Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...