Homeಫ್ಯಾಕ್ಟ್‌ಚೆಕ್ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕಿಕ್ಕಿರಿದು ಸೇರಿರುವ ದೊಡ್ಡ ಕೂಟವೊಂದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಲಪಂಥೀಯ ಟ್ವಿಟರ್ ಬಳಕೆದಾರರು ಕೊರೊನಾ ಮಾರ್ಗಸೂಚಿಗಳನ್ನು ಮೀರಿ ರಂಝಾನ್‌ ಆಚರಣೆಗೆ ಜನರು ಸೇರಿದ್ದಾರೆ ಎಂದು ತಪ್ಪಾಗಿ ಪ್ರತಿಪಾದಿಸುತ್ತಿದ್ದಾರೆ.

2021 ರ ಏಪ್ರಿಲ್ 16 ರಂದು ನಿಧನರಾದ ಸ್ಥಳೀಯ ಧರ್ಮಗುರು ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರ ಅಂತ್ಯಕ್ರಿಯೆಯ ಮೆರವಣಿಗೆ ಸಂಭಾಲ್‌ನ ಮದರಸಾ ಅಂಜುಮಾನ್ ಮುಯಿನುಲ್ ಇಸ್ಲಾಂನಲ್ಲಿ ಜನರು ನೆರೆದಿರುವುದನ್ನು ತೋರಿಸುವ ವಿಡಿಯೊ ಇದಾಗಿದೆ.

ಮದರಸ ಮತ್ತು ಅದರ ಸುತ್ತಲೂ ಚಿತ್ರೀಕರಿಸಿದ ವಿಡಿಯೋವನ್ನು, ಹರಿದ್ವಾರದ ಕುಂಭಮೇಳಕ್ಕೆ ಹೋಲಿಕೆ ಮಾಡಿರುವ ನೆಟ್ಟಿಗರು, ಕೊರೊನಾ ಎರಡನೇ ಅಲೆಯ ಕಾರಣಕ್ಕೆ ದೇಶವು ತೀವ್ರ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಸಭೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಉತ್ತರ ಪ್ರದೇಶ ಸರ್ಕಾರವು ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣಕ್ಕೆ ಘೋಷಿಸಿದ ಇತ್ತೀಚಿನ ನಿರ್ಬಂಧಗಳ ಪ್ರಕಾರ, ಶವಸಂಸ್ಕಾರ ಅಥವಾ ಸಮಾಧಿ ಸ್ಥಳಗಳಲ್ಲಿ ಅಂತ್ಯಕ್ರಿಯೆಯ ಸಮಯದಲ್ಲಿ 20 ಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವಂತಿಲ್ಲ.

ಇದೇ ವಿಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್‌, “ಕುಂಭಮೇಳದ ನಂತರ ….ಗೌರವಾನ್ವಿತ ಪ್ರಧಾನಿಯವರೆ, ದಯವಿಟ್ಟು ರಂಜಾನ್ ಸಭೆಯನ್ನು ಕೂಡಾ ನಿಲ್ಲಿಸುವಂತೆ ವಿನಂತಿಸುತ್ತೇನೆ” ಎಂದು ಬರೆದು ಕೊಂಡಿದ್ದಾರೆ. ಆದರೆ ಈ ಟ್ವೀಟನ್ನು ಅವರು ಡಿಲಿಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

