Homeಫ್ಯಾಕ್ಟ್‌ಚೆಕ್ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ...

ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

- Advertisement -
- Advertisement -

ಪ್ರಸ್ತುತ ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಆ್ಯಂಟಿ ವೈರಲ್ ಔಷಧಿಗೆ ‘ರೆಮ್‌ಡೆಸಿವಿರ್‌‌’(Remdesivir) ಎಂಬ ಹೆಸರನ್ನು ತಮಿಳುನಾಡು ಮೂಲದ ಭಾರತೀಯ ವಿಜ್ಞಾನಿಯಾದ ‘ರಮೇಶ್ ಇ.ಎಂ. ದೇಸಿಗನ್’ (Ramesh EM Desigan) ಅವರ ಗೌರವಾರ್ಥವಾಗಿ ಇಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಆಯ

ಆದರೆ ರೆಮ್‌ಡೆಸಿವಿರ್‌ ಮೂಲ ಕಂಪನಿಯಾದ ‘ಗಿಲ್ಯಾಡ್‌ ಸೈನ್ಸಸ್’ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರತಿಪಾದನೆ ನಿಜವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

  • ರೆಮ್ಡೆಸಿವಿರ್ ಅನ್ನು ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸ್ ಅಭಿವೃದ್ಧಿಪಡಿಸಿದೆ. ಅಲ್ಲಿನ ಜೆಕ್ ವಿಜ್ಞಾನಿ ಥೋಮಸ್ ಸಿಹ್ಲರ್ ನೇತೃತ್ವದ ತಂಡವು ಎಬೋಲಾ ಚಿಕಿತ್ಸೆಗಾಗಿ ಈ ಔಷಧವನ್ನು ಕಂಡುಹಿಡಿದಿದೆ.
  • ಆ್ಯಂಟಿ ವೈರಲ್‌ ಔಷಧಕ್ಕೆ ಮೊದಲು ಎಬ್ಪಾಂಟುವಿರ್ (Ebpantuvir) ಎಂದು ಹೆಸರು ಇದ್ದು, ನಂತರ ಸಿಹ್ಲಾರ್ ತಂಡದ ಪ್ರಮುಖ ವಿಜ್ಞಾನಿ ‘ರಮೇಶ್ ಇ.ಎಂ. ದೇಸಿಗನ್’ ಅವರ ಗೌರವಾರ್ಥವಾಗಿ ‘ರೆಮ್‌ಡೆಸಿವಿರ್‌’ ಎಂದು ನಾಮಕರಣ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

  • ರಮೇಶ್ ತಮಿಳುನಾಡಿನ ರಾಸಿಪುರಂ ಮೂಲದವರಾಗಿದ್ದು, ಗಿಲ್ಯಾಡ್‌‌ನಲ್ಲಿ ಕೆಲಸ ಮಾಡಲು 2002 ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದರು.
  • ರಮೇಶ್ ಇ.ಎಂ. ದೇಸಿಗನ್ ಅವರ ಗೌರವಾರ್ಥವಾಗಿ ತಮಿಳುನಾಡಿನಲ್ಲಿ ಅವರ ಕಲಿತ ಪ್ರಾಥಮಿಕ ಶಾಲೆ, ರಾಶಿ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಗಿಲ್ಯಾಡ್‌ 2 ಮಿಲಿಯನ್ ದೇಣಿಗೆ ನೀಡಿದೆ.
ಅದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದೇಶವು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸತ್ಯವೇನು?

ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸಸ್ ‘ರೆಮ್‌ಡೆಸಿವಿರ್‌’ ಔಷಧಿಯ ಮೂಲ ಕಂಪೆನಿಯಾಗಿದೆ ಎಂಬುದು ನಿಜವಾಗಿದೆ. ಗಿಲ್ಯಾಡ್‌ನ ವೆಬ್‌ಸೈಟ್‌ನಲ್ಲಿ ಈ ಔಷಧದ ಬೆಳವಣಿಗೆಯನ್ನು ವಿವರಿಸುವ ಡಾಕ್ಯುಮೆಂಟ್ ಅನ್ನು ಕೆಳಗೆ ನೋಡಬಹುದುದಾಗಿದೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

2009 ರಲ್ಲಿ ಹೆಪಟೈಟಿಸ್ ಸಿ (ಎಚ್‌ಸಿವಿ) ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್‌ಎಸ್‌ವಿ) ನ ಸಂಶೋಧನಾ ಕಾರ್ಯಕ್ರಮಗಳು ನಡೆಯುತ್ತಿದ್ದಾಗ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಸಂಶೋಧನೆಯು  ಪ್ರಾರಂಭವಾಯಿತು ಎಂದು ಡಾಕ್ಯುಮೆಂಟ್ ಉಲ್ಲೇಖಿಸುತ್ತದೆ. ತರುವಾಯ 2014 ರಲ್ಲಿ ಎಬೋಲಾ ಮತ್ತು ಇತ್ತೀಚೆಗೆ ಕೊರೊನಾ ವೈರಸ್ಗಾಗಿ ಈ ಔಷಧವನ್ನು ಪರೀಕ್ಷಿಸಲಾಯಿತು.

