Homeಕರ್ನಾಟಕ‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

- Advertisement -
- Advertisement -

ಕೊರೊನಾ ಎರಡನೇ ಅಲೆ ಹಾಗೂ ಸರ್ಕಾರ ಮತ್ತೆ ಹೇರಿರುವ ಲಾಕ್‌ಡೌನ್‌ನಿಂದಾಗಿ ಬೀದಿ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ, ಈ ಸಮಸ್ಯೆಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು AICCTU ಅಂಗ ಸಂಸ್ಥೆಯಾದ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘವು ಸರ್ಕಾರಕ್ಕೆ ಶುಕ್ರವಾರ ಮನವಿ ಪತ್ರ ಬರೆದಿದೆ.

ಪತ್ರದಲ್ಲಿ ಸಂಘವು, “ಕರ್ನಾಟಕದಾದ್ಯಂತ ಲಕ್ಷಾಂತರ ಜನ ಬೀದಿ ವ್ಯಾಪಾರಿಗಳಿದ್ದು ಬೆಂಗಳೂರು ನಗರದಲ್ಲೇ 2 ಲಕ್ಷದಷ್ಟು ಜನ ಬೀದಿ ವ್ಯಾಪಾರವನ್ನು ಜೀವನೋಪಾಯವನ್ನಾಗಿ ಆಧರಿಸಿದ್ದಾರೆ. ಬೀದಿ ವ್ಯಾಪಾರವು ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯನ್ನು ನೀಡುವುದಲ್ಲದೆ, ಲಕ್ಷಾಂತರ ಕಲಿಕೆ ಇಲ್ಲದೆ, ಶಕ್ತಿ ಇಲ್ಲದೆ, ಅಂಗಡಿ ಸ್ಥಾಪಿಸಲು ಬಂಡವಾಳ ಇಲ್ಲದ ಮತ್ತು ನಿರಾಶ್ರಿತ ಜನರಿಗೆ ಉದ್ಯೋಗವನ್ನು ದೊರಕಿಸಿದೆ. ಬೀದಿ ವ್ಯಾಪಾರಿಗಳಿಂದ ನಗರದ ಬಡಜನರಿಗೆ, ದುಡಿಯುವ ವರ್ಗಕ್ಕೆ ಮತ್ತು ಮಧ್ಯಮ ವರ್ಗಕ್ಕೆ ಕಡಿಮೆ ಬೆಲೆಯಲ್ಲಿ ಉತ್ತಮ ವಸ್ತುಗಳು ಮತ್ತು ಸೇವೆಗಳು ದೊರಕುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

ಬೀದಿ ವ್ಯಾಪಾರಿಗಳಿಗೆ ಕಳೆದ ಲಾಕ್‌ ಡೌನ್‌ ಸಮಯದಿಂದಲೇ ಹಲವು ಸಮಸ್ಯೆಗಳು ಉದ್ಭವವಾಗಿವೆ. ಬೀದಿ ವ್ಯಾಪಾರಿಗಳಿಗೆ ಮಾರ್ಚ್‌ 2020 ರಿಂದ ಜೂನ್‌ 2020 ರ ವರೆಗೂ ಘೋಷಿದ್ದ ಲಾಕ್‌ ಡೌನ್‌ ಸಮಯದಲ್ಲಿ ಬೀದಿ ವ್ಯಾಪಾರವನ್ನು ಅಗತ್ಯ ಸೇವೆ ಎಂದು ಘೋಷಿಸಿದ್ದರೂ, ಪೋಲೀಸರ ಕಿರುಕುಳದಿಂದ ಒಂದು ಪೈಸಾದಷ್ಟು ವ್ಯಾಪಾರವನ್ನು ಮಾಡಲು ಸಾಧ್ಯವಾಗಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಕಳೆದ ವರ್ಷದ ಕಷ್ಟ-ನಷ್ಟಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿ ಬೀದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡಿ ಎಂದು ಕೋರಿತ್ತಾದರೂ, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಅದರ ಬದಲಾಗಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಲ ನೀಡಲು ಮುಂದಾದರು. ಬೀದಿ ವ್ಯಾಪಾರಿಗಳು ದಿನನಿತ್ಯದ ಜೀವನ ನಡೆಸಲು ಮಾಡಿದ ಸಾಲಕ್ಕೆ ಕೇಂದ್ರ ಸರ್ಕಾರದ ಸಾಲವನ್ನು ತೀರಿಸುವ ಪರಿಸ್ಥಿತಿಗೆ ಬೀದಿ ವ್ಯಾಪಾರಿಗಳನ್ನು ನೂಕಲಾಗಿದೆ ಎಂದು ಸಂಘವು ಹೇಳಿದೆ.

