Homeಕರ್ನಾಟಕ‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

- Advertisement -
- Advertisement -

ಕೊರೊನಾ ಎರಡನೇ ಅಲೆ ಹಾಗೂ ಸರ್ಕಾರ ಮತ್ತೆ ಹೇರಿರುವ ಲಾಕ್‌ಡೌನ್‌ನಿಂದಾಗಿ ಬೀದಿ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ, ಈ ಸಮಸ್ಯೆಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು AICCTU ಅಂಗ ಸಂಸ್ಥೆಯಾದ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘವು ಸರ್ಕಾರಕ್ಕೆ ಶುಕ್ರವಾರ ಮನವಿ ಪತ್ರ ಬರೆದಿದೆ.

ಪತ್ರದಲ್ಲಿ ಸಂಘವು, “ಕರ್ನಾಟಕದಾದ್ಯಂತ ಲಕ್ಷಾಂತರ ಜನ ಬೀದಿ ವ್ಯಾಪಾರಿಗಳಿದ್ದು ಬೆಂಗಳೂರು ನಗರದಲ್ಲೇ 2 ಲಕ್ಷದಷ್ಟು ಜನ ಬೀದಿ ವ್ಯಾಪಾರವನ್ನು ಜೀವನೋಪಾಯವನ್ನಾಗಿ ಆಧರಿಸಿದ್ದಾರೆ. ಬೀದಿ ವ್ಯಾಪಾರವು ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯನ್ನು ನೀಡುವುದಲ್ಲದೆ, ಲಕ್ಷಾಂತರ ಕಲಿಕೆ ಇಲ್ಲದೆ, ಶಕ್ತಿ ಇಲ್ಲದೆ, ಅಂಗಡಿ ಸ್ಥಾಪಿಸಲು ಬಂಡವಾಳ ಇಲ್ಲದ ಮತ್ತು ನಿರಾಶ್ರಿತ ಜನರಿಗೆ ಉದ್ಯೋಗವನ್ನು ದೊರಕಿಸಿದೆ. ಬೀದಿ ವ್ಯಾಪಾರಿಗಳಿಂದ ನಗರದ ಬಡಜನರಿಗೆ, ದುಡಿಯುವ ವರ್ಗಕ್ಕೆ ಮತ್ತು ಮಧ್ಯಮ ವರ್ಗಕ್ಕೆ ಕಡಿಮೆ ಬೆಲೆಯಲ್ಲಿ ಉತ್ತಮ ವಸ್ತುಗಳು ಮತ್ತು ಸೇವೆಗಳು ದೊರಕುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

ಬೀದಿ ವ್ಯಾಪಾರಿಗಳಿಗೆ ಕಳೆದ ಲಾಕ್‌ ಡೌನ್‌ ಸಮಯದಿಂದಲೇ ಹಲವು ಸಮಸ್ಯೆಗಳು ಉದ್ಭವವಾಗಿವೆ. ಬೀದಿ ವ್ಯಾಪಾರಿಗಳಿಗೆ ಮಾರ್ಚ್‌ 2020 ರಿಂದ ಜೂನ್‌ 2020 ರ ವರೆಗೂ ಘೋಷಿದ್ದ ಲಾಕ್‌ ಡೌನ್‌ ಸಮಯದಲ್ಲಿ ಬೀದಿ ವ್ಯಾಪಾರವನ್ನು ಅಗತ್ಯ ಸೇವೆ ಎಂದು ಘೋಷಿಸಿದ್ದರೂ, ಪೋಲೀಸರ ಕಿರುಕುಳದಿಂದ ಒಂದು ಪೈಸಾದಷ್ಟು ವ್ಯಾಪಾರವನ್ನು ಮಾಡಲು ಸಾಧ್ಯವಾಗಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಕಳೆದ ವರ್ಷದ ಕಷ್ಟ-ನಷ್ಟಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿ ಬೀದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡಿ ಎಂದು ಕೋರಿತ್ತಾದರೂ, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಅದರ ಬದಲಾಗಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಲ ನೀಡಲು ಮುಂದಾದರು. ಬೀದಿ ವ್ಯಾಪಾರಿಗಳು ದಿನನಿತ್ಯದ ಜೀವನ ನಡೆಸಲು ಮಾಡಿದ ಸಾಲಕ್ಕೆ ಕೇಂದ್ರ ಸರ್ಕಾರದ ಸಾಲವನ್ನು ತೀರಿಸುವ ಪರಿಸ್ಥಿತಿಗೆ ಬೀದಿ ವ್ಯಾಪಾರಿಗಳನ್ನು ನೂಕಲಾಗಿದೆ ಎಂದು ಸಂಘವು ಹೇಳಿದೆ.

