Homeಕರ್ನಾಟಕಮೀಡಿಯಾ ಮಿಸ್ಟರಿ: ವಸೂಲಿ ದಂಧೆಗೆ ಇಳಿದ ಪತ್ರಕರ್ತರು, ಕಳೆದುಹೋದ ವಿಶ್ವಾಸಾರ್ಹತೆ

ಮೀಡಿಯಾ ಮಿಸ್ಟರಿ: ವಸೂಲಿ ದಂಧೆಗೆ ಇಳಿದ ಪತ್ರಕರ್ತರು, ಕಳೆದುಹೋದ ವಿಶ್ವಾಸಾರ್ಹತೆ

- Advertisement -
- Advertisement -

| ಪ್ರದೀಪ್ ಪುಟ್ಟಪ್ಪ |

ಬ್ಲಾಕ್ ಮೇಲ್ ಆರೋಪ : ಪತ್ರಕರ್ತನ ಸೆರೆ,  ನಕಲಿ ದಾಖಲೆ ಸೃಷ್ಟಿಗೆ ಪತ್ರಕರ್ತನ ಬಂಧನ, ಲೋಗೋ ದುರ್ಬಳಕೆ : ವಾಹಿನಿ ಮೇಲೆ ದೂರು ಇದು ಇಂದಿನ ಪತ್ರಿಕಾರಂಗದ ಜನಸಾಮಾನ್ಯರಿಗೆ ತಲುಪದ ಇನ್ನೊಂದು ಮುಖ. ಅಷ್ಟಕ್ಕೂ ಎಲ್ಲಿ ಹೋಯ್ತು ಆ ವಿಶ್ವಾಸಾರ್ಹತೆ, ಎಲ್ಲಿ ಹೋಯ್ತು ಆ ಸತ್ಯ ಶುದ್ಧ ವರದಿಗಾರಿಕೆ.!?

ಚಳುವಳಿಯ ಹಿನ್ನೆಲೆಯಲ್ಲಿ, ನೊಂದವರ, ಶೋಷಿತರ ದನಿಯಾಗಿ, ಅಸಂಘಟಿತ ವರ್ಗಗಳ ಕೂಗಿಗೆ ಪ್ರತಿಧ್ವನಿಯಾಗಿ ಹುಟ್ಟಿದ Journalism ಅನ್ನೋದು ಈಗ ಐಡಿ ಕಾರ್ಡ್ ಚಲಾವಣೆಗಷ್ಟೆ ಸೀಮಿತವಾಗಿದೆ. ಮಾಧ್ಯಮದ ಕಾರ್ಡ್ ಒಂದಿದ್ದರೆ ವಿಧಾನಸೌಧ ಆದ್ರೇನು, ಪಾರ್ಲಿಮೆಂಟ್ ಆದ್ರೇನು ಅನ್ನುವಷ್ಟು ಸಲೀಸಾಗಿ ಹೋಗಿದೆ ಇವತ್ತಿನ ಪತ್ರಿಕೋದ್ಯಮ. ಇಷ್ಟೇ ಆಗಿದ್ದರೂ ಸಹಿಸಿಕೊಂಡು ಹೋಗಬಹುದಿತ್ತು. ಆ ಹಂತವನ್ನೂ ಮೀರಿ ಇಂದಿನ ಬಹುತೇಕ ಮಾಧ್ಯಮಗಳು ವಸೂಲಿ ದಂಧೆಗೆ ಇಳಿಯಲ್ಪಡುತ್ತಿವೆ. ಹಾಗಾದ್ರೆ ಎಲ್ಲಿ ಹೋಯ್ತು ಹುಟ್ಟಿನ ಮೂಲದಲ್ಲಿ ಇದ್ದ ಆ ಉದ್ದೇಶ.!?

