Homeಕರೋನಾ ತಲ್ಲಣಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

- Advertisement -
- Advertisement -

ತನ್ನ ಜವಾಬ್ದಾರಿಯಲ್ಲಿ ಎಲ್ಲ ಆಯಾಮಗಳಲ್ಲೂ ವಿಫಲವಾಗಿರುವ ಕೇಂದ್ರದ ಮೋದಿ ಸರ್ಕಾರವು ಲಸಿಕೆಯ ಜವಾಬ್ದಾರಿಯಿಂದ ನುಣುಚಿಕೊಂಡು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ವರ್ಗಾಯಿಸಲು ನೋಡುತ್ತಿದೆ. ಹಾಗಾಗಿ ಅದು ಭರ್ಜರಿಯಾಗಿ ಘೋಷಿಸಿಕೊಂಡಿದ್ದ, ನಾಳೆ ಆರಂಭವಾಗಬೇಕಿದ್ದ 18-44 ವಯೋಮಾನದವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಬಹುತೇಕ ರಾಜ್ಯಗಳಲ್ಲಿ ಆರಂಭವಾಗುತ್ತಿಲ್ಲ.

ಇದಕ್ಕೆ ಕೇಂದ್ರದ ಲಸಿಕಾ ನೀತಿಯೇ ಕಾರಣ. ಲಸಿಕೆಗಳನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕಿದ್ದ ಅದು, ಎರಡೂ ಲಸಿಕಾ ಕಂಪನಿಗಳ ಪರ ನಿಂತು, ರಾಜ್ಯಗಳು ಈಗ ದುಬಾರಿ ದರ ತೆತ್ತು ಲಸಿಕೆ ಖರೀದಿಸುವಂತೆ ಮಾಡಿದೆ. ಇದರಿಂದಾಗಿ ಬಹುಪಾಲು ರಾಜ್ಯಗಳು ತಮ್ಮ ನಾಗರೀಕರಿಗೆ ಉಚಿತ ಲಸಿಕೆ ನೀಡಲು ನಿರ್ಧರಿಸಿದ್ದು, ಕಂಪನಿಗಳಿಗೆ ಆರ್ಡರ್ ನೀಡಿವೆ. ಆದರೆ, ಕಂಪನಿಗಳ ಉತ್ಪಾದನಾ ಸಾಮಥ್ಯ ಈ ಅಗತ್ಯವನ್ನು ಪೂರೈಸುತ್ತಿಲ್ಲ. ಅಥವಾ ಅವು ಈ ಹಿಂದೆ ಮೋದಿಯವರ ಮೂಲಕ ವಿದೇಶಗಳಿಗೆ ಕಳಿಸಿದ 5 ಕೋಟಿ ಡೋಸ್ ರಫ್ತು ಈಗ ಕಾಡತೊಡಗಿದೆ. ಜೊತೆಗೆ ಅವು ಈಗ ಹೆಚ್ಚಿನ ದರ ಸಿಗುವ ಖಾಸಗಿ ಆಸ್ಪತ್ರೆಗಳು ಮತ್ತು ಕಾರ್ಪೋರೇಟ್ ಕಂನಿಗಳಿಗೆ ಲಸಿಕೆ ಪೂರೈಕೆಯಲ್ಲಿ ಆಸಕ್ತಿ ಹೊಂದಿದ್ದು ಅವುಗಳ ಅತಿಯಾಶೆಗೆ ತಕ್ಕಂತೆಯೇ ಇದೆ. ಇದಕ್ಕೆ ನೀರೆರಿದಿದ್ದು ಮೋದಿ ಸರ್ಕಾರ ಎನ್ನುವುದಕ್ಕಿಂತ ಮೋದಿ ಸಾಹೇಬರೇ ಅನ್ನುವುದು ಸೂಕ್ತ.

