Homeಫ್ಯಾಕ್ಟ್‌ಚೆಕ್ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ...

ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

- Advertisement -
- Advertisement -

ಪ್ರಸ್ತುತ ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಆ್ಯಂಟಿ ವೈರಲ್ ಔಷಧಿಗೆ ‘ರೆಮ್‌ಡೆಸಿವಿರ್‌‌’(Remdesivir) ಎಂಬ ಹೆಸರನ್ನು ತಮಿಳುನಾಡು ಮೂಲದ ಭಾರತೀಯ ವಿಜ್ಞಾನಿಯಾದ ‘ರಮೇಶ್ ಇ.ಎಂ. ದೇಸಿಗನ್’ (Ramesh EM Desigan) ಅವರ ಗೌರವಾರ್ಥವಾಗಿ ಇಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಆಯ

ಆದರೆ ರೆಮ್‌ಡೆಸಿವಿರ್‌ ಮೂಲ ಕಂಪನಿಯಾದ ‘ಗಿಲ್ಯಾಡ್‌ ಸೈನ್ಸಸ್’ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರತಿಪಾದನೆ ನಿಜವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

  • ರೆಮ್ಡೆಸಿವಿರ್ ಅನ್ನು ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸ್ ಅಭಿವೃದ್ಧಿಪಡಿಸಿದೆ. ಅಲ್ಲಿನ ಜೆಕ್ ವಿಜ್ಞಾನಿ ಥೋಮಸ್ ಸಿಹ್ಲರ್ ನೇತೃತ್ವದ ತಂಡವು ಎಬೋಲಾ ಚಿಕಿತ್ಸೆಗಾಗಿ ಈ ಔಷಧವನ್ನು ಕಂಡುಹಿಡಿದಿದೆ.
  • ಆ್ಯಂಟಿ ವೈರಲ್‌ ಔಷಧಕ್ಕೆ ಮೊದಲು ಎಬ್ಪಾಂಟುವಿರ್ (Ebpantuvir) ಎಂದು ಹೆಸರು ಇದ್ದು, ನಂತರ ಸಿಹ್ಲಾರ್ ತಂಡದ ಪ್ರಮುಖ ವಿಜ್ಞಾನಿ ‘ರಮೇಶ್ ಇ.ಎಂ. ದೇಸಿಗನ್’ ಅವರ ಗೌರವಾರ್ಥವಾಗಿ ‘ರೆಮ್‌ಡೆಸಿವಿರ್‌’ ಎಂದು ನಾಮಕರಣ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

  • ರಮೇಶ್ ತಮಿಳುನಾಡಿನ ರಾಸಿಪುರಂ ಮೂಲದವರಾಗಿದ್ದು, ಗಿಲ್ಯಾಡ್‌‌ನಲ್ಲಿ ಕೆಲಸ ಮಾಡಲು 2002 ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದರು.
  • ರಮೇಶ್ ಇ.ಎಂ. ದೇಸಿಗನ್ ಅವರ ಗೌರವಾರ್ಥವಾಗಿ ತಮಿಳುನಾಡಿನಲ್ಲಿ ಅವರ ಕಲಿತ ಪ್ರಾಥಮಿಕ ಶಾಲೆ, ರಾಶಿ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಗಿಲ್ಯಾಡ್‌ 2 ಮಿಲಿಯನ್ ದೇಣಿಗೆ ನೀಡಿದೆ.
ಅದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದೇಶವು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸತ್ಯವೇನು?

ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸಸ್ ‘ರೆಮ್‌ಡೆಸಿವಿರ್‌’ ಔಷಧಿಯ ಮೂಲ ಕಂಪೆನಿಯಾಗಿದೆ ಎಂಬುದು ನಿಜವಾಗಿದೆ. ಗಿಲ್ಯಾಡ್‌ನ ವೆಬ್‌ಸೈಟ್‌ನಲ್ಲಿ ಈ ಔಷಧದ ಬೆಳವಣಿಗೆಯನ್ನು ವಿವರಿಸುವ ಡಾಕ್ಯುಮೆಂಟ್ ಅನ್ನು ಕೆಳಗೆ ನೋಡಬಹುದುದಾಗಿದೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

2009 ರಲ್ಲಿ ಹೆಪಟೈಟಿಸ್ ಸಿ (ಎಚ್‌ಸಿವಿ) ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್‌ಎಸ್‌ವಿ) ನ ಸಂಶೋಧನಾ ಕಾರ್ಯಕ್ರಮಗಳು ನಡೆಯುತ್ತಿದ್ದಾಗ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಸಂಶೋಧನೆಯು  ಪ್ರಾರಂಭವಾಯಿತು ಎಂದು ಡಾಕ್ಯುಮೆಂಟ್ ಉಲ್ಲೇಖಿಸುತ್ತದೆ. ತರುವಾಯ 2014 ರಲ್ಲಿ ಎಬೋಲಾ ಮತ್ತು ಇತ್ತೀಚೆಗೆ ಕೊರೊನಾ ವೈರಸ್ಗಾಗಿ ಈ ಔಷಧವನ್ನು ಪರೀಕ್ಷಿಸಲಾಯಿತು.

