Homeಕರೋನಾ ತಲ್ಲಣಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

- Advertisement -
- Advertisement -

ಉತ್ತರ ಪ್ರದೇಶದ ಎರಡು ಹೃದಯ ಕಲಕುವ ಫೋಟೋಗಳು ಬಹಳ ದುಃಖದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿವೆ. ಗ್ರಾಮೀಣ ಉತ್ತರ ಪ್ರದೇಶದ ಕೋವಿಡ್ ಪೀಡಿತ ಕುಟುಂಬಗಳ ಪರಿಸ್ಥಿತಿಯನ್ನು ಇವು ತೆರೆದಿಡುತ್ತವೆ.

ಒಂದು ಫೋಟೊ, ಒಬ್ಬ ವಯಸ್ಸಾದ, ಗಡ್ಡದ ವ್ಯಕ್ತಿಯು ಮಹಿಳೆಯ ಮೃತ ದೇಹವನ್ನು ಬೈಸಿಕಲ್‌ನಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಇನ್ನೊಂದರಲ್ಲಿ, ಬೈಸಿಕಲ್ ಶವದ ಸಮೇತ ನೆಲಕ್ಕೆ ಒರಗಿದ್ದನ್ನು ತೋರಿಸುತ್ತದೆ.

ಕೊನೆಗೆ ಆ ವ್ಯಕ್ತಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸರು ಸಾಮಾಜಿಕ ಬಹಿಷ್ಕಾರ ಮತ್ತು ಭಯದ ಕ್ರೂರ ಕತೆಯನ್ನು ಬಹಿರಂಗಪಡಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫೋಟೋದಲ್ಲಿರುವ ವ್ಯಕ್ತಿ, 70 ವರ್ಷದ ತಿಲಖ್‌ಧಾರಿ, ಉತ್ತರ ಪ್ರದೇಶದ ಜೌನ್‌ಪುರದ ಅಂಬರ್ಪುರ್ ಗ್ರಾಮದ ನಿವಾಸಿ. ಈ ಗ್ರಾಮವು ರಾಜ್ಯ ರಾಜಧಾನಿ ಲಕ್ನೋದಿಂದ 275 ಕಿ.ಮೀ. ದೂರದಲ್ಲಿದೆ. ಅವರ ಪತ್ನಿ ಕೋವಿಡ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಆಸ್ಪತ್ರೆಯು ಅವರ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಮನೆಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸ್ಥಳೀಯರು ಊರಿನ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಹಳ್ಳಿಯಲ್ಲಿ ಸೋಂಕಿನ ಹರಡುವಿಕೆಗೆ ಕಾರಣವಾಗುತ್ತದೆ ಎಂಬುದು ಅವರ ನಂಬಿಕೆ.

ಈ ಪ್ರದೇಶಗಳಲ್ಲಿ ಕೋವಿಡ್ ಬೇರೆಡೆಯಷ್ಟು ತೀವ್ರವಾಗಿ ಇಲ್ಲದಿದ್ದರೂ, ಸ್ಥಳೀಯರು ಕೋವಿಡ್ ಕುರಿತು ತುಂಬ ಭಯಭೀತರಾಗಿದ್ದಾರೆ. ಗ್ರಾಮಸ್ಥರನ್ನು ಮನವೊಲಿಸಲು ಸಾಧ್ಯವಾಗದೆ, ತಿಲಖ್‌ಧಾರಿ ತನ್ನ ಹೆಂಡತಿಯ ಶವವನ್ನು ಹತ್ತಿರದ ಸಾಯಿ ನದಿ ದಂಡೆಗೆ ರವಾನಿಸಲು ನಿರ್ಧರಿಸಿದರು. ಗ್ರಾಮಸ್ಥರು ದೇಹವನ್ನು ಎತ್ತಲು ಸಹ ಸಹಾಯ ಮಾಡಲು ನಿರಾಕರಿಸಿದರು.

