Homeಮುಖಪುಟಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ - ಕೊರೊನಾ ಮಾತ್ರ ತೀವ್ರ...

ಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ – ಕೊರೊನಾ ಮಾತ್ರ ತೀವ್ರ ಏರಿಕೆ!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಮತದಾನ ಮುಗಿಯುತ್ತಿದ್ದಂತೆ ವಿವಿಧ ಸಂಸ್ಥೆಗಳು ತಮ್ಮ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿವೆ. ಹೆಚ್ಚು ಗಮನ ಸೆಳೆದ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹೆಚ್ಚು ಫೇವರಿಟ್ ಆಗಿದ್ದಾರೆ ಮತ್ತು ಅವರ ತೃಣಮೂಲ ಕಾಂಗ್ರೆಸ್ ರಾಜ್ಯದ 294 ಸ್ಥಾನಗಳಲ್ಲಿ 152 ಸ್ಥಾನಗಳನ್ನು ಗೆಲ್ಲಬಹುದು, ಬಿಜೆಪಿ ಕನಿಷ್ಠ 130 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಎನ್‌ಡಿಟಿವಿ ನಡೆಸಿದ ಪೋಲ್ ಆಫ್ ಪೋಲ್ಸ್ (ಎಲ್ಲ ಸಮೀಕ್ಷೆಗಳ ಸಮೀಕ್ಷೆ) ತಿಳಿಸಿದೆ. ಈ ಸಮೀಕ್ಷೆ ಕಂಡುಕೊಂಡ ಅಂಶಗಳ ಪ್ರಕಾರ ತಮಿಳುನಾಡು ಹೊರತುಪಡಿಸಿ ಉಳಿದ ಕಡೆ ಆಡಳಿತ ಪಕ್ಷಗಳು ಮುಂದಿನ ಅವಧಿಗೂ ಮುಂದುವರೆಯಲಿವೆ.

ಆರು ನಿರ್ಗಮನ ಸಮೀಕ್ಷೆಗಳ ಒಟ್ಟು ಸರಾಸರಿಯು ಮಮತಾ ಬ್ಯಾನರ್ಜಿ ಬಹುಮತಕ್ಕೆ ತಲುಪಬಹುದೆಂದು ಸೂಚಿಸುತ್ತದೆ. ಆದರೆ ಚುನಾವಣೆಗೆ ಮುಂಚಿತವಾಗಿ ಹಲವಾರು ಪಕ್ಷಾಂತರಗಳ ನಂತರ ಬಿಜೆಪಿಯೊಂದಿಗಿನ ಅಂತರವನ್ನು ಅವರು ಎಷ್ಟು ವಿಸ್ತರಿಸಬಹುದು ಎಂಬುದರ ಮೇಲೆ ಅವರ ಸರ್ಕಾರದ ಭದ್ರತೆ ಅವಲಂಬಿತವಾಗಿದೆ. ಬಿಜೆಪಿ ಗಮನಾರ್ಹ ಏರಿಕೆ ಕಾಣಲಿದೆ.

ತೃಣಮೂಲ ಕಾಂಗ್ರೆಸ್ 2011 ರಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿದ್ದು, 34 ವರ್ಷಗಳ ಎಡ ಆಡಳಿತವನ್ನು ಕೊನೆಗೊಳಿಸಿತು. 2016 ರಲ್ಲಿ ಅದು ಇನ್ನೂ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಈ ಬಾರಿ, ಬಿಜೆಪಿ ಲಾಭ ಗಳಿಸುವುದರೊಂದಿಗೆ ತೃಣಮೂಲದ ಪ್ರಮಾಣ ತೀವ್ರವಾಗಿ ಕುಸಿಯುತ್ತದೆ ಎಂದು ಸಮೀಕ್ಷೆಗಳು ಸೂಚಿಸುತ್ತವೆ. ಆದರೆ ಎಲ್ಲ ಸಮೀಕ್ಷೆಗಳ ಸಮೀಕ್ಷೆ (ಪೋಲ್ ಆಫ್ ಪೋಲ್ಸ್) ಟಿಎಂಸಿ ಸರಳ ಬಹುಮತ ಪಡೆಯಲಿದೆ ಎನ್ನುತ್ತದೆ.

ಇಂಡಿಯಾ ನ್ಯೂಸ್-ಜನ್ ಕಿ ಬಾತ್ ಬಿಜೆಪಿಗೆ ಗೆಲುವಿನ ಮುನ್ಸೂಚನೆ ನೀಡಿದರೆ, ರಿಪಬ್ಲಿಕ್ ಟಿಸಿಎನ್‌ಎಕ್ಸ್ ಸಮೀಕ್ಷೆ ಅತಂತ್ರ ವಿಧಾನಸಭೆಯನ್ನು ಸೂಚಿಸಿದೆ.

