Homeಮುಖಪುಟದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

- Advertisement -
- Advertisement -

‘ಇಡೀ ದೆಹಲಿಯಲ್ಲಿ ಬೆಂಕಿಯೇ ಕಾಣುತ್ತಿದೆ. ಶವಗಳನ್ನು ಪಾಳೆ ಹಚ್ಚಿ ಸುಡಲಾಗುತ್ತಿದೆ. ಯಾರಾದರೂ ದಿಲ್ಲಿವಾಲಾ ದೆಹಲಿ ಬಿಜೆಪಿಯವರನ್ನು ಎಲ್ಲಿಯಾದರೂ ಕಂಡಿರಾ?’ ಎಂದು ಆರ್‌ಎಸ್‌ಎಸ್‌ನ ದೆಹಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ರಾಜೀವ್ ಟುಲಿ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇಗವಾಗಿ ಏರುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ವಿಫಲತೆಯಿಂದಾಗಿ ದೆಹಲಿಯು ಉಸಿರುಗಟ್ಟುತ್ತಲೇ ಇರುವುದರಿಂದ, ಆರ್‌ಎಸ್‌ಎಸ್ ಕಾರ್ಯಕಾರಿಣಿ ರಾಜೀವ್ ಅವರು ದೆಹಲಿ ಬಿಜೆಪಿಯ ಅನುಪಸ್ಥಿತಿ ಕುರಿತು ಟೀಕೆ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಯ ಬಿಜೆಪಿ ಎಲ್ಲಿದೆ? ಅಥವಾ ರಾಜ್ಯ ಘಟಕವನ್ನು ವಿಸರ್ಜಿಸಲಾಗಿದೆಯೇ ಎಂದು ಆರ್‌ಎಸ್‌ಎಸ್ ದೆಹಲಿ ಘಟಕದ ಮಾಜಿ ಪ್ರಾಂತ್ ಪ್ರಚಾರ್ ಪ್ರಮುಖ್ ರಾಜೀವ್ ಟುಲಿ ಕಿಡಿ ಕಾರಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರಾಜೀವ್ ಟುಲಿಯವರ ಈ ಟ್ವೀಟ್, ಕೋವಿಡ್ ಎರಡನೇ ಅಲೆ ನಿರ್ವಹಿಸುವುದರಲ್ಲಿ ಸಂಪೂರ್ಣ ವಿಫಲವಾದ ಮೋದಿ ಸರಕಾರದ ಬಗ್ಗೆ ಸಂಘ ಪರಿವಾರದಲ್ಲಿ ಹೆಚ್ಚುತ್ತಿರುವ ಅಸಹನೆ ಮತ್ತು ಅಸಹಾಯಕತೆಯ ಪ್ರತಿಬಿಂಬವಾಗಿದೆ ಎನ್ನಲಾಗಿದೆ.

“ದೆಹಲಿಯಲ್ಲಿಯೂ ಸಹ, ನಾವು ಸಂಘಟನೆಯಾಗಿ ಸಹಾಯ ಮಾಡುವುದು ಕಾಣಿಸುತ್ತಿಲ್ಲ… ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದೆ’ ಎಂದು ದೆಹಲಿಯ ಬಿಜೆಪಿ ಮುಖಂಡರೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ತಿಳಿಸಿದೆ.

ರಾಜೀವ್ ಅವರ ಟ್ವೀಟ್ ಹೇಳಿಕೆ ಬಗ್ಗೆ ಸಂಘದ ರಾಷ್ಟ್ರೀಯ ಪ್ರಚಾರದ ಉಸ್ತುವಾರಿ ಸುನಿಲ್ ಅಂಬೇಕರ್ ಅವರನ್ನು ಪ್ರಶ್ನಿಸಿದಾಗ, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು. ಆದರೆ ಇದು ಸಂಘದ ಅಧಿಕೃತ ಹೇಳಿಕೆ ಅಲ್ಲ” ಎಂದು ತಿಳಿಸಿದರು ಎಂದು ಪಿಟಿಐ ಉಲ್ಲೇಖಿಸಿದೆ.

