Homeಮುಖಪುಟಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಎರಡು ದಿನ ಮುಂಚೆ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿಯನ್ನು ಕೊಂದು ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

- Advertisement -
- Advertisement -

ಎಪ್ಪತ್ತೈದು ವರ್ಷಗಳ ಹಿಂದೆ,  1945 ಏಪ್ರಿಲ್ 30 ರ ಇದೇ ದಿನ ಜಗತ್ತನ್ನೇ ಕಾಡಿದ್ದ ಸರ್ವಾಧಿಕಾರಿ, ನಾಝಿ ದಂಡ ನಾಯಕ ಅಡಾಲ್ಫ್‌ ಹಿಟ್ಲರ್‌ ತನ್ನ ಪತ್ನಿ ಇವಾ ಬ್ರಾನ್‌‌ನೊಂದಿಗೆ ಮಧ್ಯಾಹ್ನ 3:15 ರ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಮೂಲಕ ವಿಶ್ವದಾದ್ಯಂತ ಹರಡಿದ್ದ ಎರಡನೆ ವಿಶ್ವ ಯುದ್ದದ ಕರಾಳ ಛಾಯೆಯೊಂದು ಮುಗಿದ ದಿನವಿಂದು.

ತನ್ನ ಆತ್ಮಹತ್ಯೆಗಿಂತಲೂ ಮುಂಚೆ ಅಡಾಲ್ಫ್ ಹಿಟ್ಲರ್ ತನ್ನ ಪತ್ನಿ ಇವಾ ಬ್ರಾನ್‌ನೊಂದಿಗೆ ಭೂಗತ ಬಂಕರ್‌ವೊಂದಕ್ಕೆ ತೆರಳಿದ್ದ. ಅದಕ್ಕಿಂತ ಮುಂಚೆಯೆ ಅವನು ತನ್ನ ಸೇವಕರಿಗೆ ವಿದಾಯ ಹೇಳಿ ತನ್ನ ನಾಯಿಗೆ ವಿಷ ಕೊಟ್ಟಿದ್ದ. ಭೂಗತ ಬಂಕರ್‌ಗೆ ತೆರಳುವ ಮುಂಚೆ ಅವನ ಬಳಿ ಪಿಸ್ತೂಲ್ ಮತ್ತು ಇವಾ ಬ್ರಾನ್ ಬಳಿ ಸೈನೈಡ್ ಇತ್ತು. ಅವರಿಬ್ಬರು ಮದುವೆಯಾಗಿ ಕೇವಲ ಒಂದುವರೆ ದಿನವಷ್ಟೇ ಆಗಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಆತ್ಮಹತ್ಯೆ ಮಾಡಿದ ದಿನ ಹಿಟ್ಲರ್‌ ನಾಝಿ ಸಮವಸ್ತ್ರವಾದ ಜಾಕೆಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಇವಾ ಬ್ರಾನ್ ಬಿಳಿ ಬಣ್ಣದಲ್ಲಿ ಟ್ರಿಮ್ ಮಾಡಿದ ನೀಲಿ ಉಡುಪನ್ನು ಧರಿಸಿದ್ದಳು. ಸಾಯುವ ಹೊತ್ತಿಗೆ ಹಿಟ್ಲರ್‌ ವಯಸ್ಸು 56 ಹಾಗೂ ಪತ್ನಿಯ ವಯಸ್ಸು 33.

ಮಧ್ಯಾಹ್ನ 3:15 , ಏಪ್ರಿಲ್ 30, 1945 ರ ಗುರುವಾರ.

ಬರ್ಲಿನ್‌ ಅನ್ನು ನೆಲಸಮ ಮಾಡಿದ ರಷ್ಯಾದ ಪಿರಂಗಿದಳವು ಆರು ವರ್ಷಗಳ ಹಿಟ್ಲರ್‌‌ನ ಹತ್ಯಾಕಾಂಡದ ರಕ್ತಸಿಕ್ತ ಅಧ್ಯಾಯವನ್ನು ಮುಗಿಸಿದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಲಕ್ಷಾಂತರ ಜನರ ಹತ್ಯೆಗೆ ಕಾರಣವಾದ, ಇಡೀ ಯುರೋಪ್‌ ಖಂಡವನ್ನು ಎರಡನೆಯ ಮಹಾಯುದ್ಧದಲ್ಲಿ ಮುಳುಗಿಸಿದ, ವಿಶ್ವದಾದ್ಯಂತ ದುಃಖ ಮತ್ತು ವಿನಾಶವನ್ನು ಹರಡಿದ, ತನ್ನನ್ನು ತಾನು ಆರ್ಯ ಜನಾಂಗೀಯ ಎಂದು ಘೋಷಿಸಿದ್ದ, ಜನಾಂಗೀಯವಾದಿ ಕ್ರೂರಿ ವ್ಯಕ್ತಿಯೊಬ್ಬ ಕೊನೆಗೂ ತನ್ನನ್ನು ತಾನೆ ಕೊಂದುಕೊಂಡು ಬಿಟ್ಟಿದ್ದ.

ಮಹಿಳೆ, ಮಕ್ಕಳು ಸೇರಿದಂತೆ ಹಿಟ್ಲರನ ಅಟ್ಟಹಾಸಕ್ಕೆ ಜೀವ ತೆತ್ತಿದ್ದು ಅಮಾಯಕ 60 ಲಕ್ಷ ಜೀವಗಳು!

ಇದಕ್ಕಿಂತಲೂ ಎರಡು ದಿನ ಮುಂಚೆ ಆಸ್ಟ್ರೀಯಾಕ್ಕೆ ಪಲಾಯನಕ್ಕೆ ಹೊರಟಿದ್ದ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿ ಮತ್ತು ಆತನ ಪತ್ನಿಯನ್ನು ಕಮ್ಯುನಿಷ್ಟ್‌ ಪಕ್ಷದ ಕಾರ್ಯಕರ್ತರು ಸೆರೆ ಹಿಡಿದಿದ್ದರು. ನಂತರ  ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಅವರ ಮೃತದೇಹವನ್ನು ಟ್ರಕ್ ಮೂಲಕ ಇಟಲಿಯ ನಗರವಾದ ಮಿಲನ್‌ಗೆ ಸಾಗಿಸಿ, ಅಲ್ಲಿ ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತಿಹಾಸ ಮರುಕಳಿಸುವ ದಿನಗಳು ಸಮೀಪಿಸಿವೆ. ಭಾರತ ದೇಶಕ್ಕೆ ರಾಹುವಿನಂತೆ ಅಂಟಿಕೊಂಡಿರುವ ಮೋ(ದಿ)ರಿ ಕಳಂಕವೊಂದು ಇದೇ ರೀತಿಯ ಅಂತ್ಯ ಕಾಣಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...