Homeಮುಖಪುಟಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನ ಕಾಲ ಮತ್ತು ಐಪಿಎಲ್ ಔಚಿತ್ಯ

- Advertisement -
- Advertisement -

ಸಾಂಕ್ರಾಮಿಕ ತಂದೊಡ್ಡಿದ ಅತಿ ದೊಡ್ಡ ಮಾನವೀಯ ಬಿಕ್ಕಟ್ಟಿನಲ್ಲಿ ಜನ ನರಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್, ಔಷಧಿ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಗಳು ಸೋಂಕಿನ, ಸಾವಿನ ಪ್ರಕರಣಗಳನ್ನು ಮುಚ್ಚಿಡುತ್ತಿವೆ ಎಂಬ ಆರೋಪಗಳ ನಡುವೆಯೂ ಎಲ್ಲೆಲ್ಲೂ ಸಾವಿನ ಸುದ್ದಿಗಳು ಕಂಗೆಡಿಸುತ್ತಿವೆ. ಆದರೆ ಅದೇ ಸಮಯದಲ್ಲಿ ಇದ್ಯಾವುದರ ಪರಿವೆ ಇಲ್ಲದೆ ಫೋರ್, ಸಿಕ್ಸ್, ವಿಕೆಟ್‌ಗಳ ಸಂಭ್ರಮದಲ್ಲಿ ಮತ್ತೊಂದು ಜಗತ್ತು ಅಸ್ತಿತ್ವದಲ್ಲಿದೆ! ‘ಬಯೋ ಬಬಲ್‘ ಎಂಬ ರಕ್ಷಣೆ ಅವರಿಗಿದ್ದು ಯಾವುದೇ ಭಯವಿಲ್ಲದೆ ಅವರು ಆಟದಲ್ಲಿ ನಿರತರಾಗಿದ್ದಾರೆ.

ಮನರಂಜನೆ ಬೇಕು, ಖಿನ್ನತೆಯಲ್ಲಿರುವವರಿಗೆ ಅದು ಅಗತ್ಯವಿದೆ, ಇದು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂಬ ಮಾತುಗಳು ಸಹ ಐಪಿಎಲ್ ಪರ ಕೇಳಿಬರುತ್ತವೆ. ಐಪಿಎಲ್ ಅಥವಾ ಯಾವುದಾದರೊಂದು ಜನಕ್ಕೆ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳೋಣ. ಕಳೆದ ವರ್ಷದ ಅಮೆರಿಕ ಸೇರಿದಂತೆ ಇತರೆಡೆ ಸಾಂಕ್ರಾಮಿಕದ ನಡುವೆ ಹಲವು ಸ್ಪರ್ಧೆಗಳು ನಡೆದಾಗ ಬಹಳಷ್ಟು ಕ್ರೀಡಾಪಡುಗಳು ಮೊಣಕಾಲೂರಿ ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯನ್ನು ಖಂಡಿಸಿ ವಿಷಾಧ ವ್ಯಕ್ತಪಡಿಸಿದ್ದರು. ಮಾಸ್ಕ್ ನಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಎಂಬ ಬರಹದ ಮೂಲಕ ತಮ್ಮ ಸಾಮಾಜಿಕ ಕಾಳಜಿ ಮೆರೆದಿದ್ದರು. ಈ ಐಪಿಎಲ್‌ನಲ್ಲಿ ಪ್ರಸ್ತುತ ಸಾಂಕ್ರಾಮಿಕದ ಬಗ್ಗೆ ಅಂತಹ ಕಾಳಜಿಗಳೇನಾದರೂ ಕಾಣುತ್ತಿವೆಯೇ?

ಭಾರತದ ಕ್ರೀಡಾಪಟುಗಳ ಸಾಮಾಜಿಕ ಜಾಲತಾಣಗಳ ಹ್ಯಾಂಡಲ್‌ಗಳಿಗೆ ಲಕ್ಷ-ಕೋಟಿ ಸಂಖ್ಯೆಯಲ್ಲಿ ಅನುಯಾಯಿಗಳಿದ್ದಾರೆ. ಅದನ್ನು ಬಳಸಿ ‘ಕೈತೊಳೆಯಿರಿ, ಮಾಸ್ಕ್ ಧರಿಸಿ, ಮನೆಯಲ್ಲಿಯೇ ಇರಿ’ ಎಂಬ ಉಪದೇಶಗಳನ್ನು ಹೊರತುಪಡಿಸಿ ಮತ್ತೇನಾದರೂ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆಯೇ? ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ, ಒಟ್ಟಾಗಿ ಇದನ್ನು ಎದುರಿಸೋಣ ಎಂದು ಧೈರ್ಯ ತುಂಬಿದ್ದಾರೆಯೇ? ಜನರ ಸಂಕಷ್ಟ ಅರಿತು ಆಕ್ಸಿಜನ್, ಔಷಧಿ, ಬಡಜನರಿಗೆ ಆಹಾರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆಯೇ? ಇಲ್ಲ, ಬದಲಿಗೆ ಅವರ ಸೆಲ್ಫಿಗಳು, ತಿನಿಸುಗಳ ಫೋಟೊಗಳು ಮಾತ್ರ ಅವರ ಟೈಮ್‌ಲೈನ್‌ನಲ್ಲಿ ಕಾಣುತ್ತಿವೆಯೆಂದರೆ ಏನರ್ಥ?

