Homeಮುಖಪುಟಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಎರಡು ದಿನ ಮುಂಚೆ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿಯನ್ನು ಕೊಂದು ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

- Advertisement -
- Advertisement -

ಎಪ್ಪತ್ತೈದು ವರ್ಷಗಳ ಹಿಂದೆ,  1945 ಏಪ್ರಿಲ್ 30 ರ ಇದೇ ದಿನ ಜಗತ್ತನ್ನೇ ಕಾಡಿದ್ದ ಸರ್ವಾಧಿಕಾರಿ, ನಾಝಿ ದಂಡ ನಾಯಕ ಅಡಾಲ್ಫ್‌ ಹಿಟ್ಲರ್‌ ತನ್ನ ಪತ್ನಿ ಇವಾ ಬ್ರಾನ್‌‌ನೊಂದಿಗೆ ಮಧ್ಯಾಹ್ನ 3:15 ರ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಮೂಲಕ ವಿಶ್ವದಾದ್ಯಂತ ಹರಡಿದ್ದ ಎರಡನೆ ವಿಶ್ವ ಯುದ್ದದ ಕರಾಳ ಛಾಯೆಯೊಂದು ಮುಗಿದ ದಿನವಿಂದು.

ತನ್ನ ಆತ್ಮಹತ್ಯೆಗಿಂತಲೂ ಮುಂಚೆ ಅಡಾಲ್ಫ್ ಹಿಟ್ಲರ್ ತನ್ನ ಪತ್ನಿ ಇವಾ ಬ್ರಾನ್‌ನೊಂದಿಗೆ ಭೂಗತ ಬಂಕರ್‌ವೊಂದಕ್ಕೆ ತೆರಳಿದ್ದ. ಅದಕ್ಕಿಂತ ಮುಂಚೆಯೆ ಅವನು ತನ್ನ ಸೇವಕರಿಗೆ ವಿದಾಯ ಹೇಳಿ ತನ್ನ ನಾಯಿಗೆ ವಿಷ ಕೊಟ್ಟಿದ್ದ. ಭೂಗತ ಬಂಕರ್‌ಗೆ ತೆರಳುವ ಮುಂಚೆ ಅವನ ಬಳಿ ಪಿಸ್ತೂಲ್ ಮತ್ತು ಇವಾ ಬ್ರಾನ್ ಬಳಿ ಸೈನೈಡ್ ಇತ್ತು. ಅವರಿಬ್ಬರು ಮದುವೆಯಾಗಿ ಕೇವಲ ಒಂದುವರೆ ದಿನವಷ್ಟೇ ಆಗಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಆತ್ಮಹತ್ಯೆ ಮಾಡಿದ ದಿನ ಹಿಟ್ಲರ್‌ ನಾಝಿ ಸಮವಸ್ತ್ರವಾದ ಜಾಕೆಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಇವಾ ಬ್ರಾನ್ ಬಿಳಿ ಬಣ್ಣದಲ್ಲಿ ಟ್ರಿಮ್ ಮಾಡಿದ ನೀಲಿ ಉಡುಪನ್ನು ಧರಿಸಿದ್ದಳು. ಸಾಯುವ ಹೊತ್ತಿಗೆ ಹಿಟ್ಲರ್‌ ವಯಸ್ಸು 56 ಹಾಗೂ ಪತ್ನಿಯ ವಯಸ್ಸು 33.

ಮಧ್ಯಾಹ್ನ 3:15 , ಏಪ್ರಿಲ್ 30, 1945 ರ ಗುರುವಾರ.

ಬರ್ಲಿನ್‌ ಅನ್ನು ನೆಲಸಮ ಮಾಡಿದ ರಷ್ಯಾದ ಪಿರಂಗಿದಳವು ಆರು ವರ್ಷಗಳ ಹಿಟ್ಲರ್‌‌ನ ಹತ್ಯಾಕಾಂಡದ ರಕ್ತಸಿಕ್ತ ಅಧ್ಯಾಯವನ್ನು ಮುಗಿಸಿದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಲಕ್ಷಾಂತರ ಜನರ ಹತ್ಯೆಗೆ ಕಾರಣವಾದ, ಇಡೀ ಯುರೋಪ್‌ ಖಂಡವನ್ನು ಎರಡನೆಯ ಮಹಾಯುದ್ಧದಲ್ಲಿ ಮುಳುಗಿಸಿದ, ವಿಶ್ವದಾದ್ಯಂತ ದುಃಖ ಮತ್ತು ವಿನಾಶವನ್ನು ಹರಡಿದ, ತನ್ನನ್ನು ತಾನು ಆರ್ಯ ಜನಾಂಗೀಯ ಎಂದು ಘೋಷಿಸಿದ್ದ, ಜನಾಂಗೀಯವಾದಿ ಕ್ರೂರಿ ವ್ಯಕ್ತಿಯೊಬ್ಬ ಕೊನೆಗೂ ತನ್ನನ್ನು ತಾನೆ ಕೊಂದುಕೊಂಡು ಬಿಟ್ಟಿದ್ದ.

ಮಹಿಳೆ, ಮಕ್ಕಳು ಸೇರಿದಂತೆ ಹಿಟ್ಲರನ ಅಟ್ಟಹಾಸಕ್ಕೆ ಜೀವ ತೆತ್ತಿದ್ದು ಅಮಾಯಕ 60 ಲಕ್ಷ ಜೀವಗಳು!

ಇದಕ್ಕಿಂತಲೂ ಎರಡು ದಿನ ಮುಂಚೆ ಆಸ್ಟ್ರೀಯಾಕ್ಕೆ ಪಲಾಯನಕ್ಕೆ ಹೊರಟಿದ್ದ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿ ಮತ್ತು ಆತನ ಪತ್ನಿಯನ್ನು ಕಮ್ಯುನಿಷ್ಟ್‌ ಪಕ್ಷದ ಕಾರ್ಯಕರ್ತರು ಸೆರೆ ಹಿಡಿದಿದ್ದರು. ನಂತರ  ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಅವರ ಮೃತದೇಹವನ್ನು ಟ್ರಕ್ ಮೂಲಕ ಇಟಲಿಯ ನಗರವಾದ ಮಿಲನ್‌ಗೆ ಸಾಗಿಸಿ, ಅಲ್ಲಿ ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತಿಹಾಸ ಮರುಕಳಿಸುವ ದಿನಗಳು ಸಮೀಪಿಸಿವೆ. ಭಾರತ ದೇಶಕ್ಕೆ ರಾಹುವಿನಂತೆ ಅಂಟಿಕೊಂಡಿರುವ ಮೋ(ದಿ)ರಿ ಕಳಂಕವೊಂದು ಇದೇ ರೀತಿಯ ಅಂತ್ಯ ಕಾಣಬೇಕಿದೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...