Homeಕರ್ನಾಟಕ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯರಿಂದ ದಾಳಿಗೊಳಗಾದ ಸತೀಶ್‌ ಆಚಾರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ

- Advertisement -
- Advertisement -

ಕೊರೊನಾ ಲಸಿಕೆಯನ್ನು ರಾಜಕೀಯಕ್ಕೆ ಬಳಸಿರುವ ರಾಜಕಾರಣದ ಕುರಿತು ಬರೆಯಲಾಗಿದ್ದ ವ್ಯಂಗ್ಯಚಿತ್ರದ ಕಾರಣಕ್ಕೆ, ಬಿಜೆಪಿ ಐಟಿ ಸೆಲ್‌ ಮತ್ತು ಬಲಪಂಥೀಯ ಬೆಂಬಲಿಗರು, ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ ಅವರನ್ನು ನಿಂದಿಸುತ್ತಿದ್ದು, ಇದರ ವಿರುದ್ದವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶಗಳೆದ್ದಿದೆ.

ಸತೀಶ್ ಆಚಾರ್ಯ ಅವರು ಕೊರೊನಾ ಸೋಂಕನ್ನು ಆಡಳಿತ ಪಕ್ಷಗಳು ಹೇಗೆ ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಹಾಗೂ ಕೊರೊನಾ ಸೋಂಕನ್ನು ಆಡಳಿತವು ನಿರ್ವಹಣೆ ಮಾಡುವಲ್ಲಿ ಆಗಿರುವ ವಿಫಲತೆಯ ಬಗ್ಗೆ ವ್ಯಂಗ್ಯ ಚಿತ್ರವನ್ನು ನಿರಂತರವಾಗಿ ಬರೆಯುತ್ತಲೆ ಬಂದಿದ್ದಾರೆ. ಅದರಲ್ಲೂ ಮುಖ್ಯವಾಗಿ ಕೊರೊನಾ ಲಸಿಕೆಯನ್ನು ಆಡಳಿತ ಪಕ್ಷಗಳು ಹೇಗೆ ತಮ್ಮ ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂಬುವುದರ ಬಗ್ಗೆ ವ್ಯಂಗ್ಯಚಿತ್ರಗಳ ಮೂಲಕ ತೀಕ್ಷ್ಣವಾಗಿ ಟೀಕಿಸುತ್ತಲೆ ಬಂದಿದ್ದರು. ಇದು ಆಡಳಿತ ಪಕ್ಷವಾದ ಬಿಜೆಪಿ ಹಾಗೂ ಬಲಪಂಥೀಯರ ಕಣ್ಣು ಕೆಂಪಾಗಿಸುವಂತಾಗಿದೆ.

ದೇಶದಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಪ್ರಾರಂಭವಾದ ಹಿನ್ನಲೆಯಲ್ಲಿ ಸತೀಶ್ ಅವರು ಲಸಿಕೆಯನ್ನು ಪಡೆದು, ತಾವು ಲಸಿಕೆ ಪಡೆಯುತ್ತಿರುವ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಈ ಚಿತ್ರವನ್ನು ಹಾಗೂ ಲಸಿಕೆಯನ್ನು ರಾಜಕೀಯಕ್ಕೆ ಬಳಸಿರುವ ಕುರಿತು ಬರೆದಿದ್ದ ವ್ಯಂಗ್ಯ ಚಿತ್ರವನ್ನು ಬಳಸಿಕೊಂಡು ಬಲಪಂಥೀಯರು ಅವರ ನಿಂದನೆಗೆ ಇಳಿದಿದ್ದಾರೆ. ಕೆಲವರು ಅವರ ಜಾತಿಯನ್ನು ಉಲ್ಲೇಖಿಸಿ ಜನಾಂಗೀಯ ನಿಂದನೆಗೆ ಕೂಡಾ ಇಳಿದಿದ್ದಾರೆ.

