Homeಮುಖಪುಟದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

- Advertisement -
- Advertisement -

‘ಇಡೀ ದೆಹಲಿಯಲ್ಲಿ ಬೆಂಕಿಯೇ ಕಾಣುತ್ತಿದೆ. ಶವಗಳನ್ನು ಪಾಳೆ ಹಚ್ಚಿ ಸುಡಲಾಗುತ್ತಿದೆ. ಯಾರಾದರೂ ದಿಲ್ಲಿವಾಲಾ ದೆಹಲಿ ಬಿಜೆಪಿಯವರನ್ನು ಎಲ್ಲಿಯಾದರೂ ಕಂಡಿರಾ?’ ಎಂದು ಆರ್‌ಎಸ್‌ಎಸ್‌ನ ದೆಹಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ರಾಜೀವ್ ಟುಲಿ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇಗವಾಗಿ ಏರುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ವಿಫಲತೆಯಿಂದಾಗಿ ದೆಹಲಿಯು ಉಸಿರುಗಟ್ಟುತ್ತಲೇ ಇರುವುದರಿಂದ, ಆರ್‌ಎಸ್‌ಎಸ್ ಕಾರ್ಯಕಾರಿಣಿ ರಾಜೀವ್ ಅವರು ದೆಹಲಿ ಬಿಜೆಪಿಯ ಅನುಪಸ್ಥಿತಿ ಕುರಿತು ಟೀಕೆ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಯ ಬಿಜೆಪಿ ಎಲ್ಲಿದೆ? ಅಥವಾ ರಾಜ್ಯ ಘಟಕವನ್ನು ವಿಸರ್ಜಿಸಲಾಗಿದೆಯೇ ಎಂದು ಆರ್‌ಎಸ್‌ಎಸ್ ದೆಹಲಿ ಘಟಕದ ಮಾಜಿ ಪ್ರಾಂತ್ ಪ್ರಚಾರ್ ಪ್ರಮುಖ್ ರಾಜೀವ್ ಟುಲಿ ಕಿಡಿ ಕಾರಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರಾಜೀವ್ ಟುಲಿಯವರ ಈ ಟ್ವೀಟ್, ಕೋವಿಡ್ ಎರಡನೇ ಅಲೆ ನಿರ್ವಹಿಸುವುದರಲ್ಲಿ ಸಂಪೂರ್ಣ ವಿಫಲವಾದ ಮೋದಿ ಸರಕಾರದ ಬಗ್ಗೆ ಸಂಘ ಪರಿವಾರದಲ್ಲಿ ಹೆಚ್ಚುತ್ತಿರುವ ಅಸಹನೆ ಮತ್ತು ಅಸಹಾಯಕತೆಯ ಪ್ರತಿಬಿಂಬವಾಗಿದೆ ಎನ್ನಲಾಗಿದೆ.

“ದೆಹಲಿಯಲ್ಲಿಯೂ ಸಹ, ನಾವು ಸಂಘಟನೆಯಾಗಿ ಸಹಾಯ ಮಾಡುವುದು ಕಾಣಿಸುತ್ತಿಲ್ಲ… ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದೆ’ ಎಂದು ದೆಹಲಿಯ ಬಿಜೆಪಿ ಮುಖಂಡರೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ತಿಳಿಸಿದೆ.

ರಾಜೀವ್ ಅವರ ಟ್ವೀಟ್ ಹೇಳಿಕೆ ಬಗ್ಗೆ ಸಂಘದ ರಾಷ್ಟ್ರೀಯ ಪ್ರಚಾರದ ಉಸ್ತುವಾರಿ ಸುನಿಲ್ ಅಂಬೇಕರ್ ಅವರನ್ನು ಪ್ರಶ್ನಿಸಿದಾಗ, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು. ಆದರೆ ಇದು ಸಂಘದ ಅಧಿಕೃತ ಹೇಳಿಕೆ ಅಲ್ಲ” ಎಂದು ತಿಳಿಸಿದರು ಎಂದು ಪಿಟಿಐ ಉಲ್ಲೇಖಿಸಿದೆ.