ಇವತ್ತು ಮುದ್ರಣ ಮಾಧ್ಯಮ ಅಥವಾ ದೃಶ್ಯ ಮಾಧ್ಯಮ ಯಾವುದೇ ಆಗಿರಲಿ.. ಸೂಕ್ಷ್ಮವಾಗಿ ಒಮ್ಮೆ ಕಣ್ಣಾಡಿಸಿದರೆ ನಿಮಗೆ ಪ್ರತೀ ಮಾಧ್ಯಮ ಸಂಸ್ಥೆಗಳಲ್ಲೂ ವಸೂಲಿ ವೀರರ ಒಂದೊಂದು ಗುಂಪು ಕಾಣ ಸಿಗುತ್ತವೆ. ಅದು ಸಂಸ್ಥೆಯೊಳಗಿನ ಪ್ರೈವೇಟ್ ಟೀಮ್ ಆಗಿರಬಹುದು ಅಥವಾ ಸಂಸ್ಥೆಯೇ ಹುಟ್ಟುಹಾಕಿದ “ಕಮರ್ಷಿಯಲ್ ಖೂಳರ” ಟೀಮ್ ಆಗಿರಬಹುದು‌, ಪ್ರತೀ ಸಂಸ್ಥೆಯಲ್ಲೂ ಇಂತಾದ್ದೊಂದು ತಂಡ ಖಾಯಂ ಅನ್ನಿಸುವಷ್ಟರ ಮಟ್ಟಿಗೆ ಬೇರೂರಿ ಬಿಟ್ಟಿದೆ. ಕೆಲವರಿಗೆ ಅದು ಅನಿವಾರ್ಯ, ಕೆಲವರಿಗೆ ಅವಶ್ಯಕವಲ್ಲದ ಕಾಯಕವಾಗಿದೆ. ಅಪಾಯಕಾರಿ ಬೆಳವಣಿಗೆ ಏನೆಂದರೆ ಇವತ್ತಿನ ಪತ್ರಿಕೋದ್ಯಮದಲ್ಲಿ ಸಂಸ್ಥೆಯೇ ಹುಟ್ಟುಹಾಕಿದ “ಕಮರ್ಷಿಯಲ್” ಕಾರಣದ ತಂಡಗಳಿಗೆ ಯಾವ ಅಡೆತಡೆಯೂ ಇಲ್ಲದಂತಾಗಿದೆ. ಎಲ್ಲಿ ಬೇಕಾದರೂ ನುಗ್ಗಿ ವಸೂಲಿ ದಂಧೆಗೆ ಸುಲಭವಾಗಿ ಇಳಿಯಬಹುದಾದಷ್ಟು ಸ್ವಾತಂತ್ರ್ಯವನ್ನು ಆಯಾ ಮಾಧ್ಯಮ ಸಂಸ್ಥೆಗಳೇ ಮಾಡಿಕೊಟ್ಟಿವೆ. ಮಾಧ್ಯಮ ಸಂಸ್ಥೆಗಳ ಈ ಮಟ್ಟಿಗಿನ ಸದರ ಹಲವಷ್ಟು ವಸೂಲಿ ವೀರರಿಗೆ ಹಲ್ಲಿಗೆ ಶಾಣೆ ಹಿಡಿದಂತಾಗಿದೆ. ಸಂಸ್ಥೆ ವಹಿಸಿದ “ಕೆಲಸ”ದ ಹೊರತಾಗಿ ತಮ್ಮ ಜೇಬಿಗೂ ಇಳಿಸಿಕೊಳ್ಳುವಷ್ಟು ಸಲೀಸಾಗಿ ದಂಧೆಗಳಲ್ಲಿ ತೊಡಗಿಕೊಂಡಿದ್ದಾರೆ The great Journalist ಗಳು.