ಕಂಪನಿಯ ವೆಬ್‌ಸೈಟ್‌ನಲ್ಲಿ ‘Four Questions with Tomas Cihlar: The Field of Emerging Viruses’ ಎಂಬ ಶೀರ್ಷಿಕೆಯ ಮತ್ತೊಂದು ಲೇಖನದಲ್ಲಿ, ಥಾಮಸ್‌ ಸಿಹ್ಲರ್ ಅವರು ಗಿಲ್ಯಾಡ್‌ನ ಆಂಟಿವೈರಲ್ ಔಷಧದ ಸಂಶೋಧನೆಗೆ ಕಾರಣಕರ್ತರಾಗಿದ್ದು, ವೈರಾಲಜಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರೆಮ್‌ಡೆಸಿವಿರ್‌ ಔಷಧದ ಅಭಿವೃದ್ಧಿಗೆ ಅವರು ನೇತೃತ್ವ ವಹಿಸಿದ್ದಾರೆ.

ಆದರೆ ವೆಬ್‌ಸೈಟ್‌ನ ಲೇಖನದಲ್ಲಿ ‘ರಮೇಶ್ ಇಎಂ ದೇಸಿಗನ್’ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ. ಜೊತೆಗೆ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಮತ್ತು ಪ್ರಯೋಗಗಳಿಗೆ ಸಂಬಂಧಿಸಿದ ತಂಡದಲ್ಲಿ ‘ರಮೇಶ್ ಇಎಂ ದೇಶಿಗನ್’ ಎಂಬ ವ್ಯಕ್ತಿ ಇಲ್ಲ ಎಂದು ಕಂಪೆನಿಯು ದೃಡಪಡಿಸಿದೆ ಎಂದು ‘ದಿಕ್ವಿಂಟ್’ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಗಿಲ್ಯಾಡ್ ಸೈನ್ಸಸ್‌ನ ಸಾರ್ವಜನಿಕ ವ್ಯವಹಾರಗಳ ಹಿರಿಯ ನಿರ್ದೇಶಕ, ಬಹಾರ್ ತುರ್ಕೊಗ್ಲು, ‘‘ರೆಮ್‌ಡೆಸಿವಿರ್‌ನೊಂದಿಗೆ ರಮೇಶ್ ಇಎಂ ದೇಶಿಗನ್ ಎಂಬ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಅಲ್ಲದೆ ವೈರಲ್ ಸಂದೇಶದಲ್ಲಿ ಇರುವ ತಮಿಳುನಾಡಿನ ರಾಶಿ ಇಂಟರ್‌ನ್ಯಾಷನಲ್‌ ಶಾಲೆಗೆ ಗಿಲ್ಯಾಡ್ ಯಾವುದೆ ದೇಣಿಗೆ ನೀಡಿಲ್ಲ, ವೈರಲ್ ಸಂದೇಶವು ಸಂಪೂರ್ಣವಾಗಿ ಸುಳ್ಳು ಎಂದು ಶಾಲೆಯ ಪ್ರಾಂಶುಪಾಲ ಡಾ. ಡಿ ವಿದ್ಯಾಸಾಗರ್ ಹೇಳಿದ್ದಾರೆ.

ಅಲ್ಲದೆ ರಾಶಿ ಇಂಟರ್‌ನ್ಯಾಷನಲ್ ಶಾಲೆಯನ್ನು 2008 ರಲ್ಲಿ ಸ್ಥಾಪಿಸಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ರಮೇಶ್‌ ಗಿಲ್ಯಾಡ್‌ ಸಂಸ್ಥೆಯನ್ನು 2002 ರಲ್ಲಿ ಸೇರಿದರು ಎಂದು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳಬಹುದಾದರೆ, ಆಂಟಿವೈರಲ್ ಔಷಧಿಯಾದ ‘ರೆಮ್ಡೆಸಿವಿರ್’ ಸುತ್ತಲೂ ಹಬ್ಬುತ್ತಿರುವ ಈ ಸುದ್ದಿಗಳು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...