Homeಕರ್ನಾಟಕ‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

‘ಬಡವರ ಕಷ್ಟಗಳನ್ನು ಲೆಕ್ಕಿಸದೆ ಲಾಕ್‌‌ಡೌನ್‌’: ಬೀದಿ ವ್ಯಾಪಾರಿಗಳ ಸಂಘದಿಂದ ಸರ್ಕಾರಕ್ಕೆ ಪತ್ರ

- Advertisement -
- Advertisement -

ಕೊರೊನಾ ಎರಡನೇ ಅಲೆ ಹಾಗೂ ಸರ್ಕಾರ ಮತ್ತೆ ಹೇರಿರುವ ಲಾಕ್‌ಡೌನ್‌ನಿಂದಾಗಿ ಬೀದಿ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ, ಈ ಸಮಸ್ಯೆಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು AICCTU ಅಂಗ ಸಂಸ್ಥೆಯಾದ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘವು ಸರ್ಕಾರಕ್ಕೆ ಶುಕ್ರವಾರ ಮನವಿ ಪತ್ರ ಬರೆದಿದೆ.

ಪತ್ರದಲ್ಲಿ ಸಂಘವು, “ಕರ್ನಾಟಕದಾದ್ಯಂತ ಲಕ್ಷಾಂತರ ಜನ ಬೀದಿ ವ್ಯಾಪಾರಿಗಳಿದ್ದು ಬೆಂಗಳೂರು ನಗರದಲ್ಲೇ 2 ಲಕ್ಷದಷ್ಟು ಜನ ಬೀದಿ ವ್ಯಾಪಾರವನ್ನು ಜೀವನೋಪಾಯವನ್ನಾಗಿ ಆಧರಿಸಿದ್ದಾರೆ. ಬೀದಿ ವ್ಯಾಪಾರವು ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯನ್ನು ನೀಡುವುದಲ್ಲದೆ, ಲಕ್ಷಾಂತರ ಕಲಿಕೆ ಇಲ್ಲದೆ, ಶಕ್ತಿ ಇಲ್ಲದೆ, ಅಂಗಡಿ ಸ್ಥಾಪಿಸಲು ಬಂಡವಾಳ ಇಲ್ಲದ ಮತ್ತು ನಿರಾಶ್ರಿತ ಜನರಿಗೆ ಉದ್ಯೋಗವನ್ನು ದೊರಕಿಸಿದೆ. ಬೀದಿ ವ್ಯಾಪಾರಿಗಳಿಂದ ನಗರದ ಬಡಜನರಿಗೆ, ದುಡಿಯುವ ವರ್ಗಕ್ಕೆ ಮತ್ತು ಮಧ್ಯಮ ವರ್ಗಕ್ಕೆ ಕಡಿಮೆ ಬೆಲೆಯಲ್ಲಿ ಉತ್ತಮ ವಸ್ತುಗಳು ಮತ್ತು ಸೇವೆಗಳು ದೊರಕುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

ಬೀದಿ ವ್ಯಾಪಾರಿಗಳಿಗೆ ಕಳೆದ ಲಾಕ್‌ ಡೌನ್‌ ಸಮಯದಿಂದಲೇ ಹಲವು ಸಮಸ್ಯೆಗಳು ಉದ್ಭವವಾಗಿವೆ. ಬೀದಿ ವ್ಯಾಪಾರಿಗಳಿಗೆ ಮಾರ್ಚ್‌ 2020 ರಿಂದ ಜೂನ್‌ 2020 ರ ವರೆಗೂ ಘೋಷಿದ್ದ ಲಾಕ್‌ ಡೌನ್‌ ಸಮಯದಲ್ಲಿ ಬೀದಿ ವ್ಯಾಪಾರವನ್ನು ಅಗತ್ಯ ಸೇವೆ ಎಂದು ಘೋಷಿಸಿದ್ದರೂ, ಪೋಲೀಸರ ಕಿರುಕುಳದಿಂದ ಒಂದು ಪೈಸಾದಷ್ಟು ವ್ಯಾಪಾರವನ್ನು ಮಾಡಲು ಸಾಧ್ಯವಾಗಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಕಳೆದ ವರ್ಷದ ಕಷ್ಟ-ನಷ್ಟಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿ ಬೀದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡಿ ಎಂದು ಕೋರಿತ್ತಾದರೂ, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಅದರ ಬದಲಾಗಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಲ ನೀಡಲು ಮುಂದಾದರು. ಬೀದಿ ವ್ಯಾಪಾರಿಗಳು ದಿನನಿತ್ಯದ ಜೀವನ ನಡೆಸಲು ಮಾಡಿದ ಸಾಲಕ್ಕೆ ಕೇಂದ್ರ ಸರ್ಕಾರದ ಸಾಲವನ್ನು ತೀರಿಸುವ ಪರಿಸ್ಥಿತಿಗೆ ಬೀದಿ ವ್ಯಾಪಾರಿಗಳನ್ನು ನೂಕಲಾಗಿದೆ ಎಂದು ಸಂಘವು ಹೇಳಿದೆ.

