Homeಮುಖಪುಟಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ - ಬಿಜೆಪಿಗೆ ಮುಖಭಂಗ

ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ - ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ - ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ಏಪ್ರಿಲ್ 27 ರಂದು 8 ಜಿಲ್ಲೆಗಳಲ್ಲಿ ನಡೆದಿದ್ದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿಗಳ ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. ಜೆಡಿಎಸ್ ಎರಡನೇ ಸ್ಥಾನ ಪಡೆದಿದ್ದು ಬಿಜೆಪಿಗೆ ಮುಖಭಂಗವಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ, ಬೀದರ್ – ಭದ್ರಾವತಿ-  ರಾಮನಗರ ನಗರಸಭೆ, ಬೇಲೂರು ಪುರಸಭೆ ಮತ್ತು ಗುಡಿಬಂಡೆ – ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಗಳಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಉಳಿದಂತೆ ಚನ್ನಪಟ್ಟಣ ನಗರಸಭೆ ಮತ್ತು ವಿಜಯಪುರ ಪುರಸಭೆಯಲ್ಲಿ ಜೆಡಿಎಸ್ ಅಧಿಕಾರ ಪಡೆದರೆ ಬಿಜೆಪಿ ಕೇವಲ ಮಡಿಕೇರಿ ನಗರಸಭೆಗೆ ಮಾತ್ರ ಸೀಮಿತವಾಗಿದೆ.

ಫಲಿತಾಂಶದ ಪೂರ್ಣ ವಿವರ ಹೀಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 39: ಕಾಂಗ್ರೆಸ್-21, ಬಿಜೆಪಿ-13, ಜೆಡಿಎಸ್-00, ಪಕ್ಷೇತರ-05

ಬೀದರ್ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-15, ಬಿಜೆಪಿ-08, ಜೆಡಿಎಸ್-07 ಪಕ್ಷೇತರ-05

ರಾಮನಗರ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-19, ಬಿಜೆಪಿ-00, ಜೆಡಿಎಸ್-11, ಪಕ್ಷೇತರ-01

ಭದ್ರಾವತಿ ನಗರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 35: ಕಾಂಗ್ರೆಸ್-18, ಬಿಜೆಪಿ-04, ಜೆಡಿಎಸ್-11, ಪಕ್ಷೇತರ-01

ಚನ್ನಪಟ್ಟಣ ನಗರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 31: ಕಾಂಗ್ರೆಸ್-07, ಬಿಜೆಪಿ-07, ಜೆಡಿಎಸ್-16, ಪಕ್ಷೇತರ-01

ಮಡಿಕೇರಿ ನಗರಸಭೆ – ಬಿಜೆಪಿ

ಒಟ್ಟು ಸ್ಥಾನಗಳು 23: ಕಾಂಗ್ರೆಸ್-01, ಬಿಜೆಪಿ-16, ಜೆಡಿಎಸ್-01, ಎಸ್‌ಡಿಪಿಐ-05 ಪಕ್ಷೇತರ-00

ಬೇಲೂರು ಪುರಸಭೆ – ಕಾಂಗ್ರೆಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-17, ಬಿಜೆಪಿ-01, ಜೆಡಿಎಸ್-05, ಪಕ್ಷೇತರ-00

ವಿಜಯಪುರ ಪುರಸಭೆ – ಜೆಡಿಎಸ್

ಒಟ್ಟು ಸ್ಥಾನಗಳು 23: ಕಾಂಗ್ರೆಸ್-06, ಬಿಜೆಪಿ-01, ಜೆಡಿಎಸ್-14, ಪಕ್ಷೇತರ-02

ಗುಡಿಬಂಡೆ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 11: ಕಾಂಗ್ರೆಸ್-06, ಬಿಜೆಪಿ-00, ಜೆಡಿಎಸ್-02, ಪಕ್ಷೇತರ-03

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ – ಕಾಂಗ್ರೆಸ್

ಒಟ್ಟು ಸ್ಥಾನಗಳು 15: ಕಾಂಗ್ರೆಸ್-09, ಬಿಜೆಪಿ-06, ಜೆಡಿಎಸ್-00, ಪಕ್ಷೇತರ-00

ಒಟ್ಟು 266 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷವು 119 ಸ್ಥಾನಗಳಲ್ಲಿ ಜಯಗಳಿಸಿದ್ದು ಒಟ್ಟು 44.73% ಮತಗಳನ್ನು ಪಡೆದಿದೆ. ಜೆಡಿಎಸ್ 67 ಸ್ಥಾನಗಳಲ್ಲಿ ಜಯಿಸಿದ್ದು, 25.18% ಮತಗಳನ್ನು ಪಡೆದಿದೆ. ಹಾಗೆಯೇ ಬಿಜೆಪಿ 56 ಸ್ಥಾನಗಳಲ್ಲಿ ಜಯಗಳಿಸಿದ್ದು, 21.05% ರಷ್ಟು ಮತಗಳನ್ನು ಪಡೆದಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶುಬ ಸೂಚನೆ, ವಿರೋಧ ಪಕ್ಷಗಳು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ವರ್ತಿಸಿದರೆ, ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮನುವಾದಿಗಳನ್ನು ಮನೆಗೆ ಕಳುಹಿಸಬಹುದು.

  2. ವಿರೋದ ಪಕ್ಷಗಳು ಅವರ ಜವಬ್ದಾರಿಯನ್ನು ಅರಿತು ಒಗ್ಗಟ್ಡಿನಿಂದ ಜನಪರವಾಗಿ ಜನರಿಗೋಸ್ಕರ ಕೆಲಸ ಮಾಡಬೇಕು ಹಾಗ ಮಾತ್ರ ಈ ಮನುವಾದಿಗಳನ್ನು ೦ ಲೆವೆಲ್ಗೆ ತಂದು ಕೂರಿಸಬಹುದು ಜನರ ನಡುವೆ ಹೆಚ್ಚು ಹೆಚ್ಚು ಕೆಲಸ ಮಾಡಬೇಕು.

    ಧನರಾಜು ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...