Homeಕರೋನಾ ತಲ್ಲಣಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

ಕೋವಿಡ್ ಬಿಕ್ಕಟ್ಟಿನಲ್ಲಿ ಜನರಿಗೆ ನೆರವು ನೀಡಲಾಗುತ್ತಿಲ್ಲ, ರಾಷ್ಟ್ರಪತಿ ಆಡಳಿತ ತನ್ನಿ: ಆಪ್ ಹಿರಿಯ ಶಾಸಕನ ಅಳಲು

- Advertisement -
- Advertisement -

‘ನಾನು ಆರು ಬಾರಿ ಶಾಸಕ, ದೆಹಲಿಯ ಹಿರಿಯ ಶಾಸಕ. ಆದರೆ ಇದರ ಹೊರತಾಗಿಯೂ, ಯಾರೂ ಪ್ರತಿಕ್ರಿಯಿಸುತ್ತಿಲ್ಲ, ಜನರಿಗೆ ನೆರವು ನೀಡಲಾಗುತ್ತಿಲ್ಲ. ನೀವು ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸುವಂತೆ ನಾನು ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಲು ಬಯಸುತ್ತೇನೆ, ಇಲ್ಲದಿದ್ದರೆ ರಸ್ತೆಯಲ್ಲಿ ಮೃತ ದೇಹಗಳು ಇರುತ್ತವೆ” ಎಂದು ಆಮ್ ಆದ್ಮಿ ಪಕ್ಷದ ಶಾಸಕ ಶೋಯೆಬ್ ಇಕ್ಬಾಲ್ ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾತಿಯಾ ಮಹಲ್‌ನ ಶಾಸಕ ಶೋಯೆಬ್ ಇಕ್ಬಾಲ್, ಕೋವಿಡ್ ಸಾಂಕ್ರಾಮಿಕದ ತೀವ್ರತೆಗೆ ನಲುಗಿರುವ ಜನತೆಗೆ ನೆರವು ನೀಡಲೂ ಆಗುತ್ತಿಲ್ಲ. ಪರಿಸ್ಥಿತಿ ಕೈ ಮೀರಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತನ್ನಿ ಎಂದು ಅಸಹಾಯಕತೆಯಲ್ಲಿ ನ್ಯಾಯಾಲಯವನ್ನು ಕೋರಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಹಿಂದಿನ ತನಕ ಕಾಂಗ್ರೆಸ್ ಜೊತೆಗಿದ್ದ ಇಕ್ಬಾಲ್ ಅವರು ನಂತರ ಆಮ್ ಆದ್ಮಿ ಪಕ್ಷ ಸೇರಿ ಶಾಸಕರಾಗಿದ್ದಾರೆ. ಅವರ ವೀಡಿಯೊ ಸಂದೇಶದಲ್ಲಿ, “ದೆಹಲಿಯ ಸ್ಥಿತಿಯಿಂದ ನನಗೆ ನೋವಾಗಿದೆ.. ನಾನು ತುಂಬಾ ಚಿಂತಿತನಾಗಿದ್ದೇನೆ. ನನಗೆ ನಿದ್ರೆ ಬರುತ್ತಿಲ್ಲ. ಜನರಿಗೆ ಆಮ್ಲಜನಕ ಮತ್ತು ಔಷಧಿಗಳು ಸಿಗುತ್ತಿಲ್ಲ. ನನ್ನ ಸ್ನೇಹಿತ ಬಳಲುತ್ತಿದ್ದಾನೆ, ಆಸ್ಪತ್ರೆಯಲ್ಲಿದ್ದಾನೆ. ಆದರೆ ಆಮ್ಲಜನಕ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ರಿಮೆಡೆಸಿವಿರ್‌ಗಾಗಿ ಅವರ ಪ್ರಿಸ್ಕಿಪ್ಸನ್ ನನ್ನ ಬಳಿ ಇದೆ. ಆದರೆ ನಾನು ಅದನ್ನು ಎಲ್ಲಿಂದ ಪಡೆಯಲಿ? ಎಲ್ಲೂ ಸಿಗುತ್ತಿಲ್ಲ. ಸ್ನೇಹಿತನ ಮಕ್ಕಳು ಗಾಬರಿಯಲ್ಲಿ ಔಷಧಿಗಾಗಿ ಅಲೆಯುತ್ತಿದ್ದಾರೆ. ಇಂದು, ನಾವು ಶಾಸಕರಾಗಿದ್ದಕ್ಕೆ ನಾಚಿಕೆ ಪಡಬೇಕಾಗಿದೆ. ಏಕೆಂದರೆ ನಮಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಕ್ಕೂ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಇಕ್ಬಾಲ್ 1993ರಿಂದ ದೆಹಲಿ ವಿಧಾನಸಭೆಯ ಮಾತಿಯಾ ಮಹಲ್ ಕ್ಷೇತ್ರವನ್ನು ಆರನೇ ಸಲ ಪ್ರತಿನಿಧಿಸುತ್ತಿದ್ದಾರೆ.

