Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...