HomeUncategorizedಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

ಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

- Advertisement -
- Advertisement -

ಸಹ್ಯಾದ್ರಿ ಕಾಲೇಜು ಶಿಕ್ಷಣ ಕ್ಷೇತ್ರದ ಮುಡಿಯ ಮಾಣಿಕ್ಯ. ಶಿವಮೊಗ್ಗ ಜಿಲ್ಲೆಯ ಅನತ್ಯತೆ ಮತ್ತು ಸ್ವಾಭಿಮಾನದ ಪ್ರತೀಕ. ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ತಲೆ ಎತ್ತಿನಿಂತ ಜ್ಞಾನದ ಶಿಖರ. ಸಾವಿರ ಸಾವಿರ ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುತ್ತಿರುವ ಭಾಗೀರಥಿ. ನೂರಾರು ಶ್ರೇಷ್ಠ ವಿಜ್ಞಾನಿಗಳು, ಅಧ್ಯಾಪಕರು, ರಾಜಕಾರಣಿಗಳು, ಐ.ಎ.ಎಸ್, ಕೆ.ಎ.ಎಸ್ ಆಡಳಿತತಜ್ಞರನ್ನು, ಜ್ಞಾನಪೀಠ ಪುರಸ್ಕೃತ ಕವಿಗಳನ್ನು, ಸಾಹಿತಿಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದ ಶ್ರೇಯಸ್ಸು ಸಹ್ಯಾದ್ರಿ ಕಾಲೇಜಿಗೆ ಸಲ್ಲುತ್ತದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಉದ್ಘಾಟಿಸುವುದರೊಂದಿಗೆ 1941ರಲ್ಲಿ ಪ್ರಾರಂಭವಾದ ಸಹ್ಯಾದ್ರಿ ಕಾಲೇಜಿಗೆ ಭವ್ಯ ಪರಂಪರೆಯಿದೆ. ಇಂತಹ ಭವ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕಾಲೇಜಿನ ಆವರಣ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ “ಖೇಲೋ ಇಂಡಿಯಾ ಕ್ರೀಡಾಹಬ್ ಆಗಿ ಸಾರ್ವಜನಿಕರಿಗೂ ವಿದ್ಯಾರ್ಥಿಗಳಿಗೂ ನಿರ್ಬಂಧಿತ ಪ್ರದೇಶವಾಗಿ ಮಾರ್ಪಾಡಾಗುತ್ತಿದೆ.

1941ರಲ್ಲಿ ಸಹ್ಯಾದ್ರಿ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಏಕೈಕ ಸರ್ಕಾರಿ ಕಾಲೇಜಾಗಿತ್ತು. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ದಾನಿಗಳಿಂದ ಸುಮಾರು 100 ಎಕರೆ ಭೂಮಿಯನ್ನು ದಾನವಾಗಿ ಪಡೆದು ಕಾಲೇಜನ್ನು ಪ್ರಾರಂಭಿಸಿದರು. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜನ್ನು ’ಸಹ್ಯಾದ್ರಿ ಎಂದು ನಾಮಕರಣ ಮಾಡಿದವರು ಜಗದ ಕವಿ, ಯುಗದ ಕವಿ, ರಾಷ್ಟ್ರಕವಿ ಎಂದು ಪ್ರಖ್ಯಾತರಾದ ಕುವೆಂಪು ಅವರು. ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲಿಗೆ ಕಲಾ ಮತ್ತು ವಿಜ್ಞಾನ ಎರಡೂ ವಿಭಾಗಗಳು ಸೇರಿಕೊಂಡಿದ್ದರಿಂದ, ಒಂದೇ ಕಟ್ಟಡದಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಸರಿದೂಗಿಸುವುದು ಕಷ್ಟವೆಂದರಿತ ಸರ್ಕಾರ ೧೯೮೪ರಲ್ಲಿ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳೆಂದು ಬೇರ್ಪಡಿಸಿತು. ಇದೇ ಕಾಲದಲ್ಲಿ ವಾಣಿಜ್ಯ ವಿಭಾಗವೂ ಸೇರಿಕೊಂಡಿತು. ೧೯೮೬ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಅದು ಸಂಪನ್ಮೂಲ ಕೊರತೆಯಿಂದ ಬಳಲುತ್ತಿದ್ದಾಗ ಈ ಸಹ್ಯಾದ್ರಿಯ ಕಟ್ಟಡವು ಸೇರಿದಂತೆ ಭೂಮಿಯನ್ನು ಅದಕ್ಕೆ ಹಸ್ತಾಂತರಿಸಲಾಗಿತ್ತು.

ಪ್ರಸ್ತುತ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಪ್ರತ್ಯೇಕ ಕಟ್ಟಡಗಳನ್ನು ಹೊಂದಿವೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಸೇರಿದಂತೆ 6,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂರು ಕಾಲೇಜುಗಳ ಕಟ್ಟಡ ಅಲ್ಲದೆ ವಜ್ರಮಹೋತ್ಸವ ಭವನ, ವಿಶಾಲವಾದ ಕ್ರೀಡಾ ಮೈದಾನ, ಕಾಲೇಜು ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯಗಳೂ ಇದೇ ಸಹ್ಯಾದ್ರಿ ಆವರಣದಲ್ಲಿವೆ.