ಸಂಘ ಮತ್ತು ಅದರ ಅಂಗಸಂಸ್ಥೆ ಸೇವಾ ಭಾರತಿಯವರು ಸಂತ್ರಸ್ತ ಪ್ರದೇಶಗಳಲ್ಲಿ ಕುಟುಂಬಗಳಿಗೆ ಪರಿಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಅಂಬೇಕರ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಮುಖಂಡರೊಬ್ಬರು, ಬಿಜೆಪಿ ಸಂಸದರು ಮತ್ತು ಅದರ ಯುವ ಕಾರ್ಯಕರ್ತರು ಬಿಡಿಬಿಡಿಯಾಗಿ ಜನರಿಗೆ ಸಹಾಯ ಮಾಡುತ್ತಿದ್ದರೂ, ಒಂದು ಘಟಕವಾಗಿ ಕಾರ್ಯನಿರ್ವಹಿಸಲು ಸಮನ್ವಯತೆ ಇರಬೇಕಿತ್ತು’ ಎಂದಿದ್ದು, ಹಿಂದಿನ ಸಲ ಮೊದಲ ಅಲೆ ಸಂದರ್ಭದಲ್ಲಿ, ಜನರಿಗೆ ಆಹಾರ ಮತ್ತು ಪಡಿತರ ಅಗತ್ಯವಿತ್ತು, ಈ ಸಮಯದಲ್ಲಿ ಆಮ್ಲಜನಕ, ಆಸ್ಪತ್ರೆ ಹಾಸಿಗೆಗಳು ಮತ್ತು ರಿಮೆಡೆಸಿವಿರ್ ಕೊರತೆಯಿದೆ, ಇದನ್ನು ಆಡಳಿತ ಮಾತ್ರ ಪೂರೈಸಬಲ್ಲದು. ಆದ್ದರಿಂದ, ವಿರೋಧ ಪಕ್ಷವು ದೊಡ್ಡ ಸಂಖ್ಯೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ನಿರೀಕ್ಷಿಸುವುದು ತಪ್ಪು ಎಂದಿದ್ದಾರೆ.

ರಾಜೀವ್ ಟುಲಿಯವರ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ ಮತ್ತೊಬ್ಬ ಬಿಜೆಪಿ ನಾಯಕ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ನಮ್ಮ ಪಕ್ಷವು (ಬಿಜೆಪಿ), ಮನೆಯಲ್ಲಿ ಕ್ಯಾರೆಂಟೈನ್ ಮಾಡಲು ಸಾಧ್ಯವಾಗದ ಜನರಿಗೆ ಕಲ್ಯಾಣ ಮಂಟಪಗಳು ಅಥವಾ ಶಾಲೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಬಹುದಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದರೆ, ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ, ರಾಜೀವ್ ಟುಲಿಯವರ ಟ್ವೀಟ್‌ಗಳ ಬಗ್ಗೆ ಕೇಳಿದಾಗ, ಈ ಟುಲಿ ಎಂಬುವವರು ಯಾರೆಂಬುದೇ ಗೊತ್ತಿಲ್ಲ ಮತ್ತು ಅವರ ಟ್ವೀಟ್‌ಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದರು.

ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಅವರು ಟುಲಿಯವರ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಏಪ್ರಿಲ್ 21 ರಿಂದ ಮೂರು ಸಹಾಯವಾಣಿ ಸಂಖ್ಯೆಗಳು 24*7 ಚಾಲನೆಯಲ್ಲಿವೆ. ಜನರಿಗೆ ವೈದ್ಯಕೀಯ ಸಲಹೆ ಮತ್ತು ಆಹಾರದ ವ್ಯವಸ್ತೆ ಮಾಡಲು ಈ ಸಹಯವಾಣಿ ಆರಂಭಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...