Homeಕರೋನಾ ತಲ್ಲಣತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

ತಾಯಿ ಶವದ ಬಳಿ 2 ದಿನ ಹಸಿವಿನಲ್ಲೆ ಇದ್ದ ಕಂದಮ್ಮ: ಕೊರೊನಾ ಭೀತಿಗೆ ನೆರವಾಗದ ನೆರೆಹೊರೆ!

- Advertisement -
- Advertisement -

ಜನರಲ್ಲಿರುವ ಕೊರೊನಾ ಆತಂಕ ಅವರೊಳಗಿನ ಮನುಷ್ಯತ್ವವನ್ನು ಕೊಲ್ಲುತ್ತಿರುವ ಕಾಲಘಟ್ಟವಿದು.
ತನ್ನ ತಾಯಿಯ ಮೃತದೇಹದ ಬಳಿ ಎರಡು ದಿನ ಕಳೆದ ಈ ಕಂದ ನೀರಡಿಕೆ, ಹಸಿವಿನಿಂದ ಬಳಲುತ್ತಿತ್ತು. ತಾಯಿ ಕೊರೊನಾನಿಂದ ಮರಣ ಹೊಂದಿರಬಹುದು ಎಂದು ಊಹಿಸಿದ ನೆರೆಹೊರೆಯವರು ಮಗುವಿನ ನೆರವಿಗೆ ಧಾವಿಸಲೇ ಇಲ್ಲ. ಕೊನೆಯಲ್ಲಿ ಇಬ್ಬರು ಮಹಿಳಾ ಪೊಲೀಸರು ಈ ಕಂದನಿಗೆ ತಾಯಿ ಪ್ರೀತಿ ತೋರಿಸಿ ಜೀವ ಕಾಪಾಡಿದ್ದಾರೆ.

ಎರಡನೇ ಅಲೆಯಲ್ಲಿ ತೀವ್ರ ಬಾಧೆಗೊಳಗಾದ ನಗರ ಎನಿಸಿರುವ ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ ವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪುಣೆಯ ಸಮೀಪದ ಪಿಂಪ್ರಿ ಚಿಂಚ್‌ವಾಡ್‌ನ ಒಂದು ಮನೆಯೊಳಗೆ ಎರಡು ದಿನಗಳ ಕಾಲ, ಮೃತ ತಾಯಿಯ ದೇಹದ ಪಕ್ಕದಲ್ಲಿ ಈ ಮಗು ಕಾಲ ಕಳೆದಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಕೋವಿಡ್‌ಗೆ ಹೆದರಿ ಯಾರೂ ನೆರವಿಗೆ ಬರಲಿಲ್ಲ. ಶವದ ದುರ್ನಾತದಿಂದ ಬೇಸರಗೊಂಡ ಭೂಮಾಲೀಕನೊಬ್ಬ ಪೊಲೀಸರನ್ನು ಕರೆಸಿದ್ದಾನೆ.

ಸೋಮವಾರ, ಪೊಲೀಸರು ಮನೆಯೊಳಗೆ ಪ್ರವೇಶಿಸಿ ಮಹಿಳೆಯ ಶವ ಮತ್ತು ಆಕೆಯ ಪಕ್ಕದಲ್ಲಿರುವ ಶಿಶುವನ್ನು ಕಂಡುಕೊಂಡಿದ್ದಾರೆ. ಮಹಿಳೆ ಕಳೆದ ಶನಿವಾರ ಸಾವನ್ನಪ್ಪಿದ್ದಾಳೆ ಎಂದು ಶಂಕಿಸಲಾಗಿದೆ, ಅಂದರೆ 18 ತಿಂಗಳ ಮಗು ಆ ಸಮಯದಲ್ಲಿ ಎರಡು ದಿನ ಆಹಾರ ಅಥವಾ ನೀರಿಲ್ಲದೆ ಇತ್ತು.