ಸಧ್ಯ ಇವೆಲ್ಲಾ ಕಾರಣಗಳಿಂದ ಮಾಧ್ಯಮ ಅನ್ನೋದು ಕಳ್ಳನ ಕೈಗೆ ಗಂಟು ಕೊಟ್ಟಂತಾಗಿದೆ. ಮಾಧ್ಯಮ ಅಂದ್ರೆ ಅಧಿಕಾರಿ ವರ್ಗ, ಜನಪ್ರತಿನಿಧಿಗಳು ಅಥವಾ ಇನ್ಯಾವುದೋ ಮೇಲ್ಸ್ತರದಲ್ಲಿ ಕೂತ ವ್ಯಕ್ತಿಗಳ ತಪ್ಪುಗಳನ್ನು ಎತ್ತಿ ತೋರಿಸಿ ಸರಿ ದಾರಿಗೆ ತರಬೇಕಾದ ಮಹತ್ತರ ಪಾತ್ರ ಹೊಂದಿರಬೇಕು. ಜನರಿಂದ ಆರಿಸಿ ಹೋದ ಜನಪ್ರತಿನಿಧಿಗಳು ಪ್ರಜೆಗಳನ್ನು ಮರೆತಾಗ, ಜನಸೇವೆಗಾಗಿಯೇ ಜನರ ತೆರಿಗೆ ಹಣವನ್ನು ಸಂಬಳವಾಗಿ ಪಡೆಯುವ ಅಧಿಕಾರಿಗಳು ಕರ್ತವ್ಯ ಮರೆತಾಗ ಅವರನ್ನು ಬಡಿದು ಎಚ್ಚರಿಸಬೇಕಾಗಿರೋದು ಮಾಧ್ಯಮಗಳ ಕರ್ತವ್ಯವಾಗಿರಬೇಕು. ಆದ್ರೆ ಇವತ್ತು ಹಲವಷ್ಟು ಮಾಧ್ಯಮಗಳಿಗೆ, ಮಾಧ್ಯಮಗಳ ಒಳಗಿನ ವಸೂಲಿ ವೀರರಿಗೆ ಸಮಾಜದ ಅಂಕುಡೊಂಕುಗಳೇ ಆಹಾರ ಒದಗಿಸುತ್ತಿವೆ. ಯಾವ ಮಾಧ್ಯಮ ಅಧಿಕಾರಿ ವರ್ಗಗಳ ಅಥವಾ ಸಮಾಜದಲ್ಲಿ ಉನ್ನತ ಹಂತದಲ್ಲಿರೋ ವ್ಯಕ್ತಿಗಳ ತಪ್ಪುಗಳನ್ನು ಎತ್ತಿ ತೋರಿಸಿ ಸರಿದಾರಿಗೆ ತರಬೇಕಿತ್ತೋ ಅದನ್ನು ಎಳ್ಳಷ್ಟೂ ಮಾಡುತ್ತಿಲ್ಲ. ಅದರ ಹೊರತಾಗಿ ಅವರ ತಪ್ಪುಗಳೇ ಅಥವಾ ಪ್ರಮಾದಗಳೇ ಬಂಡವಾಳ ಆಗ್ತಿದೆ ಇಂತಾ ವಸೂಲಿ ಮಾಧ್ಯಮಗಳಿಗೆ.

