Homeಮುಖಪುಟಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್‌ಸಿಂಗ್ ಎಫ್‌ಐಆರ್‌ ದಾಖಲು

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್‌ಸಿಂಗ್ ಎಫ್‌ಐಆರ್‌ ದಾಖಲು

- Advertisement -
- Advertisement -

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್‌ಸಿಂಗ್ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪ ಹೊರಿಸಿ ಅವರ ವಿರುದ್ದ ಮಹಾರಾಷ್ಟ್ರ ಪೊಲೀಸರು ಗುರುವಾರ ಎಫ್‌ಐಆರ್‌ ದಾಖಲಿಸಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟರ್ ಭೀಮರಾವ್ ಘಡ್ಜ್ ಅವರು ಪರಮ್ ಬೀರ್‌ಸಿಂಗ್, ಡಿಸಿಪಿ ಪರಾಗ್ ಮಾನೆರೆ ಮತ್ತು ಇತರ 26 ಪೊಲೀಸರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಹೀಗಾಗಿ ಈ ಎಲ್ಲಾ ಪೊಲೀಸ್‌ ಅಧಿಕಾರಿಗಳ ವಿರುದ್ದ ಅಕೋಲಾ ಕೊಟ್ವಾಲಿ ನಗರದ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಅಪರಾಧಕ್ಕೆ ಪಿತೂರಿ, ಸಾಕ್ಷ್ಯಗಳ ನಾಶ ಮತ್ತು 1989 ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ ಕಾಯ್ದೆ) ಸೇರಿ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ ಅನ್ನು ಶೂನ್ಯ ಎಫ್‌ಐಆರ್ (ಆ ಪ್ರದೇಶದಲ್ಲಿ ಅಥವಾ ಇನ್ನಾವುದೇ ಪ್ರದೇಶದಲ್ಲಿ ಮಾಡಿದ ಅಪರಾಧವನ್ನು ಲೆಕ್ಕಿಸದೆ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವ ವಿಧಾನ) ನಿಯಮದಲ್ಲಿ ದಾಖಲಿಸಲಾಗಿದೆ. ಅದನ್ನು ಥಾಣೆ ನಗರ ಪೊಲೀಸರಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.

2015-2018 ರ ಅವಧಿಯಲ್ಲಿ ಠಾಣೆ ನಗರ ಪೊಲೀಸ್ ಕಮಿಷನರೇಟ್‌ನಲ್ಲಿ ನೇಮಕಗೊಂಡಿದ್ದ ಭೀಮರಾವ್ ಘಡ್ಜ್ ಅವರ ಅಧಿಕಾರಾವಧಿಯಲ್ಲಿ ಪರಮ್ ಬೀರ್‌ಸಿಂಗ್ ನೇತೃತ್ವದ ಹಲವಾರು ಅಧಿಕಾರಿಗಳು ವಿವಿಧ ಭ್ರಷ್ಟಾಚಾರ ಕೃತ್ಯಗಳಲ್ಲಿ ತೊಡಗಿದ್ದರು ಎಂದು ಆರೋಪಿಸಿದ್ದಾರೆ. ಎಫ್‌ಐಆರ್ ದಾಖಲಾಗಿರುವ ಕೆಲವು ವ್ಯಕ್ತಿಗಳ ವಿರುದ್ಧ ಚಾರ್ಜ್‌ಶೀಟ್ ಹಾಕದಂತೆ ಸಿಂಗ್ ಕೇಳಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಈಗ ಅಕೋಲಾ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ನಿಯೋಜನೆಗೊಂಡಿರುವ ಭೀಮರಾವ್ ಘಡ್ಜ್, ಪರಮ್ ಬೀರ್‌ಸಿಂಗ್ ಅವರ ಸೂಚನೆಗಳನ್ನು ಪಾಲಿಸಲು ನಿರಾಕರಿಸಿದ ನಂತರ, ಅವರ ವಿರುದ್ಧ ಐದು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...