Homeಕರೋನಾ ತಲ್ಲಣಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

ಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

- Advertisement -
- Advertisement -

ಉತ್ತರಪ್ರದೇಶದಲ್ಲಿ ಆಮ್ಲಜನಕ ಸಿಲಿಂಡರ್ ಪಡೆಯಲು ಜನರು ಹತಾಶರಾಗಿ ಯತ್ನಿಸುತ್ತಿರುವ, ಬೆಡ್‌ಗಳು ಸಿಗದೇ ರೋಗಿಗಳು ಪರದಾಡುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಿಕ್ಕಿಯಿರುತ್ತಿರುವ ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವರದೇ ಪಕ್ಷದ ನಾಯಕರು ತೀವ್ರ ವಾಗ್ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಕಳೆದ ಒಂದು ವಾರದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಉತ್ತರಪ್ರದೇಶದ ಮೂವರು ಬಿಜೆಪಿ ಶಾಸಕರು ಕೋವಿಡ್‌ಗೆ ಬಲಿಯಾಗಿದ್ದು, ಮತ್ತು ನಿನ್ನೆ ಆಮ್ಲಜನಕ ಕೊರತೆಯಿಂದ 7 ಸಾರ್ವಜನಿಕರು ಅಸುನೀಗಿರುವುದು ಈ ಆಕ್ರೋಶಕ್ಕೆ ಕಾರಣವಾಗಿದೆ.

‘ಆಮ್ಲಜನಕ ಅಥವಾ ರೆಮ್ಡೆಸಿವಿರ್ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವ ಸಂಪೂರ್ಣವಾಗಿ ವಿಭಿನ್ನ ಕಥೆಯನ್ನು ಹೇಳುತ್ತದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹುಟ್ಟೂರು ಲಖನೌದಿಂದ 300 ಕಿಲೋಮೀಟರ್ ದೂರದಲ್ಲಿರುವ ಗೋರಖ್‌ಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ರೆಮ್‌ಡೆಸಿವಿರ್ ವಿತರಿಸಲಾಯಿತು. ಗೋರಖ್‌ಪುರದ ಡಿಎಂ ಕಚೇರಿಯ ಹೊರಗೆ ಔಷಧಿಗಾಗಿ ಜನರ ದೀರ್ಘ ಸರತಿ ಕಾಣಿಸಿಕೊಂಡಿತು. ಚುಚ್ಚುಮದ್ದಿನ ಎರಡು ಬಾಟಲುಗಳನ್ನು ಪಡೆಯಲು ಸುಮಾರು 24 ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಜನರು ಹೇಳಿದ್ದನ್ನೂ ಉಲ್ಲೇಖಿಸಿರುವ ಉತ್ತರಪ್ರದೇಶ ಬಿಜೆಪಿ ನಾಯಕರು ಯೋಗಿ ಸರ್ಕಾರದ ವೈಫಲ್ಯಕ್ಕೆ ಕಿಡಿ ಕಾರಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಆಗ್ರಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ತಾಯಿಗೆ ಆಮ್ಲಜನಕ ಸಿಲಿಂಡರ್ ಪಡೆಯಲು ಒಬ್ಬ ವ್ಯಕ್ತಿಯು ಪೊಲೀಸರ ಪಾದಕ್ಕೆ ಬೀಳುತ್ತಾರೆ. ಅದೇ ರೀತಿ, ಮತ್ತೊಂದು ವೀಡಿಯೊದಲ್ಲಿ, ನೋಯ್ಡಾದಲ್ಲಿ ಮಹಿಳೆಯೊಬ್ಬರು ರೆಮ್ಡೆಸಿವಿಯರ್ ಪಡೆಯಲು ಆರೋಗ್ಯ ಅಧಿಕಾರಿಯ ಪಾದಗಳಿಗೆ ನಮಸ್ಕರಿಸಿ ಬೇಡಿಕೊಳ್ಳುತ್ತಿದ್ದಾರೆ. ‘ಹೀಗೇ ಒತ್ತಾಯಿಸಿದರೆ ಜೈಲಿಗೆ ಕಳುಹಿಸುವುದಾಗಿ’ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