ಇವತ್ತು ಮುಂಜಾನೆ ರಾಜ್ಯ ಆರೋಗ್ಯ ಸಚಿವ ಡಾ,ಸುಧಾಕರ್, ‘ಲಸಿಕೆಗಳ ಕೊರತೆಯಿಂದ ನಾಳೆಯಿಂದ ನಡೆಯಬೇಕಿದ್ದ 18-44 ವಯೋಮಾನದವರಿಗೆ ಲಸಿಕೆ ನೀಡುವ ಅಭಿಯಾನ ಶುರು ಮಾಡುತ್ತಿಲ್ಲ. ಅಗತ್ಯ ಲಸಿಕೆ ದೊರೆತ ನಂತರ ಆರಂಭಿಸಲಾಗುವುದು’ ಎಂದಿದ್ದಾರೆ.
ಇದು ಕರ್ನಾಟಕದ ಸಮಸ್ಯೆ ಅಷ್ಟೇ ಅಲ್ಲ. ಇಲ್ಲಿಯಂತೆ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ಗುಜರಾತ್ ಸರ್ಕಾರಗಳು ಕೂಡ ಮೇ1 ರಿಂದ 18-44 ವಯೋಮಾನದವರಿಗೆ ಲಸಿಕೆ ಅಭಿಯಾನ ಶುರು ಮಾಡಲಾಗದು ಎಂದಿವೆ. ಬಿಜೆಪಿಯೇತರ ಸರ್ಕಾರಗಳಿರುವ ದೆಹಲಿ, ಮಹಾರಾಷ್ಟ್ರ ಕೇರಳ, ಪಂಜಾಬ್-ಇನ್ನೂ ಹಲವು ರಾಜ್ಯಗಳು ಇದೇ ರೀತಿ ಘೋಷಣೆ ಮಾಡಿವೆ.

ಮಹಾರಾಷ್ಟ್ರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ (ಭಾನುವಾರದವರೆಗೆ) 45 ಮೇಲ್ಪಟ್ಟವರಿಗೆ ನಡೆಸುತ್ತಿದ್ದ ಲಸಿಕಾ ಅಭಿಯಾನವನ್ನೂ ನಿಲ್ಲಿಸಲಾಗಿದೆ. ಏಕೆಂದರೆ ರಾಜ್ಯಗಳ ಬಳಿ ಲಸಿಕೆಗಳ ಸಂಗ್ರಹಣೆ ಅಗತ್ಯ ಪ್ರಮಾಣದಲ್ಲಿ ಇಲ್ಲ. ಹಾಗೆಯೇ ಅವು ಸೀರಂ ಮತ್ತು ಭಾರತ್ ಬಯೋಟೆಕ್ ಕಂಪನಿಗಳಿಗೆ ಆರ್ಡರ್ ಕಳಿಸಿ ಕಾಯುವ ಪರಿಸ್ಥಿತಿಯಿದೆ.
ಇದಕ್ಕೆ ಯಾರು ಕಾರಣ? ಮತ್ತೆ ಅದು ತಲುಪುವುದು ಮೋದಿ ಸರ್ಕಾರದ ಗೊಂದಲದ ನೀತಿಗಳಿಗೆ ಅಷ್ಟೇ ಅಲ್ಲ, ಅದರ ಕಾರ್ಪೋರೇಟ್ ಪರ ಒಲುವುಗಳಿಗೂ ಅದು ಸಾಕ್ಷಿಯಾಗಿದೆ.
ಲಸಿಕೆ ಅವ್ಯವಸ್ಥೆಗೆ ಕಾರಣಗಳೇನು? ಇಲ್ಲಿಯೂ ಕೆಲವರ ಹಿತಾಸಕ್ತಿ ಮುಖ್ಯವಾಗಿದೆಯೇ ಎಂಬುದನ್ನು ನೋಡೋಣ.

