Homeಮುಖಪುಟನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಪ್ರಸ್ತುತ ಕೋವಿಡ್ ಬಿಕ್ಕಟ್ಟು ಉಂಟಾಗಿರುವ ಈ ದುರಂತದ ಸಂದರ್ಭದಲ್ಲಿ ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ಕೇರಳ ಎದುರಿಸುತ್ತಿರುವ ಬಗೆ ವಿಷಯದ ಕುರಿತು ಬ್ಯುಸಿನೆಸ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಇಂದಿನ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸಲು ನೀವು ಏನು ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಎಡಪಂಥೀಯಳು. ಪ್ರಸ್ತುತ ಈ ದೇಶದ ಆರೋಗ್ಯ ನೀತಿಯ ಬಗ್ಗೆ ನನಗೆ ಹೇಳಲು ಏನು ಇಲ್ಲ. ಆದರೆ ಈ ಸಮಯದಲ್ಲಿ ಕೇಂದ್ರದಲ್ಲಿ ಎಡಪಂಥೀಯರು ಅಧಿಕಾರದಲ್ಲಿದ್ದರೆ, ನಾವು ಆರೋಗ್ಯ ಮತ್ತು ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು. ಆರೋಗ್ಯ ವ್ಯವಸ್ಥೆಯ ಮೇಲೆ ಸರ್ಕಾರವು ನಿಯಂತ್ರಣ ಹೊಂದಿದ್ದರೆ ಪ್ರತಿಯೊಬ್ಬರೂ ಬಡವರು ಅಥವಾ ಶ್ರೀಮಂತರು ಎಂಬ ಬೇಧವಿಲ್ಲದೆ ಸಮಾನ ಚಿಕಿತ್ಸೆ ಪಡೆಯುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಸ್ತುತ ಸರ್ಕಾರವು ಬಂಡವಾಳಶಾಹಿ ಸಿದ್ಧಾಂತದ ಪರವಾಗಿದೆ. ಆದರೆ ಬಂಡವಾಳಶಾಹಿ ನೀತಿಯೊಳಗೂ ಸಹ ಅವರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಪ್ರಯತ್ನಿಸಬೇಕು. ಅವರು ಬಡವರು ಮತ್ತು ದುರ್ಬಲ ಜನರನ್ನು ಶೋಷಿಸದಂತೆ ಖಾಸಗಿ ಆರೋಗ್ಯ ವ್ಯವಸ್ಥೆಯನ್ನು ನಿಯಂತ್ರಿಸಲು ಪ್ರಯತ್ನಿಸಬೇಕು ಎಂದು ಶೈಲಜಾರವರು ತಿಳಿಸಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನಿಂದ ನಾವು ಕಲಿಯಬೇಕಾದ ಪಾಠಗಳು ಯಾವುವು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಸಾಂಕ್ರಾಮಿಕದಿಂದ ನಮಗೆ ಎರಡು ಪ್ರಮುಖ ಪಾಠಗಳಿವೆ ಎಂದು ನಾನು ಭಾವಿಸುತ್ತೇನೆ. ಒಂದು, ನಮ್ಮ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ದೇಶಕ್ಕೆ ಸರಿಯಾದ ಯೋಜನೆ ಮತ್ತು ವಿಕೇಂದ್ರೀಕೃತ ಅನುಷ್ಠಾನದ ಕಾರ್ಯವಿಧಾನಗಳು ಬೇಕಾಗುತ್ತವೆ. ಎರಡನೇದಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು ಯಾವುದೇ ವಿಳಂಬ ಮಾಡಬಾರದು. ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು. ಕ್ಯೂಬಾದಂತಹ ದೇಶಗಳು ಆರೋಗ್ಯ ರಕ್ಷಣೆಯಲ್ಲಿ ಹೆಚ್ಚು ಹೂಡಿಕೆ ಮಾಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಕೇರಳದಲ್ಲಿ ನಾವು ಉತ್ತಮ ಕಟ್ಟಡಗಳು, ಶೌಚಾಲಯಗಳು, ಪ್ರಯೋಗಾಲಯಗಳು ಮತ್ತು ಹೊರ ರೋಗಿಗಳ ಕೊಠಡಿಗಳೊಂದಿಗೆ ನಮ್ಮ ಪಿಎಚ್‌ಸಿ (ಪ್ರಾಥಮಿಕ ಆರೋಗ್ಯ ಕೇಂದ್ರ) ಗಳನ್ನು ಆಕರ್ಷಕಗೊಳಿಸಿದ್ದೇವೆ. ಸ್ಥಳೀಯ ಸ್ವ-ಸರ್ಕಾರಗಳು ಮತ್ತು ಕೆಐಐಎಫ್‌ಬಿ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಮೂಲಸೌಕರ್ಯವನ್ನು ನಿರ್ಮಿಸುವ ಕುರಿತು ನಾವು ಪಂಚಾಯತ್ ಅಧ್ಯಕ್ಷರು ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ತರಬೇತಿ ನೀಡಿದ್ದೇವೆ. ಕೇಂದ್ರದ ಯೋಜನಾ ನಿಧಿಯ ಸೀಮಿತ ಲಭ್ಯತೆಯೊಳಗೆ ಅವರು ಈ ಕೆಲಸದಲ್ಲಿ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಮೂಲಸೌಕರ್ಯವನ್ನು ನಿರ್ಮಿಸಲು ಬಹಳಷ್ಟು ಜನರು ಆರ್ಥಿಕವಾಗಿ ಸಹಕರಿಸಿದ್ದಾರೆ. ರಾಜ್ಯದ 946 ಪಿಎಚ್‌ಸಿಗಳಲ್ಲಿ 617 ಈಗ ಹೊಸ ಕಟ್ಟಡಗಳನ್ನು ಹೊಂದಿವೆ. ಅದು ಸಾರ್ವಜನಿಕ ಚಳುವಳಿ. ಈ 100 ಕ್ಕೂ ಹೆಚ್ಚು ಪಿಎಚ್‌ಸಿಗಳು ರಾಷ್ಟ್ರೀಯ ಗುಣಮಟ್ಟ ಖಾತರಿ ಮಾನದಂಡಗಳ (ಎನ್‌ಕ್ಯೂಎಎಸ್) ಪ್ರಮಾಣೀಕರಣವನ್ನು ಪಡೆದಿವೆ. ನಮ್ಮ ದ್ವಿತೀಯ ಹಂತದ ಆಸ್ಪತ್ರೆಗಳನ್ನು ತಾಲ್ಲೂಕು ಮಟ್ಟದಲ್ಲಿ ಸುಧಾರಿಸಿದ್ದೇವೆ. ಕೆಲವು ಆಸ್ಪತ್ರೆಗಳು ಕಾರ್ಪೊರೇಟ್ ಆಸ್ಪತ್ರೆಗಿಂತ ಹೆಚ್ಚಿನ ಸೌಲಭ್ಯಗಳನ್ನು ಹೊಂದಿವೆ. ತೃತೀಯ ಆರೋಗ್ಯ ರಕ್ಷಣೆಯೂ ಸುಧಾರಿಸಿದೆ. ವೈದ್ಯಕೀಯ ಕಾಲೇಜುಗಳನ್ನು ಆಧುನೀಕರಿಸಲಾಯಿತು. ಹೊಸ ವೈದ್ಯಕೀಯ ಕಾಲೇಜುಗಳು ಪ್ರಾರಂಭವಾದವು. ಈ ಆಸ್ಪತ್ರೆಗಳಲ್ಲಿ ಈಗ ಹೆಚ್ಚಿನ ಆಧುನಿಕ ಉಪಕರಣಗಳು ಲಭ್ಯವಿದೆ. ನಾವು ಔಷಧ ಸಂಶೋಧನೆಯನ್ನು ಉತ್ತೇಜಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

2016 ರವರೆಗೆ ರಾಜ್ಯದ ಶೇಕಡಾ 37 ರಷ್ಟು ಜನರು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದರು. ಈಗ ರಾಜ್ಯದ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಹೆಚ್ಚು ಜನರು ಯಾವುದೇ ಹಿಂಜರಿಕೆಯಿಲ್ಲದೆ ಸರ್ಕಾರಿ ಆಸ್ಪತ್ರೆಗಳನ್ನು ಆರಿಸಿಕೊಳ್ಳುತ್ತಾರೆ. ಈ ವ್ಯವಸ್ಥಿತ ಬದಲಾವಣೆಯು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಿತು. ಆರೋಗ್ಯ ಪಾಲನೆಯು ಕೈಗೆಟುಕುವ ದರದಲ್ಲಿ ಸ್ನೇಹಪರವಾಗಿರಬೇಕು ಎಂಬುದು ನಮ್ಮ ನೀತಿ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...