ಕಂಪನಿಯ ವೆಬ್‌ಸೈಟ್‌ನಲ್ಲಿ ‘Four Questions with Tomas Cihlar: The Field of Emerging Viruses’ ಎಂಬ ಶೀರ್ಷಿಕೆಯ ಮತ್ತೊಂದು ಲೇಖನದಲ್ಲಿ, ಥಾಮಸ್‌ ಸಿಹ್ಲರ್ ಅವರು ಗಿಲ್ಯಾಡ್‌ನ ಆಂಟಿವೈರಲ್ ಔಷಧದ ಸಂಶೋಧನೆಗೆ ಕಾರಣಕರ್ತರಾಗಿದ್ದು, ವೈರಾಲಜಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರೆಮ್‌ಡೆಸಿವಿರ್‌ ಔಷಧದ ಅಭಿವೃದ್ಧಿಗೆ ಅವರು ನೇತೃತ್ವ ವಹಿಸಿದ್ದಾರೆ.

ಆದರೆ ವೆಬ್‌ಸೈಟ್‌ನ ಲೇಖನದಲ್ಲಿ ‘ರಮೇಶ್ ಇಎಂ ದೇಸಿಗನ್’ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ. ಜೊತೆಗೆ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಮತ್ತು ಪ್ರಯೋಗಗಳಿಗೆ ಸಂಬಂಧಿಸಿದ ತಂಡದಲ್ಲಿ ‘ರಮೇಶ್ ಇಎಂ ದೇಶಿಗನ್’ ಎಂಬ ವ್ಯಕ್ತಿ ಇಲ್ಲ ಎಂದು ಕಂಪೆನಿಯು ದೃಡಪಡಿಸಿದೆ ಎಂದು ‘ದಿಕ್ವಿಂಟ್’ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಗಿಲ್ಯಾಡ್ ಸೈನ್ಸಸ್‌ನ ಸಾರ್ವಜನಿಕ ವ್ಯವಹಾರಗಳ ಹಿರಿಯ ನಿರ್ದೇಶಕ, ಬಹಾರ್ ತುರ್ಕೊಗ್ಲು, ‘‘ರೆಮ್‌ಡೆಸಿವಿರ್‌ನೊಂದಿಗೆ ರಮೇಶ್ ಇಎಂ ದೇಶಿಗನ್ ಎಂಬ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಅಲ್ಲದೆ ವೈರಲ್ ಸಂದೇಶದಲ್ಲಿ ಇರುವ ತಮಿಳುನಾಡಿನ ರಾಶಿ ಇಂಟರ್‌ನ್ಯಾಷನಲ್‌ ಶಾಲೆಗೆ ಗಿಲ್ಯಾಡ್ ಯಾವುದೆ ದೇಣಿಗೆ ನೀಡಿಲ್ಲ, ವೈರಲ್ ಸಂದೇಶವು ಸಂಪೂರ್ಣವಾಗಿ ಸುಳ್ಳು ಎಂದು ಶಾಲೆಯ ಪ್ರಾಂಶುಪಾಲ ಡಾ. ಡಿ ವಿದ್ಯಾಸಾಗರ್ ಹೇಳಿದ್ದಾರೆ.

ಅಲ್ಲದೆ ರಾಶಿ ಇಂಟರ್‌ನ್ಯಾಷನಲ್ ಶಾಲೆಯನ್ನು 2008 ರಲ್ಲಿ ಸ್ಥಾಪಿಸಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ರಮೇಶ್‌ ಗಿಲ್ಯಾಡ್‌ ಸಂಸ್ಥೆಯನ್ನು 2002 ರಲ್ಲಿ ಸೇರಿದರು ಎಂದು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳಬಹುದಾದರೆ, ಆಂಟಿವೈರಲ್ ಔಷಧಿಯಾದ ‘ರೆಮ್ಡೆಸಿವಿರ್’ ಸುತ್ತಲೂ ಹಬ್ಬುತ್ತಿರುವ ಈ ಸುದ್ದಿಗಳು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...