Homeಕರೋನಾ ತಲ್ಲಣಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

ಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

- Advertisement -
- Advertisement -

ಟ್ವಿಟ್ಟರ್ ಮೂಲಕ ಆಕ್ಸಿಜನ್ ಸಿಲಿಂಡರ್‌ಗಾಗಿ ಮನವಿ ಮಾಡಿದ ಯುವಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಮೆಥಿ ಪೊಲೀಸರು ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದಾರೆ.

“ಭಯ ಉಂಟುಮಾಡುವ ಉದ್ದೇಶದಿಂದ, ವದಂತಿಯನ್ನು ಪ್ರಸಾರ ಮಾಡಿದ್ದಾರೆ. ಅವರ ಟ್ವೀಟ್‌ ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಗೆ ತೊಂದರೆ ಉಂಟು ಮಾಡಿ ಅಪರಾಧ ಮಾಡಲು ಪ್ರೇರೇಪಿಸಲ್ಪಡಬಹುದು” ಎಂದು ಪೊಲೀಸರು ಅವರ ಮೇಲೆ ಆರೋಪವನ್ನು ಹೊರಿಸಿದ್ದಾರೆ.

ಸೋಮವಾರ ಸಂಜೆ, ಶಶಾಂಕ್ ಯಾದವ್ ಎಂಬವರು ನಟ ಸೋನು ಸೂದ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿ ಆಕ್ಸಿಜನ್ ಸಿಲಿಂಡರ್‌ಗೆ ಮನವಿ ಮಾಡಿದ್ದರು. ಆದರೆ ಅವರು ಕೊರೊನಾ ಅಥವಾ ಇನ್ಯಾವುದೆ ಕಾಯಿಲೆಯ ಬಗ್ಗೆ ಅವರು ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಅವರ ಸ್ನೇಹಿತರಲ್ಲೊಬ್ಬರಾದ ಅಂಕಿತ್ ಎಂಬವರು, ರಾತ್ರಿ 8: 33 ಕ್ಕೆ ಶಶಾಂಕ್‌ ಯಾದವ್ ಅವರ ಮನವಿಯನ್ನು ರಿಟ್ವೀಟ್ ಮಾಡಿದ್ದಾರೆ. ಜೊತೆಗೆ ಟ್ವಿಟರ್‌ನಲ್ಲಿ ದಿ ವೈರ್‌ನ ಹಿರಿಯ ಸಂಪಾದಕಿ ಅರ್ಫಾ ಖಾನೂಮ್ ಶೆರ್ವಾನಿ ಅವರಿಗೆ ಸಹಾಯ ಕೋರಿ ನೇರ ಸಂದೇಶವನ್ನು ಕಳುಹಿಸಿದ್ದರು.

ಕೊರೊನಾ ತೀವ್ರಗೊಂಡ ಹಿನ್ನಲೆಯಲ್ಲಿ ವೈರ್‌ ಸಂಪಾದಕಿ ಅರ್ಫಾ ಖಾನೂಂ ಅವರು ತನ್ನ ಸಾಮಾಜಿಕ ಜಾಲತಾಣವನ್ನು ಕೊರೊನಾ ಚಿಕಿತ್ಸೆಗೆ ಸಹಾಯ ಕೇಳುತ್ತಿರುವವರಿಗೆ ಸಹಾಯ ಮಾಡುವಂತೆ ಹೇಳಿಕೊಳ್ಳಲು ಬಳಸುತ್ತಿದ್ದಾರೆ. ಅವರು ಈ ರೀತಿಯ ಸಂದೇಶಗಳನ್ನು ಹಂಚಿ ಪ್ರಭಾವಿಗಳ ಗಮನಕ್ಕೆ ತರುತ್ತಿದ್ದರು. ಅದರಂತೆ ಮಧ್ಯರಾತ್ರಿ ಈ ಟ್ವೀಟ್‌ ಅನ್ನು ಅವರು ನೋಡಿದ್ದು, ನಂತರ ಅದನ್ನು ರೀಟ್ವೀಟ್ ಮಾಡಿದ್ದಾರೆ.