ಸರ್ಕಾರ ಎರಡನೇ ಅಲೆಯನ್ನು ತಡೆಗಟ್ಟಲು ಹೇರಿರುವ ಅಘೋಷಿತ ಲಾಕ್‌ಡೌನ್‌ ಬೀದಿ ವ್ಯಾಪಾರಿಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಸಂಘವು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಹಣ್ಣು-ಹೂವು-ತರಕಾರಿ ವ್ಯಾಪಾರಿಗಳಿಗೆ ಮುಂಜಾನೆ 6 ರಿಂದ 10 ಗಂಟೆವರೆಗೂ ವ್ಯಾಪಾರ ಮಾಡಲು ಅವಕಾಶವಿದ್ದರೂ, ವ್ಯಾಪಾರಿಗಳು ಸಗಟು ಮಾರುಕಟ್ಟೆಗೆ ತಲುಪುವ ಹೊತ್ತಿಗೆ ಸರಕುಗಳು ಮಾರಾಟವಾಗಿರುತ್ತದೆ. ಜೊತೆಗೆ ಅಲ್ಲಿಂದ ಸರಕುಗಳನ್ನು ತಂದು ಮಾರಾಟ ಮಾಡಲು ಕೂಡಾ ಸಮಯ ಸಕಾಗುವುದಿಲ್ಲ. ಇದರಿಂದಾಗಿ ಸರಕುಗಳು ಹಾಳಾಗಿ ಹೋಗುತ್ತಿದೆ. ಈ ಮಧ್ಯೆ ಪೊಲೀಸರು ಕೂಡಾ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಘವು ಸರ್ಕಾರಕ್ಕೆ ದೂರಿಕೊಂಡಿದೆ.

ಲಾಕ್‌ಡೌನ್‌ ಮೂಲಕ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕು ಕಿತ್ತುಕೊಂಡಿರುವ ಸರ್ಕಾರ ಆರ್ಥಿಕ ನೆರವಾದರು ನೀಡಬೇಕು. ಆದರೆ ಇದುವರೆಗೂ ಸರ್ಕಾರದ ವತಿಯಿಂದ ಯಾವುದೇ ಘೋಷಣೆ ಆಗಿಲ್ಲ. ಜಗತ್ತಿನ ಹಲವು ದೇಶಗಳಲ್ಲಿ ಲಾಕ್‌‌ಡೌನ್‌ ಜೊತೆಗೆ ಬೀದಿ ವ್ಯಾಪಾರಿಗಳಿಗಾಗಿ ಪ್ರತ್ಯೇಕ ಆರ್ಥಿಕ ನೆರವು ಘೋಷಿಸಿದೆ. ಆದರೆ ಭಾರತದಲ್ಲಿ ಇಲ್ಲಿ ಬಡವರ ಕಷ್ಟ-ನಷ್ಟಗಳನ್ನು ಲೆಕ್ಕಿಸದೆ ಲಾಕ್‌ ಡೌನ್‌ ಜಾರಿ ಮಾಡಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಕಷ್ಟಗಳ ಜೊತೆಗೆ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿಯ ಪ್ರಮಾಣವನ್ನು ಕೂಡಾ ಕಡಿಮೆ ಮಾಡಲಾಗಿದೆ. ರಾಜ್ಯದ ಜನರು ಇಷ್ಟು ಕಷ್ಟದಲ್ಲಿ ಬಾಳುತ್ತಾ, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವೇ? ಎಂದು ಪತ್ರದಲ್ಲಿ ಸಂಘವು ಸರ್ಕಾರವನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ದೇಶವನ್ನು ನಾಶ ಮಾಡುವ ಹುಸಿ ಪಾಸಿಟಿವಿಟಿಯನ್ನು ಸತ್ಯ ಮತ್ತು ಧೈರ್ಯದಿಂದ ಎದುರಿಸಬೇಕಿದೆ

ಪತ್ರದಲ್ಲಿ ಸಂಘವು ಕೆಲವು ಅಗತ್ಯ ಕ್ರಮಗಳನ್ನು ಜರುಗಿಸುವಂತೆ ಸರ್ಕಾರಕ್ಕೆ ಸಲಹೆಯನ್ನು ಕೂಡಾ ನೀಡಿದೆ.

