HomeಮುಖಪುಟTik tok : ಮತ್ತೆ ಬಂದ ಟಿಕ್ ಟಾಕ್ ಆಪ್ ಸುತ್ತಾ ನಾವು ತಿಳಿದಿರಬೇಕಾದ ಸಂಗತಿಗಳು....

Tik tok : ಮತ್ತೆ ಬಂದ ಟಿಕ್ ಟಾಕ್ ಆಪ್ ಸುತ್ತಾ ನಾವು ತಿಳಿದಿರಬೇಕಾದ ಸಂಗತಿಗಳು….

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬಹಳಷ್ಟು ಯುವಕ ಯುವತಿಯರಿಗೆ ಚಿಕ್ಕಂದಿನಿಂದಲೂ ತಾವು ಸಿನೆಮಾ ನಟ ನಟಿಯರಾಗಬೇಕು, ಟಿವಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಹಂಬಲ, ಕನಸು ಇದ್ದೇ ಇರುತ್ತದೆ. ಆದರೆ ಸಾವಿರಕ್ಕೆ ಅಥವಾ ಲಕ್ಷಕ್ಕೆ ಒಬ್ಬರು ಮಾತ್ರ ಆ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುವುದು ವಾಸ್ತವದ ಸಂಗತಿ. ಇನ್ನುಳಿದವರ ಕೊರಗು ನಿವಾರಿಸಲು ಒಂದು ಮಟ್ಟಿಗೆ ಸಹಾಯ ಮಾಡಿದ್ದು ಫೇಸ್‍ಬುಕ್ ಮತ್ತು ವಾಟ್ಸಾಪ್. ತಮಗನ್ನಿಸಿದ್ದನ್ನು ಬರೆಯುವ, ವಿಡಿಯೊ ಮಾಡಿ ಅಪ್ ಲೋಡ್ ಮಾಡಲು ಅವಕಾಶ ಇದರಿಂದ ಸಿಕ್ಕಿತ್ತು. ಆದರೆ ಯಾವಾಗ ಟಿಕ್ ಟಾಪ್ ಆಪ್ ಬಂದಿತ್ತೋ ಹಲವಾರು ಜನ ತಮ್ಮ ಕನಸನ್ನು ನನಸು ಮಾಡಿಕೊಂಡರು. ಈ ಆಪ್ ಮೂಲಕ ಅಭಿನಯಿಸಿ, ನೃತ್ಯ ಮಾಡಿ ಅದನ್ನು ಸಾವಿರಾರು ಜನಕ್ಕೆ ತೋರಿಸಿ ಸಂತೃಪ್ತಿಪಟ್ಟುಕೊಂಡರು. ಅಂತಹ ಆಪ್ ಅನ್ನು ನಿಷೇಧಿಸಬೇಕೆನ್ನುವ ಮೂಲಕ ಸಾವಿರಾರು ಯುವನಜನರಿಗೆ ದಿಢೀರ್ ಶಾಕ್ ನೀಡಲಾಗಿತ್ತು.

20ಕೋಟಿಗೂ ಹೆಚ್ಚು ಜನ ಬಳಸುವ ಟಿಕ್ ಟಾಕ್ ಎಂಬ ಮನರಂಜನಾ ಆಪ್ ಬ್ಯಾನ್ ಆಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಹರಿದಾಡುತ್ತಿತ್ತು. ಆಪಲ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇಸ್ಟೋರ್‍ನಲ್ಲಿ ರದ್ದಾಗಿ ಡೌನ್‍ಲೋಡ್ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಈಗ ಈ ಆಪ್ ಮತ್ತೆ ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‍ನಲ್ಲಿ ಕಾಣಿಸಿಕೊಂಡಿದ್ದು ಡೌನ್‍ಲೋಡ್‍ಗೆ ಲಭ್ಯವಾಗಿದೆ.