ಉದಾಹರಣೆಗೆ ಹೇಳ್ಬೇಕು ಅಂದ್ರೆ ಹೆಚ್ಚಿನ ಟಿವಿ ಜರ್ನಲಿಸ್ಟ್ಗಳು ಇಂತಾ ಅಕ್ರಮಗಳಲ್ಲಿ ಭಾಗಿ ಆಗ್ತಿದ್ದಾರೆ. ರಾಜ್ಯ ಸಿಸಿಬಿ ಪೊಲೀಸ್ ಮೂಲಗಳಿಂದ ಬಂದ ಮಾಹಿತಿ ಪ್ರಕಾರ ರಾಜ್ಯದಲ್ಲೇ ಬಹಳಷ್ಟು ಸುದ್ದಿ ಮಾಡಿದ ಆಂಬಿಡೆಂಟ್ ನಂತಾ ಹೈ ಪ್ರೊಫೈಲ್ ಕೇಸ್ಗಳಲ್ಲೇ ಪತ್ರಕರ್ತರ ಹೆಸರು ಓಡಾಡ್ತಿದೆ. ಅದರ ನಂತರ ಓಡಾಡಿದ ವೈದ್ಯರೊಬ್ಬರ ಲೈಂಗಿಕ ಪ್ರಕರಣವೊಂದನ್ನ ಬ್ಲಾಕ್ಮೇಲ್ಗೆ ಬಳಸಿಕೊಂಡ ವಿಚಾರದಲ್ಲಿ ಪತ್ರಕರ್ತರ ತಲೆದಂಡ ಹಲವಷ್ಟು ಸುದ್ದಿ ಮಾಡಿತ್ತು. ಸಧ್ಯ ಈಗ ಚಾಲ್ತಿಯಲ್ಲಿರೋ ಒಂದೊಂದೇ ಆರೋಪಿಗಳನ್ನು ಹಿಡಿದು ಒಳಗೆ ಹಾಕ್ತಿರೋ ಎಂಬಿ ಪಾಟೀಲರ ಟಾರ್ಗೆಟ್ ಮಾಡಿದ ಕೇಸ್ನಲ್ಲಿ ಪತ್ರಕರ್ತರು ಭಾಗಿಯಾಗಿದ್ದು ಎದ್ದು ಕಾಣ್ತಿದೆ. ರಾಜಕಾರಣಿಯೊಬ್ಬರ ಲೈಂಗಿಕ ಅಫೈರ್ ಕೇಸ್ ಕೂಡ ಪತ್ರಕರ್ತರಿಗೆ ಆಹಾರವಾಗ್ತಿದೆ. ತೀರಾ ಕೆದಕುತ್ತಾ ಹೋದ್ರೆ ದಿನಕ್ಕೊಂದು ವಸೂಲಿ ಕಥೆಗಳು ಮಾಧ್ಯಮಗಳ ಒಳಗೆ ಯಥೇಚ್ಛವಾಗಿ ಸಿಕ್ಕುತ್ತಾ ಹೋಗುತ್ತವೆ. ತೀರಾ ವಯುಕ್ತಿಕ ಅನ್ನಿಸೋ ಸ್ಟೋರಿಗಳಿಂದಲೂ ಸಹ ವಸೂಲಿ ವೀರರು ಕಮಿಷನ್ ಪಡೆದುಕೊಳ್ಳುವಷ್ಟು ಹದಗೆಟ್ಟಿದೆ ಇವತ್ತಿನ ಪತ್ರಿಕೋದ್ಯಮ. ನಿಮಗೆ ಆಶ್ಚರ್ಯದ ಜೊತೆಗೆ ಹೇಸಿಗೆ ಸಹ ಹುಟ್ಟಬಹುದು, ಕನ್ನಡದ ಟಿವಿ ಚಾನಲ್ ಒಂದು ಇದಕ್ಕಂತಲೇ ಒಂದು ಟೀಂ ಕಟ್ಟಿಕೊಂಡು ಫೀಲ್ಡಿನಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ಇದಕ್ಕೆ ಚಾನಲ್ಲಿನ ಮುಖ್ಯಸ್ಥರೇ ಸಾತ್ ಕೊಡ್ತಿದ್ದಾರೆ. ಮೊದಲಿಗೆ ಸರಿಯಾದ ಮಿಕವೊಂದನ್ನು ಟಾರ್ಗೆಟ್ ಮಾಡಿ ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಕಾರ್ಯಾಚರಣೆಗೆ ಇಳೀತಾರೆ. ನೆಕ್ಸ್ಟ್ ಸೀನಿನಲ್ಲಿ ಅದೇ ಸ್ಟಿಂಗ್ ಟೀಂ ಅದೇ ‘ಮಿಕ’ದ ಟೇಬಲ್ ಮೇಲೆ ವಸೂಲಿಗೆ ಇಳಿದಿರುತ್ತೆ. ಕೂತ ಬೈಟಕ್ಕಿಗೆ ಲಕ್ಷ, ಕೋಟಿ ನಿರಾಯಾಸವಾಗಿ ಜೇಬಿಗೆ ಬಂದು ಇಳಿಯುತ್ತೆ. ಇನ್ನೇನು ಬೇಕು. ಕೇಳಿದ್ರೆ ‘ನಾವು ಕೊಡ್ತಿರೋ ಪ್ರೋಗ್ರಾಂಗಳಿಗೆ ಬರೋ ಟಿಆರ್ಪಿ ಅಷ್ಟರಲ್ಲೇ ಇದೆ.. ಇನ್ನು ನೂರೈವತ್ತು ಇನ್ನೂರು ಮಂದಿ ಉದ್ಯೋಗಿಗಳಿಗೆ ಸಂಬಳ ಎಲ್ಲಿಂದ ಬರಬೇಕು’ ಅನ್ನೋ ಸಬೂಬಿನ ಉತ್ತರ ಕೂಡ ಇವರಿಂದ ಅಷ್ಟೇ ಸಲೀಸಾಗಿ ಬರುತ್ತೆ. ಹಾಗಾಗಿ ವಸೂಲಿ ಮಾಡಿಯೇ ಸಂಸ್ಥೆಯನ್ನು ಮುನ್ನಡೆಸಬೇಕಾದ ಕೃತಕ ಅನಿವಾರ್ಯತೆ ಸೃಷ್ಟಿಯಾಗಿಬಿಟ್ಟಿದೆ. ಅಥವಾ ಅಂತಾ ಸುಲಭದ ದಾರಿ ಅಂತಲೂ ಹೇಳ್ಬಹುದು.