  • ದಿನನಿತ್ಯದ ವ್ಯಾಪಾರದ ಸಮಯವನ್ನು ಕನಿಷ್ಠ ಮಧ್ಯಾಹ್ನ 2 ಗಂಟೆವರೆಗೂ ವಿಸ್ತರಿಸುತ್ತಾ, ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು.
  • ಪೊಲೀಸರ ದೌರ್ಜನ್ಯ ಮತ್ತು ಒಕ್ಕಲೆಬ್ಬಿಸುವಿಕೆ ಆಗದಂತೆ ಆದೇಶ ನೀಡಬೇಕು.
  • ಮನೆ ಮಾಲೀಕರು ತಿಂಗಳ ಬಾಡಿಗೆಗೆ ಒತ್ತಾಯ ಮಾಡಬಾರದೆಂದು ಆದೇಶವನ್ನು ಹೊರಡಿಸಬೇಕು.
  • ಖಾಸಗಿ ಫೈನ್ಯಾನ್ಸ್‌ ಕಂಪನಿಗಳು ಸಾಲವನ್ನು ಮರುಪಾವತಿಸಲು ತೀವ್ರ ಒತ್ತಡ ಹಾಕುತ್ತಿದ್ದಾರೆ. ಹಾಗೆಯೇ ಹಲವು ಬೀದಿ ವ್ಯಾಪಾರಿಗಳು ಸಹಕಾರಿ ಬ್ಯಾಂಕ್‌ ಗಳಿಂದ ಸಾಲ ಪಡೆದಿದ್ದಾರೆ. ವ್ಯಾಪಾರ ಇಲ್ಲದ ಕಾರಣ ಸಾಲ ತೀರಿಸಲು ಕಷ್ಟವಾದ ಕಾರಣ ಸಾಲದ ಬಡ್ಡಿಯನ್ನು ಮನ್ನಾ ಮಾಡುವಂತೆ ಆದೇಶ ಹೊರಡಿಸಬೇಕು.
  • ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ನೀಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.
  • ಪ್ರತಿಯೋರ್ವ ಬೀದಿ ವ್ಯಾಪಾರಿಗೆ ಮೇ ಮತ್ತು ಜೂನ್‌ ತಿಂಗಳಿಗೆ 15,000/- ರೂ. ಗಳಷ್ಟು ಆರ್ಥಿಕ ನೆರವು ನೀಡಬೇಕು.
  • ಕೇರಳ ಮಾದರಿಯಲ್ಲಿ ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅಕ್ಕಿ, ಬೇಳೆ, ಕಾಳುಗಳು, ಅಡುಗೆ ಎಣ್ಣೆ, ಮಸಾಲೆ, ಇತ್ಯಾದಿಗಳನ್ನು ನೀಡಬೇಕು. ಕಡಿತವಾದ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸಬೇಕು.
  • ಬೀದಿ ವ್ಯಾಪಾರಿಗಳಿಗೂ ಸಹ ಇ.ಎಸ್‌.ಐ ಸ್ವರೂಪದಂತಹ ಸರ್ಕಾರಿ ಆರೋಗ್ಯ ವಿಮೆ ನೀಡಬೇಕು.
  • ನಗರ ಪ್ರದೇಶಗಳ ಕೊಳಗೇರಿಗಳಲ್ಲಿ, ವಲಸೆ ಕಾರ್ಮಿಕರ ವಾಸಸ್ಥಳಗಳಲ್ಲಿ ಸರ್ಕಾರವು ‘ಸಾಮೂಹಿಕ ಅಡುಗೆ ಮನೆ’ ರಚಿಸಿ ಅದರ ಮುಖಾಂತರ ನಗರದ ನಿರಾಶ್ರಿತರಿಗೆ ತಾಜಾ ಆಹಾರ ನೀಡಬೇಕು. ಇಂತಹ ಸಾಮೂಹಿಕ ಅಡುಗೆ ಮನೆಗಳನ್ನು ನಡೆಸಲು ಬೀದಿ ವ್ಯಾಪಾರಿಗಳ ಸೇವೆಯನ್ನು ಪಡೆಯಬೇಕು ಹಾಗೂ ಅವರಿಗೆ ವೇತನ ಅಥವಾ ಗುತ್ತಿಗೆ ನೀಡಬೇಕು.

ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಪತ್ರ  by naanugauri on Scribd

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...