ಆರಂಭದಲ್ಲಿ ಡಬ್‍ಸ್ಮ್ಯಾಷ್ ಎಂದು ಕರೆಯಲ್ಪಡುತ್ತಿದ್ದ ಈ ಆಪ್ ನಂತರ ಮ್ಯುಸಿಕಲಿ ಎಂದಾಗಿತ್ತು. ಕೊನೆಗೆ ಟಿಕ್ ಟಾಕ್ ಎಂದು ಬದಲಿಸಕೊಂಡಮೇಲೆ ಸಾಕಷ್ಟು ಜನಪ್ರಿಯತೆಯ ಜೊತೆಗೆ ಕೋಟ್ಯಾಂತರ ಜನರು ಡೌನ್‍ಲೋಡ್ ಮಾಡಿಕೊಂಡು ಬಳಸಲು ಆರಂಭಿಸಿದ್ದರು. ಮಿಮಿಕ್ರಿಯಿಂದ ಆರಂಭವಾದು ಇದು ದೊಡ್ಡ ಸ್ಟಾರ್ ನಟನನ್ನು ಅನುಸರಿಲು ಬಳುಸತ್ತಿದ್ದರು. ಡಬ್‍ಸ್ಮ್ಯಾಷ್ ಮಾಡುವ ಮೂಲಕ ಇಷ್ಟ ಪಟ್ಟ ನಟನ ಅಭಿನಯವನ್ನು ನಕಲು ಮಾಡುವುದು, ಅವರ ಧ್ವನಿಗೆ ಇವರು ಅಭಿನಯಿಸಲು ಶುರು ಮಾಡಿದಾಗ ಇದು ಹೊಸ ರೀತಿಯ ಅಲೆಯನ್ನು ಮೂಡಿಸಿತ್ತು. ಈಗ ಅದೇ ರೀತಿಯ ಹಲವಾರು ಆಪ್ ಬಂದಿದ್ದು ಅದರಲ್ಲಿ ಟಿಕ್ ಟಾಕ್ ಮೇಲುಗೈ ಸಾಧಿಸಿದೆ.

ಮುಖ್ಯವಾಗಿ ಯುವಜನರು ಮತ್ತು ಸ್ಥಳೀಯ ಭಾಷಿಕರ ಮನಸ್ಥಿತಿಯನ್ನು ಅಧ್ಯಯನ ಮಾಡಿ ಆಪ್ ಡೆವಲಪ್ ಮಾಡಿದಂತಿದೆ. ಹಲವು ಸಿನಿಮಾದ ಸಣ್ಣ ದೃಶ್ಯಗಳ ವಾಯ್ಸ್‍ಗೆ ತಮ್ಮ ಅಭಿನಯ ಸೇರಿಸಿ ಚಿಕ್ಕ ವಿಡಿಯೋಗಳನ್ನು ತಯಾರಿಸಿ ಹರಿಯಬಿಡುವುದು, ತಾವೇ ಖುದ್ದಾಗಿ ತಮಾಷೆಯ ಪ್ರಸಂಗಗಳನ್ನು ಅಭಿನಯಿಸಿ ರೆಕಾರ್ಡ್ ಮಾಡುವುದು, ಡ್ಯಾನ್ಸ್‍ಗಳನ್ನು ಮಾಡುವುದು, ಟ್ರೋಲ್ ಮಾಡುವುದು ಸೇರಿದಂತೆ ಹತ್ತು ಹಲವು ಸಣ್ಣ ವಿಡಿಯೋಗಳು ಟಿಕ್ ಟಾಕ್‍ನಲ್ಲಿ ಹರಿದಾಡಿದ್ದವು. ಕಾಲಕ್ಕೆ ತಕ್ಕಂತೆ ಒಂದು ವಿಡಿಯೋ ನೀಡಿ ಅದೇ ಮಾದರಿಯ ವಿಡಿಯೋ ಮಾಡಿ ಕಳಿಸುವಂತೆ ಚಾಲೆಂಜ್ ನೀಡಿ ಈ ಆಪ್‍ನ ಪ್ರಿಯರು ಇದರಲ್ಲೇ ಗಿರಕಿ ಹೊಡೆಯುವ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಒಬ್ಬ ಯುವಕ ಚಾಕುವಿನಿಂದ ಕತ್ತು ಕುಯ್ದುಕೊಳ್ಳುವಂತೆ ಅಭಿನಯಿಸಲು ಹೋಗಿ ನಿಜವಾಗಿಯೂ ಕತ್ತು ಕುಯ್ದುಕೊಂಡುಬಿಟ್ಟ ವಿಡಿಯೋ ವೈರಲ್ ಆಗಿತ್ತು. ಇಂತಹ ಅತಿರೇಕವಾದಂತಹ ವ್ಯಕ್ತಿಗಳಿಂದಲೇ ಟಿಕ್ ಟಾಕ್ ಬ್ಯಾನ್ ಆಗುವ ಹಂತಕ್ಕೆ ತಲುಪಿತ್ತು.

