Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...