Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...