ಎಲ್ಲಾ ವಯೋಮಾನದವರು ಸಹ ಬೇಸರ ಕಳೆಯಲು, ಟೈಮ್ ಪಾಸ್ ಮಾಡಲು ಟಕ್ ಟಾಕ್ ಬಳಸಿದರೆ ಬಹುಪಾಲು ಯುವ ಜನಾಂಗ ಇದರ ದಾಸರಂದತ್ತಿದೆ. ‘ಯಾವಾಗ ನೋಡಿದರೂ ಟಿಕ್ ಟಾಕ್‍ನಲ್ಲೇ ಮುಳುಗಿರುತ್ತೀಯಲ್ಲ’ ಎಂಬ ಟೀಕೆ ಎಲ್ಲಾ ಕಡೆ ಸಹಜವಾಗಿ ಕೇಳಿ ಬರುತ್ತಿದೆ. ಈ ಆಪ್ ಜನರಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಎಷ್ಟು ನಿಜವೋ, ಅಷ್ಟೇ ಪ್ರಮಾಣದಲ್ಲಿ ಅವರನ್ನು ಸೋಮಾರಿಗಳನ್ನಾಗಿಯೂ ಮಾಡಿತ್ತು.
ಈ ಆಪ್‍ನ ಅನುಕೂಲ ಮತ್ತು ಅನಾನುಕೂಲಗಳನ್ನು ನೋಡಿದರೆ, ಮೊದಲನೇಯದಾಗಿ ಆ ಆಪ್ ಬಳಸಿ ಸಾವಿರಾರು ಜನ ತಮ್ಮ ಸೃಜನಶೀಲತೆಯನ್ನು ಬಹಿರಂಗಪಡಿಸಿದ್ದರು. ಅದರಲ್ಲಿನ ಒಂದೊಂದು ಚಿಕ್ಕ ವಿಡಿಯೋ ಸಹ ವಾವ್ ಅನ್ನಿಸುವಷ್ಟರ ಮಟ್ಟಿಗೆ ಹೊಸತನದಿಂದ ಕೂಡಿ ಎಲ್ಲರನ್ನು ನಗಿಸುತ್ತಿದ್ದವು. ಇದರ ಮೂಲಕ ತಮ್ಮ ಸಾಮಥ್ರ್ಯದ ಅರಿವು ಪಡೆಯುತ್ತಿದ್ದ ಬಹಳಷ್ಟು ಜನ ನಾವು ಏನಾದರೂ ಸಾಧಿಸಬಹುದೆಂಬ ಪ್ರೇರಣೆ ಪಡೆದುದ್ದು ನಿಜ. ಆದರೆ ಇದು ಸ್ವಂತಿಕೆಯನ್ನು ಹಾಳು ಮಾಡುತ್ತಿದೆ, ಗೀಳು ಹುಟ್ಟಿಸಿತ್ತಿದೆ, ಕೆಟ್ಟ ಸಂದೇಶ, ಅತಿರೇಕದ ಸಂದೇಶಗಳು ನುಸುಳುತ್ತಿವೆ ಎಂಬ ಅಪವಾದಗಳು ಇದಕ್ಕಿದ್ದವು.

ಮಧುರೈನ ವಕೀಲ ಮುತ್ತುಕುಮಾರ್‍ರವರು ಈ ಆಪ್‍ನಿಂದ ಅಶ್ಲೀಲತೆ ಮತ್ತು ಅವಘಡ ಸಂಭವಿಸುತ್ತಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್‍ನಲ್ಲಿ ದಾವೆ ಹೂಡಿದ್ದರು. ಕೋರ್ಟ್ ಆಪ್‍ಗೆ ತಡೆನೀಡಿತು. ತದನಂತರ ಟಿಕ್ ಟಾಕ್ ನಿರ್ವಹಿಸುವ ಚೀನಾ ಮೂಲದ ಬೈಟ್‍ಡ್ಯಾನ್ಸ್ ಕಂಪನಿ ಸುಪ್ರೀಂ ಕೋರ್ಟ್ ಮೆಟ್ಟೆಲೇರಿದರೂ ಫಲ ಸಿಗದೇ ಅನಿವಾರ್ಯವಾಗಿ ಆಪಲ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇಸ್ಟೋರ್‍ನಿಂದ ಈ ಆಪ್‍ಅನ್ನು ತೆಗೆಯಬೇಕಾಗಿತ್ತು. ಆಗಲೂ ಡೌನ್‍ಲೋಡ್ ಮಾಡಿಕೊಳ್ಳಲು ಆಗುತ್ತಿರಲಿಲ್ಲವಾದರೂ ಅಷ್ಟರಲ್ಲಾಗಲೇ ಡೌನ್‍ಲೋಡ್ ಮಾಡಿರುವವರು ಬಳಸಬಹುದಿತ್ತು ಮಾತ್ರವಲ್ಲ ಶೇರ್‍ಇಟ್ ಮತ್ತಿತ್ತರ ಆಪ್‍ಗಳ ಮೂಲಕ ಪರಸ್ಪರ ಕಳಿಸಿಕೊಳ್ಳಬಹುದಿತ್ತು.

