Homeಮುಖಪುಟಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ ಎಂದು ಐಪಿಎಲ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ

- Advertisement -
- Advertisement -

ದೇಶದಲ್ಲಿ ಕೊರೊನಾ ಸಾಂಕ್ರಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದು ಭಾರತಕ್ಕಾಗಿ ಇಡಿ ವಿಶ್ವವೇ ಮರುಗುತ್ತಿದೆ. ಜಗತ್ತಿನ ಹಲವು ದೇಶಗಳು ತಮ್ಮ ಸಹಾಯ ಹಸ್ತವನ್ನೂ ಭಾರತಕ್ಕೆ ಚಾಚಿ ತಮ್ಮ ಬೆಂಬಲ ನೀಡಿವೆ. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಪತ್ರಕೆಗಳು ವರದಿ ಮಾಡಿವೆ. ಕೊರೊನಾ ಬಂದು ಒಂದು ವರ್ಷವಾದರೂ, ಎರಡನೆ ಅಲೆಯ ಬಗ್ಗೆ ಮಾಹಿತಿ ಇದ್ದರೂ ಆರೋಗ್ಯ ವ್ಯವಸ್ಥೆಯನ್ನು ಮಾಡಿಟ್ಟುಕೊಳ್ಳದ ಸರ್ಕಾರಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ದೇಶದಲ್ಲಿ ಐಪಿಎಲ್‌ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನಗಳೆದ್ದಿವೆ. ಪ್ರಸ್ತುತ ಐಪಿಎಲ್ ನಡೆಯುತ್ತಿರುವ ದೆಹಲಿಯಲ್ಲಿ ಜನರು ಮೂಲ ಆರೋಗ್ಯ ಸೌಕರ್ಯವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದರೆ, ಕ್ರೀಡಾಂಗಣದ ಹೊರಗೆ ಆಂಬುಲೆನ್ಸ್‌ಗಳನ್ನು, ಆರೋಗ್ಯ ಸೌಲಭ್ಯವನ್ನು ಸೀಮಿತ ಜನರಿಗೆ ಮೀಸಲಾಗಿಟ್ಟು, ಸಾಮಾನ್ಯ ಜನರಿಗೆ ಅದರಿಂದ ವಂಚಿತರನ್ನಾಗಿ ಮಾಡುವುದು ನೈತಿಕತೆಯೆ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಮುಂದಿಟ್ಟಿದ್ದಾರೆ.

ಮುಂದಿನ ತಿಂಗಳಿನಿಂದ ಬೆಂಗಳೂರಿನಲ್ಲೂ ಐಪಿಎಲ್ ಪಂದ್ಯಾಟ ನಡೆಯಲಿದೆ. ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಬೆಂಗಳೂರಿನ ಪರಿಸ್ಥಿತಿ ಮುಂದಿನ ತಿಂಗಳು ಇನ್ನೂ ಹದಗೆಡಲಿದೆ ಎಂದು ಈಗಾಗಲೇ ಹಲವರು ಊಹಿಸಿದ್ದು, ಈ ಸಮಯದಲ್ಲಿ ಜೂಜಿನ ಆಟವಾದ ಐಪಿಎಲ್ ಬೇಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ದೇಶದ ಖ್ಯಾತ ಪತ್ರಕರ್ತೆ ಬರ್ಖಾದತ್‌ ಐಪಿಎಲ್ ಅನ್ನು ‘ಕಿವುಡು’ ಎಂದು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದಾರೆ.

ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “IPL ಗೂ ಈ ದೇಶಕ್ಕೂ ಸಂಬಂಧವಿದೆಯೆ? BCCI ಗೆ ಈ ದೇಶದ ಕುರಿತು ಏನಾದರೂ ಕಾಳಜಿ ಇದೆಯೆ? ಇದ್ದರೆ ಇಷ್ಟೊಂದು ಅಮಾನವೀಯತೆಯಿಂದ BCCI ವರ್ತಿಸುತ್ತಿರಲಿಲ್ಲ. ಇಂದು ದೆಹಲಿಯಲ್ಲಿ IPL ಮ್ಯಾಚ್ ಇದೆ. ದೆಹಲಿಯಲ್ಲಿ ನಿತ್ಯವೂ ನೂರಾರು ಜನರು ಕೋವಿಡ್‌ನಿಂದ ಸಾಯುತ್ತಿದ್ದು ಪರಿಸ್ಥಿತಿ ತೀರಾ ಚಿಂತಾಜನಕವಾಗಿದೆ” ಎಂದು ಬುಧವಾರ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