ಸಂಘ ಮತ್ತು ಅದರ ಅಂಗಸಂಸ್ಥೆ ಸೇವಾ ಭಾರತಿಯವರು ಸಂತ್ರಸ್ತ ಪ್ರದೇಶಗಳಲ್ಲಿ ಕುಟುಂಬಗಳಿಗೆ ಪರಿಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಅಂಬೇಕರ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಮುಖಂಡರೊಬ್ಬರು, ಬಿಜೆಪಿ ಸಂಸದರು ಮತ್ತು ಅದರ ಯುವ ಕಾರ್ಯಕರ್ತರು ಬಿಡಿಬಿಡಿಯಾಗಿ ಜನರಿಗೆ ಸಹಾಯ ಮಾಡುತ್ತಿದ್ದರೂ, ಒಂದು ಘಟಕವಾಗಿ ಕಾರ್ಯನಿರ್ವಹಿಸಲು ಸಮನ್ವಯತೆ ಇರಬೇಕಿತ್ತು’ ಎಂದಿದ್ದು, ಹಿಂದಿನ ಸಲ ಮೊದಲ ಅಲೆ ಸಂದರ್ಭದಲ್ಲಿ, ಜನರಿಗೆ ಆಹಾರ ಮತ್ತು ಪಡಿತರ ಅಗತ್ಯವಿತ್ತು, ಈ ಸಮಯದಲ್ಲಿ ಆಮ್ಲಜನಕ, ಆಸ್ಪತ್ರೆ ಹಾಸಿಗೆಗಳು ಮತ್ತು ರಿಮೆಡೆಸಿವಿರ್ ಕೊರತೆಯಿದೆ, ಇದನ್ನು ಆಡಳಿತ ಮಾತ್ರ ಪೂರೈಸಬಲ್ಲದು. ಆದ್ದರಿಂದ, ವಿರೋಧ ಪಕ್ಷವು ದೊಡ್ಡ ಸಂಖ್ಯೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ನಿರೀಕ್ಷಿಸುವುದು ತಪ್ಪು ಎಂದಿದ್ದಾರೆ.

ರಾಜೀವ್ ಟುಲಿಯವರ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ ಮತ್ತೊಬ್ಬ ಬಿಜೆಪಿ ನಾಯಕ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ನಮ್ಮ ಪಕ್ಷವು (ಬಿಜೆಪಿ), ಮನೆಯಲ್ಲಿ ಕ್ಯಾರೆಂಟೈನ್ ಮಾಡಲು ಸಾಧ್ಯವಾಗದ ಜನರಿಗೆ ಕಲ್ಯಾಣ ಮಂಟಪಗಳು ಅಥವಾ ಶಾಲೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಬಹುದಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದರೆ, ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ, ರಾಜೀವ್ ಟುಲಿಯವರ ಟ್ವೀಟ್‌ಗಳ ಬಗ್ಗೆ ಕೇಳಿದಾಗ, ಈ ಟುಲಿ ಎಂಬುವವರು ಯಾರೆಂಬುದೇ ಗೊತ್ತಿಲ್ಲ ಮತ್ತು ಅವರ ಟ್ವೀಟ್‌ಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದರು.

ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಅವರು ಟುಲಿಯವರ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಏಪ್ರಿಲ್ 21 ರಿಂದ ಮೂರು ಸಹಾಯವಾಣಿ ಸಂಖ್ಯೆಗಳು 24*7 ಚಾಲನೆಯಲ್ಲಿವೆ. ಜನರಿಗೆ ವೈದ್ಯಕೀಯ ಸಲಹೆ ಮತ್ತು ಆಹಾರದ ವ್ಯವಸ್ತೆ ಮಾಡಲು ಈ ಸಹಯವಾಣಿ ಆರಂಭಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...