ಸಾಂಕ್ರಾಮಿಕ ಲಸಿಕೆ ಮಾರಾಟಕ್ಕೆ: ದೇಶದಲ್ಲೇ ಮೊದಲ ಸಲ…

ಮೊದಲನೆದಾಗಿ, ನಾಳೆ 18-45 ವಯೋಮಾನದವರಿಗೆ ಲಸಿಕಾ ಅಭಿಯಾನ ಚಾಲೂ ಮಾಡಲು ಆಗದ್ದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಅದು ಭಾರತದಲ್ಲಿ ಲಸಿಕೆ ತಯಾರಿಕೆ ಆರಂಭವಾದಾಗಿನಿಂದ ತನ್ನ ಸಾಕು ಮೀಡಿಯಾಗಳನ್ನು ಬಳಸಿಕೊಂಡು, ಮೋದಿಯೇ ಲಸಿಕೆ ಕಂಡು ಹಿಡಿದರು ಎಂದು ಪರೋಕ್ಷವಾಗಿ ಅನಿಸುವಂತೆ ಪ್ರಸಾರ ಮಾಡಿಸುತ್ತ ಬಂದಿತು. ಅಲ್ಲದೇ ಉಚಿತ ಲಸಿಕೆ ನೀಡುವುದಾಗಿ ಚುನಾವಣಾ ಪ್ರಚಾರದಲ್ಲಿ, ಪ್ರಣಾಳಿಕೆಯಲ್ಲಿ ಘೋಷಿಸಲಾಯಿತು! ಕೋವಿಡ್ ಮೊದಲ ಅಲೆ ಸಂದರ್ಭದಲ್ಲೇ ಈ ಸರ್ಕಾರ ತರಾತುರಿಯಲ್ಲಿ ಆಗಸ್ಟ್ 15ರಂದು ಕೆಂಪುಕೋಟೆ ಮೇಲೆ ಮೋದಿಯವರ ಕಡೆಯಿಂದ ಲಸಿಕೆ ಉದ್ಘಾಟಿಸುವ ಹೀನಾತಿಹೀನ ಯೋಚನೆಯನ್ನೂ ಮಾಡಿತ್ತು.

ಟ್ರಯಲ್ಸ್‌ಗಳಿಲ್ಲದೇ ಹಾಗೆ ಮಾಡಿದರೆ ಕಟಕಟೆಯಲ್ಲಿ ನಿಲ್ಲಬೇಕಾಗುತ್ತದೆ ಎಂದು ಹೆದರಿದ ಕಂಪನಿಗಳು ಸಾಧ್ಯವಿಲ್ಲ ಎಂದವು.

ಎರಡನೆಯ ಸಮಸ್ಯೆ ಎಂದರೆ, ಭಾರತೀಯರೆಲ್ಲರಿಗೂ ಈ ಎರಡು ಕಂಪನಿಗಳೇ ತ್ವರಿತವಾಗಿ ಲಸಿಕೆ ಉತ್ಪಾದನೆ ಮಾಡುತ್ತವೆ ಎಂಬ ಹುಸಿ ನಂಬಿಕೆಯಲ್ಲಿ ಕಾಲ ಕಳೆದಿದ್ದು.

ಎರಡನೇ ಅಲೆ ಶುರುವಾಗುವ ಸಂದರ್ಭದಲ್ಲಿ ಚುನಾವಣೆಗಳತ್ತಲೇ ಎಲ್ಲ ಗಮನ ಕೇಂದ್ರಿಕರಿಸಿದ ಸರ್ಕಾರ 60 ದಾಟಿದವರಿಗೆ, 45 ದಾಟಿದವರಿಗೆ ಎಂದು ಎರಡು ಹಂತಗಳ ಲಸಿಕಾ ಅಭಿಯಾನ ಮಾಡಿತು. ಆದರೆ ಈಗ ಒಂದು ಡೋಸ್ ಲಸಿಕೆ ಪಡೆದವರಿಗೆ ಎರಡನೇ ಡೋಸ್ ಕೊಡುವುದು ಕಷ್ಟವಿದೆ. ಈಗ ಕೇಂದ್ರ ತನ್ನ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಂಡು, ರಾಜ್ಯಗಳಿಗೆ ಲಸಿಕೆ ಖರೀದಿಸಿಕೊಳ್ಳಿ ಎನ್ನುವ ಮೂಲಕ ಕಾರ್ಪೋರೇಟ್ ಔಷಧಿ ಕಂಪನಿಗಳ ಪರ ನಿಂತಿದೆ.