ಇದನ್ನೂ ಓದಿ: ‘ಮತ ಎಣಿಕೆ ಮುಂದೂಡಿದರೆ ಸ್ವರ್ಗವೇನು ಬೀಳುವುದಿಲ್ಲ’ – ಯುಪಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕಟುನುಡಿ

ಈ ಬಗ್ಗೆ ಸತೀಶ್ ಅವರು ತಮ್ಮ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಸಾರ್ವಜನಿಕವಾಗಿ ನಾನು ಲಸಿಕೆಯನ್ನು ಟೀಕಿಸುತ್ತೇನೆ ಆದರೆ ಖಾಸಗಿಯಾಗಿ ಅದನ್ನು ತೆಗೆದುಕೊಂಡಿದ್ದೇನೆ ಎಂದು ಬಿಜೆಪಿ ಐಟಿ ಸೆಲ್‌ ಹೇಳುತ್ತಿದೆ. ಲಸಿಕೆಯನ್ನು ರಾಜಕೀಯಕ್ಕೆ ಬಳಸಿರುವುದನ್ನು ನಾನು ಟೀಕಿಸುತ್ತಿದ್ದೇನೆ ಎಂದು ತಿಳಿದುಕೊಳ್ಳುವ ಸಾಮಾನ್ಯ ಜ್ಞಾನವಿರುತ್ತಿದ್ದರೆ, ಐಟಿ ಸೆಲ್‌ನ ಈ ಯೋಧರು, ಮೆದುಳಿಲ್ಲದ ಐಟಿ ಸೆಲ್‌ನಲ್ಲಿ ಇರುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ವ್ಯಂಗ್ಯಚಿತ್ರ ಬರೆದಿರುವ ಕಾರಣಕ್ಕೆ ಬಿಜೆಪಿ ಬೆಂಬಲಿಗರು ಮಾತ್ರವಲ್ಲದೆ ಪತ್ರಕರ್ತರು ಕೂಡಾ ಅವರನ್ನು ನಿಂದಿಸುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚಾನೆಲ್‌ನ ನಿರೂಪರಕಾದ ಅಜಿತ್ ಹನುಮಕ್ಕನವರ್‌ ತಮ್ಮ ಟಿವಿ ಕಾರ್ಯಕ್ರಮವೊಂದರಲ್ಲಿ ವ್ಯಂಗ್ಯ ಚಿತ್ರವನ್ನು ಬರೆದ ಸತೀಶ್ ಅವರಿಗೆ ‘ಕೆರೆನೋ, ಬಾವಿನೋ ನೋಡಿಕೊಳ್ಳಿ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಅಜಿತ್ ಅವರ ಮಾತಿಗೆ ಫೇಸ್‌‌ಬುಕ್‌ನ ಕಮೆಂಟ್‌ ಒಂದರಲ್ಲಿ ಪ್ರತಿಕ್ರಿಯಿಸಿರುವ ಸತೀಶ್ ಅವರು, “ಸರಕಾರವನ್ನು ಪ್ರಶ್ನಿಸದೆ ಐಟಿ ಸೆಲ್ ಸೇರಿಕೊಂಡ ಇಂತವರಿಗೆ ಜರ್ನಲಿಸಂ ಬರೀ ವ್ಯವಹಾರ. ಇದನ್ನು ಬಿಟ್ಟು ಹುಬ್ಳಿ-ದಾರಾವಾಡದಲ್ಲೋ ರಿಸಾರ್ಟ್ ವ್ಯವಹಾರ ಶುರು ಮಾಡಿದ್ರೆ ದೇಶಕ್ಕೂ ಉಪಕಾರವಾಗುತ್ತೆ. ಇಂತವರನ್ನು ನೋಡಿ ಯುವ ಜನರು ಜರ್ನಲಿಸಂ-ನಿಂದ ದೂರ ಓಡಿ ಹೋಗೋದೂ ನಿಲ್ಲುತ್ತೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೇಖಕಿ ಚೇತನಾ ತೀರ್ಥಹಳ್ಳಿ, “ಸತೀಶ್ ಆಚಾರ್ಯರ ಕಾರ್ಟೂನ್ ಕೂಡಾ ಅರ್ಥವಾಗಲಿಲ್ಲ ಅಂದರೆ…ಅಜಿತ್ ನಿಜವಾಗ್ಲೂ ಪತ್ರಕರ್ತನೇ? ನನಗಂತೂ ಅನುಮಾನ, ಅಥವಾ ಮೆದುಳು ಅಡವಿಟ್ಟ ಪರಿಣಾಮವೆ!” ಎಂದು ಕಿಡಿ ಕಾರಿದ್ದಾರೆ.