ಕೇರಳದಲ್ಲಿ ಈಗಿನ ಎಡಪಂಥೀಯ ಎಲ್‌ಡಿಎಫ್ ಕೂಟವು 140 ಸ್ಥಾನಗಳಲ್ಲಿ 85 ಸ್ಥಾನಗಳೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ 53 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಅದು ಸರಿಯೆಂದು ಸಾಬೀತಾದರೆ, ಕೇರಳದ ರಾಜಕೀಯದಲ್ಲಿ ಆಡಳಿತ ಪಕ್ಷ ಪುನರಾಯ್ಕೆಗೊಂಡ ಮೊದಲ ನಿದರ್ಶನ ಇದಾಗಲಿದೆ. ಕೇರಳದಲ್ಲಿ ಎರಡು ಸ್ಥಾನಗಳೊಂದಿಗೆ ಬಿಜೆಪಿ ತನ್ನ ಅಸ್ತಿತ್ವವನ್ನು ತೋರಿಸಲು ಸಜ್ಜಾಗಿದೆ ಎಂದು ಸಮೀಕ್ಷೆಯ ಸಮೀಕ್ಷೆ ತಿಳಿಸಿದೆ.

ತಮಿಳುನಾಡಿನಲ್ಲಿ, ಡಿಎಂಕೆ ನೇತೃತ್ವದ ಕೂಟ ಸಲೀಸಾಗಿ ಅಧಿಕಾರಕ್ಕೆ ಬರಲಿದೆ. ಡಿಎಂಕೆ ಕೂಟ 234 ಸ್ಥಾನಗಳಲ್ಲಿ 160 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಆಡಳಿತಾರೂಢ ಮತ್ತು ಬಿಜೆಪಿಯ ಮಿತ್ರ ಪಕ್ಷ ಎಐಡಿಎಂಕೆ ತನ್ನ ವರ್ಚಸ್ವಿ ನಾಯಕಿ ಜೆ.ಜಯಲಲಿತಾ ಅವರ ನಿಧನದ ನಂತರ ನಡೆದ ಮೊದಲ ರಾಜ್ಯ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗಳಿಸಲಿದೆ ಎಂದು ನಿರ್ಗಮನ ಸಮೀಕ್ಷೆಗಳು ತಿಳಿಸಿವೆ. ಎಂ.ಕೆ ಸ್ಟಾಲಿನ್ ಅವರ ಡಿಎಂಕೆ 2019 ರ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಗಳಿಸಿತ್ತು. ಪ್ರತಿಪಕ್ಷದಲ್ಲಿ ಎರಡು ಅವಧಿಯ ನಂತರ ಈ ಬಾರಿ ಅಧಿಕಾರಕ್ಕೆ ಮರಳುವ ಭರವಸೆ ಇದೆ.

ಅಸ್ಸಾಂನಲ್ಲಿ ಕಾಂಗ್ರೆಸ್‌ಗೆ ಮತ್ತೆ ನಿರಾಶೆ ಕಾದಿದೆ ಎಂದು ಎಕ್ಸಿಟ್ ಪೋಲ್ಸ್ ಸೂಚಿಸುತ್ತವೆ, ಬಿಜೆಪಿ 126 ಸ್ಥಾನಗಳಲ್ಲಿ 72 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ತನ್ನ ಹಿಂದಿನ ಭದ್ರಕೋಟೆ ಮರಳಿ ಗೆಲ್ಲಲು ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದ ಕಾಂಗ್ರೆಸ್ 53 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ತಿಳಿಸಿವೆ.
ಪುದುಚೇರಿಯಲ್ಲಿ ಕಾಂಗ್ರೆಸ್‌ಗೆ ಕಷ್ಟವಾದರೂ ಮರಳಿ ಅಧಿಕಾರಕ್ಕೆ ಬರುವ ಸೂಚನೆಗಳಿವೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮಾರ್ಚ್ 27 ರಿಂದ ಚುನಾವಣೆ ನಡೆಯಿತು. ಬಂಗಾಳದ ದಾಖಲೆಯ ಎಂಟು ಹಂತದ ಮತದಾನ ಏಪ್ರಿಲ್ 29ಕ್ಕೆ ಕೊನೆಗೊಂಡಿದೆ. ಮೇ 2 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಚುನಾವಣೆಯೇನೊ ಮುಗಿದಿದೆ. ಆದರೆ ಈ ಚುನಾವಣೆಯ ಕಾರಣಕ್ಕೆ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ಕೋವಿಡ್ ಎರಡನೇ ಅಲೆ ಬೀಸಿದ ಸಂದರ್ಭದಲ್ಲಿಯೇ ರಾಜಕೀಯ ಪಕ್ಷಗಳು ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳನ್ನು ನಡೆಸಿ ಕೊರನಾ ಹರಡಲು ಕಾರಣರಾಗಿದ್ದರೆ ಎಂದು ಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ.


ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...