Homeಮುಖಪುಟನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಪ್ರಸ್ತುತ ಕೋವಿಡ್ ಬಿಕ್ಕಟ್ಟು ಉಂಟಾಗಿರುವ ಈ ದುರಂತದ ಸಂದರ್ಭದಲ್ಲಿ ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ಕೇರಳ ಎದುರಿಸುತ್ತಿರುವ ಬಗೆ ವಿಷಯದ ಕುರಿತು ಬ್ಯುಸಿನೆಸ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಇಂದಿನ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸಲು ನೀವು ಏನು ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಎಡಪಂಥೀಯಳು. ಪ್ರಸ್ತುತ ಈ ದೇಶದ ಆರೋಗ್ಯ ನೀತಿಯ ಬಗ್ಗೆ ನನಗೆ ಹೇಳಲು ಏನು ಇಲ್ಲ. ಆದರೆ ಈ ಸಮಯದಲ್ಲಿ ಕೇಂದ್ರದಲ್ಲಿ ಎಡಪಂಥೀಯರು ಅಧಿಕಾರದಲ್ಲಿದ್ದರೆ, ನಾವು ಆರೋಗ್ಯ ಮತ್ತು ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು. ಆರೋಗ್ಯ ವ್ಯವಸ್ಥೆಯ ಮೇಲೆ ಸರ್ಕಾರವು ನಿಯಂತ್ರಣ ಹೊಂದಿದ್ದರೆ ಪ್ರತಿಯೊಬ್ಬರೂ ಬಡವರು ಅಥವಾ ಶ್ರೀಮಂತರು ಎಂಬ ಬೇಧವಿಲ್ಲದೆ ಸಮಾನ ಚಿಕಿತ್ಸೆ ಪಡೆಯುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಸ್ತುತ ಸರ್ಕಾರವು ಬಂಡವಾಳಶಾಹಿ ಸಿದ್ಧಾಂತದ ಪರವಾಗಿದೆ. ಆದರೆ ಬಂಡವಾಳಶಾಹಿ ನೀತಿಯೊಳಗೂ ಸಹ ಅವರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಪ್ರಯತ್ನಿಸಬೇಕು. ಅವರು ಬಡವರು ಮತ್ತು ದುರ್ಬಲ ಜನರನ್ನು ಶೋಷಿಸದಂತೆ ಖಾಸಗಿ ಆರೋಗ್ಯ ವ್ಯವಸ್ಥೆಯನ್ನು ನಿಯಂತ್ರಿಸಲು ಪ್ರಯತ್ನಿಸಬೇಕು ಎಂದು ಶೈಲಜಾರವರು ತಿಳಿಸಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನಿಂದ ನಾವು ಕಲಿಯಬೇಕಾದ ಪಾಠಗಳು ಯಾವುವು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಸಾಂಕ್ರಾಮಿಕದಿಂದ ನಮಗೆ ಎರಡು ಪ್ರಮುಖ ಪಾಠಗಳಿವೆ ಎಂದು ನಾನು ಭಾವಿಸುತ್ತೇನೆ. ಒಂದು, ನಮ್ಮ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ದೇಶಕ್ಕೆ ಸರಿಯಾದ ಯೋಜನೆ ಮತ್ತು ವಿಕೇಂದ್ರೀಕೃತ ಅನುಷ್ಠಾನದ ಕಾರ್ಯವಿಧಾನಗಳು ಬೇಕಾಗುತ್ತವೆ. ಎರಡನೇದಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು ಯಾವುದೇ ವಿಳಂಬ ಮಾಡಬಾರದು. ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು. ಕ್ಯೂಬಾದಂತಹ ದೇಶಗಳು ಆರೋಗ್ಯ ರಕ್ಷಣೆಯಲ್ಲಿ ಹೆಚ್ಚು ಹೂಡಿಕೆ ಮಾಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಕೇರಳದಲ್ಲಿ ನಾವು ಉತ್ತಮ ಕಟ್ಟಡಗಳು, ಶೌಚಾಲಯಗಳು, ಪ್ರಯೋಗಾಲಯಗಳು ಮತ್ತು ಹೊರ ರೋಗಿಗಳ ಕೊಠಡಿಗಳೊಂದಿಗೆ ನಮ್ಮ ಪಿಎಚ್‌ಸಿ (ಪ್ರಾಥಮಿಕ ಆರೋಗ್ಯ ಕೇಂದ್ರ) ಗಳನ್ನು ಆಕರ್ಷಕಗೊಳಿಸಿದ್ದೇವೆ. ಸ್ಥಳೀಯ ಸ್ವ-ಸರ್ಕಾರಗಳು ಮತ್ತು ಕೆಐಐಎಫ್‌ಬಿ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಮೂಲಸೌಕರ್ಯವನ್ನು ನಿರ್ಮಿಸುವ ಕುರಿತು ನಾವು ಪಂಚಾಯತ್ ಅಧ್ಯಕ್ಷರು ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ತರಬೇತಿ ನೀಡಿದ್ದೇವೆ. ಕೇಂದ್ರದ ಯೋಜನಾ ನಿಧಿಯ ಸೀಮಿತ ಲಭ್ಯತೆಯೊಳಗೆ ಅವರು ಈ ಕೆಲಸದಲ್ಲಿ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಮೂಲಸೌಕರ್ಯವನ್ನು ನಿರ್ಮಿಸಲು ಬಹಳಷ್ಟು ಜನರು ಆರ್ಥಿಕವಾಗಿ ಸಹಕರಿಸಿದ್ದಾರೆ. ರಾಜ್ಯದ 946 ಪಿಎಚ್‌ಸಿಗಳಲ್ಲಿ 617 ಈಗ ಹೊಸ ಕಟ್ಟಡಗಳನ್ನು ಹೊಂದಿವೆ. ಅದು ಸಾರ್ವಜನಿಕ ಚಳುವಳಿ. ಈ 100 ಕ್ಕೂ ಹೆಚ್ಚು ಪಿಎಚ್‌ಸಿಗಳು ರಾಷ್ಟ್ರೀಯ ಗುಣಮಟ್ಟ ಖಾತರಿ ಮಾನದಂಡಗಳ (ಎನ್‌ಕ್ಯೂಎಎಸ್) ಪ್ರಮಾಣೀಕರಣವನ್ನು ಪಡೆದಿವೆ. ನಮ್ಮ ದ್ವಿತೀಯ ಹಂತದ ಆಸ್ಪತ್ರೆಗಳನ್ನು ತಾಲ್ಲೂಕು ಮಟ್ಟದಲ್ಲಿ ಸುಧಾರಿಸಿದ್ದೇವೆ. ಕೆಲವು ಆಸ್ಪತ್ರೆಗಳು ಕಾರ್ಪೊರೇಟ್ ಆಸ್ಪತ್ರೆಗಿಂತ ಹೆಚ್ಚಿನ ಸೌಲಭ್ಯಗಳನ್ನು ಹೊಂದಿವೆ. ತೃತೀಯ ಆರೋಗ್ಯ ರಕ್ಷಣೆಯೂ ಸುಧಾರಿಸಿದೆ. ವೈದ್ಯಕೀಯ ಕಾಲೇಜುಗಳನ್ನು ಆಧುನೀಕರಿಸಲಾಯಿತು. ಹೊಸ ವೈದ್ಯಕೀಯ ಕಾಲೇಜುಗಳು ಪ್ರಾರಂಭವಾದವು. ಈ ಆಸ್ಪತ್ರೆಗಳಲ್ಲಿ ಈಗ ಹೆಚ್ಚಿನ ಆಧುನಿಕ ಉಪಕರಣಗಳು ಲಭ್ಯವಿದೆ. ನಾವು ಔಷಧ ಸಂಶೋಧನೆಯನ್ನು ಉತ್ತೇಜಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

2016 ರವರೆಗೆ ರಾಜ್ಯದ ಶೇಕಡಾ 37 ರಷ್ಟು ಜನರು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದರು. ಈಗ ರಾಜ್ಯದ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಹೆಚ್ಚು ಜನರು ಯಾವುದೇ ಹಿಂಜರಿಕೆಯಿಲ್ಲದೆ ಸರ್ಕಾರಿ ಆಸ್ಪತ್ರೆಗಳನ್ನು ಆರಿಸಿಕೊಳ್ಳುತ್ತಾರೆ. ಈ ವ್ಯವಸ್ಥಿತ ಬದಲಾವಣೆಯು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಿತು. ಆರೋಗ್ಯ ಪಾಲನೆಯು ಕೈಗೆಟುಕುವ ದರದಲ್ಲಿ ಸ್ನೇಹಪರವಾಗಿರಬೇಕು ಎಂಬುದು ನಮ್ಮ ನೀತಿ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...