ಈಗ ಬಿಜೆಪಿ ಆಡಳಿತ ಇರುವ ರಾಜ್ಯಗಳೇ ನಾಳೆಯಿಂದ 3ನೆ ಹಂತದ ಲಸಿಕಾ ಅಭಿಯಾನ ಶುರು ಮಾಡಲಾಗುವುದಿಲ್ಲ ಎಂದು ಘೋಷಿಸಿವೆ. ಅಂದರೆ ನಿಗದಿತ ಅವಧಿಯಲ್ಲಿ ಹಣ ಪಾವತಿಸಿದರೂ ಲಸಿಕೆ ಲಭ್ಯವಾಗುತ್ತಿಲ್ಲ! ಮತ್ತೆ ಇದಕ್ಕೆಲ್ಲ ಯಾರು ಕಾರಣ, ಹೇಳಬೇಕೆ ಅದನ್ನೂ…. ಬೇಡ ಅಲ್ಲವೇ?

ತಜ್ಞರ ಮಾತಿಗೆ ಮನ್ನಣೆ ಇಲ್ಲ!

ಎಲ್ಲರಿಗೂ ಉಚಿತ ಲಸಿಕೆ ಒದಗಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ರಾಹುಲ್ ಗಾಂಧಿ ಹೇಳಿದ್ದು ಈ ಸರ್ಕಾರಕ್ಕೆ ಅಪಥ್ಯದ ವಿಷಯ. ಆದರೆ ತಜ್ಞರು ಹೇಳಿದ ಮಾತಿಗೂ ಕಿವಿಗೊಡದೇ ಲಸಿಕೆಗಳಿಗೆ ಮೂರು ಬಗೆಯ ದರಗಳನ್ನು ವಿಧಿಸಲು ಕಂಪನಿಗಳಿಗೆ ಮೋದಿ ಸರ್ಕಾರ ಅವಕಾಶ ನೀಡಿತು.

ಕೇಂದ್ರ ಆರೋಗ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಕೆ. ಸುಜಾತಾರಾವ್‌ರಂತಹ ಆಡಳಿತಾತ್ಮಕ ಅನುಭವ ಇರುವವರು, ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು-ಹೀಗೆ ಬಹುತೇಕರೆಲ್ಲ ಎಲ್ಲರಿಗೂ ಉಚಿತ ಲಸಿಕೆ ನೀಡಬೇಕು ಎಂದೇ ಆಗ್ರಹಿಸಿದ್ದಾರೆ.

ಈಗ ಲಸಿಕಾ ಅಭಿಯಾನ ಶುರುವಾಗಿ 100 ದಿನಗಳು ದಾಟಿವೆ. 14 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ, ಅವರಲ್ಲಿ ಕೇವಲ ಶೇ.10 ಮಾತ್ರ ಎರಡೂ ಡೋಸ್ ಪಡೆದಿದ್ದಾರೆ.
ಹೀಗಿರುವಾಗ, ಮೇ 1ರಿಂದ ಮೂರನೇ ಹಂತದ ಲಸಿಕಾ ಅಭಿಯಾನ ಘೋಷಿಸುವ ಅಗತ್ಯವಿತ್ತೇ? ನಿಜ, ಆದಷ್ಟೂ ಬೇಗ ಆಗಬೇಕು, ಆದರೆ ನಮ್ಮ ಲಸಿಕಾ ಕಂಪನಿಗಳಿಗೆ ಅಷ್ಟು ಉತ್ಪಾದನಾ ಸಾಮರ್ಥ್ಯವೇ ಇಲ್ಲದಿರುವಾಗ? ವಿದೇಶಿ ಲಸಿಕೆಗಳನ್ನು ತರಿಸುವ ನಿರ್ಧಾರವನ್ನೂ ಚುನಾವಣೆಯ ಅಂತ್ಯದಲ್ಲಿ ಬಿಡುವಾದಾಗ ತೆಗೆದುಕೊಳ್ಳಲಾಗಿತು.