ನಂತರದ ಟ್ವೀಟ್‌‌ಗಳಲ್ಲಿ, ಅಮೆಥಿಯಿಂದ ಸಂಸದರಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಕೊರೊನಾ ರೋಗಿಗಳಿಗೆ ಸಹಾಯ ಮಾಡುವಲ್ಲಿ ತೊಡಗಿಸಿಕೊಂಡಿರುವ ಲಕ್ನೋ ಮೂಲದ ಪ್ರಮುಖ ಸಂಪಾದಕ ಮತ್ತು ಸಮಾಜವಾದಿ ರಾಜಕಾರಣಿಯನ್ನು ಟ್ಯಾಗ್ ಮಾಡಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಇದಕ್ಕೆ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ, ತಾನು ಶಶಾಂಕ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ, ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ರಾತ್ರೆ 12:44 ಕ್ಕೆ ಅರ್ಫಾ ಖಾನೂಂ ಅವರಿಗೆ, ತನ್ನ ಸ್ನೇಹಿತನ ಅಜ್ಜ ನಿಧನರಾದರು ಎಂದು ಹೇಳಿ ಆಮ್ಲಜನಕ ಬೇಕೆಂದು ಕೇಳಿದ್ದ ಅಂಕಿತ್‌‌ ಅವರು ಸಂದೇಶ ಕಳುಹಿಸಿದ್ದಾರೆ.

ಜೊತೆಗೆ ಅರ್ಫಾ ಖಾನೂಂ ಅವರು ಸ್ಮೃತಿ ಇರಾನಿಗೆ ಈ ಮಾಹಿತಿಯನ್ನು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವೆ, “ಅವರ ಸಂಖ್ಯೆಗೆ CMO, ಅಮೇಥಿ ಪೊಲೀಸ್ ಸೇರಿದಂತೆ ನಾವೆಲ್ಲರೂ ಕರೆ ಮಾಡಿದ್ದೇವೆ. ಅವರು ತನ್ನ ಫೋನ್ ರಿಸೀವ್ ಮಾಡಬೇಕೆಂದು ನಾನು ಬಯಸಿದ್ದೆ. ನನ್ನ ಸಂತಾಪ” ಎಂದು ಹೇಳಿದ್ದರು.

ಇದನ್ನೂ ಓದಿ: ಮದ್ರಾಸ್ ಹೈಕೋರ್ಟ್ ಎಚ್ಚರಿಕೆಗೆ ಎಚ್ಚೆತ್ತ ಚುನಾವಣಾ ಆಯೋಗ: ವಿಜಯೋತ್ಸವಗಳಿಗೆ ನಿಷೇಧ

ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಲು ಪ್ರಯತ್ನಿಸಿದ್ದಕ್ಕೆ ಅಂಕಿತ್ ಅವರು ಸ್ಮೃತಿ ಇರಾನಿ ಮತ್ತು ಅರ್ಫಾ ಖಾನೂಂ ಅವರಿಗೆ ಧನ್ಯವಾದ ಕೂಡಾ ಅರ್ಪಿಸಿದ್ದರು.

ಇದಾಗಿ, ಏಪ್ರಿಲ್ 27 ರಂದು ಮಧ್ಯಾಹ್ನದ ಸಮಯದ ನಂತರ, ಅಮೆಥಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಅಮೆಥಿ ಮುಖ್ಯ ವೈದ್ಯಾಧಿಕಾರಿಯ ವರದಿಯನ್ನು ಅರ್ಫಾ ಖಾನೂಂ ಅವರ ಟ್ವೀಟ್‌ಗೆ ಉತ್ತರವಾಗಿ ಟ್ವೀಟ್ ಮಾಡಿದ್ದರು. ಈ ವರದಿಯು, ಯಾರಿಗೆ ಆಕ್ಸಿಜನ್‌ ಸಿಲಿಂಡರ್‌ ಬೇಕೆಂದು ಕೇಳಿದ್ದರೋ, ಆ ವ್ಯಕ್ತಿಯು ಕೊರೊನಾದಿಂದ ಬಳಲುತ್ತಿರಲಿಲ್ಲ ಹಾಗೂ ದುರ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿಸಿತ್ತು.

ಶಶಾಂಕ್ ಯಾದವ್ ಅಥವಾ ಅರ್ಫಾ ಖಾನೂಂ ಎಲ್ಲಿಯೂ, ‘ಕೊರೊನಾ ರೋಗಿ’ಗೆ ಆಮ್ಲಜನಕದ ಅಗತ್ಯವಿದೆ ಎಂದು ಹೇಳಿಲ್ಲವಾದರೂ, ಪೊಲೀಸರು ಇಬ್ಬರು ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘ

