Homeಕರೋನಾ ತಲ್ಲಣಉತ್ತರಪ್ರದೇಶ: ವಾರದಲ್ಲಿ ಮೂವರು ಬಿಜೆಪಿ ಶಾಸಕರು ಕೊರೊನಾಗೆ ಬಲಿ

ಉತ್ತರಪ್ರದೇಶ: ವಾರದಲ್ಲಿ ಮೂವರು ಬಿಜೆಪಿ ಶಾಸಕರು ಕೊರೊನಾಗೆ ಬಲಿ

ಬುಧವಾರ ಮೃತರಾದ ಶಾಸಕ ಸಿಂಗ್ ಅವರ ಪುತ್ರ ಏಪ್ರಿಲ್ 18 ರಂದು ಸಾಮಾಜಿಕ ಜಾಲತಾಣದಲ್ಲಿ, ಒಬ್ಬ ಶಾಸಕರಿಗೂ ಸೂಕ್ತ ಚಿಕಿತ್ಸೆ ಸಿಗದಷ್ಟು ಆರೋಗ್ಯ ವ್ಯವಸ್ಥೆ ಕುಸಿದಿದೆ ಎಂದು ಆದಿತ್ಯನಾಥ್‌‌ ಸರ್ಕಾರವನ್ನು ಟೀಕಿಸಿದ್ದರು.

- Advertisement -
- Advertisement -

ಕೊರೊನಾ ಎರಡನೇ ಅಲೆ ಉತ್ತರಪ್ರದೇಶದಲ್ಲಿ ವ್ಯಾಪಕವಾಗತೊಡಗಿದ್ದು, ಅಲ್ಲಿನ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮೂವರು ಶಾಸಕರನ್ನು ಒಂದು ವಾರದೊಳಗೆ ಸಾಂಕ್ರಾಮಿಕ ರೋಗದಿಂದ ಕಳೆದುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾದಿಂದ ಬಳಲುತ್ತಿದ್ದ ಬರೇಲಿಯ ನವಾಬ್‌ಗಂಜ್ ಕ್ಷೇತ್ರದ ಶಾಸಕ, ಬಿಜೆಪಿಯ ನಾಯಕ ಕೇಸರ್ ಸಿಂಗ್ ಅವರು ಬುಧವಾರ ನೋಯ್ಡಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸಿಂಗ್ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

ಕಳೆದ ತಿಂಗಳಿನಿಂದ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದರು. ಆರಂಭದಲ್ಲಿ ಭೋಜಪುರದ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದರು. ಚೇತರಿಸಿಕೊಂಡ ನಂತರ ಅವರನ್ನು ಅಲ್ಲಿಂದ ಬಿಡುಗಡೆ ಮಾಡಲಾಯಿತು. ನಂತರ ಅವರ ಆರೋಗ್ಯವು ಮತ್ತೆ ಹದಗೆಟ್ಟಿದ್ದು, ಅವರನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು. ಅಲ್ಲಿ ಅವರಿಗೆ ಮತ್ತೆ ಪಾಸಿಟಿವ್ ಆಗಿದೆ. ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ ನಂತರವೂ ಯಾವುದೇ ಮಹತ್ವದ ಸುಧಾರಣೆ ಕಂಡುಬರಲಿಲ್ಲ.

ಏಪ್ರಿಲ್ 18 ರಂದು, ಅವರ ಮಗ ವಿಶಾಲ್ ಗಂಗ್ವಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಒಬ್ಬ ಆಡಳಿತ ಪಕ್ಷದ ಶಾಸಕರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಟೀಕಿಸಿ, ರಾಜ್ಯ ಸರ್ಕಾರವನ್ನು ದೂಷಿಸಿದ್ದರು.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಂತರ ಆರೋಗ್ಯ ಸಚಿವಾಲಯವು ಗಂಗ್ವಾರ್ ಅವರನ್ನು ಏಪ್ರಿಲ್ 19 ರಂದು ನೋಯ್ಡಾದ ಆಸ್ಪತ್ರೆಗೆ ದಾಖಲಿಸಿತು.

ಒಂದು ವಾರದೊಳಗೆ ಉತ್ತರ ಪ್ರದೇಶದಲ್ಲಿ ಇದು ಮೂರನೇ ಬಿಜೆಪಿ ಶಾಸಕರ ಸಾವಾಗಿದೆ. ಇದಕ್ಕೂ ಮೊದಲು ಬಿಜೆಪಿ ಶಾಸಕರಾದ ರಮೇಶ್ ಚಂದ್ರ ದಿವಾಕರ್ ಮತ್ತು ಸುರೇಶ್ ಶ್ರೀವಾಸ್ತವ ಕೂಡ ಕೊರೊನಾದಿಂದ ಮೃತಪಟ್ಟಿದ್ದರು.

ಬುಧವಾರ ಮೃತರಾದ ಸಿಂಗ್ ಬಹಳ ಸಮಯದಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅವರು ಬಿಎಸ್‌ಪಿ ಸರ್ಕಾರದಲ್ಲಿ ಎಂಎಲ್ ಸಿ ಆಗಿದ್ದರು. ಇದಲ್ಲದೆ, ಅವರ ಸಹೋದರನ ಪತ್ನಿ ಉಷಾ ಗಂಗ್ವಾರ್ ಅವರು ಬರೇಲಿಯ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದಾರೆ. ಅದರು ಬಿಜೆಪಿಗೆ ಸೇರಿದ ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ನವಾಬ್‌ ಗಂಜ್‌ನಿಂದ ಭಾರಿ ಮತ ಅಂತರದಿಂದ ಜಯಗಳಿಸಿದ್ದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜನಸಾಮಾನ್ಯರ ಬದಲಿಗೆ, ಈ ವ್ಯವಸ್ಥೆ ಕೆಡಿಸಿದ ದರಿದ್ರ ನಾಯಕರ ಜೀವ ಬಲಿಯಾಗುವುದು ೧೦೦% ವಾಸಿ. ಆಗಲೇ ಈ ಭಿಕಾರಿಗಳಿಗೆ ಬುದ್ದಿಬರುವುದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...