Homeಕರೋನಾ ತಲ್ಲಣನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

ನಾನು ದೇಶಕ್ಕಾಗಿ ಹೋರಾಡಿದೆ, ಈ ವ್ಯವಸ್ಥೆ ಕೋವಿಡ್‌ನಿಂದ ಮಗನನ್ನು ರಕ್ಷಿಸಲಿಲ್ಲ: ಯುಪಿಯಲ್ಲಿ ಕಾರ್ಗಿಲ್ ಯೋಧನ ಅಳಲು

- Advertisement -
- Advertisement -

ಕಾರ್ಗಿಲ್ ಯುದ್ಧದ ವೀರ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆಯವರ 31 ವರ್ಷದ ಮಗ ಕೋವಿಡ್ ಕಾರಣದಿಂದಾಗಿ ಉತ್ತರಪ್ರದೇಶದ ಕಾನ್ಪುರ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬೇದಾರ್ ದುಬೆಯವರು ತನ್ನ ಮಗನ ದೇಹವನ್ನು ಕೊನೆಯ ಬಾರಿಗೆ ನೋಡಲು ಸುಡುವ ಸೂರ್ಯನ ಕೆಳಗೆ ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾನ್ಪುರ್ ಉತ್ತರ ಪ್ರದೇಶದ ಅತಿ ಹೆಚ್ಚು ಕೋವಿಡ್ ಪೀಡಿತ ನಗರಗಳಲ್ಲಿ ಒಂದಾಗಿದೆ.
ಇಂಡಿಯಾ ಟುಡೆ ಟಿವಿ ಜೊತೆ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸುಬೇದಾರ್ ಮೇಜರ್ (ನಿವೃತ್ತ) ಹರಿರಾಮ್ ದುಬೆ ಮಾತನಾಡಿದ್ದಾರೆ.

“ನಾನು 1981ರಿಂದ 2011ರವರೆಗೆ ನನ್ನ ತಾಯಿನಾಡಿಗೆ ಸೇವೆ ಸಲ್ಲಿಸಿದ್ದೇನೆ. ಕಾರ್ಗಿಲ್ ಯುದ್ಧದ ವೇಳೆ ಭಾಗಿಯಾಗಿದ್ದೇನೆ. ನಂತರ ಬಾರಾಮುಲ್ಲಾ, ಲಡಾಖ್ ಮತ್ತು ಲುಕುಂಗ್ಗೆ ಪ್ರದೇಶಗಳಲ್ಲಿ ಹೋರಾಡಿದ್ದೇನೆ. ನಾನು ಬಾರಾಮುಲ್ಲಾದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದೇನೆ ಮತ್ತು ಕಾರ್ಗಿಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದೆ. ಆದರೆ ಈ ದೇಶದ ವ್ಯವಸ್ಥೆಗೆ ನನ್ನ ಮಗನನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಂಗಳವಾರ ಸಂಜೆ ಕೋವಿಡ್‌ನಿಂದ ನಿಧನರಾದ ಮಗ ಅಮಿತಾಬ್ ನೆನೆದು ದುಃಖಿತರಾದರು.

ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕ ಸಿಲಿಂಡರ್‌ಗಳಿಗಾಗಿ ಹೆಣಗಾಡುತ್ತಿರುವ ನಗರದಾದ್ಯಂತದ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ತುಂಬಿವೆ. ಮೃತ ರೋಗಿಗಳ ಕುಟುಂಬ ಸದಸ್ಯರು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ನೋಡಲು ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ.

ಕಾನ್ಪುರದ ಭೈರವಘಾಟ್ ಪ್ರದೇಶದಲ್ಲಿನ ಸ್ಮಶಾನವನ್ನು ನೋಡಿದರೆ ಪರಿಸ್ಥಿತಿಯ ಭೀಕರತೆ ಅರ್ಥವಾಗುತ್ತದೆ. ಜನರ ಯಾತನೆ ಈಗ ಕೋಪಕ್ಕೆ ತಿರುಗಿದೆ. ದೇಶಕ್ಕೆ ಸೇವೆ ಸಲ್ಲಿಸಿದ ಅನುಭವಿಗಳು ಸಹ ಅಸಹಾಯಕರಾಗಿದ್ದಾರೆ.

ಇನ್ನೂ ಒಂದು ಸ್ಯನಿಕ ಕುಟುಂಬದ ಅಸಹಾಯಕತೆ…

‘ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ, ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ’ ಎಂದು ಕಾನ್ಪುರದ ನಿವಾಸಿ ಚಂದ್ರಪಾಲ್ ಹೇಳಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡಿ ಅವರು ನಿವೃತ್ತರಾಗಿದ್ದಾರೆ. ಕೋವಿಡ್ ಪೀಡಿತ ಅವರ ಸಹೋದರಿ ಸಾವಿತ್ರಿ ಬುಧವಾರ ಬೆಳಿಗ್ಗೆ ನಿಧನರಾದರು.

ವಾರ್ಡ್ ಹುಡುಗರು ತಮ್ಮ ಸಹೋದರಿಯ ನಿಧನದ ಬಗ್ಗೆ ಮಾಹಿತಿ ನೀಡಿದರು ಎಂದು ನಿವೃತ್ತ ಸೈನಿಕ ಹೇಳುತ್ತಾರೆ.

ಚಂದ್ರಪಾಲ್ ಅವರ ಕುಟುಂಬ ಸದಸ್ಯ ರಾಮಚಂದ್ರ ಕೂಡ ನಿವೃತ್ತ ಸೈನಿಕ. ಉಸಿರಾಟದ ತೊಂದರೆಯಿಂದಾಗಿ ಕುಟುಂಬವು ಏಪ್ರಿಲ್ 22 ರಂದು ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಗೆ ಸಾವಿತ್ರಿ ಅವರನ್ನು ಕರೆತಂದಿತ್ತು ಎಂದು ಇಂಡಿಯಾ ಟುಡೆ ಟಿವಿಗೆ ತಿಳಿಸಿದರು.

“ಸಾವಿತ್ರಿ ಅವರನ್ನು ಹ್ಯಾಲೆಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಯೋಗಕ್ಷೇಮದ ಬಗ್ಗೆ ಯಾರಿಂದಲೂ ಮಾಹಿತಿ ಸಿಗಲಿಲ್ಲ. ನಾನು ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದೇನೆ ಆದರೆ ಯಾರೂ ನನ್ನ ತಂಗಿಯನ್ನು ನೋಡಿಕೊಳ್ಳಲಿಲ್ಲ. ಅವರು ನಿಧನರಾದರು ಎಂದು ನಮಗೆ ಇಂದು ತಿಳಿದುಬಂದಿದೆ” ಎಂದು ರಾಮಚಂದ್ರ ಹೇಳಿದರು.

ಮಹಿಳೆಯ ದುಃಖಿತ ಮಗ, ಆಮ್ಲಜನಕದ ಮಟ್ಟವು ತೀವ್ರವಾಗಿ ಕುಸಿಯಿತು ಮತ್ತು ತಾಯಿಯನ್ನು ಬೈಪಾಪ್ (ಬಿಲೆವೆಲ್ ಪಾಸಿಟಿವ್ ಏರ್‌ವೇ ಪ್ರೆಶರ್) ನಲ್ಲಿ ಇರಿಸಲಾಗಿದೆ ಎಂದು ಹೇಳಿದರು. ಆದರೆ ಯಾವುದೂ ನೆರವಾಗಲಿಲ್ಲ ಎಂದರು.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...