ಲಕ್ನೋದಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಯುಪಿಯ ಬಾಗಪತ್ ಜಿಲ್ಲೆಯ ವೀಡಿಯೊವೊಂದರಲ್ಲಿ, ಸರ್ಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾದ ಇಬ್ಬರು ರೋಗಿಗಳು ಹಾಸಿಗೆಯಿಂದ ಕೆಳಕ್ಕೆ ಬಿದ್ದು ನೆಲದ ಮೇಲೆ ಬಿದ್ದಿರುವುದನ್ನು ತೋರಿಸಲಾಗಿದೆ. ಅವರನ್ನು ಮತ್ತೆ ಹಾಸಿಗೆಯ ಮೇಲೆ ಇರಿಸಲು ಮತ್ತು ಅವರ ಬಾಯಿಗೆ ಆಮ್ಲಜನಕದ ಮಾಸ್ಕ್ ಅನ್ನು ಹಾಕಲು ವಾರ್ಡ್‌ನಲ್ಲಿ ಯಾರೂ ಇರಲಿಲ್ಲ. ರಾಜಧಾನಿಯಿಂದ ಸುಮಾರು 350 ಕಿಲೋಮೀಟರ್ ದೂರದಲ್ಲಿರುವ ಯುಪಿಯ ಮೊರಾದಾಬಾದ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದ ಏಳು ರೋಗಿಗಳು, ಆಸ್ಪತ್ರೆಗೆ ಆಮ್ಲಜನಕ ಪೂರೈಕೆಯ ನಂತರವೂ ಆಮ್ಲಜನಕ ಸಿಗದೇ ಸಾವನ್ನಪ್ಪಿದ್ದಾರೆ ಎಂದು ರೋಗಿಗಳ ಪರಿಚಾರಕರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಮೂವರು ಬಿಜೆಪಿ ಶಾಸಕರಾದ ಸುರೇಶ್ ಶ್ರೀವಾಸ್ತವ, ರಮೇಶ್ ದಿವಾಕರ್ ಮತ್ತು ಕೇಸರ್ ಸಿಂಗ್ ಗಂಗ್ವಾರ್ ಅವರು ಕೋವಿಡ್‌ನಿಂದ ನಿಧನರಾದ ನಂತರ ಆದಿತ್ಯನಾಥ್ ತಮ್ಮದೇ ಪಕ್ಷದ ಮುಖಂಡರ ಆಕ್ರೋಶಕ್ಕೆ ಒಳಗಾಗಿದ್ದಾರೆ. ಗಂಗ್ವಾರ್ ಅವರ ಕುಟುಂಬ ಸದಸ್ಯರ ಪ್ರಕಾರ, ದೆಹಲಿ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುವಂತೆ ಶಾಸಕರು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಗೆ ಪತ್ರ ಬರೆದಿದ್ದರು. ಆದರೆ ಯಾವುದೇ ಸಹಾಯ ದೊರೆತಿಲ್ಲ.

ತಮ್ಮ ಪಕ್ಷದ ಶಾಸಕರಿಗೇ ಚಿಕಿತ್ಸೆ ಕೊಡಿಸುವಲ್ಲಿ ಮುಖ್ಯಮಂತ್ರಿ ಯೋಗಿ ವಿಫಲರಾಗಿದ್ದಾರೆ ಎಂದು ಗಂಗ್ವಾರ್ ಅವರ ಪುತ್ರ ವಿಶಾಲ್ ಆದಿತ್ಯನಾಥ್ ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಯುಪಿ ಸರ್ಕಾರವು ಶಾಸಕರಿಗೆ ವೈದ್ಯಕೀಯ ಸೌಲಭ್ಯ ನೀಡಲು ಸಾಧ್ಯವಾಗಲಿಲ್ಲ. ನಾನು ಮುಖ್ಯಮಂತ್ರಿ ಕಚೇರಿಗೆ ಹಲವಾರು ಬಾರಿ ಕರೆ ಮಾಡಲು ಪ್ರಯತ್ನಿಸಿದೆ. ಆದರೆ ಯಾರೂ ಕರೆಗಳನ್ನು ಸ್ವೀಕರಿಸಲಿಲ್ಲ” ಎಂದು ವಿಶಾಲ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ತಮ್ಮ ತಂದೆಯ ಸಾವಿಗೆ ‘ಯುಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸಬೇಕು’ ಎಂದು ವಿಶಾಲ್ ವ್ಯಂಗ್ಯವಾಗಿ ಹೇಳಿದ್ದಾರೆ.

ಒಟ್ಟಿನಲ್ಲಿ ಉತ್ತರಪ್ರದೇಶದಲ್ಲಿ ಸಾಮಾನ್ಯ ಹಾಸಿಗೆ, ಆಕ್ಸಿಜನ್ ಕೊರತೆ, ಚಿಕಿತ್ಸೆಯ ಕೊರತೆಯಿಂದ ದಿನವೂ ನೂರಾರು ಕೋವಿಡ್ ಸಾವುಗಳು ಸಂಭವಿಸುತ್ತಿದ್ದರೂ, ಎಲ್ಲ ಸರಿಯಾಗಿದೆ ಎಂದು ಹೇಳುತ್ತ ಬಂದ ಯೋಗಿ ಆದಿತ್ಯನಾಥ ಮತ್ತು ಅವರ ಬೆಂಬಲಿಗರ ವಿರುದ್ಧ ಈಗ ಸ್ವಪಕ್ಷ ನಾಯಕರೇ ತಿರುಗಿ ಬಿದ್ದಿದ್ದಾರೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...