Homeಕರೋನಾ ತಲ್ಲಣಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

ಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

- Advertisement -
- Advertisement -

ಟ್ವಿಟ್ಟರ್ ಮೂಲಕ ಆಕ್ಸಿಜನ್ ಸಿಲಿಂಡರ್‌ಗಾಗಿ ಮನವಿ ಮಾಡಿದ ಯುವಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಮೆಥಿ ಪೊಲೀಸರು ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದಾರೆ.

“ಭಯ ಉಂಟುಮಾಡುವ ಉದ್ದೇಶದಿಂದ, ವದಂತಿಯನ್ನು ಪ್ರಸಾರ ಮಾಡಿದ್ದಾರೆ. ಅವರ ಟ್ವೀಟ್‌ ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಗೆ ತೊಂದರೆ ಉಂಟು ಮಾಡಿ ಅಪರಾಧ ಮಾಡಲು ಪ್ರೇರೇಪಿಸಲ್ಪಡಬಹುದು” ಎಂದು ಪೊಲೀಸರು ಅವರ ಮೇಲೆ ಆರೋಪವನ್ನು ಹೊರಿಸಿದ್ದಾರೆ.

ಸೋಮವಾರ ಸಂಜೆ, ಶಶಾಂಕ್ ಯಾದವ್ ಎಂಬವರು ನಟ ಸೋನು ಸೂದ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿ ಆಕ್ಸಿಜನ್ ಸಿಲಿಂಡರ್‌ಗೆ ಮನವಿ ಮಾಡಿದ್ದರು. ಆದರೆ ಅವರು ಕೊರೊನಾ ಅಥವಾ ಇನ್ಯಾವುದೆ ಕಾಯಿಲೆಯ ಬಗ್ಗೆ ಅವರು ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಅವರ ಸ್ನೇಹಿತರಲ್ಲೊಬ್ಬರಾದ ಅಂಕಿತ್ ಎಂಬವರು, ರಾತ್ರಿ 8: 33 ಕ್ಕೆ ಶಶಾಂಕ್‌ ಯಾದವ್ ಅವರ ಮನವಿಯನ್ನು ರಿಟ್ವೀಟ್ ಮಾಡಿದ್ದಾರೆ. ಜೊತೆಗೆ ಟ್ವಿಟರ್‌ನಲ್ಲಿ ದಿ ವೈರ್‌ನ ಹಿರಿಯ ಸಂಪಾದಕಿ ಅರ್ಫಾ ಖಾನೂಮ್ ಶೆರ್ವಾನಿ ಅವರಿಗೆ ಸಹಾಯ ಕೋರಿ ನೇರ ಸಂದೇಶವನ್ನು ಕಳುಹಿಸಿದ್ದರು.

ಕೊರೊನಾ ತೀವ್ರಗೊಂಡ ಹಿನ್ನಲೆಯಲ್ಲಿ ವೈರ್‌ ಸಂಪಾದಕಿ ಅರ್ಫಾ ಖಾನೂಂ ಅವರು ತನ್ನ ಸಾಮಾಜಿಕ ಜಾಲತಾಣವನ್ನು ಕೊರೊನಾ ಚಿಕಿತ್ಸೆಗೆ ಸಹಾಯ ಕೇಳುತ್ತಿರುವವರಿಗೆ ಸಹಾಯ ಮಾಡುವಂತೆ ಹೇಳಿಕೊಳ್ಳಲು ಬಳಸುತ್ತಿದ್ದಾರೆ. ಅವರು ಈ ರೀತಿಯ ಸಂದೇಶಗಳನ್ನು ಹಂಚಿ ಪ್ರಭಾವಿಗಳ ಗಮನಕ್ಕೆ ತರುತ್ತಿದ್ದರು. ಅದರಂತೆ ಮಧ್ಯರಾತ್ರಿ ಈ ಟ್ವೀಟ್‌ ಅನ್ನು ಅವರು ನೋಡಿದ್ದು, ನಂತರ ಅದನ್ನು ರೀಟ್ವೀಟ್ ಮಾಡಿದ್ದಾರೆ.

