Homeಮುಖಪುಟಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

ಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

- Advertisement -
- Advertisement -

ಪಂಚಾಯತ್ ಚುನಾವಣಾ ಕೆಲಸಕ್ಕೆ ನಿಯೋಜನಗೊಂಡ 135 ವಿದ್ಯಾರ್ಥಿಗಳು, ‘ಶಿಕ್ಷಾ ಮಿತ್ರರು’ ಮತ್ತು ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ತನಿಖಾಧಿಕಾರಿಗಳು ಕೋವಿಡ್ ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹಿಂದಿ ದಿನಪತ್ರಿಕೆ ‘ಅಮರ್ ಉಜಲಾ’ದಲ್ಲಿ ಪ್ರಕಟವಾದ ಸುದ್ದಿ ಲೇಖನವೊಂದನ್ನು ಗಮನಿಸಿರುವ ಅಲಹಾಬಾದ್ ಹೈಕೋರ್ಟ್, ಉತ್ತರಪ್ರದೇಶ ಚುನಾವಣಾ ಆಯೋಗಕ್ಕೆ ಇಂದು ಶೋ-ಕಾಸ್ ನೋಟಿಸ್ ನೀಡಿದೆ ಎಂದು ಲೈವ್ ಲಾ, ಇಂಡಿಯಾ ಟುಡೇ ವರದಿ ಮಾಡಿವೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ಅಜಿತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ರಾಜ್ಯ ಚುನಾವಣಾ ಆಯೋಗಕ್ಕೆ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪಂಚಾಯತ್ ಚುನಾವಣೆಯ ಉಳಿದ ಹಂತಗಳಲ್ಲಿ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿತು, ಇಲ್ಲದಿದ್ದರೆ ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿತು.

ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ರಾಜ್ಯ ಚುನಾವಣಾ ಆಯೋಗಕ್ಕೆ ಶೋ-ಕಾಸ್ ನೋಟಿಸ್ ನೀಡಿ, ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ವಿಫಲವಾಗಿದ್ದು ಏಕೆ ಎಂದು ಪ್ರಶ್ನಿಸಿದೆ. ಅಂತಹ ಉಲ್ಲಂಘನೆಗಳಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ.
“ಚುನಾವಣಾ ಕರ್ತವ್ಯದಲ್ಲಿರುವ ಜನರನ್ನು ಮಾರಕ ವೈರಸ್ ಸೋಂಕಿಗೆ ಒಳಗಾಗದಂತೆ ರಕ್ಷಿಸಲು ಪೊಲೀಸರು ಅಥವಾ ಚುನಾವಣಾ ಆಯೋಗವು ಏನನ್ನೂ ಮಾಡಿಲ್ಲ” ಎಂದು ಆದೇಶದಲ್ಲಿ ಟೀಕಿಸಲಾಗಿದೆ.

ತುರ್ತು ಪರಿಹಾರ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ, “ಕೈಗೊಂಡ ಕ್ರಮಗಳು ಮತ್ತು ಅದರ ಸಮರ್ಪಕತೆಯ ಬಗ್ಗೆ ತೋರಿಸಲು ಯಾವುದೇ ದಾಖಲೆಗಳನ್ನು ಅಥವಾ ಸಾರ್ವಜನಿಕ ಪ್ರಕಟಣೆಗಳನ್ನು ಕೋರ್ಟ್ ಸಹಿಸುವುದಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ. ರಾಜ್ಯದಲ್ಲಿ 2020ರ ಅಂತ್ಯದ ವೇಳೆಗೆ ವೈರಸ್ ಪ್ರಭಾವ ದುರ್ಬಲಗೊಂಡ ನಂತರ ಮೈಮರೆತ ಸರ್ಕಾರ, ಪಂಚಾಯತ್ ಚುನಾವಣೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದೆ’ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಜನರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗಮನಿಸಿದ ನ್ಯಾಯಾಲಯ, ಲಕ್ನೋ, ಪ್ರಯಾಗರಾಜ್, ವಾರಣಾಸಿ, ಆಗ್ರಾ, ಕಾನ್ಪುರ ನಗರ, ಗೋರಖ್‌ಪುರ ಮತ್ತು ಝಾನ್ಸಿಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ದಿನಕ್ಕೆ ಎರಡು ಬಾರಿ ಆರೋಗ್ಯ ಬುಲೆಟಿನ್ ಪ್ರಕಟಿಸುವಂತೆ ನಿರ್ದೇಶನ ನೀಡಿತು. ಇದರಿಂದ ಆಸ್ಪತ್ರೆಗಳಿಗೆ ರೋಗಿಗಳ ಪರಿಚಾರಕರು ಭೇಟಿ ನೀಡುವುದನ್ನು ಕಡಿಮೆಗೊಳಿಸಬಹುದು ಎಂದು ಕೋರ್ಟ್ ಸಲಹೆ ನೀಡಿದೆ.
ಈ ಕುರಿತು ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಪಡಿಸಲಾಗಿದೆ.


ಇದನ್ನೂಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...