Homeಮುಖಪುಟಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ - ಬಿಜೆಪಿಗೆ ಮುಖಭಂಗ

ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ - ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ - ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ಏಪ್ರಿಲ್ 27 ರಂದು 8 ಜಿಲ್ಲೆಗಳಲ್ಲಿ ನಡೆದಿದ್ದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿಗಳ ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಜೆಡಿಎಸ್ ಎರಡನೇ ಸ್ಥಾನ ಪಡೆದಿದ್ದು ಬಿಜೆಪಿಗೆ ಮುಖಭಂಗವಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ – ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ – ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಉಳಿದಂತೆ ಚನ್ನಪಟ್ಟಣ ನಗರಸಭೆ ಮತ್ತು ವಿಜಯಪುರ ಪುರಸಭೆಯಲ್ಲಿ ಜೆಡಿಎಸ್ ಅಧಿಕಾರ ಪಡೆದರೆ ಬಿಜೆಪಿ ಕೇವಲ ಮಡಿಕೇರಿ ನಗರಸಭೆಗೆ ಮಾತ್ರ ಸೀಮಿತವಾಗಿದೆ.

ಫಲಿತಾಂಶದ ಪೂರ್ಣ ವಿವರ ಹೀಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 39: ಕಾಂಗ್ರೆಸ್-21, ಬಿಜೆಪಿ-13, ಜೆಡಿಎಸ್-00, ಪಕ್ಷೇತರ-05

ಬೀದರ್ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-15, ಬಿಜೆಪಿ-08, ಜೆಡಿಎಸ್-07 ಪಕ್ಷೇತರ-05

ರಾಮನಗರ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-19, ಬಿಜೆಪಿ-00, ಜೆಡಿಎಸ್-11, ಪಕ್ಷೇತರ-01

ಭದ್ರಾವತಿ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-18, ಬಿಜೆಪಿ-04, ಜೆಡಿಎಸ್-11, ಪಕ್ಷೇತರ-01

ಚನ್ನಪಟ್ಟಣ ನಗರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-07, ಬಿಜೆಪಿ-07, ಜೆಡಿಎಸ್-16, ಪಕ್ಷೇತರ-01

ಮಡಿಕೇರಿ ನಗರಸಭೆ – ಬಿಜೆಪಿ

ಒಟ್ಟು ಸ್ಥಾನಗಳು 23: ಕಾಂಗ್ರೆಸ್-01, ಬಿಜೆಪಿ-16, ಜೆಡಿಎಸ್-01, ಎಸ್‌ಡಿಪಿಐ-05 ಪಕ್ಷೇತರ-00

ಬೇಲೂರು ಪುರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-17, ಬಿಜೆಪಿ-01, ಜೆಡಿಎಸ್-05, ಪಕ್ಷೇತರ-00

ವಿಜಯಪುರ ಪುರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-06, ಬಿಜೆಪಿ-01, ಜೆಡಿಎಸ್-14, ಪಕ್ಷೇತರ-02

ಗುಡಿಬಂಡೆ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 11: ಕಾಂಗ್ರೆಸ್-06, ಬಿಜೆಪಿ-00, ಜೆಡಿಎಸ್-02, ಪಕ್ಷೇತರ-03

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 15: ಕಾಂಗ್ರೆಸ್-09, ಬಿಜೆಪಿ-06, ಜೆಡಿಎಸ್-00, ಪಕ್ಷೇತರ-00

ಒಟ್ಟು 266 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷವು 119 ಸ್ಥಾನಗಳಲ್ಲಿ ಜಯಗಳಿಸಿದ್ದು ಒಟ್ಟು 44.73% ಮತಗಳನ್ನು ಪಡೆದಿದೆ. ಜೆಡಿಎಸ್ 67 ಸ್ಥಾನಗಳಲ್ಲಿ ಜಯಿಸಿದ್ದು, 25.18% ಮತಗಳನ್ನು ಪಡೆದಿದೆ. ಹಾಗೆಯೇ ಬಿಜೆಪಿ 56 ಸ್ಥಾನಗಳಲ್ಲಿ ಜಯಗಳಿಸಿದ್ದು, 21.05% ರಷ್ಟು ಮತಗಳನ್ನು ಪಡೆದಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶುಬ ಸೂಚನೆ, ವಿರೋಧ ಪಕ್ಷಗಳು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ವರ್ತಿಸಿದರೆ, ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

  2. ವಿರೋದ ಪಕ್ಷಗಳು ಅವರ ಜವಬ್ದಾರಿಯನ್ನು ಅರಿತು ಒಗ್ಗಟ್ಡಿನಿಂದ ಜನಪರವಾಗಿ ಜನರಿಗೋಸ್ಕರ ಕೆಲಸ ಮಾಡಬೇಕು ಹಾಗ ಮಾತ್ರ ಈ ಮನುವಾದಿಗಳನ್ನು ೦ ಲೆವೆಲ್ಗೆ ತಂದು ಕೂರಿಸಬಹುದು ಜನರ ನಡುವೆ ಹೆಚ್ಚು ಹೆಚ್ಚು ಕೆಲಸ ಮಾಡಬೇಕು.

    ಧನರಾಜು ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...