ಹತಾಶೆಯಲ್ಲಿ, ತಿಲಿಕ್‌ಧಾರಿ ಅದನ್ನು ತನ್ನ ಸೈಕಲ್‌ನಲ್ಲಿ ಸಾಗಿಸಲು ನಿರ್ಧರಿಸಿದ್ದಾರೆ ಎಂದು ಜೌನ್‌ಪುರದ ಮಡಿಯಾಹೂನ್‌ನ ಹಿರಿಯ ಪೊಲೀಸ್ ಅಧಿಕಾರಿ ಪಿ. ಉಪಾಧ್ಯಾಯ ಹೇಳಿದರು.
ಆದರೆ ಅರ್ಧದಾರಿಯಲ್ಲೇ, 70 ವರ್ಷ ವಯಸ್ಸಿನ ತಿಲಕ್‌ಧಾರಿ ಅವರಿಗೆ ಸೈಕಲ್ ನಿಯಂತ್ರಣ ತಪ್ಪಿತು. ಶವದ ಸಮೇತ ಸೈಕಲ್ ನೆಲಕ್ಕೆ ಉರುಳಿತು.

ರಸ್ತೆಯಲ್ಲಿ ಹಣೆ ಮೇಲೆ ಕೈ ಹೊತ್ತು ಅಸಹಾಯಕತೆಯಿಂದ ಕುಳಿತಿದ್ದ ತಿಲಕ್‌ಧಾರಿಯನ್ನು ಹಾದುಹೋಗುವ ಪೊಲೀಸ್ ಒಬ್ಬರು ಗಮನಿಸಿ, ಹಿರಿಯ ಅಧಿಕಾರಿಗೆ ತಿಳಿಸಿದರು.
ಕೂಡಲೇ ಪೊಲೀಸರು ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ವಸ್ತುಗಳನ್ನು ತಂದರು. ಸ್ಥಳೀಯ ಮುಸ್ಲಿಂ ವ್ಯಕ್ತಿಯ ಸಹಾಯದಿಂದ ಅಂತ್ಯಕ್ರಿಯೆ ನಡೆಸಲಾಯಿತು.

ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಇದುವರೆಗೆ 3,00,041 ಪ್ರಕರಣಗಳನ್ನು ದಾಖಲಿಸಿದೆ ಮತ್ತು 11,943 ಸಾವುಗಳು ದಾಖಲಾಗಿವೆ.

ಒಟ್ಟಾರೆಯಾಗಿ, ದೇಶವು ಇಂದು 3,79 ಲಕ್ಷ ಕೊರೊನಾ ವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆ ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಶವಸಂಸ್ಕಾರದಲ್ಲಿ ಮುಸ್ಲಿಮರ ಸಮರ್ಪಣಾ ಮನೋಭಾವ

ಕೋವಿಡ್ ಈ ದೇಶದಲ್ಲಿ ಬಿಡಾರ ಹೂಡಿ ಒಂದು ವರ್ಷವಾದರೂ ಬಹುತೇಕರಿಗೆ ಸರಿಯಾದ ವೈಜ್ಞಾನಿಕ ತಿಳವಳಿಕೆ ನೀಡುವಲ್ಲಿ ಸರ್ಕಾರ ಮತ್ತು ಸಮಾಜ ಸೋತಿವೆ. ಹೀಗಾಗಿಯೇ ಎಷ್ಟೊ ಕುಟುಂಬಗಳು ತಮ್ಮ ಮನೆ ಸದಸ್ಯರು ಕೋವಿಡ್‌ನಿಂದ ಮೃತರಾದಾಗ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಗಮನಾರ್ಹವಾದ, ಪ್ರಶಂಸನೀಯವಾದ ಮತ್ತು ಅನಕರಣೀಯವಾದ ಕೆಲಸವನ್ನು ನೂರಾರು ಕಡೆ ಮುಸ್ಲಿಂ ಯುವಕರು ಮಾಡುತ್ತಿದ್ದಾರೆ. ಅವರು ಜಾತಿ-ಧರ್ಮ ನೋಡದೇ ಕೋವಿಡ್ ಶವಗಳ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಷ್ಟ ಕಾಲದಲ್ಲಿ ಮನುಷ್ಯರು ಮಾನವೀಯತೆಯನ್ನು ತೋರಿಸಬೇಕೇ ಹೊರತು ಅಮಾನವೀಯತೆಯನ್ನು ಅಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...