಭ್ರಮದಲ್ಲಿ ಮತ್ತೊಂದು ಜಗತ್ತು ಅಸ್ತಿತ್ವದಲ್ಲಿದೆ! ‘ಬಯೋ ಬಬಲ್‘ ಎಂಬ ರಕ್ಷಣೆ ಅವರಿಗಿದ್ದು ಯಾವುದೇ ಭಯವಿಲ್ಲದೆ ಅವರು ಆಟದಲ್ಲಿ ನಿರತರಾಗಿದ್ದಾರೆ.

ಮನರಂಜನೆ ಬೇಕು, ಖಿನ್ನತೆಯಲ್ಲಿರುವವರಿಗೆ ಅದು ಅಗತ್ಯವಿದೆ, ಇದು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂಬ ಮಾತುಗಳು ಸಹ ಐಪಿಎಲ್ ಪರ ಕೇಳಿಬರುತ್ತವೆ. ಐಪಿಎಲ್ ಅಥವಾ ಯಾವುದಾದರೊಂದು ಜನಕ್ಕೆ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳೋಣ. ಕಳೆದ ವರ್ಷದ ಅಮೆರಿಕ ಸೇರಿದಂತೆ ಇತರೆಡೆ ಸಾಂಕ್ರಾಮಿಕದ ನಡುವೆ ಹಲವು ಸ್ಪರ್ಧೆಗಳು ನಡೆದಾಗ ಬಹಳಷ್ಟು ಕ್ರೀಡಾಪಡುಗಳು ಮೊಣಕಾಲೂರಿ ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯನ್ನು ಖಂಡಿಸಿ ವಿಷಾಧ ವ್ಯಕ್ತಪಡಿಸಿದ್ದರು. ಮಾಸ್ಕ್ ನಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಎಂಬ ಬರಹದ ಮೂಲಕ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದರು. ಈ ಐಪಿಎಲ್‌ನಲ್ಲಿ ಪ್ರಸ್ತುತ ಸಾಂಕ್ರಾಮಿಕದ ಬಗ್ಗೆ ಅಂತಹ ಕಾಳಜಿಗಳೇನಾದರೂ ಕಾಣುತ್ತಿವೆಯೇ?

ಭಾರತದ ಕ್ರೀಡಾಪಟುಗಳ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್‌ಗಳಿಗೆ ಲಕ್ಷ-ಕೋಟಿ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ. ಅದನ್ನು ಬಳಸಿ ‘ಕೈತೊಳೆಯಿರಿ, ಮಾಸ್ಕ್ ಧರಿಸಿ, ಮನೆಯಲ್ಲಿಯೇ ಇರಿ’ ಎಂಬ ಉಪದೇಶಗಳನ್ನು ಹೊರತುಪಡಿಸಿ ಮತ್ತೇನಾದರೂ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆಯೇ? ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ, ಒಟ್ಟಾಗಿ ಇದನ್ನು ಎದುರಿಸೋಣ ಎಂದು ಧೈರ್ಯ ತುಂಬಿದ್ದಾರೆಯೇ? ಜನರ ಸಂಕಷ್ಟ ಅರಿತು ಆಕ್ಸಿಜನ್, ಔಷಧಿ, ಬಡಜನರಿಗೆ ಆಹಾರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆಯೇ? ಇಲ್ಲ, ಬದಲಿಗೆ ಅವರ ಸೆಲ್ಫಿಗಳು, ತಿನಿಸುಗಳ ಫೋಟೊಗಳು ಮಾತ್ರ ಅವರ ಟೈಮ್‌ಲೈನ್‌ನಲ್ಲಿ ಕಾಣುತ್ತಿವೆಯೆಂದರೆ ಏನರ್ಥ?