ಆದರೆ ಈಗ ಕಂಪನಿಯು ಮದ್ರಾಸ್ ಹೈಕೋರ್ಟ್‍ನಲ್ಲಿ ಇದರಿಂದ ಸಾಮಾಜಿಕ ವಾತಾವರಣ ಹಾಳಾಗುತ್ತಿಲ್ಲವೆಂದು ಮನವರಿಕೆ ಮಾಡಿಕೊಟ್ಟ ಪರಿಣಾಮ ಮದ್ರಾಸ್ ಹೈಕೋರ್ಟ್ ನಿಷೇಧ ತೆರವುಗೊಳಿಸಿದೆ. ಇದರಿಂದ ಈ ಆಪ್ ಮತ್ತೆ ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‍ಗೆ ಲಗ್ಗೆ ಇಟ್ಟಿದೆ.

ಆಳುವ ಸರ್ಕಾರಗಳ ಬಳಿ ಇಂತಹ ಆಪ್ ಗಳು ಹೊಂದಿರಬೇಕಾದ ಮಾನದಂಡಗಳು ಕುರಿತು ಸ್ಪಷ್ಟ ನೀತಿ ಇಲ್ಲ. ಈ ಕುರಿತು ಗಂಭೀರವಾಗಿ ಯೋಚಿಸಿ ತಜ್ಞರನ್ನು ಒಳಗೊಂಡು ನೀತಿಗಳನ್ನು ರೂಪಿಸಬೇಕಿದೆ. ಅದೇ ರೀತಿ ಈ ಥರದ ಕಂಪನಿಗಳು ಸಹ ಅತಿರೇಕ ಮೀರದ ಹಾಗೆ ತಾವೇ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆಯೂ ಇದೆ.

2014ರಲ್ಲಿ ಆರಂಭಗೊಂಡಿದ್ದ ಈ ಕಂಪನಿ 5 ವರ್ಷಗಳಲ್ಲಿ ಬಹಳ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಈ ಆಪ್ ಬಳಸಿ ತಮ್ಮ ಸೃಜನಶೀಲತೆ ಬಳಸಿ ವಿಡಿಯೋ ಮಾಡಿದ ಹಲವಾರು ಯುವಕ ಯುವತಿಯರು ರಾತ್ರೋ ರಾತ್ರಿ ಸ್ಟಾರ್‍ಗಳಾಗಿದ್ದಾರೆ. ಸೆಲೆಬ್ರಿಟಿಗಳಂತೆ ಹಲವು ಕಾರ್ಯಕ್ರಮಗಳಿಗೆ ಈಗಾಗಲೇ ಅತಿಥಿಗಳು ಆಗಿದ್ದಾರೆ. ಸಾಮಾಜಿಕ ಜಾಗೃತಿ ಮೂಡಿಸಲು ಸಹ ಕೆಲವು ಜನ ಈ ಆಪ್ ಬಳಸಿದ್ದಾರೆ. ಇನ್ನು ಮುಂದೆಯು ಯುವಜನರು ಇದನ್ನು ಹೆಚ್ಚು ಹೆಚ್ಚು ಸಮಾಜಮುಖಿ ಚಟುವಟಿಕೆಗಳಿಗೆ ಇದನ್ನು ಬಳಸಿದರೆ ಒಳ್ಳೇಯದು. ಅದರ ಜೊತೆಗೇ ಇದರಲ್ಲೇ ಮುಳುಗಿ ಹೋಗದೆ, ಇದರಿಂದ ಒಂದಷ್ಟು ರಿಲ್ಯಾಕ್ಸ್ ಪಡೆಯುವುದರ ಜೊತೆಗೆ ತಮ್ಮ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳುವ ಕಡೆ ಗಮನ ನೀಡಬೇಕೆಂದು ನಾವು ಆಶಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...