Homeಮುಖಪುಟಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

- Advertisement -
- Advertisement -

ಭಾರತಕ್ಕೆ ಅಪ್ಪಳಿಸಿರುವ ಕೋವಿಡ್ ಎರಡನೇ ಅಲೆಯನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ಆರೋಪಗಳು ದಟ್ಟವಾಗಿ ಕೇಳಿಬರುತ್ತಿರುವುದರ ನಡುವೆ ಕಳೆದ 15 ದಿನಗಳಿಂದಲೂ #ResignModi ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ನಲ್ಲಿರುವುದು ನಿಮಗೆಲ್ಲಾ ಗೊತ್ತಿರುವ ವಿಚಾರ. ಈಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿರುವ ಸಾಮಾಜಿಕ ಜಾಲತಾಣ ಬಳಕೆದಾರರು ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ಹಾಕುವ ಪ್ರತಿಯೊಂದು ಫೋಟೊಗಳಿಗೆ #ResignModi ಎಂದು ಕಮೆಂಟ್ ಮಾಡುವು ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಹೆಚ್ಚುತ್ತಿರುವ ಪ್ರಕರಣಗಳ ನಡುವೆ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ, ಆಕ್ಸಿಜನ್ ಇಲ್ಲ, ಔಷಧಿಗಳು ಸಿಗುತ್ತಿಲ್ಲ.. ಎಲ್ಲಕ್ಕಿಂತ ಹೆಚ್ಚಾಗಿ ಕೋವಿಡ್ ಬರದಂತೆ ತಡೆಯಲು ಲಸಿಕೆ ಹಾಕಿಸಿಕೊಳ್ಳಲು ಸಹ ಸ್ಟಾಕ್ ಇಲ್ಲದ ಪರಿಸ್ಥಿತಿ ಉದ್ಭವಿಸಿದೆ. ಕೋವಿಡ್ ಬಂದು 15 ತಿಂಗಳಾದರೂ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಮೋದಿ ಸರ್ಕಾರ ವಿಫಲವಾಗಿದೆ. ಈಗ ಪ್ರತಿನಿತ್ಯ 3000 ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಈ ರೀತಿಯಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರು ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡುವುದು ಸೇರಿದಂತೆ ಮೋದಿ ಫೋಟೊ ಮತ್ತು ಪೋಸ್ಟ್‌ಗಳಿಗೆ ಕಮೆಂಟ್ ಮಾಡಿ ಕೋಪ ತೋರಿಸುತ್ತಿದ್ದಾರೆ.

ಏಪ್ರಿಲ್ 28 ರಂದು ಮೋದಿಯವರು “ಒಂದು ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸುತ್ತೇವೆ, 500ಕ್ಕೂ ಹೆಚ್ಚು ಪಿಎಸ್‌ಎ ಪ್ಲಾಂಟ್‌ಗಳನ್ನು ಹಾಕುತ್ತೇವೆ” ಎಂದು ಪೋಸ್ಟ್ ಒಂದನ್ನು ಹಾಕಿದ್ದರು. ಅದಕ್ಕೆ ದಾಖಲಾದ 42 ಸಾವಿರ ಕಮೆಂಟ್‌ಗಳಲ್ಲಿ ಬಹುತೇಕ ಕಮೆಂಟ್‌ಗಳು ಮೋದಿ ವಿರುದ್ಧ ಕೋಪ, ಆಕ್ರೋಶ ವ್ಯಕ್ತಪಡಿಸಿವೆ. ಮನೆ ಹೊತ್ತಿ ಉರಿಯುವಾಗ ಬಾವಿ ತೋಡಿದರು ಎಂಬಂತೆ ಇಷ್ಟು ದಿನ ಏನು ಮಾಡುತ್ತಿದ್ದೀರಿ? ಜನರ ಪ್ರಾಣ ಅಂದ್ರೆ ನಿಮಗೆ ಅಷ್ಟು ಸುಲಭವೇ? ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಬಹಳಷ್ಟು ಕನ್ನಡಿಗರು ಸಹ ಕನ್ನಡದಲ್ಲಿಯೇ ಪ್ರತಿಕ್ರಿಯೆ ನೀಡಿ ಸರ್ಕಾರದ ನೀತಿಗಳನ್ನು ಟೀಕಿಸಿದ್ದಾರೆ. ಆದರೆ #ResignModi ಕಮೆಂಟ್‌ಗಳು ಸಹಸ್ರಾರು ಸಂಖ್ಯೆಯಲ್ಲಿ ದಾಖಲಾಗುತ್ತಿವೆ.

ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಇನ್ನು ನರೇಂದ್ರ ಮೋದಿಯವರು 2009ರಲ್ಲಿ ತಮ್ಮ ಫೇಸ್‌ಬುಕ್ ಪುಟ ತೆರೆದಿದ್ದಾರೆ. ಆಗ ಅವರು ಗುಜರಾತ್‌ ಸಿಎಂ ಆಗಿದ್ದರು. ಆ ಸಂದರ್ಭದಿಂದ ಅವರು ತಮ್ಮ ಹಲವಾರು ಫೋಟೊಗಳನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಆ ಫೋಟೊಗಳನ್ನು ಬಿಡದ ನೆಟ್ಟಿಗರು ಅವಕ್ಕೂ ಸಹ #ResignModi ಕಮೆಂಟ್‌ಗಳನ್ನು ಮಾಡುವ ಮೂಲಕ ಮೋದಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇನ್ನು ಕಳೆದ 15 ದಿನಗಳಿಂದ ಸತತವಾಗಿ ಟ್ರೆಡಿಂಗ್‌ನಲ್ಲಿದ್ದ, ಕೋಟ್ಯಾಂತರ ಟ್ವೀಟ್‌ಗಳು, ಫೇಸ್‌ಬುಕ್ ಪೋಸ್ಟ್‌ಗಳು ದಾಖಲಾಗಿದ್ದ #ResignModi (‘ಮೋದಿ ರಾಜೀನಾಮೆ ನೀಡಿ’) ಎಂಬ ಹ್ಯಾಷ್‌ಟ್ಯಾಗ್‌ ಮತ್ತು ಅದರ ಹೆಸರಿನಲ್ಲಿ ದಾಖಲಾದ ಎಲ್ಲಾ ಪೋಸ್ಟ್‌ಗಳನ್ನು ಬುಧವಾರ ಫೇಸ್‌ಬುಕ್ ಇಂಡಿಯಾ ಬ್ಲಾಕ್ ಮಾಡಿತ್ತು. ಫೇಸ್‌ಬುಕ್ ಆಳುವ ಸರ್ಕಾರವನ್ನು ರಕ್ಷಿಸಲು ಮುಂದಾಗಿದೆ, ಇದು ಸೆನ್ಸಾರ್ ಶಿಪ್ ಅಲ್ಲವೇ? ಎಂಬ ವ್ಯಾಪಕ ಟೀಕೆಗಳು ಬಂದ ನಂತರ ಫೇಸ್‌ಬುಕ್ #ResignModi ಹ್ಯಾಷ್‌ಟ್ಯಾಗ್‌ ಅನ್ನು ಮರುಸ್ಥಾಪಿಸಿದೆ. ಇದೊಂದು ‘ಮಿಸ್ಟೇಕ್’ ಎಂದ ಕಂಪನಿ ಒಪ್ಪಿಕೊಂಡಿದೆ.


ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...