ಸರ್ಕಾರ ಎರಡನೇ ಅಲೆಯನ್ನು ತಡೆಗಟ್ಟಲು ಹೇರಿರುವ ಅಘೋಷಿತ ಲಾಕ್‌ಡೌನ್‌ ಬೀದಿ ವ್ಯಾಪಾರಿಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಸಂಘವು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಹಣ್ಣು-ಹೂವು-ತರಕಾರಿ ವ್ಯಾಪಾರಿಗಳಿಗೆ ಮುಂಜಾನೆ 6 ರಿಂದ 10 ಗಂಟೆವರೆಗೂ ವ್ಯಾಪಾರ ಮಾಡಲು ಅವಕಾಶವಿದ್ದರೂ, ವ್ಯಾಪಾರಿಗಳು ಸಗಟು ಮಾರುಕಟ್ಟೆಗೆ ತಲುಪುವ ಹೊತ್ತಿಗೆ ಸರಕುಗಳು ಮಾರಾಟವಾಗಿರುತ್ತದೆ. ಜೊತೆಗೆ ಅಲ್ಲಿಂದ ಸರಕುಗಳನ್ನು ತಂದು ಮಾರಾಟ ಮಾಡಲು ಕೂಡಾ ಸಮಯ ಸಕಾಗುವುದಿಲ್ಲ. ಇದರಿಂದಾಗಿ ಸರಕುಗಳು ಹಾಳಾಗಿ ಹೋಗುತ್ತಿದೆ. ಈ ಮಧ್ಯೆ ಪೊಲೀಸರು ಕೂಡಾ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಘವು ಸರ್ಕಾರಕ್ಕೆ ದೂರಿಕೊಂಡಿದೆ.

ಲಾಕ್‌ಡೌನ್‌ ಮೂಲಕ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕು ಕಿತ್ತುಕೊಂಡಿರುವ ಸರ್ಕಾರ ಆರ್ಥಿಕ ನೆರವಾದರು ನೀಡಬೇಕು. ಆದರೆ ಇದುವರೆಗೂ ಸರ್ಕಾರದ ವತಿಯಿಂದ ಯಾವುದೇ ಘೋಷಣೆ ಆಗಿಲ್ಲ. ಜಗತ್ತಿನ ಹಲವು ದೇಶಗಳಲ್ಲಿ ಲಾಕ್‌‌ಡೌನ್‌ ಜೊತೆಗೆ ಬೀದಿ ವ್ಯಾಪಾರಿಗಳಿಗಾಗಿ ಪ್ರತ್ಯೇಕ ಆರ್ಥಿಕ ನೆರವು ಘೋಷಿಸಿದೆ. ಆದರೆ ಭಾರತದಲ್ಲಿ ಇಲ್ಲಿ ಬಡವರ ಕಷ್ಟ-ನಷ್ಟಗಳನ್ನು ಲೆಕ್ಕಿಸದೆ ಲಾಕ್‌ ಡೌನ್‌ ಜಾರಿ ಮಾಡಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಕಷ್ಟಗಳ ಜೊತೆಗೆ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿಯ ಪ್ರಮಾಣವನ್ನು ಕೂಡಾ ಕಡಿಮೆ ಮಾಡಲಾಗಿದೆ. ರಾಜ್ಯದ ಜನರು ಇಷ್ಟು ಕಷ್ಟದಲ್ಲಿ ಬಾಳುತ್ತಾ, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವೇ? ಎಂದು ಪತ್ರದಲ್ಲಿ ಸಂಘವು ಸರ್ಕಾರವನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ದೇಶವನ್ನು ನಾಶ ಮಾಡುವ ಹುಸಿ ಪಾಸಿಟಿವಿಟಿಯನ್ನು ಸತ್ಯ ಮತ್ತು ಧೈರ್ಯದಿಂದ ಎದುರಿಸಬೇಕಿದೆ

ಪತ್ರದಲ್ಲಿ ಸಂಘವು ಕೆಲವು ಅಗತ್ಯ ಕ್ರಮಗಳನ್ನು ಜರುಗಿಸುವಂತೆ ಸರ್ಕಾರಕ್ಕೆ ಸಲಹೆಯನ್ನು ಕೂಡಾ ನೀಡಿದೆ.