ಅಷ್ಟೇ ಅಲ್ಲದೆ ಚಿರು ಭಟ್ ಎಂಬವರು ಸತೀಶ್ ಅವರನ್ನು ನಿಂದಿಸಿ ಹಾಕಿದ್ದ ಪೋಸ್ಟ್‌ ಒಂದಕ್ಕೆ ಜಯರಾಜ ಸಿ.ಎಂ. ಎಂಬವರೊಬ್ಬರು, “ಹುಟ್ಟಿನಿಂದ ಅವನು ಆಚಾರ್ಯನಾಗಿರಬಹುದು ಆದರೆ ಅವನು ಶೂದ್ರನಿಗಿಂತ ಕೆಟ್ಟವನು” ಎಂದು ಜನಾಂಗೀಯ ನಿಂದನೆ ಕೂಡಾ ಮಾಡಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಅಷ್ಟೇ ಅಲ್ಲದೆ ಅವರ ಜಾತಿ ವಿಚಾರದಲ್ಲಿ ಹಲವರು ಜನಾಂಗಿಯ ನಿಂದನೆ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಅವರ ಮೇಲೆ ಬಿಜೆಪಿ ಐಟಿ ಸೆಲ್ ದಾಳಿ ಹೆಚ್ಚುತ್ತಿದ್ದಂತೆ ಸಾಮಾಜಿಕ ಹೋರಾಟಗಾರು ಸೇರಿದಂತೆ ಹಲವಾರು ಗಣ್ಯರು ಸತೀಶ್ ಆಚಾರ್ಯ ಅವರನ್ನು ಬೆಂಬಲಿಸಿ ಅವರ ಬೆನ್ನಿಗೆ ನಿಂತಿದ್ದಾರೆ.

ವ್ಯಂಗ್ಯ ಚಿತ್ರಕಾರ ಪಿ. ಮೊಹಮ್ಮದ್ ಅವರು, “ಕೆಲವು ದಿನಗಳಿಂದ ಕೆಲವು ಬಿಜೆಪಿ ಬೆಂಬಲಿಗರು ಕಾರ್ಟೂನಿಸ್ಟ್ ಗೆಳೆಯ ಸತೀಶ್‌ ಆಚಾರ್ಯ ಅವರ ಹಿಂದೆ ಬಿದ್ದಿದ್ದಾರೆ. ಮೊನ್ನೆ ಟ್ವಿಟ್ಟರಲ್ಲಿ ಕೆಲವರು ಸತೀಶರ ಜಾತಿಯನ್ನು ಪ್ರಸ್ತಾಪಿಸಿ ಹೀಗಳೆಯುವುದು ಕಂಡು ಆಘಾತಪಟ್ಟೆ!. ನನಗೆ ಸತೀಶ್ ಮೂರು ದಶಕಗಳಿಗಿಂತಲೂ ಹೆಚ್ಚು ಪರಿಚಯ. ಆದರೆ ಅವರು ಯಾವ ಜಾತಿ ಎಂದು ಕೆದಕದೆಯೇ ನಮ್ಮ ಗೆಳೆತನ ಬೆಳೆದು ಬಂದಿದೆ. ಆದರೆ ಈಗಿನ ಕೆಲವು ‘ಹಿಂದೂ ಧರ್ಮ ರಕ್ಷಕ’ರಿಗೆ ಅವರ ಜಾತಿ ಪತ್ತೆ ಮಾಡಬೇಕು. ನಂತರ ಅದನ್ನು ಎತ್ತಿ ಹೇಳಿ ಅವಮಾನಮಾಡಬೇಕು!! ಆ ಟ್ರೋಲಿಂಗ್ ಮಾಡುತ್ತಿದ್ದ ಹೆಸರುಗಳೆಲ್ಲ ಮೇಲ್ಜಾತಿಯನ್ನು ಸೂಚಿಸುತ್ತಿದ್ದವು.
ಸತೀಶ್, ಇದು ನಿಮಗೆ ಹೊಸ ಅನುಭವವೇನೂ ಅಲ್ಲ. ಇಂಥ ವೈರಸಗಳಿಗೆ ಕಳೆದ ಕೆಲವು ವರ್ಷಗಳಿಂದ ನಮ್ಮೊಳಗೆಯೇ anti-bodies ನಿರ್ಮಾಣ ಆಗಿವೆ. ಟ್ರೋಲ್ ವೈರಸಗಳ ಕಾಲ ಮುಗಿಯುತ್ತಾ ಬಂತು!! take care.” ಎಂದು ಧೈರ್ಯ ತುಂಬಿದ್ದಾರೆ.