ಕೇಂದ್ರ ಬಜೆಟ್ 2021-22 ರಲ್ಲಿ ಲಸಿಕಾ ಅಭಿಯಾನಕ್ಕೆಂದೇ 35,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಆದರೆ, ಕೇವಲ ಶೇ.10 ಜನಸಂಖ್ಯೆಗೆ ಲಸಿಕೆ ಹಾಕಿದ ನಂತರ, ಕೇಂದ್ರವು ಏಕೆ ಹಿಂದೆ ಸರಿಯಿತು, ರಾಜ್ಯಗಳ ಮೇಲೆ ಏಕೆ ಭಾರ ಹಾಕಿತು? ಬಜೆಟ್ ಅನುದಾನ ಮತ್ತು ಪಿಎಂ ಕೇರ್ಸ್ ಹಣ ಬಳಸಿ ವಿದೇಶಿ ಲಸಿಕೆಗಳನ್ನು ತುರ್ತಾಗಿ ತರಿಸಿಕೊಳ್ಳಲಿಲ್ಲವೇಕೆ? -ಹೀಗೆ ಕಾಂಗ್ರೆಸ್, ಆಮ್ ಆದ್ಮಿ, ಎಡಪಕ್ಷಗಳು, ತಜ್ಞರು ಮತ್ತು ಇತ್ತೀಚೆಗೆ ಪ್ರಜ್ಞಾವಂತ ಜನರು ಕೇಳುತ್ತಿರುವ ಪ್ರಶ್ನೆಗಳಿಗೆ ಮೋದಿ ಸರ್ಕಾರದ ಬಳಿ ಉತ್ತರವೇ ಇಲ್ಲ.

ಅದು ಒಕ್ಕೂಟ ವ್ಯವಸ್ಥೆಗೆ ಬಲವಾದ ಏಟು ಕೊಟ್ಟಿದೆ, ಬಂಡವಾಳಶಾಹಿಗಳ ಹಿಂಬಾಲಕನಂತೆ ವರ್ತಿಸುವ ಮೂಲಕ ಒಕ್ಕೂಟದ ಎಲ್ಲ ರಾಜ್ಯಗಳಿಗೂ, ಆ ಮೂಲಕ ಎಲ್ಲ ದೇಶವಾಸಿಗಳಿಗೂ ಮಹಾದ್ರೋಹ ಬಗೆದಿದೆ ಅಲ್ಲವೇ?

ದೇಶದಲ್ಲಿ ಮೊದಲ ಬಾರಿಗೆ ಸಾಂಕ್ರಾಮಿಕ ರೋಗದ ಲಸಿಕೆಯನ್ನು ಮಾರಾಟಕ್ಕಿಟ್ಟ, ಆ ಮೂಲಕ ಔಷಧಿ ಕಂಪನಿಗಳ ದಲ್ಲಾಳಿಯಂತೆ ವರ್ತಿಸುತ್ತ, ರಾಜ್ಯ ಸರ್ಕಾರಗಳನ್ನು ಇಕ್ಕಟ್ಟಿಗೆ ಸಿಲುಕಿಸಿದ ಏಕೈಕ ಪ್ರಧಾನಿ ಎಂದು ಇತಿಹಾಸದಲ್ಲಿ ಮೋದಿ ಹೆಸರು ಉಳಿಯಲಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...