  • ದಿನನಿತ್ಯದ ವ್ಯಾಪಾರದ ಸಮಯವನ್ನು ಕನಿಷ್ಠ ಮಧ್ಯಾಹ್ನ 2 ಗಂಟೆವರೆಗೂ ವಿಸ್ತರಿಸುತ್ತಾ, ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕು.
  • ಪೊಲೀಸರ ದೌರ್ಜನ್ಯ ಮತ್ತು ಒಕ್ಕಲೆಬ್ಬಿಸುವಿಕೆ ಆಗದಂತೆ ಆದೇಶ ನೀಡಬೇಕು.
  • ಮನೆ ಮಾಲೀಕರು ತಿಂಗಳ ಬಾಡಿಗೆಗೆ ಒತ್ತಾಯ ಮಾಡಬಾರದೆಂದು ಆದೇಶವನ್ನು ಹೊರಡಿಸಬೇಕು.
  • ಖಾಸಗಿ ಫೈನ್ಯಾನ್ಸ್‌ ಕಂಪನಿಗಳು ಸಾಲವನ್ನು ಮರುಪಾವತಿಸಲು ತೀವ್ರ ಒತ್ತಡ ಹಾಕುತ್ತಿದ್ದಾರೆ. ಹಾಗೆಯೇ ಹಲವು ಬೀದಿ ವ್ಯಾಪಾರಿಗಳು ಸಹಕಾರಿ ಬ್ಯಾಂಕ್‌ ಗಳಿಂದ ಸಾಲ ಪಡೆದಿದ್ದಾರೆ. ವ್ಯಾಪಾರ ಇಲ್ಲದ ಕಾರಣ ಸಾಲ ತೀರಿಸಲು ಕಷ್ಟವಾದ ಕಾರಣ ಸಾಲದ ಬಡ್ಡಿಯನ್ನು ಮನ್ನಾ ಮಾಡುವಂತೆ ಆದೇಶ ಹೊರಡಿಸಬೇಕು.
  • ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಅಡಿಯಲ್ಲಿ ನೀಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.
  • ಪ್ರತಿಯೋರ್ವ ಬೀದಿ ವ್ಯಾಪಾರಿಗೆ ಮೇ ಮತ್ತು ಜೂನ್‌ ತಿಂಗಳಿಗೆ 15,000/- ರೂ. ಗಳಷ್ಟು ಆರ್ಥಿಕ ನೆರವು ನೀಡಬೇಕು.
  • ಕೇರಳ ಮಾದರಿಯಲ್ಲಿ ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅಕ್ಕಿ, ಬೇಳೆ, ಕಾಳುಗಳು, ಅಡುಗೆ ಎಣ್ಣೆ, ಮಸಾಲೆ, ಇತ್ಯಾದಿಗಳನ್ನು ನೀಡಬೇಕು. ಕಡಿತವಾದ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸಬೇಕು.
  • ಬೀದಿ ವ್ಯಾಪಾರಿಗಳಿಗೂ ಸಹ ಇ.ಎಸ್‌.ಐ ಸ್ವರೂಪದಂತಹ ಸರ್ಕಾರಿ ಆರೋಗ್ಯ ವಿಮೆ ನೀಡಬೇಕು.
  • ನಗರ ಪ್ರದೇಶಗಳ ಕೊಳಗೇರಿಗಳಲ್ಲಿ, ವಲಸೆ ಕಾರ್ಮಿಕರ ವಾಸಸ್ಥಳಗಳಲ್ಲಿ ಸರ್ಕಾರವು ‘ಸಾಮೂಹಿಕ ಅಡುಗೆ ಮನೆ’ ರಚಿಸಿ ಅದರ ಮುಖಾಂತರ ನಗರದ ನಿರಾಶ್ರಿತರಿಗೆ ತಾಜಾ ಆಹಾರ ನೀಡಬೇಕು. ಇಂತಹ ಸಾಮೂಹಿಕ ಅಡುಗೆ ಮನೆಗಳನ್ನು ನಡೆಸಲು ಬೀದಿ ವ್ಯಾಪಾರಿಗಳ ಸೇವೆಯನ್ನು ಪಡೆಯಬೇಕು ಹಾಗೂ ಅವರಿಗೆ ವೇತನ ಅಥವಾ ಗುತ್ತಿಗೆ ನೀಡಬೇಕು.

ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಪತ್ರ  by naanugauri on Scribd

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...