ಲೇಖಕ ನಾ. ದಿವಾಕರ ಅವರು, “ಅಜಿತ್ ಹನುಮಕ್ಕನವರೆ, ಮೊದಲು ನಿಮಗೆ ಒಂದು ಮಾತನ್ನು ಸ್ಪಷ್ಟಪಡಿಸುತ್ತೇನೆ. ಯಾವ ರೀತಿಯಿಂದ ನೋಡಿದರೂ, ಯಾವ ಮಗ್ಗುಲಿನಿಂದ‌ ನೋಡಿದರೂ ನಿಮ್ಮನ್ನು ಪತ್ರಕರ್ತ ಎಂದು ಭಾವಿಸಲಾಗುವುದಿಲ್ಲ ಎನಿಸುತ್ತದೆ. ಆದರೂ ನೀವು ಒಂದು ಪ್ರತಿಷ್ಠಿತ ಸುದ್ದಿಮನೆಯಲ್ಲಿ ಕುಳಿತು ಅಧಿಕೃತವಾಗಿ ಸುದ್ದಿ ಸಂಪಾದಕತ್ವ ಮತ್ತು ನಿರೂಪಣೆ, ವಾಚನ (ಕ್ಷಮಿಸಿ ನಿಮ್ಮ ಅರಚಾಟದ ಹೊರತಾಗಿಯೂ ಅದನ್ನು ವಾಚನ ಎಂದೇ ಕರೆಯಬೇಕು, ಶಿಷ್ಟಾಚಾರ) ಮಾಡುತ್ತಿರುವುದರಿಂದ ನಿಮ್ಮನ್ನು ಮಾಧ್ಯಮ ಪ್ರತಿನಿಧಿ – ಪತ್ರಕರ್ತ ಎಂದೇ ತಾಂತ್ರಿಕವಾಗಿ ಪರಿಗಣಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಒಬ್ಬ ಪತ್ರಕರ್ತನಿಗೆ, ಅದರಲ್ಲೂ ಸುದ್ದಿ ಸಂಪಾದಕನಿಗೆ ಮೂಲತಃ ಭಾಷಾ ಸೌಜನ್ಯ, ಭಾಷಾ ಸಭ್ಯತೆ ಮತ್ತು ಸಂಯಮ ಇರಬೇಕು. ಇದು ಪತ್ರಿಕೋದ್ಯಮದ ಮೂಲ‌ಮಂತ್ರ. ಇತ್ತೀಚಿನ ದಿನಗಳಲ್ಲಿ ಮೌಲ್ಯಗಳೇ ಇಲ್ಲದ ಮಾಧ್ಯಮಗಳು ಹೆಚ್ಚಾಗುತ್ತಿರುವುದರಿಂದ‌ ನಿಮ್ಮಿಂದ ಇದನ್ನು ನಿರೀಕ್ಷಿಸುವುದೂ ಸರಿಯಲ್ಲ ಎನಿಸುತ್ತದೆ. ಆದರೂ ನಿಮ್ಮ ಮಾತು, ನೀವು ಬಳಸುವ ಭಾಷೆ, ಪರಿಭಾಷೆ ಇವೆಲ್ಲವೂ ಲಕ್ಷಾಂತರ ಜನರನ್ನು ನೇರವಾಗಿ ತಲುಪುತ್ತದೆ. ಅಷ್ಟೇ ಪ್ರಭಾವವನ್ನೂ ಬೀರುತ್ತದೆ. ಇದು ದೃಶ್ಯ ಮಾಧ್ಯಮದ ವೈಶಿಷ್ಟ್ಯ. ಹಾಗಾಗಿ ನಿಮ್ಮ ಭಾಷಾ ಬಳಕೆಯನ್ನು ನೀವೇ ಒಮ್ಮೆ ಕುಳಿತು, ಕೇಳುಗನಾಗಿ ಆಲಿಸಿನೋಡಿ. ನಿಮ್ಮಲ್ಲಿ ಸಹಜ ಪ್ರಜ್ಞೆ ಇದ್ದರೆ ಕೇಳಿದ ನಂತರ ಕನ್ನಡಿಯ ಮುಂದೆ ನಿಲ್ಲಲಾರಿರಿ” ಎಂದು ಎಂದು ದಿವಾಕರ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಪರ ಹೋರಾಟಗಾರ, ದಿನೇಶ್ ಕುಮಾರ್‌ ಅವರು, “ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ. ನಿಮ್ಮ ಕಾರ್ಟೂನು ನಮಗೆ ಬೇಕು ಮತ್ತು ಬೇಕೇ ಬೇಕು” ಎಂದು ಹೇಳಿದ್ದಾರೆ.