ಇವು ವಿಶ್ವವಿದ್ಯಾಲಯಕ್ಕೆ ಸೇರಿದವು. ಅಲ್ಲದೆ ಜೆ.ಡಿ ಕಚೇರಿ, ಟಿ.ವಿ ಟವರ್ ಕಟ್ಟಡ, ಎನ್‌ಸಿಸಿ ಕ್ವಾರ್‍ಟರ್ಸ್, ದೇವರಾಜ ಅರಸು ಹಿಂದುಳಿದ ವಿದ್ಯಾರ್ಥಿನಿಲಯ, ಮಸೀದಿ, ಚೌಡಮ್ಮ ದೇವಸ್ಥಾನ ಇವೆಲ್ಲವೂ ಸಹ್ಯಾದ್ರಿ ಆವರಣದಲ್ಲಿ ಇವೆ. ಕೇವಲ 100 ಎಕರೆ ಭೂಮಿಯಲ್ಲಿ ಇಷ್ಟೆಲ್ಲ ಕಟ್ಟಡಗಳಿರುವಾಗ ಕ್ರೀಡಾಹಬ್ ಎಲ್ಲಿ ನಿರ್ಮಾಣ ಮಾಡಲು ಸಾಧ್ಯ.

ನಿಜಕ್ಕೂ ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ಎಂದರೆ ಅಲ್ಲಿ ಕ್ರಿಕೆಟ್ ಕ್ರೀಡಾಂಗಣ, ಹಾಕಿ, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕೊಕ್ಕೊ, ಈಜುಕೊಳ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ನಿಲಯ, ತರಬೇತಿದಾರರಿಗೆ ವಸತಿಗೃಹ ಇವೆಲ್ಲವೂ ಅಂತಾರಾಷ್ಟ್ರೀಯ ಮಟ್ಟದಲ್ಲೇ ನಿರ್ಮಾಣವಾಗಬೇಕಲ್ಲವೆ? ಇಷ್ಟೆಲ್ಲವೂ ಈಗ ಕೇಳಿರುವಂತೆ ಕೇವಲ 18 ಎಕರೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವೆ? ಇಲ್ಲ ಅನ್ನುವುದಾದರೆ ಭವ್ಯಪರಂಪರೆಯ ಶಿಕ್ಷಣಕಾಶಿ ಸಹ್ಯಾದ್ರಿಯನ್ನು ಪೂರ್ಣ ಎತ್ತಿಸುವ ಉದ್ದೇಶವೆ?

ಮಾನ್ಯ ಸಂಸದರು ತಮ್ಮ ಪರಿಶ್ರಮದಿಂದ ಇಂತಹದೊಂದು ಅಪರೂಪದ ಯೋಜನೆಯನ್ನು ನಮ್ಮ ಜಿಲ್ಲೆಗೆ ತಂದಿರುವುದರ ಬಗ್ಗೆ ನಮಗೆ ಹೆಮ್ಮೆಯಿದೆ. ಅದನ್ನು ಅನುಷ್ಠಾನಗೊಳಿಸಲು ಆಯ್ಕೆಮಾಡಿಕೊಂಡ ಜಾಗ ಸೂಕ್ತವಲ್ಲ. ಸಕ್ಕರೆ ಕಾರ್ಖಾನೆಯ ಸಾವಿರಾರು ಎಕರೆ ಭೂಮಿ ಪಾಳು ಬಿದ್ದಿದೆ. ಮಾನ್ಯ ಮುಖ್ಯಮಂತ್ರಿಗಳ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೂ ಅದು ಸಮೀಪವಿದೆ. ನಿಮ್ಮ ಶಕ್ತಿಗೆ ಈ ಜಾಗ ಪಡೆದುಕೊಳ್ಳುವುದು ಆಸಾಧ್ಯವೇನಲ್ಲ. ಆ ಕಡೆ ಪ್ರಯತ್ನಿಸುವುದು ಸೂಕ್ತ.

ಈಗಾಗಲೇ ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಹಾಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಂಘರ್ಷಕ್ಕೆ ಅವಕಾಶ ಮಾಡದೆ ಮಾನ್ಯ ಸಂಸದರು ತಕ್ಷಣ ಸೂಕ್ತ ಸ್ಥಳವನ್ನು ಆಯ್ಕೆಮಾಡಿಕೊಂಡು ಸಹ್ಯಾದ್ರಿ ಆವರಣದಲ್ಲಿ ಕ್ರೀಡಾಹಬ್ ಕಟ್ಟುವ ತೀರ್ಮಾನವನ್ನು ಬದಲಾಯಿಸಿಕೊಳ್ಳಬೇಕೆಂದು ನಗರದ ನಾಗರಿಕರು, ಪತ್ರಿಕಾವಲಯದ ಮಿತ್ರರು, ಹಿರಿಯ ವಿದ್ಯಾರ್ಥಿಗಳು, ಹಾಲಿ ವಿದ್ಯಾರ್ಥಿಗಳ ಕೋರಿಕೆ ಮತ್ತು ಆಗ್ರಹವಾಗಿದೆ.

ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಪಕರು ಮತ್ತು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...