Homeಮುಖಪುಟದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

- Advertisement -
- Advertisement -

‘ಇಡೀ ದೆಹಲಿಯಲ್ಲಿ ಬೆಂಕಿಯೇ ಕಾಣುತ್ತಿದೆ. ಶವಗಳನ್ನು ಪಾಳೆ ಹಚ್ಚಿ ಸುಡಲಾಗುತ್ತಿದೆ. ಯಾರಾದರೂ ದಿಲ್ಲಿವಾಲಾ ದೆಹಲಿ ಬಿಜೆಪಿಯವರನ್ನು ಎಲ್ಲಿಯಾದರೂ ಕಂಡಿರಾ?’ ಎಂದು ಆರ್‌ಎಸ್‌ಎಸ್‌ನ ದೆಹಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ರಾಜೀವ್ ಟುಲಿ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇಗವಾಗಿ ಏರುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ವಿಫಲತೆಯಿಂದಾಗಿ ದೆಹಲಿಯು ಉಸಿರುಗಟ್ಟುತ್ತಲೇ ಇರುವುದರಿಂದ, ಆರ್‌ಎಸ್‌ಎಸ್ ಕಾರ್ಯಕಾರಿಣಿ ರಾಜೀವ್ ಅವರು ದೆಹಲಿ ಬಿಜೆಪಿಯ ಅನುಪಸ್ಥಿತಿ ಕುರಿತು ಟೀಕೆ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಯ ಬಿಜೆಪಿ ಎಲ್ಲಿದೆ? ಅಥವಾ ರಾಜ್ಯ ಘಟಕವನ್ನು ವಿಸರ್ಜಿಸಲಾಗಿದೆಯೇ ಎಂದು ಆರ್‌ಎಸ್‌ಎಸ್ ದೆಹಲಿ ಘಟಕದ ಮಾಜಿ ಪ್ರಾಂತ್ ಪ್ರಚಾರ್ ಪ್ರಮುಖ್ ರಾಜೀವ್ ಟುಲಿ ಕಿಡಿ ಕಾರಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರಾಜೀವ್ ಟುಲಿಯವರ ಈ ಟ್ವೀಟ್, ಕೋವಿಡ್ ಎರಡನೇ ಅಲೆ ನಿರ್ವಹಿಸುವುದರಲ್ಲಿ ಸಂಪೂರ್ಣ ವಿಫಲವಾದ ಮೋದಿ ಸರಕಾರದ ಬಗ್ಗೆ ಸಂಘ ಪರಿವಾರದಲ್ಲಿ ಹೆಚ್ಚುತ್ತಿರುವ ಅಸಹನೆ ಮತ್ತು ಅಸಹಾಯಕತೆಯ ಪ್ರತಿಬಿಂಬವಾಗಿದೆ ಎನ್ನಲಾಗಿದೆ.

“ದೆಹಲಿಯಲ್ಲಿಯೂ ಸಹ, ನಾವು ಸಂಘಟನೆಯಾಗಿ ಸಹಾಯ ಮಾಡುವುದು ಕಾಣಿಸುತ್ತಿಲ್ಲ… ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದೆ’ ಎಂದು ದೆಹಲಿಯ ಬಿಜೆಪಿ ಮುಖಂಡರೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ತಿಳಿಸಿದೆ.

ರಾಜೀವ್ ಅವರ ಟ್ವೀಟ್ ಹೇಳಿಕೆ ಬಗ್ಗೆ ಸಂಘದ ರಾಷ್ಟ್ರೀಯ ಪ್ರಚಾರದ ಉಸ್ತುವಾರಿ ಸುನಿಲ್ ಅಂಬೇಕರ್ ಅವರನ್ನು ಪ್ರಶ್ನಿಸಿದಾಗ, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು. ಆದರೆ ಇದು ಸಂಘದ ಅಧಿಕೃತ ಹೇಳಿಕೆ ಅಲ್ಲ” ಎಂದು ತಿಳಿಸಿದರು ಎಂದು ಪಿಟಿಐ ಉಲ್ಲೇಖಿಸಿದೆ.