ನೆರೆಹೊರೆಯವರು ಮಗುವನ್ನು ಮುಟ್ಟಲೂ ಹಿಂಜರಿದ ಸಂದರ್ಭವದು. ಆದರೆ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಸುಶೀಲಾ ಗಭಾಲೆ ಮತ್ತು ರೇಖಾ ವೇಜ್ ಅವರು ಮಗುವನ್ನು ಎತ್ತಿಕೊಂಡು ನೀರು, ಹಾಲು ಕುಡಿಸಿದರು. ಬಳಲಿದ್ದ ಕಂದ ಚೇತರಿಸಿಕೊಂಡಿದೆ.

“ನನಗೆ ಇಬ್ಬರು ಮಕ್ಕಳಿದ್ದಾರೆ, ಎಂಟು ಮತ್ತು ಆರು ವರ್ಷದವರು. ಈ ಮಗು ನನ್ನ ಸ್ವಂತ ಮಗುವಿನಂತೆ ಭಾಸವಾಯಿತು, ಅವನು ತುಂಬಾ ಹಸಿದಿದ್ದರಿಂದ ಅವನು ಬೇಗನೆ ಹಾಲು ಕುಡಿದ” ಎಂದು ಸುಶೀಲಾ ಗಭಾಲೆ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ಜ್ವರವನ್ನು ಹೊರತುಪಡಿಸಿದರೆ ಮಗು ಬೇರೆಲ್ಲ ರೀತಿಯಲ್ಲೂ ಚೆನ್ನಾಗಿತ್ತು ಎಂದು ಆಕೆಯ ಸಹೋದ್ಯೋಗಿ ರೇಖಾ ಹೇಳಿದ್ದಾರೆ.

“ನಾವು ವೈದ್ಯರಿಗೆ ತೋರಿಸಿದಾಗ ಮಗುವಿಗೆ ಸ್ವಲ್ಪ ಜ್ವರ ಇದ್ದುದು ತಿಳಿಯಿತು.. ಅವನಿಗೆ ಚೆನ್ನಾಗಿ ಆಹಾರವನ್ನು ಕೊಡುವಂತೆ ಅವರು ಹೇಳಿದರು, ಬೇಬಿ ಬಿಸ್ಕತ್, ನೀರು, ಹಾಲು ನೀಡಿದ ನಂತರ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕೊರೊನಾ ಪರೀಕ್ಷೆಗೆ ಕರೆದೊಯ್ಯಿದೆವು” ಎಂದು ಹೇಳಿದರು.

ಮಗುವಿನ ಕೊರೊನಾ ಪರೀಕ್ಷೆಯು ನೆಗೆಟಿವ್‌ ಆಗಿದ್ದು, ಪೋಷಣೆಗಾಗಿ ಸರ್ಕಾರಿ ತಂಡಕ್ಕೆ ವರ್ಗಾಯಿಸಲಾಗಿದೆ.
ಮಗುವಿನ ತಾಯಿಯ ಶವಪರೀಕ್ಷೆ ವರದಿ ಬರಬೇಕಿದೆ. ಅವರು ಹೇಗೆ ಸತ್ತರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ, ಅವರಿಗೆ ಕೊರೊನಾ ಇತ್ತೇ ಎಂಬುದು ಇನ್ನೂ ತಿಳಿದು ಬಂದಿಲ್ಲ.

“ಮಹಿಳೆಯ ಪತಿ ಕೆಲಸಕ್ಕಾಗಿ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ ಎಂದು ವರದಿಯಾಗಿದೆ. ಆತ ಹಿಂತಿರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ಪ್ರಕಾಶ್ ಜಾಧವ್ ಹೇಳಿದ್ದಾರೆ.

ಕೊರೊನಾ ಭೀತಿಯಲ್ಲಿರಬಹುದಾದ ನೆರೆಹೊರೆಯವರು ಕನಿಷ್ಠ ವಿಷಯ ಗೊತ್ತಾದ ಕೂಡಲೇ ಪೊಲಿಸರಿಗೆ ಫೋನ್ ಮಾಡುವ ಕಾಳಜಿಯನ್ನು ತೋರಿಲ್ಲ. ಎರಡು ದಿನ ಖಾಲಿ ಹೊಟ್ಟೆಯಲ್ಲಿ ಬದುಕಿದ ಮಗು ಈಗ ಸುರಕ್ಷಿತ ಕೈಗಳನ್ನು ತಲುಪಿದೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...