ಮಂಗಳವಾರ ಸಂಜೆ, ಅಮೆಥಿ ಪೊಲೀಸರು ಶಶಾಂಕ್‌ ಯಾದವ್ ಮತ್ತು ಅರ್ಫಾ ಖಾನೂಂ ಅವರು ಮೂಲ ಸಂದೇಶಗಳಿಗೆ ಪ್ರತ್ಯುತ್ತರವನ್ನು ಟ್ವೀಟ್ ಮಾಡಿದ್ದು, ಅದರಲ್ಲಿ “ಅಜ್ಜ ಕೋವಿಡ್‌ನಿಂದ ಬಳಲುತ್ತಿರಲಿಲ್ಲ. ಅವರಿಗೆ ಆಮ್ಲಜನಕದ ಪ್ರಿಸ್ಕ್ರಿಪ್ಷನ್ ಕೂಡಾ ಇರಲಿಲ್ಲ, ಅವರು ‘ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ರೀತಿಯ ವದಂತಿಗಳನ್ನು ಹರಡುವುದು ಖಂಡನೀಯ ಮಾತ್ರವಲ್ಲ, ಕ್ರಿಮಿನಲ್ ಅಪರಾಧವಾಗಿದೆ” ಎಂದು ಬರೆದಿದ್ದರು.

ಪೊಲೀಸರ ಈ ಎಚ್ಚರಿಕೆಗೆ ಅರ್ಫಾ ಖಾನೂಂ ಅವರು ಪ್ರತಿಕ್ರಿಯಿಸಿ, “ಜನರು ಸಹಾಯ ಕೇಳುತ್ತಿದ್ದಾರೆ, ಜವಾಬ್ದಾರಿಯುತ ಪ್ರಜೆಯಾಗಿ ನನ್ನಲ್ಲಿ ಸಹಾಯ ಕೇಳುವ ಜನರಿಗಾಗಿ ನಾನು ಟ್ವೀಟ್ ಮಾಡುತ್ತೇನೆ. ಸತ್ಯವನ್ನು ಹುಡುಕುವುದು ಪೊಲೀಸರ ಕೆಲಸ. ನಾನು ಟ್ವೀಟ್ ಮಾಡಿರುವ 99% ಜನರ ಬಗ್ಗೆ ನನಗೆ ವೈಯಕ್ತಿಕ ಪರಿಚಯ ಇಲ್ಲ. ಆದರೆ ಭಾರತೀಯ ಪ್ರಜೆಯ ಕರ್ತವ್ಯವನ್ನು ನಿರ್ವಹಿಸುತ್ತಾ ನಾನು ಅವರ ಸಂದೇಶವನ್ನು ಜನರಿಗೆ ಹರಡುತ್ತಿದ್ದೇನೆ” ಎಂದು ತನ್ನೊಂದಿಗೆ ಸಹಾಯ ಕೋರಿದ್ದ ಸಂದೇಶದ ಸ್ಕ್ರೀನ್‌ಶಾಟ್‌ನೊಂದಿಗೆ ಬರೆದಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಇದರ ನಂತರ ಪೊಲೀಸರು ಶಶಾಂಕ್‌ ಯಾದವ್‌ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಂಕ್ರಾಮಿಕ ಕಾಯ್ದೆಯ ಸೆಕ್ಷನ್ 3 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 54 ರೊಂದಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269 ಮತ್ತು 505 (1) (ಬಿ) ಅಡಿಯಲ್ಲಿ  ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ದಾರ್ಥ್, ಪೊಲೀಸರ ಈ ಕ್ರಮವು ವೈದ್ಯಕೀಯ ಸಹಾಯಕ್ಕಾಗಿ ಹತಾಶರಾಗಿ ಕೇಳುವ ರೋಗಿಗಳ ಕುಟುಂಬಗಳನ್ನು ಬೆದರಿಸುವ ಪ್ರಯತ್ನವಾಗಿದೆ ಎಂದು ಖಂಡಿಸಿದ್ದಾರೆ.

“ಶಶಾಂಕ್‌ ಯಾದವ್ ವಿರುದ್ಧ ಪೊಲೀಸರು ಮಾಡಿರುವ ಆರೋಪಗಳು ಗಂಭೀರವಾಗಿದ್ದು, ಪೊಲೀಸರು ಈ ಪ್ರಕರಣವನ್ನು ಮುಂದುವರೆಸಿದರೆ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಚಿಕಿತ್ಸೆ ಪಡೆಯುವಲ್ಲಿನ ತೊಂದರೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಉತ್ತರ ಪ್ರದೇಶದಾದ್ಯಂತ ಶಶಾಂಕ್‌ ಯಾದವ್ ಅವರಂತಹ ಕುಟುಂಬಗಳಿಗೆ ಸಂದೇಶ ಕಳುಹಿಸುವುದು ಇದರ ಉದ್ದೇಶವಾಗಿದೆ” ಎಂದು ಸಿದ್ದಾರ್ಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...