ಸಂಘ ಮತ್ತು ಅದರ ಅಂಗಸಂಸ್ಥೆ ಸೇವಾ ಭಾರತಿಯವರು ಸಂತ್ರಸ್ತ ಪ್ರದೇಶಗಳಲ್ಲಿ ಕುಟುಂಬಗಳಿಗೆ ಪರಿಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಅಂಬೇಕರ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಮುಖಂಡರೊಬ್ಬರು, ಬಿಜೆಪಿ ಸಂಸದರು ಮತ್ತು ಅದರ ಯುವ ಕಾರ್ಯಕರ್ತರು ಬಿಡಿಬಿಡಿಯಾಗಿ ಜನರಿಗೆ ಸಹಾಯ ಮಾಡುತ್ತಿದ್ದರೂ, ಒಂದು ಘಟಕವಾಗಿ ಕಾರ್ಯನಿರ್ವಹಿಸಲು ಸಮನ್ವಯತೆ ಇರಬೇಕಿತ್ತು’ ಎಂದಿದ್ದು, ಹಿಂದಿನ ಸಲ ಮೊದಲ ಅಲೆ ಸಂದರ್ಭದಲ್ಲಿ, ಜನರಿಗೆ ಆಹಾರ ಮತ್ತು ಪಡಿತರ ಅಗತ್ಯವಿತ್ತು, ಈ ಸಮಯದಲ್ಲಿ ಆಮ್ಲಜನಕ, ಆಸ್ಪತ್ರೆ ಹಾಸಿಗೆಗಳು ಮತ್ತು ರಿಮೆಡೆಸಿವಿರ್ ಕೊರತೆಯಿದೆ, ಇದನ್ನು ಆಡಳಿತ ಮಾತ್ರ ಪೂರೈಸಬಲ್ಲದು. ಆದ್ದರಿಂದ, ವಿರೋಧ ಪಕ್ಷವು ದೊಡ್ಡ ಸಂಖ್ಯೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ನಿರೀಕ್ಷಿಸುವುದು ತಪ್ಪು ಎಂದಿದ್ದಾರೆ.

ರಾಜೀವ್ ಟುಲಿಯವರ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ ಮತ್ತೊಬ್ಬ ಬಿಜೆಪಿ ನಾಯಕ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ನಮ್ಮ ಪಕ್ಷವು (ಬಿಜೆಪಿ), ಮನೆಯಲ್ಲಿ ಕ್ಯಾರೆಂಟೈನ್ ಮಾಡಲು ಸಾಧ್ಯವಾಗದ ಜನರಿಗೆ ಕಲ್ಯಾಣ ಮಂಟಪಗಳು ಅಥವಾ ಶಾಲೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಬಹುದಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದರೆ, ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ, ರಾಜೀವ್ ಟುಲಿಯವರ ಟ್ವೀಟ್‌ಗಳ ಬಗ್ಗೆ ಕೇಳಿದಾಗ, ಈ ಟುಲಿ ಎಂಬುವವರು ಯಾರೆಂಬುದೇ ಗೊತ್ತಿಲ್ಲ ಮತ್ತು ಅವರ ಟ್ವೀಟ್‌ಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದರು.

ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಅವರು ಟುಲಿಯವರ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಏಪ್ರಿಲ್ 21 ರಿಂದ ಮೂರು ಸಹಾಯವಾಣಿ ಸಂಖ್ಯೆಗಳು 24*7 ಚಾಲನೆಯಲ್ಲಿವೆ. ಜನರಿಗೆ ವೈದ್ಯಕೀಯ ಸಲಹೆ ಮತ್ತು ಆಹಾರದ ವ್ಯವಸ್ತೆ ಮಾಡಲು ಈ ಸಹಯವಾಣಿ ಆರಂಭಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....