ನಂತರದ ಟ್ವೀಟ್‌‌ಗಳಲ್ಲಿ, ಅಮೆಥಿಯಿಂದ ಸಂಸದರಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಕೊರೊನಾ ರೋಗಿಗಳಿಗೆ ಸಹಾಯ ಮಾಡುವಲ್ಲಿ ತೊಡಗಿಸಿಕೊಂಡಿರುವ ಲಕ್ನೋ ಮೂಲದ ಪ್ರಮುಖ ಸಂಪಾದಕ ಮತ್ತು ಸಮಾಜವಾದಿ ರಾಜಕಾರಣಿಯನ್ನು ಟ್ಯಾಗ್ ಮಾಡಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಇದಕ್ಕೆ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ, ತಾನು ಶಶಾಂಕ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ, ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ರಾತ್ರೆ 12:44 ಕ್ಕೆ ಅರ್ಫಾ ಖಾನೂಂ ಅವರಿಗೆ, ತನ್ನ ಸ್ನೇಹಿತನ ಅಜ್ಜ ನಿಧನರಾದರು ಎಂದು ಹೇಳಿ ಆಮ್ಲಜನಕ ಬೇಕೆಂದು ಕೇಳಿದ್ದ ಅಂಕಿತ್‌‌ ಅವರು ಸಂದೇಶ ಕಳುಹಿಸಿದ್ದಾರೆ.

ಜೊತೆಗೆ ಅರ್ಫಾ ಖಾನೂಂ ಅವರು ಸ್ಮೃತಿ ಇರಾನಿಗೆ ಈ ಮಾಹಿತಿಯನ್ನು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವೆ, “ಅವರ ಸಂಖ್ಯೆಗೆ CMO, ಅಮೇಥಿ ಪೊಲೀಸ್ ಸೇರಿದಂತೆ ನಾವೆಲ್ಲರೂ ಕರೆ ಮಾಡಿದ್ದೇವೆ. ಅವರು ತನ್ನ ಫೋನ್ ರಿಸೀವ್ ಮಾಡಬೇಕೆಂದು ನಾನು ಬಯಸಿದ್ದೆ. ನನ್ನ ಸಂತಾಪ” ಎಂದು ಹೇಳಿದ್ದರು.

ಇದನ್ನೂ ಓದಿ: ಮದ್ರಾಸ್ ಹೈಕೋರ್ಟ್ ಎಚ್ಚರಿಕೆಗೆ ಎಚ್ಚೆತ್ತ ಚುನಾವಣಾ ಆಯೋಗ: ವಿಜಯೋತ್ಸವಗಳಿಗೆ ನಿಷೇಧ

ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಲು ಪ್ರಯತ್ನಿಸಿದ್ದಕ್ಕೆ ಅಂಕಿತ್ ಅವರು ಸ್ಮೃತಿ ಇರಾನಿ ಮತ್ತು ಅರ್ಫಾ ಖಾನೂಂ ಅವರಿಗೆ ಧನ್ಯವಾದ ಕೂಡಾ ಅರ್ಪಿಸಿದ್ದರು.

ಇದಾಗಿ, ಏಪ್ರಿಲ್ 27 ರಂದು ಮಧ್ಯಾಹ್ನದ ಸಮಯದ ನಂತರ, ಅಮೆಥಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಅಮೆಥಿ ಮುಖ್ಯ ವೈದ್ಯಾಧಿಕಾರಿಯ ವರದಿಯನ್ನು ಅರ್ಫಾ ಖಾನೂಂ ಅವರ ಟ್ವೀಟ್‌ಗೆ ಉತ್ತರವಾಗಿ ಟ್ವೀಟ್ ಮಾಡಿದ್ದರು. ಈ ವರದಿಯು, ಯಾರಿಗೆ ಆಕ್ಸಿಜನ್‌ ಸಿಲಿಂಡರ್‌ ಬೇಕೆಂದು ಕೇಳಿದ್ದರೋ, ಆ ವ್ಯಕ್ತಿಯು ಕೊರೊನಾದಿಂದ ಬಳಲುತ್ತಿರಲಿಲ್ಲ ಹಾಗೂ ದುರ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿಸಿತ್ತು.

ಶಶಾಂಕ್ ಯಾದವ್ ಅಥವಾ ಅರ್ಫಾ ಖಾನೂಂ ಎಲ್ಲಿಯೂ, ‘ಕೊರೊನಾ ರೋಗಿ’ಗೆ ಆಮ್ಲಜನಕದ ಅಗತ್ಯವಿದೆ ಎಂದು ಹೇಳಿಲ್ಲವಾದರೂ, ಪೊಲೀಸರು ಇಬ್ಬರು ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘ

