Homeಮುಖಪುಟಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

ಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ…’ ಜಿಂದಾಲ್‌ ಕಂಪನಿಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿರುವ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

’ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ’ ಎಂದು ಎಚ್ಚರಿಸಿದ್ದಾರೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

’ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ ಅನ್ನು ‘ಈಸ್ಟ್‌ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ..? ಎಂದು ಆನಂದ್‌ ಸಿಂಗ್‌ ವಿರುದ್ಧ ಕಿಡಿಕಾರಿದ್ದಾರೆ.

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ..? ಎಂದು ಪ್ರಶ್ನಿಸಿದ್ದಾರೆ.

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ‘ಗೊತ್ತಿಲ್ಲ’ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ’ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

’ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ’ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ.


ಇದನ್ನೂ ಓದಿ: ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶವನ್ನೇ ಕೊಳ್ಳೆ ಹೊಡೆಯುತ್ತಿರುವವರಿಗೆ ಮೂರು ಸಾವಿರ ಎಕರೆ ನಗಣ್ಯ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....