Homeಮುಖಪುಟಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

- Advertisement -
- Advertisement -

ಭಾರತಕ್ಕೆ ಅಪ್ಪಳಿಸಿರುವ ಕೋವಿಡ್ ಎರಡನೇ ಅಲೆಯನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ಆರೋಪಗಳು ದಟ್ಟವಾಗಿ ಕೇಳಿಬರುತ್ತಿರುವುದರ ನಡುವೆ ಕಳೆದ 15 ದಿನಗಳಿಂದಲೂ #ResignModi ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ನಲ್ಲಿರುವುದು ನಿಮಗೆಲ್ಲಾ ಗೊತ್ತಿರುವ ವಿಚಾರ. ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿರುವ ಸಾಮಾಜಿಕ ಜಾಲತಾಣ ಬಳಕೆದಾರರು ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ಹಾಕುವ ಪ್ರತಿಯೊಂದು ಫೋಟೊಗಳಿಗೆ #ResignModi ಎಂದು ಕಮೆಂಟ್ ಮಾಡುವು ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಹೆಚ್ಚುತ್ತಿರುವ ಪ್ರಕರಣಗಳ ನಡುವೆ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ, ಆಕ್ಸಿಜನ್ ಇಲ್ಲ, ಔಷಧಿಗಳು ಸಿಗುತ್ತಿಲ್ಲ.. ಎಲ್ಲಕ್ಕಿಂತ ಹೆಚ್ಚಾಗಿ ಕೋವಿಡ್ ಬರದಂತೆ ತಡೆಯಲು ಲಸಿಕೆ ಹಾಕಿಸಿಕೊಳ್ಳಲು ಸಹ ಸ್ಟಾಕ್ ಇಲ್ಲದ ಪರಿಸ್ಥಿತಿ ಉದ್ಭವಿಸಿದೆ. ಕೋವಿಡ್ ಬಂದು 15 ತಿಂಗಳಾದರೂ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಮೋದಿ ಸರ್ಕಾರ ವಿಫಲವಾಗಿದೆ. ಈಗ ಪ್ರತಿನಿತ್ಯ 3000 ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಈ ರೀತಿಯಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರು ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡುವುದು ಸೇರಿದಂತೆ ಮೋದಿ ಫೋಟೊ ಮತ್ತು ಪೋಸ್ಟ್‌ಗಳಿಗೆ ಕಮೆಂಟ್ ಮಾಡಿ ಕೋಪ ತೋರಿಸುತ್ತಿದ್ದಾರೆ.

ಏಪ್ರಿಲ್ 28 ರಂದು ಮೋದಿಯವರು “ಒಂದು ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸುತ್ತೇವೆ, 500ಕ್ಕೂ ಹೆಚ್ಚು ಪಿಎಸ್‌ಎ ಪ್ಲಾಂಟ್‌ಗಳನ್ನು ಹಾಕುತ್ತೇವೆ” ಎಂದು ಪೋಸ್ಟ್ ಒಂದನ್ನು ಹಾಕಿದ್ದರು. ಅದಕ್ಕೆ ದಾಖಲಾದ 42 ಸಾವಿರ ಕಮೆಂಟ್‌ಗಳಲ್ಲಿ ಬಹುತೇಕ ಕಮೆಂಟ್‌ಗಳು ಮೋದಿ ವಿರುದ್ಧ ಕೋಪ, ಆಕ್ರೋಶ ವ್ಯಕ್ತಪಡಿಸಿವೆ. ಮನೆ ಹೊತ್ತಿ ಉರಿಯುವಾಗ ಬಾವಿ ತೋಡಿದರು ಎಂಬಂತೆ ಇಷ್ಟು ದಿನ ಏನು ಮಾಡುತ್ತಿದ್ದೀರಿ? ಜನರ ಪ್ರಾಣ ಅಂದ್ರೆ ನಿಮಗೆ ಅಷ್ಟು ಸುಲಭವೇ? ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಬಹಳಷ್ಟು ಕನ್ನಡಿಗರು ಸಹ ಕನ್ನಡದಲ್ಲಿಯೇ ಪ್ರತಿಕ್ರಿಯೆ ನೀಡಿ ಸರ್ಕಾರದ ನೀತಿಗಳನ್ನು ಟೀಕಿಸಿದ್ದಾರೆ. ಆದರೆ #ResignModi ಕಮೆಂಟ್‌ಗಳು ಸಹಸ್ರಾರು ಸಂಖ್ಯೆಯಲ್ಲಿ ದಾಖಲಾಗುತ್ತಿವೆ.

ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಇನ್ನು ನರೇಂದ್ರ ಮೋದಿಯವರು 2009ರಲ್ಲಿ ತಮ್ಮ ಫೇಸ್‌ಬುಕ್ ಪುಟ ತೆರೆದಿದ್ದಾರೆ. ಆಗ ಅವರು ಗುಜರಾತ್‌ ಸಿಎಂ ಆಗಿದ್ದರು. ಆ ಸಂದರ್ಭದಿಂದ ಅವರು ತಮ್ಮ ಹಲವಾರು ಫೋಟೊಗಳನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಆ ಫೋಟೊಗಳನ್ನು ಬಿಡದ ನೆಟ್ಟಿಗರು ಅವಕ್ಕೂ ಸಹ #ResignModi ಕಮೆಂಟ್‌ಗಳನ್ನು ಮಾಡುವ ಮೂಲಕ ಮೋದಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇನ್ನು ಕಳೆದ 15 ದಿನಗಳಿಂದ ಸತತವಾಗಿ ಟ್ರೆಡಿಂಗ್‌ನಲ್ಲಿದ್ದ, ಕೋಟ್ಯಾಂತರ ಟ್ವೀಟ್‌ಗಳು, ಫೇಸ್‌ಬುಕ್ ಪೋಸ್ಟ್‌ಗಳು ದಾಖಲಾಗಿದ್ದ #ResignModi (‘ಮೋದಿ ರಾಜೀನಾಮೆ ನೀಡಿ’) ಎಂಬ ಹ್ಯಾಷ್‌ಟ್ಯಾಗ್‌ ಮತ್ತು ಅದರ ಹೆಸರಿನಲ್ಲಿ ದಾಖಲಾದ ಎಲ್ಲಾ ಪೋಸ್ಟ್‌ಗಳನ್ನು ಬುಧವಾರ ಫೇಸ್‌ಬುಕ್ ಇಂಡಿಯಾ ಬ್ಲಾಕ್ ಮಾಡಿತ್ತು. ಫೇಸ್‌ಬುಕ್ ಆಳುವ ಸರ್ಕಾರವನ್ನು ರಕ್ಷಿಸಲು ಮುಂದಾಗಿದೆ, ಇದು ಸೆನ್ಸಾರ್ ಶಿಪ್ ಅಲ್ಲವೇ? ಎಂಬ ವ್ಯಾಪಕ ಟೀಕೆಗಳು ಬಂದ ನಂತರ ಫೇಸ್‌ಬುಕ್ #ResignModi ಹ್ಯಾಷ್‌ಟ್ಯಾಗ್‌ ಅನ್ನು ಮರುಸ್ಥಾಪಿಸಿದೆ. ಇದೊಂದು ‘ಮಿಸ್ಟೇಕ್’ ಎಂದ ಕಂಪನಿ ಒಪ್ಪಿಕೊಂಡಿದೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...