Homeಚಳವಳಿಹೊಸ ಸಂಸತ್ ಯೋಜನೆ ನಿಲ್ಲಿಸಿ, ಆಮ್ಲಜನಕ ಪೂರೈಸಿ: ಇಂದು ಟ್ವಿಟರ್ ಅಭಿಯಾನ

ಹೊಸ ಸಂಸತ್ ಯೋಜನೆ ನಿಲ್ಲಿಸಿ, ಆಮ್ಲಜನಕ ಪೂರೈಸಿ: ಇಂದು ಟ್ವಿಟರ್ ಅಭಿಯಾನ

#StopCentralVistaStartOxygen 20 ಸಾವಿರ ಕೋಟಿ ರೂ.ಗಳನ್ನು ಮನುಷ್ಯರ ಜೀವ ಉಳಿಸಲು ವಿನಿಯೋಗಿಸಿ ಎಂದು ಕೇಂದ್ರಕ್ಕೆ ಆಗ್ರಹ ಮಾಡಲಾಗುತ್ತದೆ

- Advertisement -
- Advertisement -

‘ಕಟ್ಟಡಗಳಿಗಿಂತ ಮನುಷ್ಯ ಜೀವಗಳು ಅಮೂಲ್ಯ. ಸೆಂಟ್ರಲ್ ವಿಸ್ತಾ ನಿರ್ಮಾಣವನ್ನು ನಿಲ್ಲಿಸಿ, 20 ಸಾವಿರ ಕೋಟಿ ರೂ.ಗಳನ್ನು ಮನುಷ್ಯರ ಜೀವ ಉಳಿಸಲು ವಿನಿಯೋಗಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ #StopCentralVistaStartOxygen (ಸಂಸತ್ ಯೋಜನೆ ನಿಲ್ಲಿಸಿ, ಆಮ್ಲಜನಕ ಪೂರೈಸಿ) ಟ್ವಿಟರ್ ಅಭಿಯಾನವು ಇಂದು ಬೆಳಿಗ್ಗೆ 10 ರಿಂದ ಪ್ರಾರಂಭವಾಗಿಲಿದೆ.

ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರ ಕುಸಿದು ಹೋಗಿದೆ. ಲಾಕ್‌ಡೌನ್ ನಡುವೆಯೂ ಕೇಂದ್ರ ಸರ್ಕಾರ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿ ನಿರ್ಮಾಣವನ್ನು ಮುಂದುವರೆಸಿದ್ದು ಕ್ರೌರ್ಯದ ಪರಮಾವಧಿಯಾಗಿದೆ. ಸದ್ಯದ ತುರ್ತು ಮನುಷ್ಯ ಜೀವಗಳನ್ನು ಉಳಿಸುವುದಾಗಿದೆ. ಇದು ಜೀವಗಳ ಪ್ರಶ್ನೆಯಾಗಿದ್ದು, ನಿರ್ಜೀವ ಕಟ್ಟಡಗಳನ್ನು ಮುಂದೆ ಎಂದಾದರೂ ಕಟ್ಟಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಸೆಂಟ್ರಲ್ ವಿಸ್ತಾ ಪ್ರಾಜೆಕ್ಟ್ ಹೊಸ ಸಂಸತ್ ಭವನ ಮತ್ತು ಇತರ ಕಟ್ಟಡಗಳನ್ನು ನಿರ್ಮಿಸುವ ದುಬಾರಿ ಯೋಜನೆಯಾಗಿದೆ. ಈಗಿರುವ ಸಂಸತ್ ಕಟ್ಟಡವೇ ಸಾಕಿತ್ತು. ಆದರೆ ಆ ಪ್ರದೇಶದ ಪರಿಸರ, ಐತಿಹಾಸಿಕ ಕಟ್ಟಡಗಳನ್ನು ನೆಲಕ್ಕೆ ಉರುಳಿಸಿ ಈ ಯೋಜನೆ ಜಾರಿ ಮಾಡಲಾಗುತ್ತಿದೆ.
ನಾವೆಲ್ಲರೂ ಇದನ್ನು ವಿರೋಧಿಸೋಣ. ಈ ಬಿಕ್ಕಟ್ಟಿನ ಸಮಯದಲ್ಲಿ ಯೋಜನೆಯ ಹಣದಲ್ಲಿ 20 ಸಾವಿರ ಕೋಟಿ ರೂ. ಗಳನ್ನು ಆರೋಗ್ಯ ಸೌಕರ್ಯ ವಿಸ್ತರಿಸಲು ಬಳಸಿ ಎಂದು ಆಗ್ರಹಿಸೋಣ.

ಸಾವಿರಾರು ಜನರನ್ನು ಕೊಂದು ಆರೋಗ್ಯ ವ್ಯವಸ್ಥೆಯನ್ನು ದುರ್ಬಲಗೊಳಿಸಿದ ಕೋವಿಡ್ ಬಿಕ್ಕಟ್ಟು ತೀವ್ರವಾದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತಾ ಯೋಜನೆಯ ಕೆಲಸಗಳನ್ನು ಮುಂದುವರೆಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಇಂದು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

“ಸೆಂಟ್ರಲ್ ವಿಸ್ತಾ- ಅನಿವಾರ್ಯವಲ್ಲ. ವಿಜನ್ ಹೊಂದಿರುವ ಕೇಂದ್ರ ಸರ್ಕಾರ ಅತ್ಯಗತ್ಯ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

“ಸೆಂಟ್ರಲ್ ವಿಸ್ತಾ ಯೋಜನೆಗೆ ಈಗಾಗಲೇ ಬಳಸಿದ ಹಣವನ್ನು ಹೆಚ್ಚಿನ ಜನರಿಗೆ ಲಸಿಕೆ ನೀಡಲು ಪ್ರತಿಪಕ್ಷಗಳು ಬಯಸಿದ್ದವು. ನಾವು ಹೆಚ್ಚು ಪಿಪಿಇ ಕಿಟ್‌ಗಳನ್ನು ಖರೀದಿಸಬಹುದಿತ್ತು, ವಲಸೆ ಕಾರ್ಮಿಕರಿಗೆ ನೇರ ವರ್ಗಾವಣೆ ಮಾಡಬಹುದಿತ್ತು” ಎಂದು ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒ’ಬ್ರಿಯೆನ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ಆಮ್ಲಜನಕ ಸಿಗದೆ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಾವು, ವೈದ್ಯರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...