ಒಂದು ಕಾಲದಲ್ಲಿ ಪತ್ರಕರ್ತರು ಅಂದ್ರೆ ಸಾಮಾನ್ಯ ಜನ ಅತಿಯಾಗಿ ಗೌರವ ಕೊಡುವಂತಾ ಸ್ಥಾನಮಾನ ಹೊಂದಿದ್ದಾಗಿತ್ತು. ತಮ್ಮ ಸಮಸ್ಯೆಗಳನ್ನು, ನಮ್ಮ ಕೂಗನ್ನು ಸರ್ಕಾರದ ಮಟ್ಟಕ್ಕೆ, ಅಧಿಕಾರಿಗಳ ಮಟ್ಟಕ್ಕೆ ತಲುಪಿಸುವಂತಾ ಜವಾಬ್ದಾರಿ ಹೊಂದಿತ್ತು. ಆ ಮೂಲಕ ಆಡಳಿತ ವರ್ಗ ಮತ್ತು ಜನಸಾಮಾನ್ಯರ ನಡುವೆ ಸೇತುವೆಯಂತಾ ಪಾತ್ರ ವಹಿಸಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮಹತ್ತರ ಕಾರ್ಯ ನಿರ್ವಹಿಸುವಂತಹ ಜವಾಬ್ದಾರಿ ಮಾಧ್ಯಮಕ್ಕೆ ಇದೆ. ಸಧ್ಯ ಇವೆಲ್ಲಾ ಘನತೆಯನ್ನ ಮಾಧ್ಯಮ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದೆ. ಪತ್ರಕರ್ತರು ಅಂದ್ರೆ ಮುಖ ಮುರಿಯುವ ಹಂತಕ್ಕೆ ಬಂದಿದ್ದಾರೆ ಜನಸಾಮಾನ್ಯರು. ಆ ಮೂಲಕ ತಾವೇ ತೋಡಿದ ಖೆಡ್ಡಾಕ್ಕೆ ತಾವೇ ಬೀಳುತ್ತಿದ್ದಾರೆ.

ಕೊನೆಯದಾಗಿ ಹೇಳೋದು ಏನಂದ್ರೆ ಪತ್ರಿಕೋಧ್ಯಮ ಅನ್ನೋದು ಚಿಕ್ಕ ಸರ್ಕಲ್. ಯಾವ ಸಂಸ್ಥೆಯ ಒಳಗೆ ಏನು ಆಗ್ತಿದೆ ಅನ್ನೋದು ಸುಲಭವಾಗಿ ಇನ್ನೊಂದು ಸಂಸ್ಥೆಗೆ ಗೊತ್ತಾಗಿ ಬಿಡುವಷ್ಟು ವಿಚಾರಗಳು ಗಾಳಿಯಷ್ಟೇ ವೇಗವಾಗಿ ಹರಿದಾಡುತ್ತೆ. ಇನ್ನು ವಸೂಲಿ ವೀರರ ವಿಚಾರಗಳು ಮಾಧ್ಯಮಗಳ ಒಳಗಿರೋ ಪ್ರತಿಯೊಬ್ಬರಿಗೂ ಗೊತ್ತಿರುವ ವಿಚಾರವೇ ಆಗಿದೆ. ಆದ್ರೆ ಹೊರಗೆಲ್ಲೂ ಲೀಕ್ ಮಾಡುವಂತಿಲ್ಲ. ಏನು ಮಾಡ್ತೀರಿ.. ಮಾಧ್ಯಮ ಧರ್ಮ ಅನ್ನೋ ಉತ್ತರ ಯಾವುದೇ ಅಂಜಿಕೆ ಅಳುಕಿಲ್ಲದೇ ಬಂದು ಹೋಗುತ್ತದೆ. ಇನ್ನಾದ್ರು ಎಚ್ಚರ ವಹಿಸುತ್ತಾರಾ? ಕಾಲವೇ ಉತ್ತರಿಸಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...