ಇಕ್ಬಾಲ್ ಈ ಹಿಂದೆ ಕಾಂಗ್ರೆಸ್, ಲೋಕ ಜನಶಕ್ತಿ ಪಕ್ಷ (ಜೆಎಲ್‌ಪಿ) ಮತ್ತು ಜನತಾದಳದ ಮೂರು ಅವತಾರಗಳಾದ ಜನತಾದಳ, ಜನತಾದಳ (ಜಾತ್ಯತೀತ) ಮತ್ತು ಜನತಾದಳ (ಯುನೈಟೆಡ್) ಜೊತೆಗಿದ್ದರು. ಆಪ್ 2015ರಲ್ಲಿ ಅವರ ಗೆಲುವಿಗೆ ಬ್ರೇಕ್ ಹಾಕಿತ್ತು. ಈ ಸಲ ಆಪ್‌ನಿಂದ ಶಾಸಕರಾಗಿದ್ದಾರೆ.

ಇಕ್ಬಾಲ್ ಅವರ ಈ ಹೇಳಿಕೆಯ ಬಗ್ಗೆ ಎಎಪಿ ರಾಜ್ಯ ಸಮಿತಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಇಕ್ಬಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ, “ಇಕ್ಬಾಲ್ ಕೇವಲ ಎಎಪಿ ಶಾಸಕರಲ್ಲ, ದೆಹಲಿ ವಿಧಾನಸಭೆಯಲ್ಲಿ ಹೆಚ್ಚು ಅನುಭವ ಹೊಂದಿರುವವರು. ಪರಿಸ್ಥಿತಿ ಹತೋಟಿಯಲ್ಲಿಲ್ಲ ಮತ್ತು ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳುತ್ತಿದ್ದಾರೆಂದರೆ ಅದು ಸರಿಯಾಗಿದೆ. ಹಾಗಾಗಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು, ದೆಹಲಿ ಈಗ ಕೇಂದ್ರದ ನಿಯಂತ್ರಣದಲ್ಲಿರಬೇಕು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತವಿರಬೇಕು ಎಂದು ನಾವು ನಂಬುತ್ತೇವೆ’ ಎಂದಿದ್ದಾರೆ.

ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷ ಅಭಿಷೇಕ್ ದತ್, ನಗರದಲ್ಲಿ ಕೋವಿಡ್ ಹರಡುವಿಕೆ ಮತ್ತು ಸಂಬಂಧಿತ ಸಾವುಗಳನ್ನು ಕೊನೆಗೊಳಿಸಲು ಸೇನೆಯು ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ನಿಧಾನಗೊಳಿಸಿದೆ ಮತ್ತು ಕೋವಿಡ್ ಸಾವಿನ ಅಂಕಿಅಂಶಗಳು ಸರಿಯಾಗಿ ವರದಿಯಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...