ಮಂಗಳವಾರ ಸಂಜೆ, ಅಮೆಥಿ ಪೊಲೀಸರು ಶಶಾಂಕ್‌ ಯಾದವ್ ಮತ್ತು ಅರ್ಫಾ ಖಾನೂಂ ಅವರು ಮೂಲ ಸಂದೇಶಗಳಿಗೆ ಪ್ರತ್ಯುತ್ತರವನ್ನು ಟ್ವೀಟ್ ಮಾಡಿದ್ದು, ಅದರಲ್ಲಿ “ಅಜ್ಜ ಕೋವಿಡ್‌ನಿಂದ ಬಳಲುತ್ತಿರಲಿಲ್ಲ. ಅವರಿಗೆ ಆಮ್ಲಜನಕದ ಪ್ರಿಸ್ಕ್ರಿಪ್ಷನ್ ಕೂಡಾ ಇರಲಿಲ್ಲ, ಅವರು ‘ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ರೀತಿಯ ವದಂತಿಗಳನ್ನು ಹರಡುವುದು ಖಂಡನೀಯ ಮಾತ್ರವಲ್ಲ, ಕ್ರಿಮಿನಲ್ ಅಪರಾಧವಾಗಿದೆ” ಎಂದು ಬರೆದಿದ್ದರು.

ಪೊಲೀಸರ ಈ ಎಚ್ಚರಿಕೆಗೆ ಅರ್ಫಾ ಖಾನೂಂ ಅವರು ಪ್ರತಿಕ್ರಿಯಿಸಿ, “ಜನರು ಸಹಾಯ ಕೇಳುತ್ತಿದ್ದಾರೆ, ಜವಾಬ್ದಾರಿಯುತ ಪ್ರಜೆಯಾಗಿ ನನ್ನಲ್ಲಿ ಸಹಾಯ ಕೇಳುವ ಜನರಿಗಾಗಿ ನಾನು ಟ್ವೀಟ್ ಮಾಡುತ್ತೇನೆ. ಸತ್ಯವನ್ನು ಹುಡುಕುವುದು ಪೊಲೀಸರ ಕೆಲಸ. ನಾನು ಟ್ವೀಟ್ ಮಾಡಿರುವ 99% ಜನರ ಬಗ್ಗೆ ನನಗೆ ವೈಯಕ್ತಿಕ ಪರಿಚಯ ಇಲ್ಲ. ಆದರೆ ಭಾರತೀಯ ಪ್ರಜೆಯ ಕರ್ತವ್ಯವನ್ನು ನಿರ್ವಹಿಸುತ್ತಾ ನಾನು ಅವರ ಸಂದೇಶವನ್ನು ಜನರಿಗೆ ಹರಡುತ್ತಿದ್ದೇನೆ” ಎಂದು ತನ್ನೊಂದಿಗೆ ಸಹಾಯ ಕೋರಿದ್ದ ಸಂದೇಶದ ಸ್ಕ್ರೀನ್‌ಶಾಟ್‌ನೊಂದಿಗೆ ಬರೆದಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಇದರ ನಂತರ ಪೊಲೀಸರು ಶಶಾಂಕ್‌ ಯಾದವ್‌ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಂಕ್ರಾಮಿಕ ಕಾಯ್ದೆಯ ಸೆಕ್ಷನ್ 3 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 54 ರೊಂದಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269 ಮತ್ತು 505 (1) (ಬಿ) ಅಡಿಯಲ್ಲಿ  ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ದಾರ್ಥ್, ಪೊಲೀಸರ ಈ ಕ್ರಮವು ವೈದ್ಯಕೀಯ ಸಹಾಯಕ್ಕಾಗಿ ಹತಾಶರಾಗಿ ಕೇಳುವ ರೋಗಿಗಳ ಕುಟುಂಬಗಳನ್ನು ಬೆದರಿಸುವ ಪ್ರಯತ್ನವಾಗಿದೆ ಎಂದು ಖಂಡಿಸಿದ್ದಾರೆ.

“ಶಶಾಂಕ್‌ ಯಾದವ್ ವಿರುದ್ಧ ಪೊಲೀಸರು ಮಾಡಿರುವ ಆರೋಪಗಳು ಗಂಭೀರವಾಗಿದ್ದು, ಪೊಲೀಸರು ಈ ಪ್ರಕರಣವನ್ನು ಮುಂದುವರೆಸಿದರೆ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಚಿಕಿತ್ಸೆ ಪಡೆಯುವಲ್ಲಿನ ತೊಂದರೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಉತ್ತರ ಪ್ರದೇಶದಾದ್ಯಂತ ಶಶಾಂಕ್‌ ಯಾದವ್ ಅವರಂತಹ ಕುಟುಂಬಗಳಿಗೆ ಸಂದೇಶ ಕಳುಹಿಸುವುದು ಇದರ ಉದ್ದೇಶವಾಗಿದೆ” ಎಂದು ಸಿದ್ದಾರ್ಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...