ಕಳೆದ ಮೂರು ತಿಂಗಳ ಹಿಂದೆ ಗಣರಾಜ್ಯೋತ್ಸವದಂದು ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಿಸಾನ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಆಗ ಅಹಿತಕರ ವಾತವಾರಣ ನಿರ್ಮಾಣವಾಗಿತ್ತು. ರೈತರನ್ನು ಬೆಂಬಲಿಸಿ ಅಂತರಾಷ್ಟ್ರೀಯ ತಾರೆಯರು ಟ್ವೀಟ್ ಮಾಡಿ ಆ ವಿಷಯ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದರು. ಅದರ ಮಾರನೇ ದಿನ ‘ಇದು ಭಾರತದ ಆಂತರೀಕ ವಿಷಯ, ಇದರಲ್ಲಿ ಹೊರಗಿನವರು ಮೂಗು ತೂರಿಸುವ ಅಗತ್ಯವಿಲ್ಲ. ನಾವು ಭಾರತದೊಂದಿಗೆ ನಿಲ್ಲುತ್ತೇವೆ’ ಎಂಬ ಒಂದೇ ಸಂದೇಶವನ್ನು ಈ ಬಹುಪಾಲು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಟ್ವೀಟ್ ಮಾಡುವ ಮೂಲಕ ತಮ್ಮ ಹಿಪಾಕ್ರಸಿ ಮೆರೆದಿದ್ದರು! ಭಾರತದ ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಈ ಆಟಗಾರರು ತಮಗೆ ಬಂದ ಸಂದೇಶವನ್ನು ಟ್ವೀಟ್ ಮಾಡಿ ಆಳುವವರ ಹಿತ ಕಾಪಾಡಿದ್ದರು… ಆದರೆ ಇಂದು ಜನ ಬೀದಿಯಲ್ಲಿ ಹುಳಗಳ ರೀತಿ ಸಾಯುತ್ತಿರುವಾಗ ಅದಕ್ಕೂ ತಮಗೂ ಸಂಬಂಧವೇ ಇಲ್ಲದ ರೀತಿ ಮತ್ತೊಂದು ಗ್ರಹವಾಸಿಗಳಾಗಿಬಿಟ್ಟಿದ್ದಾರೆ!

ಈ ಕ್ರಿಕೆಟ್ ತಾರೆಯರನ್ನು ಭಾರತದ ಕೋಟ್ಯಂತರ ಜನ ಆರಾಧಿಸುತ್ತಾರೆ.. ಅಂತಹ ಕೋಟ್ಯಾಂತರದ ಜನರ ಜೀವವೇ ಅಪಾಯದಲ್ಲಿದೆ. ಆದರೆ ಅದರ ಬಗ್ಗೆ ಈ ಕ್ರಿಕೆಟಿಗರು ಕಿಂಚಿತ್ ಕಾಳಜಿ ವಹಿಸುತ್ತಿದ್ದಾರೆಯೇ? ಐಪಿಎಲ್ ಪಂದ್ಯ ನಡೆಯುವಾಗ ವೀಕ್ಷಕ ವಿವರಣೆ ನೀಡುವವರು 10 ಓವರ್‌ಗಳಿಗೆ ಒಮ್ಮೆ ಮಾಸ್ಕ್ ಹಾಕಿ, ಸುರಕ್ಷಿತ ಅಂತರ ಕಾಪಾಡಿ ಎಂದು ಹೇಳುತ್ತಾರೆ ಹೊರತು ಇಂದಿನ ಬಿಕ್ಕಟ್ಟಿಗೂ, ಐಪಿಎಲ್‌ಗೂ ಯಾವುದೇ ಸಂಬಂಧವಿಲ್ಲದಂತೆ ನಡೆಯುತ್ತಿದೆ. ಈ ಕಾರಣದಿಂದಲೇ “ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ತೆಗೆದುಕೊಂಡ ನಿಲುವು ಪ್ರಶಂಸೆಗೆ ಒಳಗಾಗಿದೆ.

ಅಪವಾದಗಳು

ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ 50 ಸಾವಿರ ಡಾಲರ್ ಹಣವನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ. ಹರ್ಭಜನ್ ಸಿಂಗ್ ಪುಣೆಯಲ್ಲಿ ದಿನಕ್ಕೆ 1500 ಜನರನ್ನು ಟೆಸ್ಟ್ ಮಾಡುವ ಸಾಮರ್ಥ್ಯದ ಕೊರೊನಾ ಪರೀಕ್ಷೆ ಕೇಂದ್ರವನ್ನು ತೆರೆದಿದ್ದಾರೆ. ವಾಸಿಂ ಜಾಫರ್, ಇರ್ಫಾನ್ ಪಠಾಣ್ ಮತ್ತು ರವಿಚಂದ್ರನ್ ಅಶ್ವಿನ್ ಜನರಿಗೆ ಈ ಸಂದರ್ಭದಲ್ಲಿ ಇತರರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಇವರನ್ನು ಇವರ ಈ ಕಾರ್ಯಕ್ಕಾಗಿ ಶ್ಲಾಘಿಸಬೇಕಿದೆ. ಅಶ್ವಿನ್ ನಮ್ಮ ಕುಟುಂಬ ಕೋವಿಡ್‌ನಿಂದ ಬಳಲುತ್ತಿದ್ದು ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲಬೇಕು ಎಂದು ಹೇಳಿ ಐಪಿಎಲ್ ತೊರೆದು ಹೊರಟಿದ್ದಾರೆ.


ಇದನ್ನೂ ಓದಿ; ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...