ಸರ್ಕಾರ ಎರಡನೇ ಅಲೆಯನ್ನು ತಡೆಗಟ್ಟಲು ಹೇರಿರುವ ಅಘೋಷಿತ ಲಾಕ್‌ಡೌನ್‌ ಬೀದಿ ವ್ಯಾಪಾರಿಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಸಂಘವು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಹಣ್ಣು-ಹೂವು-ತರಕಾರಿ ವ್ಯಾಪಾರಿಗಳಿಗೆ ಮುಂಜಾನೆ 6 ರಿಂದ 10 ಗಂಟೆವರೆಗೂ ವ್ಯಾಪಾರ ಮಾಡಲು ಅವಕಾಶವಿದ್ದರೂ, ವ್ಯಾಪಾರಿಗಳು ಸಗಟು ಮಾರುಕಟ್ಟೆಗೆ ತಲುಪುವ ಹೊತ್ತಿಗೆ ಸರಕುಗಳು ಮಾರಾಟವಾಗಿರುತ್ತದೆ. ಜೊತೆಗೆ ಅಲ್ಲಿಂದ ಸರಕುಗಳನ್ನು ತಂದು ಮಾರಾಟ ಮಾಡಲು ಕೂಡಾ ಸಮಯ ಸಕಾಗುವುದಿಲ್ಲ. ಇದರಿಂದಾಗಿ ಸರಕುಗಳು ಹಾಳಾಗಿ ಹೋಗುತ್ತಿದೆ. ಈ ಮಧ್ಯೆ ಪೊಲೀಸರು ಕೂಡಾ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಘವು ಸರ್ಕಾರಕ್ಕೆ ದೂರಿಕೊಂಡಿದೆ.

ಲಾಕ್‌ಡೌನ್‌ ಮೂಲಕ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕು ಕಿತ್ತುಕೊಂಡಿರುವ ಸರ್ಕಾರ ಆರ್ಥಿಕ ನೆರವಾದರು ನೀಡಬೇಕು. ಆದರೆ ಇದುವರೆಗೂ ಸರ್ಕಾರದ ವತಿಯಿಂದ ಯಾವುದೇ ಘೋಷಣೆ ಆಗಿಲ್ಲ. ಜಗತ್ತಿನ ಹಲವು ದೇಶಗಳಲ್ಲಿ ಲಾಕ್‌‌ಡೌನ್‌ ಜೊತೆಗೆ ಬೀದಿ ವ್ಯಾಪಾರಿಗಳಿಗಾಗಿ ಪ್ರತ್ಯೇಕ ಆರ್ಥಿಕ ನೆರವು ಘೋಷಿಸಿದೆ. ಆದರೆ ಭಾರತದಲ್ಲಿ ಇಲ್ಲಿ ಬಡವರ ಕಷ್ಟ-ನಷ್ಟಗಳನ್ನು ಲೆಕ್ಕಿಸದೆ ಲಾಕ್‌ ಡೌನ್‌ ಜಾರಿ ಮಾಡಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಕಷ್ಟಗಳ ಜೊತೆಗೆ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿಯ ಪ್ರಮಾಣವನ್ನು ಕೂಡಾ ಕಡಿಮೆ ಮಾಡಲಾಗಿದೆ. ರಾಜ್ಯದ ಜನರು ಇಷ್ಟು ಕಷ್ಟದಲ್ಲಿ ಬಾಳುತ್ತಾ, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವೇ? ಎಂದು ಪತ್ರದಲ್ಲಿ ಸಂಘವು ಸರ್ಕಾರವನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ದೇಶವನ್ನು ನಾಶ ಮಾಡುವ ಹುಸಿ ಪಾಸಿಟಿವಿಟಿಯನ್ನು ಸತ್ಯ ಮತ್ತು ಧೈರ್ಯದಿಂದ ಎದುರಿಸಬೇಕಿದೆ

ಪತ್ರದಲ್ಲಿ ಸಂಘವು ಕೆಲವು ಅಗತ್ಯ ಕ್ರಮಗಳನ್ನು ಜರುಗಿಸುವಂತೆ ಸರ್ಕಾರಕ್ಕೆ ಸಲಹೆಯನ್ನು ಕೂಡಾ ನೀಡಿದೆ.