“ವೈರಲ್‌ ವೀಡಿಯೊದಲ್ಲಿ ನೋಡಿದ ಜನಸಮೂಹವು, ಸಂಭಾಲ್‌ನ ನಖಾಸ್ ಪ್ರದೇಶದಲ್ಲಿನ ಅಂಜುಮಾನ್ ಮುಯಿನುಲ್ ಇಸ್ಲಾಂ ಮದ್ರಸದಲ್ಲಿ ಸೇರಿದ ಜನ ಸಮೂಹವಾಗಿದೆ” ಎಂದು ಸಂಭಾಲ್ ನಿವಾಸಿ ಶಾನ್ ಅವರು ತಿಳಿಸಿದ್ದಾರೆಂದು ಭೂಮ್‌ಲೈವ್‌ ವರದಿ ಮಾಡಿದೆ. ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರು ಸಂಭಾಲ್‌ನಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯ ಪ್ರಾರ್ಥನೆಗಾಗಿ ಈ ಜನರು ಸೇರಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಮೆರವಣಿಗೆಯ ಇತರ ತುಣುಕುಗಳು ಫೇಸ್‌ಬುಕ್‌ನಲ್ಲಿ ನೋಡಬಹುದಾಗಿದೆ. ವಿಡಿಯೊದಲ್ಲಿ ಅಂಜುಮಾನ್ ಮುಯಿನುಲ್ ಇಸ್ಲಾಂ ಮದರಸಾದ ಹಿನ್ನಲೆಯನ್ನು ಕೂಡಾ ನೋಡಬಹುದಾಗಿದೆ.

“ಮೌಲಾನಾ ನದ್ವಿ ಬಹಳ ಪ್ರಭಾವಿತ ವ್ಯಕ್ತಿ. ಅನೇಕ ಜನರು ಅವರ ಅಭಿಮಾನಿಗಳಾಗಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜನರು ದೂರದಿಂದ ಬಂದಿದ್ದರು. ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ನಾವು ನಿರಂತರವಾಗಿ ಜನರಿಗೆ ಮನವಿ ಮಾಡುತ್ತಿದ್ದೆವು. ಜೊತೆಗೆ ನಾವು ಪ್ರದೇಶವನ್ನು ಸ್ಯಾನಿಟೈಝ್ ಕೂಡಾ ಮಾಡುತ್ತಿದ್ದೆವು” ಎಂದು ಮದರಸಾ ಸಂಬಂಧಿತ ವ್ಯಕ್ತಿಯಾದ ಜೈದ್ ನೋಮಾನಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

“ಆದರೆ ಅಂತಹ ಜನಸಮೂಹವನ್ನು ನಿರ್ವಹಿಸುವುದು ಮತ್ತು ನಿಯಂತ್ರಿಸುವುದು ನಮಗೆ ತುಂಬಾ ಕಷ್ಟಕರವಾಗಿತ್ತು. ಆದಾಗ್ಯೂ, ದಫನ ಭೂಮಿಯನ್ನು ತಲುಪಲು ಮತ್ತು ಅಂತ್ಯಕ್ರಿಯೆಯನ್ನು ಪೂರೈಸಲು ನಾವು ಸರಪಣಿಯನ್ನು ಮಾಡಿಕೊಂಡೆವು. ಅಲ್ಲದೆ ಪೊಲೀಸ್ ಆಡಳಿತದ ಕಡೆಯಿಂದ ನಮಗೆ ಯಾವುದೇ ನಿರ್ದಿಷ್ಟ ಸೂಚನೆಗಳು ಸಿಗಲಿಲ್ಲ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲು ಪ್ರಯತ್ನಿಸಿದ್ದೇವೆ ಆದರೆ ಜನಸಂದಣಿಯನ್ನು ನಿಯಂತ್ರಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಮೌಲಾನಾ ನಿಧನರಾಗಿದ್ದಾರೆ ಎಂದು ಅವರ ಹೆಸರಲ್ಲಿ ಇರುವ ಫೇಸ್‌ಬುಕ್ ಪೇಜೊಂದು, ಏಪ್ರಿಲ್ 16, 2021 ರಂದು ಘೋಷಿಸಿತ್ತು.

ವಿಡಿಯೊದಲ್ಲಿ ಇರುವುದು ಅಂತ್ಯಕ್ರಿಯೆಯ ಮೆರವಣಿಗೆ ಎಂದು ಸಂಭಾಲ್ ಪೊಲೀಸರು ದೃಡಪಡಿಸಿದ್ದಾರೆ. ಆದರೆ ಸಭೆ ಸೇರಲು ಅನುಮತಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...