ವ್ಯಂಗ್ಯ ಚಿತ್ರಕಾರ ದಿನೇಶ್‌ ಕುಕ್ಕುಜಡ್ಕ ಅವರು, “ಕಳೆದ ಆರೇಳು ವರ್ಷಗಳಿಂದ ಇಡೀ ದೇಶದಲ್ಲೇ ಕಾರ್ಟೂನಿಸ್ಟ್‌ಗಳ ಮೇಲೆ ಸೋಷಿಯಲ್ ಮೀಡಿಯಾ ಗುಂಪು ದಾಳಿಗಳು, ಫಿಸಿಕಲ್ ಅಟ್ಯಾಕ್ ಗಳೂ ನಡೆಯುವುದು ಸಾಮಾನ್ಯ ಎನಿಸಿಬಿಟ್ಟಿವೆ. ಎಷ್ಟೋ ಬಾರಿ ನಾನಂದುಕೊಂಡದ್ದು ಇದೆ. ಕಾರ್ಟೂನ್ ನೋಡುವುದು ಹೇಗೆ ಎಂಬ ಕುರಿತೇ ಜನರಿಗೆ ಪಠ್ಯ ಅಥವಾ ಸೆಮಿನಾರ್ ಮಾಡಬೇಕಾದ ಅಗತ್ಯವಿದೆ” ಎಂದು ಬರೆದಿದ್ದಾರೆ.

“ಅಂದಿನ ಬಸವಣ್ಣನಿಂದ ಹಿಡಿದು, ಮೊನ್ನೆ ಮೊನ್ನೆಯ ಗಾಂಧಿ, ದಾಬೋಲ್ಕರ್, ಗೌರಿಯರವರೆಗೆ…. ಇದೇ ಮೇಲ್ವರ್ಗದ ಸಂಚಿಗೆ ಬಲಿಯಾದ ದಕ್ಷಿಣ ಕನ್ನಡ ದ ಆರಾಧ್ಯ ದೈವಗಳಾದ ಕಲ್ಕುಡ ಕಲ್ಲುರ್ಟಿಯರಿಂದ ಹಿಡಿದು ಕೋಟಿ ಚೆನ್ನಯರವರೆಗೆ ಈ ನೆಲದಲ್ಲಿ ಪುರಾಣ ಇತಿಹಾಸಗಳ ಏಳುಬೀಳುಗಳ ಹಸಿಹಸಿ ನೆನಪು ನೆನವರಿಕೆಗಳಿವೆ. ಆ ನೆನಪುಗಳಲ್ಲಿ ಜೀವ ಪುಟಿಯುವ ಎದೆಯ ಉತ್ತೇಜಕ ದ್ರವ್ಯಗಳಿವೆ. ನನ್ನ ಚಿತ್ರ ನನ್ನದು. Always with you ಸತೀಶಣ್ಣ. ನಮ್ಮೆಲ್ಲರದೂ ಒಂದೇ ಧರ್ಮ- ಅದು ಮನುಷ್ಯ ಧರ್ಮ! Cheers!” ಎಂದು ದಿನೇಶ್‌ ಅವರು ಬರೆದಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...