ಕಳೆದ ಮೂರು ತಿಂಗಳ ಹಿಂದೆ ಗಣರಾಜ್ಯೋತ್ಸವದಂದು ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಿಸಾನ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದರು. ಆಗ ಅಹಿತಕರ ವಾತವಾರಣ ನಿರ್ಮಾಣವಾಗಿತ್ತು. ರೈತರನ್ನು ಬೆಂಬಲಿಸಿ ಅಂತರಾಷ್ಟ್ರೀಯ ತಾರೆಯರು ಟ್ವೀಟ್ ಮಾಡಿ ಆ ವಿಷಯ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದರು. ಅದರ ಮಾರನೇ ದಿನ ‘ಇದು ಭಾರತದ ಆಂತರೀಕ ವಿಷಯ, ಇದರಲ್ಲಿ ಹೊರಗಿನವರು ಮೂಗು ತೂರಿಸುವ ಅಗತ್ಯವಿಲ್ಲ. ನಾವು ಭಾರತದೊಂದಿಗೆ ನಿಲ್ಲುತ್ತೇವೆ’ ಎಂಬ ಒಂದೇ ಸಂದೇಶವನ್ನು ಈ ಬಹುಪಾಲು ಕ್ರಿಕೆಟಿಗರು ಮತ್ತು ಬಾಲಿವುಡ್ ತಾರೆಯರು ಟ್ವೀಟ್ ಮಾಡುವ ಮೂಲಕ ತಮ್ಮ ಹಿಪಾಕ್ರಸಿ ಮೆರೆದಿದ್ದರು! ಭಾರತದ ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ಈ ಆಟಗಾರರು ತಮಗೆ ಬಂದ ಸಂದೇಶವನ್ನು ಟ್ವೀಟ್ ಮಾಡಿ ಆಳುವವರ ಹಿತ ಕಾಪಾಡಿದ್ದರು… ಆದರೆ ಇಂದು ಜನ ಬೀದಿಯಲ್ಲಿ ಹುಳಗಳ ರೀತಿ ಸಾಯುತ್ತಿರುವಾಗ ಅದಕ್ಕೂ ತಮಗೂ ಸಂಬಂಧವೇ ಇಲ್ಲದ ರೀತಿ ಮತ್ತೊಂದು ಗ್ರಹವಾಸಿಗಳಾಗಿಬಿಟ್ಟಿದ್ದಾರೆ!

ಈ ಕ್ರಿಕೆಟ್ ತಾರೆಯರನ್ನು ಭಾರತದ ಕೋಟ್ಯಂತರ ಜನ ಆರಾಧಿಸುತ್ತಾರೆ.. ಅಂತಹ ಕೋಟ್ಯಾಂತರದ ಜನರ ಜೀವವೇ ಅಪಾಯದಲ್ಲಿದೆ. ಆದರೆ ಅದರ ಬಗ್ಗೆ ಈ ಕ್ರಿಕೆಟಿಗರು ಕಿಂಚಿತ್ ಕಾಳಜಿ ವಹಿಸುತ್ತಿದ್ದಾರೆಯೇ? ಐಪಿಎಲ್ ಪಂದ್ಯ ನಡೆಯುವಾಗ ವೀಕ್ಷಕ ವಿವರಣೆ ನೀಡುವವರು 10 ಓವರ್‌ಗಳಿಗೆ ಒಮ್ಮೆ ಮಾಸ್ಕ್ ಹಾಕಿ, ಸುರಕ್ಷಿತ ಅಂತರ ಕಾಪಾಡಿ ಎಂದು ಹೇಳುತ್ತಾರೆ ಹೊರತು ಇಂದಿನ ಬಿಕ್ಕಟ್ಟಿಗೂ, ಐಪಿಎಲ್‌ಗೂ ಯಾವುದೇ ಸಂಬಂಧವಿಲ್ಲದಂತೆ ನಡೆಯುತ್ತಿದೆ. ಈ ಕಾರಣದಿಂದಲೇ “ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ತೆಗೆದುಕೊಂಡ ನಿಲುವು ಪ್ರಶಂಸೆಗೆ ಒಳಗಾಗಿದೆ.

ಅಪವಾದಗಳು

ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ 50 ಸಾವಿರ ಡಾಲರ್ ಹಣವನ್ನು ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ. ಹರ್ಭಜನ್ ಸಿಂಗ್ ಪುಣೆಯಲ್ಲಿ ದಿನಕ್ಕೆ 1500 ಜನರನ್ನು ಟೆಸ್ಟ್ ಮಾಡುವ ಸಾಮರ್ಥ್ಯದ ಕೊರೊನಾ ಪರೀಕ್ಷೆ ಕೇಂದ್ರವನ್ನು ತೆರೆದಿದ್ದಾರೆ. ವಾಸಿಂ ಜಾಫರ್, ಇರ್ಫಾನ್ ಪಠಾಣ್ ಮತ್ತು ರವಿಚಂದ್ರನ್ ಅಶ್ವಿನ್ ಜನರಿಗೆ ಈ ಸಂದರ್ಭದಲ್ಲಿ ಇತರರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ. ಇವರನ್ನು ಇವರ ಈ ಕಾರ್ಯಕ್ಕಾಗಿ ಶ್ಲಾಘಿಸಬೇಕಿದೆ. ಅಶ್ವಿನ್ ನಮ್ಮ ಕುಟುಂಬ ಕೋವಿಡ್‌ನಿಂದ ಬಳಲುತ್ತಿದ್ದು ಈ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಲ್ಲಬೇಕು ಎಂದು ಹೇಳಿ ಐಪಿಎಲ್ ತೊರೆದು ಹೊರಟಿದ್ದಾರೆ.


ಇದನ್ನೂ ಓದಿ; ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...