  • ದಿನನಿತ್ಯದ ವ್ಯಾಪಾರದ ಸಮಯವನ್ನು ಕನಿಷ್ಠ ಮಧ್ಯಾಹ್ನ 2 ಗಂಟೆವರೆಗೂ ವಿಸ್ತರಿಸುತ್ತಾ, ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು.
  • ಪೊಲೀಸರ ದೌರ್ಜನ್ಯ ಮತ್ತು ಒಕ್ಕಲೆಬ್ಬಿಸುವಿಕೆ ಆಗದಂತೆ ಆದೇಶ ನೀಡಬೇಕು.
  • ಮನೆ ಮಾಲೀಕರು ತಿಂಗಳ ಬಾಡಿಗೆಗೆ ಒತ್ತಾಯ ಮಾಡಬಾರದೆಂದು ಆದೇಶವನ್ನು ಹೊರಡಿಸಬೇಕು.
  • ಖಾಸಗಿ ಫೈನ್ಯಾನ್ಸ್‌ ಕಂಪನಿಗಳು ಸಾಲವನ್ನು ಮರುಪಾವತಿಸಲು ತೀವ್ರ ಒತ್ತಡ ಹಾಕುತ್ತಿದ್ದಾರೆ. ಹಾಗೆಯೇ ಹಲವು ಬೀದಿ ವ್ಯಾಪಾರಿಗಳು ಸಹಕಾರಿ ಬ್ಯಾಂಕ್‌ ಗಳಿಂದ ಸಾಲ ಪಡೆದಿದ್ದಾರೆ. ವ್ಯಾಪಾರ ಇಲ್ಲದ ಕಾರಣ ಸಾಲ ತೀರಿಸಲು ಕಷ್ಟವಾದ ಕಾರಣ ಸಾಲದ ಬಡ್ಡಿಯನ್ನು ಮನ್ನಾ ಮಾಡುವಂತೆ ಆದೇಶ ಹೊರಡಿಸಬೇಕು.
  • ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ನೀಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.
  • ಪ್ರತಿಯೋರ್ವ ಬೀದಿ ವ್ಯಾಪಾರಿಗೆ ಮೇ ಮತ್ತು ಜೂನ್‌ ತಿಂಗಳಿಗೆ 15,000/- ರೂ. ಗಳಷ್ಟು ಆರ್ಥಿಕ ನೆರವು ನೀಡಬೇಕು.
  • ಕೇರಳ ಮಾದರಿಯಲ್ಲಿ ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅಕ್ಕಿ, ಬೇಳೆ, ಕಾಳುಗಳು, ಅಡುಗೆ ಎಣ್ಣೆ, ಮಸಾಲೆ, ಇತ್ಯಾದಿಗಳನ್ನು ನೀಡಬೇಕು. ಕಡಿತವಾದ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸಬೇಕು.
  • ಬೀದಿ ವ್ಯಾಪಾರಿಗಳಿಗೂ ಸಹ ಇ.ಎಸ್‌.ಐ ಸ್ವರೂಪದಂತಹ ಸರ್ಕಾರಿ ಆರೋಗ್ಯ ವಿಮೆ ನೀಡಬೇಕು.
  • ನಗರ ಪ್ರದೇಶಗಳ ಕೊಳಗೇರಿಗಳಲ್ಲಿ, ವಲಸೆ ಕಾರ್ಮಿಕರ ವಾಸಸ್ಥಳಗಳಲ್ಲಿ ಸರ್ಕಾರವು ‘ಸಾಮೂಹಿಕ ಅಡುಗೆ ಮನೆ’ ರಚಿಸಿ ಅದರ ಮುಖಾಂತರ ನಗರದ ನಿರಾಶ್ರಿತರಿಗೆ ತಾಜಾ ಆಹಾರ ನೀಡಬೇಕು. ಇಂತಹ ಸಾಮೂಹಿಕ ಅಡುಗೆ ಮನೆಗಳನ್ನು ನಡೆಸಲು ಬೀದಿ ವ್ಯಾಪಾರಿಗಳ ಸೇವೆಯನ್ನು ಪಡೆಯಬೇಕು ಹಾಗೂ ಅವರಿಗೆ ವೇತನ ಅಥವಾ ಗುತ್ತಿಗೆ ನೀಡಬೇಕು.

ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಪತ್ರ  by naanugauri on Scribd

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...