Homeಕರೋನಾ ತಲ್ಲಣ8 ಸಾವುಗಳಾದರೂ ಎಚ್ಚೆತ್ತುಕೊಳ್ಳದ ಕೋಲಾರದ ಜಿಲ್ಲಾಸ್ಪತ್ರೆ: ಅಲ್ಲೆ ದಾಖಲಾಗಿರುವ ಮಹಿಳಾ ಮುಖಂಡೆ ವಿ.ಗೀತಾ ಆಕ್ರೋಶ -...

8 ಸಾವುಗಳಾದರೂ ಎಚ್ಚೆತ್ತುಕೊಳ್ಳದ ಕೋಲಾರದ ಜಿಲ್ಲಾಸ್ಪತ್ರೆ: ಅಲ್ಲೆ ದಾಖಲಾಗಿರುವ ಮಹಿಳಾ ಮುಖಂಡೆ ವಿ.ಗೀತಾ ಆಕ್ರೋಶ – ವಿಡಿಯೋ ನೋಡಿ

- Advertisement -
- Advertisement -

ಕೋಲಾರದ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ನಿನ್ನೆ ಎಂಟು ರೋಗಿಗಳು ಸಾವನ್ನಪ್ಪಿದ್ದರು. ಘಟನೆಗೆ ಸಂಬಂಧಿಸಿದಂತೆ ಎಸ್‌ಎನ್‌ಆರ್ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್. ಜಿ.ನಾರಾಯಣಸ್ವಾಮಿ ಮತ್ತು ವೈದ್ಯಕೀಯ ಅಧಿಕಾರಿ (RMO) ಡಾ.ನಾರಾಯಣಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ. ಆದರೂ ಆಸ್ಪತ್ರೆಯ ಮೂಲಸೌಲಭ್ಯಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವೈದ್ಯರು, ದಾದಿಯರು ಇಲ್ಲದೇ ರೋಗಿಗಳು ಸಂಕಷ್ಟದಲ್ಲಿದ್ದಾರೆ ಎಂದು ಜನವಾದಿ ಮಹಿಳಾ ಸಂಘಟನೆ ಮುಖಂಡೆ ವಿ.ಗೀತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿ.ಗೀತಾರವರು ಕೊರೊನಾ ಪಾಸಿಟಿವ್ ಆಗಿ ಇಂದು ಮಧ್ಯಾಹ್ನ ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. “ಮೂರು ವಾರ್ಡ್‌ಗಳಲ್ಲಿ ಹಲವಾರು ರೋಗಿಗಳಿದ್ದು ಕೇವಲ ಮೂವರು ದಾದಿಯರಿದ್ದಾರೆ. ಇದುವರೆಗೂ ವೈದ್ಯರು ಬಂದು ಚಿಕಿತ್ಸೆ ನೀಡಿಲ್ಲ. ಇಲ್ಲಿನ ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ” ಎಂದು ಅವರು ಆಸ್ಪತ್ರೆಯಿಂದಲೇ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಮ್ಮ ಸಂಪರ್ಕದ ವೈದ್ಯರಿಗೆ ಫೋನ್ ಮಾಡಿದೆ. ಹಾಗಾಗಿ ಒಬ್ಬರು ಬಂದು ಒಂದು ಇಂಜೆಕ್ಷನ್ ಕೊಟ್ಟು ಹೋಗಿದ್ದಾರೆ. ಆದರೆ ಇತರ ರೋಗಿಗಳಿಗೆ ಯಾವುದೇ ಚಿಕಿತ್ಸೆ ದೊರೆತಿಲ್ಲ. ಈ ಬಗ್ಗೆ ದೂರು ನೀಡಲು ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿದರೆ ತೆಗೆಯುತ್ತಿಲ್ಲ. ಸಿಇಓರವರಿಗೆ ಫೋನ್ ಮಾಡಿದರೆ ವಿಚಾರಿಸುತ್ತೇನೆ ಎಂದು ಹೇಳುತ್ತಾರೆ. ನಿನ್ನೆ ತಾನೇ ವೈದ್ಯರ ನಿರ್ಲಕ್ಷ್ಯ ಮತ್ತು ಆಕ್ಸಿಜನ್ ಕೊರತೆಯಿಂದ 8 ರೋಗಿಗಳು ಮೃತಪಟ್ಟಿದ್ದಾರೆ. ಆದರೆ ಇಲ್ಲಿನ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಇನ್ನೆಷ್ಟು ರೋಗಿಗಳು ಬಲಿಯಾಗಬೇಕು ಎಂದು ಅವರು ಕಿಡಿಕಾರಿದ್ದಾರೆ.

ಆರೋಗ್ಯ ಸಚಿವರು ಮತ್ತು ಜಿಲ್ಲಾಡಳಿತ ಕೂಡಲೇ ಗಮನಹರಿಸಿ, ವೈದ್ಯರು ಮತ್ತು ದಾದಿಯರನ್ನು ನಿಯೋಜಿಸಬೇಕು.. ಇಲ್ಲದಿದ್ದರೆ ನಾವು ಸತ್ತರೂ ಪರವಾಗಿಲ್ಲ ಎಂದು ಆಸ್ಪತ್ರೆ ಹೊರಗೆ ಬೀದಿಯಲ್ಲಿ ಕೂರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಆ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಐದು ಮಂದಿ ಹಾಗೂ ಇತರ ಮೂರು ರೋಗಿಗಳು ಆಮ್ಲಜನಕ ಪೂರೈಕೆ ಕೊರತೆಯಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದ್ದು, ಈ ಸಂಬಂಧ ಅಸಮಾಧಾನ ವ್ಯಕ್ತಪಡಿಸಿರುವ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವೈದ್ಯರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಸೋಮವಾರ ತಡರಾತ್ರಿ 11 ಗಂಟೆ ಸುಮಾರಿಗೆ ಎಸ್‌ಎನ್‌ಆರ್ ಆಸ್ಪತ್ರೆಗೆ ತಲುಪಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾಡಳಿತ ಮತ್ತು ವೈಧ್ಯಾಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ನಿರ್ಧಾರ ಕೈಗೊಳ್ಳಲಾಗಿದೆ.


ಇದನ್ನೂ ಓದಿ: ಕೋಲಾರ: ಆಮ್ಲಜನಕ ಸಿಗದೆ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಾವು, ವೈದ್ಯರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...