“ಜನಸಾಮಾನ್ಯರಿಗೆ ಹೆಣ ಸಾಗಿಸಲೂ ಸಹ ಆಂಬುಲೆನ್ಸ್‌ಗಳು ಸಿಗುತ್ತಿಲ್ಲ. ಆದರೆ IPL ಮ್ಯಾಚ್ ನಡೆಯುತ್ತಿರುವ ಮೈದಾನದ ಸುತ್ತ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದಾರೆ. ಆಟಗಾರರಿಗಾಗಿ ಆಂಬುಲೆನ್ಸ್‌ಗಳು ಸಜ್ಜಾಗಿ ನಿಂತಿವೆ. ಆಕ್ಸಿಜನ್ ಪೂರೈಕೆ, ಪರೀಕ್ಷೆ ಸೌಲಭ್ಯ ಎಲ್ಲವೂ ಇಲ್ಲಿ ಸಿದ್ಧವಿದೆ. ದೆಹಲಿಯಲ್ಲಿ ಸಂಕಷ್ಟದಲ್ಲಿರುವ ರೋಗಿಗಳಿಗೆ ಲಭ್ಯವಾಗಬೇಕಾದ ಸೌಲಭ್ಯಗಳು IPL ಗಾಗಿ ಮೀಸಲಿಡಲಾಗಿದೆ. ಇದೇ ಮೈದಾನದ ಪಕ್ಕದಲ್ಲಿ ಇರುವ ಸ್ಮಶಾನದಲ್ಲಿ ಕಳೆದೆರಡು ದಿನಗಳಲ್ಲಿ ನೂರಕ್ಕೂ ಹೆಚ್ಚು ಹೆಣಗಳನ್ನು ದಹನ ಮಾಡಲಾಗಿದೆ. IPL ಇಂತಹ ಸ್ಥಿತಿಯಲ್ಲೂ ಮುಂದುವರಿಯಬೇಕೆ?” ಎಂದು ಶಶಿಧರ್‌ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರು, “ಈ ಸಮಯದಲ್ಲಿ 2 ಭಾರತಗಳಿವೆ ಎಂದು ತೋರುತ್ತದೆ. ಒಂದು ಜನರು ಹಾಸಿಗೆ ಪಡೆಯಲು ಹೆಣಗಾಡುತ್ತಿರುವ ಭಾರತ. ಇನ್ನೊಂದು ಆರಾಮದಾಯ ಬಬಲ್‌ನಲ್ಲಿನ ಐಪಿಎಲ್” ಎಂದು ಹೇಳಿದ್ದಾರೆ.

ಪ್ರದೀಪ್ ಅವರು, “ದೆಹಲಿಯಲ್ಲಿ ಲಾಕ್ ಡೌನ್ ಇದೆ ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ಇದೆ. ಐಪಿಎಲ್ ನಂತಹ ಸಂಪೂರ್ಣ ವಾಣಿಜ್ಯ ಚಟುವಟಿಕೆಯನ್ನು ಏಕೆ ಅನುಮತಿಸಲಾಗಿದೆ ಎಂದು ಯಾರಾದರೂ ವಿವರಿಸಬಹುದೇ? ಲೈವ್ ಮನರಂಜನೆಗೆ ವಿನಾಯಿತಿ ಇದೆಯೇ ಅಥವಾ ಐಪಿಎಲ್‌ ರಾಜ್ಯದ ಕಾನೂನುಗಳಿಗೆ ನಿರೋಧಕವಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಸಾಮಾಜಿಕ ಕಾರ್ಯಕರ್ತ ವಿ.ಎಲ್. ಬಾಲು ಅವರು, “IPL ನಡಿಲಿ 100% ತಪ್ಪಿಲ್ಲ. ಜನ ಸ್ವಲ್ಪ (ಆಮ್ಲಜನಕ ಇಲ್ಲದೆ ಸತ್ತ ಕುಟುಂಬ, ಬೆಡ್ ಸಿಗದ ಸ್ನೇಹಿತರು) ಬಯ್ದರೆ ಅಡ್ಜಸ್ಟ್ ಮಾಡ್ಕೋಳಿ! ಅವರಿಗೆ ಬಯ್ಯೊದಿಕ್ಕಾದರು ಸ್ವಾತಂತ್ರ್ಯ ಕೋಡೋಣ ಸರ್!” ಎಂದು ವ್ಯಂಗ್ಯವಾಡಿದ್ದಾರೆ.

ವರ್ಡ್ ಟೇಲ್‌ ಎಂಬ ಟ್ವಿಟರ್‌ ಅಕೌಂಟ್‌, “ದೆಹಲಿಯ ಹೊರಗಿನ ಐಪಿಎಲ್‌ಗಾಗಿ ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ” ಎಂದು ಹೇಳಿದ್ದಾರೆ.

“ಇಡೀ ಭಾರತ ಸಂಕಷ್ಟದಲ್ಲಿರುವಾಗ, ಈ ಕ್ರಿಕೆಟಿಗರು ಮೈದಾನದಲ್ಲಿ ಆನಂದಿಸುತ್ತಿದ್ದಾರೆ! ಭಾರಿ ಅಸೂಕ್ಷ್ಮತೆ’’ ಎಂದು ಶಿಬಾ ಬಿಸ್ವಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...